Homeಮುಖಪುಟಮೋದಿಯವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಗಾಗಿದ್ದು, ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ: ಕಾಂಗ್ರೆಸ್ ಟೀಕೆ

ಮೋದಿಯವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಗಾಗಿದ್ದು, ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ: ಕಾಂಗ್ರೆಸ್ ಟೀಕೆ

- Advertisement -
- Advertisement -

ಮಣಿಪುರದಲ್ಲಿ ಭಾನುವಾರ ಭುಗಿಲೆದ್ದ ಹಿಂಸಾಚಾರದಲ್ಲಿ ಪೊಲೀಸ್​ ಸೇರಿದಂತೆ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು ಕನಿಷ್ಠ 70 ಮಂದಿಯನ್ನು ಬಲಿಪಡೆದಿದೆ. ಮತ್ತೊಂದೆಡೆ ಪ್ರಧಾನಿ ಮೋದಿ ಅವರು ನೂತನ ಸಂಸತ್ ಉದ್ಘಾಟನೆಯಲ್ಲಿ ತೊಡಗಿರುವುದನ್ನು ಕಾಂಗ್ರೆಸ್ ಟೀಕೆ ಮಾಡಿದೆ.

”ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಾಗಗಿದ್ದು, ರಾಜ್ಯದಲ್ಲಿ ಹಿಂಸಾಚಾರ ಮುಂದುವರೆದಿದೆ” ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್‌ ಟೀಕಿಸಿದೆ.

”ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತದ ಸಂಪೂರ್ಣ ಸ್ಥಗಿತವಾಗಿದೆ. ಪ್ರಧಾನಿ ತಮ್ಮ ಸ್ವಯಂ-ಪಟ್ಟಾಭಿಷೇಕದ ಬಗ್ಗೆ ಗೀಳನ್ನು ಹೊಂದಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಅಲ್ಲಿನ ಜನತೆಗೆ ಅಥವಾ ಸಮುದಾಯಕ್ಕಾಗಲಿ ಒಂದು ಮನವಿಯನ್ನೂ ಸಹ ಮಾಡಿಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟ್ ಮಾಡಿದ್ದು, ”ಮಣಿಪುರ ಹೊತ್ತಿ ಉರಿಯಲು ಪ್ರಾರಂಭಿಸಿದ 25 ದಿನಗಳ ನಂತರ, ಕೇಂದ್ರ ಗೃಹ ಸಚಿವರ ಬಹುನಿರೀಕ್ಷಿತ ಇಂಫಾಲ್ ಭೇಟಿಯ ಮುನ್ನಾದಿನದಂದು ಪರಿಸ್ಥಿತಿ ಕೆಟ್ಟದಾಗಿದೆ. 355ನೇ ವಿಧಿಯನ್ನು ವಿಧಿಸಲಾಗಿದ್ದರೂ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಾಗಗಿದ್ದು, ರಾಜ್ಯದಲ್ಲಿ ಹಿಂಸಾಚಾರ ಮುಂದುವರೆದಿದೆ. ಇದೊಂದು ಭೀಕರ ದುರಂತ. ಅವರು ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಅಲ್ಲಿನ ಜನತೆಗೆ ಅಥವಾ ಸಮುದಾಯಕ್ಕಾಗಲಿ ಒಂದು ಮನವಿಯನ್ನೂ ಸಹ ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ನಿಯೋಗವು ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: ‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಹಿಂಸಾಚಾರ ಪೀಡಿತ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಗಂಟೆಗಳ ಮೊದಲು ಇದು ಸಂಭವಿಸಿದೆ. ಗೃಹ ಸಚಿವ ಅಮಿತ್ ಶಾ ಇಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಶಾಂತ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕೂಡ ಶನಿವಾರ ಮಣಿಪುರಕ್ಕೆ ತೆರಳಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದರು.

”ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಸರ್ಕಾರವು ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ಮತ್ತು ಇಂಟರ್ನೆಟ್ ನಿಷೇಧವನ್ನು ವಿಧಿಸಿದೆ. ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರ ರಾಜ್ಯದ ಹಲವು ಪ್ರದೇಶಗಳಲ್ಲಿ ಎಂಟು ಗಂಟೆಗಳ ಕಾಲ ಪೊಲೀಸ್ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 40 ಮಂದಿ ಬಂಡುಕೋರರನ್ನು ಹತ್ಯೆಮಾಡಲಾಗಿದೆ” ಎಂದು ಮನೋಜ್ ಪಾಂಡೆ ತಿಳಿಸಿದ್ದಾರೆ.

”ಭಯೋತ್ಪಾದಕರು ನಾಗರಿಕರ ವಿರುದ್ಧ M-16 ಮತ್ತು AK-47 ರೈಫಲ್‌ಗಳು ಮತ್ತು ಸ್ನೈಪರ್‌ಗನ್‌ಗಳನ್ನು ಬಳಸುತ್ತಿದ್ದಾರೆ. ಜನರ ಮನೆಗಳನ್ನು ಸುಟ್ಟುಹಾಕಲು ಹಳ್ಳಿಗಳಿಗೆ ನುಗ್ಗಿದ್ದರು. ನಾವು ಸೇನೆ ಮತ್ತು ಇತರ ಭದ್ರತಾ ಪಡೆಗಳ ಸಹಾಯದಿಂದ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ. ಸುಮಾರು 40 ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿರುವ ವರದಿಗಳು ನಮಗೆ ಸಿಕ್ಕಿವೆ” ಎಂದು ತಿಳಿಸಿದರು.

ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಭಾನುವಾರ ಹೇಳಿಕೆ ನೀಡಿದ್ದು, ”ಮೇ 3 ರಂದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಭದ್ರತಾ ಪಡೆಗಳು ಹಾಗೂ ಬಂಡುಕೋರ ಸಂಘಟನೆಗಳ ನಡುವೆ ನಡೆದ ಸರಣಿ ಎನ್‌ಕೌಂಟರ್‌ಗಳಲ್ಲಿ 33 ಬಂಡುಕೋರರನ್ನು ಹತರಾಗಿದ್ದಾರೆ ” ಎಂದು ಹೇಳಿದ್ದಾರೆ.

”ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರೊಂದಿಗೆ ಸಭೆ ನಡೆಸಿದ ಬಳಿಕ ಸಿಂಗ್, ಭದ್ರತಾ ಪಡೆಗಳು ಹಾಗೂ ಭಂಡುಕೋರರ ವಿರುದ್ಧ ಹಲವು ಜಿಲ್ಲೆಗಳಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆವು. ಬಂಡುಕೋರರು ನಾಗರಿಕರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ” ಎಂದು ಸಿಂಗ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...