Homeರಾಜಕೀಯಮೇರೆ ಪ್ಯಾರೇ ದೇಶ್‍ವಾಸಿಯೋಂ, ಭಾಯಿಯೋ ಔರ್ ಬೆಹನೋ,

ಮೇರೆ ಪ್ಯಾರೇ ದೇಶ್‍ವಾಸಿಯೋಂ, ಭಾಯಿಯೋ ಔರ್ ಬೆಹನೋ,

- Advertisement -
- Advertisement -

ಮೇರೆ ಪ್ಯಾರೇ ದೇಶ್‍ವಾಸಿಯೋಂ, ಭಾಯಿಯೋ ಔರ್ ಬೆಹನೋ, ಇವತ್ತು ನಂ ದೇಸುದಾಗೆ ಏನೇನ್ ಅನಾನುಕೂಲ ಆಗ್ಯದೆ ಅನ್ನೋದುನ್ನ ಮರತುಬಿಡಿ. ಅಜಮಾಸು ನಲುವತ್ತು ವರ್ಸುದ ಹಿಂದಿನ ಇತಿಹಾಸುವ ಒಸಿ ನ್ಯೆಪ್ತಿ ಮಾಡ್ಕಳಿ. ಅದುಕ್ಕೆ ಸಮಂಧಪಟ್ಟಂಗೆ ಜಾಗೃತ್ರಾಗಿ. ಅವುತ್ತು ಈ ದ್ಯೇಸುದ ಮ್ಯಾಕೆ ಎಮುರ್ಜೆನ್ಸಿ ಹ್ಯೇರಿದ್ದವುರು, ಅದುನ್ನು ವಿರೋಧಿಸಿದ್ದವುರು, ಇವತ್ತು ಕೇವುಲ ಅಧಿಕಾರುಕ್ಕಾಗಿ ಒಬ್ಬರ ಕೈಯೊಳಿಕ್ಕೆ ಮತ್ತೊಬ್ಬರು ಕೈ ಜ್ಯೋಡಿಸ್ಕ್ಯಂಡ ಕುಂತವುರೆ. ಅವುರಿಗೆ ತಕ್ಕುನ ಪಾಟ ಕಲುಸಿ. ಈಗ ನಾನು ಮೂರು ಸಲ ಎಮುರ್ಜನ್ಸಿ ಅಂತೀನಿ, ನೀವೆಲ್ಲ ಕೈಯೆತ್ತಿ ಅಂಗೇ ಆಕ್ಷುನ್ ಮಾಡ್ಕ್ಯಂತ ರಿಪೀಟ್ ಮಾಡಿ…..’
– ನರೇಂದ್ರ ಮೋದಿ, ಮಾತಿಗೆ ಮರುಳಾದ ದೇಶಕ್ಕೆ ಸಿಕ್ಕಿರೋ ದುಬಾರಿ ದೊರೆ

*****

ಅನಂತ್ಕುಮಾರ್ ಹೆಗುಡೆ ಒಬ್ಬ ಲೋಪರ್ರು ಕಣ್ರೀ… ನೀಚ ಕಣ್ರೀ… ಹುಬ್ಳಿಯಾಗೆ ಯಾರೋ ಹಾರುಸಿದ್ದ ಧ್ವಜುವಾ ನಾನೇ ಹಾರುಸಿದ್ದು ಅಂತ ಆರೆಸ್ಸೆಸ್ನೋರ ಸಭೆಗಳುಲ್ಲಿ ಹ್ಯೇಳ್ಕಂಡ ತಿರುಗ್ಯಾಡ್ತಾ ಅವುನೆ. ಅವುನು ಎಲ್ಲರಿಗೂ ಹೊಡುದವುನೆ. ಬೀಜೇಪಿ ಪಾಲ್ಟಿ ಆಪಿಸ್ನಾಗೇ ಆ ಇಸ್ವೇಸ್ವರ ಹೆಗುಡೆ ಕಾಗೇರಿಗೆ ಯಕ್ಕಡಾ ತಕೊಂಡು ಹೊಡುದಿದ್ದ. ಅವುನಂಥಾ ನೀಚ ಇಡಿ ದೇಸುದಾಗೇ ಯಾರು ಇಲ್ಲ ಬಿಡಿ. ಅವುನು ನಂ ಜಿಲ್ಲೆಗೆ ಸಂಸುದ ಆಗ್ಯಿರೋದೆ ದುರಂತ’
– ಆನಂದ್ ಆಸ್ನೋಟಿಕರ್, ಕರಾವಳಿ ಭಾಗದ ಜೆಡಿಎಸ್ ಪಳೆಯುಳಿಕೆ

*****

ಈ ತಾಜಮಹಲು ಏನ್ ಇದ್ಯೆಲಾ, ಅದು ಅಕ್ಚುಲೀ ಸಿವುನ ದ್ಯೇವುಸ್ತಾನುವಂತೆ. ಅಂಥಾ ದ್ಯೇವುಸ್ತಾನ ಕಂ ಮಹಲುನ್ನ ಹೊಡೆಯೋಕ್ಕೆ ಅಂತ ನಂ ಯೂಪಿ ಸೀಎಂ ಸ್ವಾಮಿಗೊಳಾದ ಆದಿತ್ಯನಾಥುರು ಹೊಂಟವುರೆ. ಅವುರೇನಾದ್ರು ದಿಟವಾಗ್ಲೂ ಆ ಕ್ಯೆಲುಸಕ್ಕೆ ಕೈ ಹಾಕುದ್ರೆ, ಅದುಕ್ಕೆ ಹ್ಯೆಗಲು ಕ್ವೊಡಕ್ಕೆ ನಾನೂ ಸಿದ್ದ. ಬೇಕಾರೆ ಬೀಜೇಪಿಗೂ ಸೇರ್ಕಂಬುಡ್ತೀನಿ. ಜ್ವತೀಗೆ ಇಪ್ಪತ್ತು ಸಾವುರ ಜನಾನು ಕರ್ಕಂಬತ್ತೀನಿ. ಈ ಆಪರ್ರು ಒಪ್ಕಂಡಾರಾ ನಂ ಯೂಪಿ ಸೀಎಂ…
– ಆಜಂ ಖಾನ್, ಸಮಾಜವಾದಿ ಪಾರ್ಟಿಯ ಕಾಂಟ್ರವರ್ಸಿಯಲ್ ಕಿಲಾಡಿ

*****

ನಂ ಕರ್ನಾಟುಕದಲ್ಲಿರೋ ಪರಬಾಸಿಕರನ್ನ ನಡು ರಸ್ತೇನಾಗೇ ಸುಟ್ಟು ಹಾಕ್ಬೇಕು ಕಣ್ರೀ. ಅವುರೆಲ್ಲ ಇಲ್ಲಿಗೆ ಬಂದು ವಕ್ಕರಿಸಿಕ್ಯಂಡಿದ್ದುರಿಂದ್ಲೇ ಬೆಂಗ್ಳೂರು ನಂ ಕೈತ್ಯೆಪ್ಪಿ ಹೋಗೈತಿ. ಅವುರನ್ನು ಇಲ್ಲಿಂದ ಹೊರಕ್ಕೆ ದೂಡಕ್ಕೆ ನಾವೆಲ್ಲ ಮತ್ತೆ ಚಳುವಳಿ ಸುರು ಮಾಡ್ಬೇಕಾಗೈತಿ. ಜೈ ಕನ್ನುಡಾಂಬೆ…                                                                                  – ವಾಟಾಳ್ ನಾಗರಾಜ್, ವಿಚಿತ್ರ ಚಳುವಳಿಗಳ ಸಚಿತ್ರ ಕಾರ್ಟೂನ್

*****

ನಾ ಹ್ಯೇಳ್ತೀನಿ ಕ್ಯೇಳಿ, ಈ ಸಮ್ಮಿಸ್ರು ಸರ್ಕಾರ ಬಾಳ ದಿನ ಉಳಿಯಂಗಿಲ್ಲ. ಯಾಕಂದ್ರೆ ನಂ ಬಳ್ಳಾರಿ ರಾಜ್ಯುದ ಇತಿಹಾಸುದಾಗೆ ಯಾವ ಕೊಲೀಷನ್ ಗೋರ್ಮೆಂಟೂ ಪುಲ್‍ಟೇಮು ಅಧಿಕಾರುವ ಮಾಡಿದ ಎಜ್ಜಾಂಪಲ್ಲೇ ಇಲ್ಲ. ಅಂತದ್ರಾಗೆ ಇವುರು ಮಾಡ್ಯಾರಾ? ನೋ ಚಾನ್ಸ್. ಬಿದ್ದೋಯ್ತರೆ ನೋಡ್ತಾ ಇರಿ…
– ಬೀ ಶ್ರೀರಾಮುಲು, ಬಿಜೆಪಿಯ ಗಡ್ಡಧಾರಿ ಅವತಾರ ಪುರುಷ

*****

ಈ ಮಠಾಧೀಸರು ಏನವುರಲ್ಲ, ಅವುರು ಅಧಿಕಾರ ಇದ್ದಕಡೀಕೆ ವಾಲಿಕ್ಯಂತಾರೆ. ಜನುರ ಕಷ್ಟ ಸುಖದ ಬಗ್ಗೆ ಮಾತಾಡೋದು ಬುಟ್ಟು, ರಾಜಕಾರಣುದಾಗೆ ಮೂಗು ತ್ವೂರ್ಸಕ್ಕೆ ಬತ್ತಾರಲ್ಲ, ಇವ್ರಿಗೆ ಏನನ್ನಬೇಕು? ಇವತ್ತು ಸಿದ್ರಾಮಯ್ಯುನ ಪರುವಾಗಿ ಮಾತಾಡೊ ಕುರುಬರ ಸ್ವಾಮಿ, ಅವತ್ತು ಇದೇ ಸಿದ್ರಾಮಯ್ಯ ನನಿಗೆ ಅನ್ಯಾಯ ಮಾಡುವಾಗ ಎತ್ತಗೋಗಿದ್ರು. ಯಾಕೆ, ನಾನು ಕುರುಬನಲ್ಲುವಾ…?
– ಎಚ್ಚ್ ವಿಶ್ವನಾಥ್, ಗೌಡರ ಹಟ್ಟಿಯ ನಿರಾಶ್ರಿತ ಶಿಬಿರದ ಫಲಾನುಭವಿ

*****

ಸ್ವಿಸ್ ಬ್ಯಾಂಕಿನಾಗೆ ಇಟ್ಟಿರೋ ಭಾರತೀಯರ ಹಣ ಕಳುದ ವರ್ಸ ಡಬಲ್ ಆಗ್ಯದೆ ಅನ್ನೋ ಸುದ್ದಿ ನನಿಗೂ ಬಂದದೆ. ಹಾಗಂತ ಅದು ಬ್ಲ್ಯಾಕ್ ಮನಿ ಅಲ್ಲಾ ಕಣ್ರೀ. ನಂ ಎನ್ನಾರೈಗಳು ಶ್ಯಾನೆ ಕಸ್ಟಪಟ್ಟು ದುಡುದು ಕೂಡಿಟ್ಟ ನ್ಯಾಯಬದ್ಧ ಹಣ ಆಗಿರ್ಬೈದಲ್ವಾ. ಯಾಕ್ರೀ ನಂ ಜನುಕ್ಕೆ ಕನ್‍ಫ್ಯೂಜ್ ಮಾಡ್ತೀರಾ?
– ಪಿಯೂಷ್ ಗೋಯೆಲ್, ಬ್ಲ್ಯಾಕ್‍ಮನಿ ಸ್ಪೆಷಲಿಸ್ಟ್
ಮೋದಿ ಸಂಪುಟದ ಮನಿ ಮಂತ್ರಿ

*****

ಲುಕ್ ಮೈ ಡಿಯರ್ ಫ್ರೆಂಡ್ಸ್, ಒಂದು ಸತ್ಯುವ ಹ್ಯೇಳ್ತೀನಿ ಅರುಗಿಸಿಕೊಳ್ಳಿ. ನಾವು ಇವತ್ತು ಪ್ಲ್ಯಾಸ್ಟಿಕ್ ಕುರ್ಚಿನಾಗೆ ಕೂತ್ಕಂಡಿರೋದ್ಕೆ ಆ ಕಾಂಗ್ರೆಸ್ ಪಾಲ್ಟಿಯೇ ಕಾರುಣ. ಅಕಸುಮಾತ್ ಎಪ್ಪತ್ತು ವರ್ಸುದ ಹಿಂದೆಯೇ ದೇಸುದಾಗೆ ಬೀಜೇಪಿ ಅಧಿಕಾರುಕ್ಕೆ ಬಂದಿದ್ದ್ರೆ ಎಲ್ರೂ ಬ್ಯೆಳ್ಳಿ ಕುರ್ಚಿನಾಗೆ ಕುಂತ್ಕಂಡಿರ್ತಿದ್ವಿ. ಎಲ್ಡು ಸಾವುರದ ಹತ್ರೊಂಬ್ವತ್ತರ ಎಲೆಕ್ಸೆನ್ನಾಗೆ ಒಂದು ಹ್ವುಲೀನ ಸೋಲುಸಕ್ಕೆ ಕಾಗ್ಯಣ್ಣ, ನರಿಯಣ್ಣ, ತ್ವಾಳಣ್ಣ, ಕರಿಡ್ಯಣ್ಣಗಳು ಒಂದಾಗ್ಯವೆ. ಈ ಕತ್ತೆಕ್ಯಿರುಬಗಳು ಗ್ಯೆಲ್ಲಬೇಕೊ, ಅಥುವಾ ನಂ ಹ್ವುಲಿ ಗ್ಯೆಲ್ಲಬೇಕೊ ನೀವೇ ಡಿಸೈಡ್ ಮಾಡಿ…
– ಅನಂತ್‍ಕುಮಾರ್ ಹೆಗಡೆ, ನಾಲಿಗೆ ನರದ ಸ್ವಾಧೀನ ಕಳೆದುಕೊಂಡಿರುವ ಕೇಂದ್ರ ಮಂತ್ರಿ

*****

ಒಬ್ಬೊಬ್ರ ಅಕೋಂಟಿಗೂ ಹದುನೈದು ಲಕ್ಸುವ ರೊಕ್ಕ ಹಾಕ್ತೀನಿ ಅಂತ ಎಲೆಕ್ಸನ್ ಟೇಮಿನಾಗೆ ಹ್ಯೇಳಿ, ಕಡೀಕೆ ಹದುನೈದ್ರುಪಾಯುನೂ ಹಾಕದ ಮ್ವೋದಿಯವುರಿಗೆ ನಂ ಸೀಎಂ ಕುಮಾರ್ಸೋಮಿ ಬಗ್ಗೆ ಮಾತಾಡಕ್ಕೆ ಅದೆಂತದೋ ಅಂತಾರಲ್ಲ, ಅದು ಇಲ್ಲ ಕಣ್ರೀ. ಸೋನ್ಯಾ ಗಾಂದಿ, ರಾಹುಲ್ ಗಾಂದಿ ಇಬ್ರೂನುವೆ, ಬೇಸರತ್ ಬೆಂಬುಲವ ಕೊಡ್ತೀವಿ ನೀವು ಜೇಡಿಯೆಸ್ ಗೋರ್ಮೆಂಟ್ ಮಾಡ್ಕಳಿ ಅಂತ ಹ್ಯೇಳಿದ್ದ್ರು. ಆದ್ರೆ ನಂ ದ್ವೊಡ್ಡಗೌಡ್ರು ಬ್ಯಾಡ, ಬ್ಯಾಡ ಇಬ್ರೂ ಕೂಡೇ ಸರ್ಕಾರುವ ಮಾಡನ ಅಂತೇಳಿದ್ದುಕ್ಕೆ ಇವತ್ತು ಸಮ್ಮಿಸ್ರು ಸರ್ಕಾರ ಆಗ್ಯದೆ. ಅದು ಐದು ವರ್ಸ ಅಲ್ಲಾಡಕಿಲ್ಲ ನೋಡ್ತಾ ಇರಿ…
– ಸಾರಾ ಮಹೇಶ್, ಮೇಡಂ ಭವಾನಿಯವರ ಕೃಪಾಶೀರ್ವಾದ ಇರುವ ಜೆಡಿಎಸ್ ಮಂತ್ರಿ

*****

ನಂ ಮ್ವೋದಿ ಸಾಹೇಬ್ರು ಪರ್ದಾನಿಯಾದ ಮ್ಯಾಕೆ ದ್ಯೇಸ ಶ್ಯಾನೆ ಅಭಿರುದ್ದಿ ಆಗ್ಯದೆ. ಕಳುದ ಎಂಟೇ ತಿಂಗ್ಳಾಗೆ ನಲ್ವತ್ತ್ವೊಂದು ಲಕ್ಸ ಉದ್ಯೋಗ ಹುಟ್ಕ್ಯಂಡವೆ ಮಹಾಸಯುರೆ. ಯಪ್ಪತ್ತು ವರ್ಸುದಿಂದ ಉದ್ದಾರುವೇ ಆಗುದೇ ಹಾಳು ಕ್ವೊಂಪ್ಯೆಯಾಗಿದ್ದ ಈಶಾನ್ಯುದ ರಾಜ್ಯಗಳು ಮ್ವೋದಿಯವುರ ಆಡಳಿತುದಾಗೆ ಯಾಪಾಟಿ ಉದ್ದಾರ ಆಗ್ಯವೆ ಅಂದ್ರೆ, ನಂಗೆ ಯೋಳಕ್ಕೆ ಮಾತ್ವುಗಳೇ ಬತ್ತಿಲ್ಲ ಕಣ್ರೀ, ಆಹ್ಞಾ…ಹಾ.. ಹಾ.. ಇಲ್ನೋಡಿ ಥೇಟು ನನ್ ಹಲ್ಲುಗುಳ ಥರಾ ಹೊಳೀತಾ ಕುಂತವೆ. ಇನ್ನು ಸಿಟಿಗುಳಂಗೆ ನಂ ಹಳ್ಳ್ಯಿಗುಳೂ ಸಿಕ್ಕಾಪಟ್ಟೆ ಇಂಪ್ರೂವ್ ಆಗ್ಯವೆ..
– ಡಿ.ವಿ.ಸದಾನಂದ ಗೌಡ, ಅಳುವಾಗ್ಲೂ ನಗುತ್ತಿರುವಷ್ಟೇ ಕಳೆಯಿಂದ
ಕಾಣುವ ಬಿಜೆಪಿಯ ವಜ್ರದಂತಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...