Homeರಾಜಕೀಯಮೇರೆ ಪ್ಯಾರೇ ದೇಶ್‍ವಾಸಿಯೋಂ, ಭಾಯಿಯೋ ಔರ್ ಬೆಹನೋ,

ಮೇರೆ ಪ್ಯಾರೇ ದೇಶ್‍ವಾಸಿಯೋಂ, ಭಾಯಿಯೋ ಔರ್ ಬೆಹನೋ,

- Advertisement -
- Advertisement -

ಮೇರೆ ಪ್ಯಾರೇ ದೇಶ್‍ವಾಸಿಯೋಂ, ಭಾಯಿಯೋ ಔರ್ ಬೆಹನೋ, ಇವತ್ತು ನಂ ದೇಸುದಾಗೆ ಏನೇನ್ ಅನಾನುಕೂಲ ಆಗ್ಯದೆ ಅನ್ನೋದುನ್ನ ಮರತುಬಿಡಿ. ಅಜಮಾಸು ನಲುವತ್ತು ವರ್ಸುದ ಹಿಂದಿನ ಇತಿಹಾಸುವ ಒಸಿ ನ್ಯೆಪ್ತಿ ಮಾಡ್ಕಳಿ. ಅದುಕ್ಕೆ ಸಮಂಧಪಟ್ಟಂಗೆ ಜಾಗೃತ್ರಾಗಿ. ಅವುತ್ತು ಈ ದ್ಯೇಸುದ ಮ್ಯಾಕೆ ಎಮುರ್ಜೆನ್ಸಿ ಹ್ಯೇರಿದ್ದವುರು, ಅದುನ್ನು ವಿರೋಧಿಸಿದ್ದವುರು, ಇವತ್ತು ಕೇವುಲ ಅಧಿಕಾರುಕ್ಕಾಗಿ ಒಬ್ಬರ ಕೈಯೊಳಿಕ್ಕೆ ಮತ್ತೊಬ್ಬರು ಕೈ ಜ್ಯೋಡಿಸ್ಕ್ಯಂಡ ಕುಂತವುರೆ. ಅವುರಿಗೆ ತಕ್ಕುನ ಪಾಟ ಕಲುಸಿ. ಈಗ ನಾನು ಮೂರು ಸಲ ಎಮುರ್ಜನ್ಸಿ ಅಂತೀನಿ, ನೀವೆಲ್ಲ ಕೈಯೆತ್ತಿ ಅಂಗೇ ಆಕ್ಷುನ್ ಮಾಡ್ಕ್ಯಂತ ರಿಪೀಟ್ ಮಾಡಿ…..’
– ನರೇಂದ್ರ ಮೋದಿ, ಮಾತಿಗೆ ಮರುಳಾದ ದೇಶಕ್ಕೆ ಸಿಕ್ಕಿರೋ ದುಬಾರಿ ದೊರೆ

*****

ಅನಂತ್ಕುಮಾರ್ ಹೆಗುಡೆ ಒಬ್ಬ ಲೋಪರ್ರು ಕಣ್ರೀ… ನೀಚ ಕಣ್ರೀ… ಹುಬ್ಳಿಯಾಗೆ ಯಾರೋ ಹಾರುಸಿದ್ದ ಧ್ವಜುವಾ ನಾನೇ ಹಾರುಸಿದ್ದು ಅಂತ ಆರೆಸ್ಸೆಸ್ನೋರ ಸಭೆಗಳುಲ್ಲಿ ಹ್ಯೇಳ್ಕಂಡ ತಿರುಗ್ಯಾಡ್ತಾ ಅವುನೆ. ಅವುನು ಎಲ್ಲರಿಗೂ ಹೊಡುದವುನೆ. ಬೀಜೇಪಿ ಪಾಲ್ಟಿ ಆಪಿಸ್ನಾಗೇ ಆ ಇಸ್ವೇಸ್ವರ ಹೆಗುಡೆ ಕಾಗೇರಿಗೆ ಯಕ್ಕಡಾ ತಕೊಂಡು ಹೊಡುದಿದ್ದ. ಅವುನಂಥಾ ನೀಚ ಇಡಿ ದೇಸುದಾಗೇ ಯಾರು ಇಲ್ಲ ಬಿಡಿ. ಅವುನು ನಂ ಜಿಲ್ಲೆಗೆ ಸಂಸುದ ಆಗ್ಯಿರೋದೆ ದುರಂತ’
– ಆನಂದ್ ಆಸ್ನೋಟಿಕರ್, ಕರಾವಳಿ ಭಾಗದ ಜೆಡಿಎಸ್ ಪಳೆಯುಳಿಕೆ

*****

ಈ ತಾಜಮಹಲು ಏನ್ ಇದ್ಯೆಲಾ, ಅದು ಅಕ್ಚುಲೀ ಸಿವುನ ದ್ಯೇವುಸ್ತಾನುವಂತೆ. ಅಂಥಾ ದ್ಯೇವುಸ್ತಾನ ಕಂ ಮಹಲುನ್ನ ಹೊಡೆಯೋಕ್ಕೆ ಅಂತ ನಂ ಯೂಪಿ ಸೀಎಂ ಸ್ವಾಮಿಗೊಳಾದ ಆದಿತ್ಯನಾಥುರು ಹೊಂಟವುರೆ. ಅವುರೇನಾದ್ರು ದಿಟವಾಗ್ಲೂ ಆ ಕ್ಯೆಲುಸಕ್ಕೆ ಕೈ ಹಾಕುದ್ರೆ, ಅದುಕ್ಕೆ ಹ್ಯೆಗಲು ಕ್ವೊಡಕ್ಕೆ ನಾನೂ ಸಿದ್ದ. ಬೇಕಾರೆ ಬೀಜೇಪಿಗೂ ಸೇರ್ಕಂಬುಡ್ತೀನಿ. ಜ್ವತೀಗೆ ಇಪ್ಪತ್ತು ಸಾವುರ ಜನಾನು ಕರ್ಕಂಬತ್ತೀನಿ. ಈ ಆಪರ್ರು ಒಪ್ಕಂಡಾರಾ ನಂ ಯೂಪಿ ಸೀಎಂ…
– ಆಜಂ ಖಾನ್, ಸಮಾಜವಾದಿ ಪಾರ್ಟಿಯ ಕಾಂಟ್ರವರ್ಸಿಯಲ್ ಕಿಲಾಡಿ

*****

ನಂ ಕರ್ನಾಟುಕದಲ್ಲಿರೋ ಪರಬಾಸಿಕರನ್ನ ನಡು ರಸ್ತೇನಾಗೇ ಸುಟ್ಟು ಹಾಕ್ಬೇಕು ಕಣ್ರೀ. ಅವುರೆಲ್ಲ ಇಲ್ಲಿಗೆ ಬಂದು ವಕ್ಕರಿಸಿಕ್ಯಂಡಿದ್ದುರಿಂದ್ಲೇ ಬೆಂಗ್ಳೂರು ನಂ ಕೈತ್ಯೆಪ್ಪಿ ಹೋಗೈತಿ. ಅವುರನ್ನು ಇಲ್ಲಿಂದ ಹೊರಕ್ಕೆ ದೂಡಕ್ಕೆ ನಾವೆಲ್ಲ ಮತ್ತೆ ಚಳುವಳಿ ಸುರು ಮಾಡ್ಬೇಕಾಗೈತಿ. ಜೈ ಕನ್ನುಡಾಂಬೆ…                                                                                  – ವಾಟಾಳ್ ನಾಗರಾಜ್, ವಿಚಿತ್ರ ಚಳುವಳಿಗಳ ಸಚಿತ್ರ ಕಾರ್ಟೂನ್

*****

ನಾ ಹ್ಯೇಳ್ತೀನಿ ಕ್ಯೇಳಿ, ಈ ಸಮ್ಮಿಸ್ರು ಸರ್ಕಾರ ಬಾಳ ದಿನ ಉಳಿಯಂಗಿಲ್ಲ. ಯಾಕಂದ್ರೆ ನಂ ಬಳ್ಳಾರಿ ರಾಜ್ಯುದ ಇತಿಹಾಸುದಾಗೆ ಯಾವ ಕೊಲೀಷನ್ ಗೋರ್ಮೆಂಟೂ ಪುಲ್‍ಟೇಮು ಅಧಿಕಾರುವ ಮಾಡಿದ ಎಜ್ಜಾಂಪಲ್ಲೇ ಇಲ್ಲ. ಅಂತದ್ರಾಗೆ ಇವುರು ಮಾಡ್ಯಾರಾ? ನೋ ಚಾನ್ಸ್. ಬಿದ್ದೋಯ್ತರೆ ನೋಡ್ತಾ ಇರಿ…
– ಬೀ ಶ್ರೀರಾಮುಲು, ಬಿಜೆಪಿಯ ಗಡ್ಡಧಾರಿ ಅವತಾರ ಪುರುಷ

*****

ಈ ಮಠಾಧೀಸರು ಏನವುರಲ್ಲ, ಅವುರು ಅಧಿಕಾರ ಇದ್ದಕಡೀಕೆ ವಾಲಿಕ್ಯಂತಾರೆ. ಜನುರ ಕಷ್ಟ ಸುಖದ ಬಗ್ಗೆ ಮಾತಾಡೋದು ಬುಟ್ಟು, ರಾಜಕಾರಣುದಾಗೆ ಮೂಗು ತ್ವೂರ್ಸಕ್ಕೆ ಬತ್ತಾರಲ್ಲ, ಇವ್ರಿಗೆ ಏನನ್ನಬೇಕು? ಇವತ್ತು ಸಿದ್ರಾಮಯ್ಯುನ ಪರುವಾಗಿ ಮಾತಾಡೊ ಕುರುಬರ ಸ್ವಾಮಿ, ಅವತ್ತು ಇದೇ ಸಿದ್ರಾಮಯ್ಯ ನನಿಗೆ ಅನ್ಯಾಯ ಮಾಡುವಾಗ ಎತ್ತಗೋಗಿದ್ರು. ಯಾಕೆ, ನಾನು ಕುರುಬನಲ್ಲುವಾ…?
– ಎಚ್ಚ್ ವಿಶ್ವನಾಥ್, ಗೌಡರ ಹಟ್ಟಿಯ ನಿರಾಶ್ರಿತ ಶಿಬಿರದ ಫಲಾನುಭವಿ

*****

ಸ್ವಿಸ್ ಬ್ಯಾಂಕಿನಾಗೆ ಇಟ್ಟಿರೋ ಭಾರತೀಯರ ಹಣ ಕಳುದ ವರ್ಸ ಡಬಲ್ ಆಗ್ಯದೆ ಅನ್ನೋ ಸುದ್ದಿ ನನಿಗೂ ಬಂದದೆ. ಹಾಗಂತ ಅದು ಬ್ಲ್ಯಾಕ್ ಮನಿ ಅಲ್ಲಾ ಕಣ್ರೀ. ನಂ ಎನ್ನಾರೈಗಳು ಶ್ಯಾನೆ ಕಸ್ಟಪಟ್ಟು ದುಡುದು ಕೂಡಿಟ್ಟ ನ್ಯಾಯಬದ್ಧ ಹಣ ಆಗಿರ್ಬೈದಲ್ವಾ. ಯಾಕ್ರೀ ನಂ ಜನುಕ್ಕೆ ಕನ್‍ಫ್ಯೂಜ್ ಮಾಡ್ತೀರಾ?
– ಪಿಯೂಷ್ ಗೋಯೆಲ್, ಬ್ಲ್ಯಾಕ್‍ಮನಿ ಸ್ಪೆಷಲಿಸ್ಟ್
ಮೋದಿ ಸಂಪುಟದ ಮನಿ ಮಂತ್ರಿ

*****

ಲುಕ್ ಮೈ ಡಿಯರ್ ಫ್ರೆಂಡ್ಸ್, ಒಂದು ಸತ್ಯುವ ಹ್ಯೇಳ್ತೀನಿ ಅರುಗಿಸಿಕೊಳ್ಳಿ. ನಾವು ಇವತ್ತು ಪ್ಲ್ಯಾಸ್ಟಿಕ್ ಕುರ್ಚಿನಾಗೆ ಕೂತ್ಕಂಡಿರೋದ್ಕೆ ಆ ಕಾಂಗ್ರೆಸ್ ಪಾಲ್ಟಿಯೇ ಕಾರುಣ. ಅಕಸುಮಾತ್ ಎಪ್ಪತ್ತು ವರ್ಸುದ ಹಿಂದೆಯೇ ದೇಸುದಾಗೆ ಬೀಜೇಪಿ ಅಧಿಕಾರುಕ್ಕೆ ಬಂದಿದ್ದ್ರೆ ಎಲ್ರೂ ಬ್ಯೆಳ್ಳಿ ಕುರ್ಚಿನಾಗೆ ಕುಂತ್ಕಂಡಿರ್ತಿದ್ವಿ. ಎಲ್ಡು ಸಾವುರದ ಹತ್ರೊಂಬ್ವತ್ತರ ಎಲೆಕ್ಸೆನ್ನಾಗೆ ಒಂದು ಹ್ವುಲೀನ ಸೋಲುಸಕ್ಕೆ ಕಾಗ್ಯಣ್ಣ, ನರಿಯಣ್ಣ, ತ್ವಾಳಣ್ಣ, ಕರಿಡ್ಯಣ್ಣಗಳು ಒಂದಾಗ್ಯವೆ. ಈ ಕತ್ತೆಕ್ಯಿರುಬಗಳು ಗ್ಯೆಲ್ಲಬೇಕೊ, ಅಥುವಾ ನಂ ಹ್ವುಲಿ ಗ್ಯೆಲ್ಲಬೇಕೊ ನೀವೇ ಡಿಸೈಡ್ ಮಾಡಿ…
– ಅನಂತ್‍ಕುಮಾರ್ ಹೆಗಡೆ, ನಾಲಿಗೆ ನರದ ಸ್ವಾಧೀನ ಕಳೆದುಕೊಂಡಿರುವ ಕೇಂದ್ರ ಮಂತ್ರಿ

*****

ಒಬ್ಬೊಬ್ರ ಅಕೋಂಟಿಗೂ ಹದುನೈದು ಲಕ್ಸುವ ರೊಕ್ಕ ಹಾಕ್ತೀನಿ ಅಂತ ಎಲೆಕ್ಸನ್ ಟೇಮಿನಾಗೆ ಹ್ಯೇಳಿ, ಕಡೀಕೆ ಹದುನೈದ್ರುಪಾಯುನೂ ಹಾಕದ ಮ್ವೋದಿಯವುರಿಗೆ ನಂ ಸೀಎಂ ಕುಮಾರ್ಸೋಮಿ ಬಗ್ಗೆ ಮಾತಾಡಕ್ಕೆ ಅದೆಂತದೋ ಅಂತಾರಲ್ಲ, ಅದು ಇಲ್ಲ ಕಣ್ರೀ. ಸೋನ್ಯಾ ಗಾಂದಿ, ರಾಹುಲ್ ಗಾಂದಿ ಇಬ್ರೂನುವೆ, ಬೇಸರತ್ ಬೆಂಬುಲವ ಕೊಡ್ತೀವಿ ನೀವು ಜೇಡಿಯೆಸ್ ಗೋರ್ಮೆಂಟ್ ಮಾಡ್ಕಳಿ ಅಂತ ಹ್ಯೇಳಿದ್ದ್ರು. ಆದ್ರೆ ನಂ ದ್ವೊಡ್ಡಗೌಡ್ರು ಬ್ಯಾಡ, ಬ್ಯಾಡ ಇಬ್ರೂ ಕೂಡೇ ಸರ್ಕಾರುವ ಮಾಡನ ಅಂತೇಳಿದ್ದುಕ್ಕೆ ಇವತ್ತು ಸಮ್ಮಿಸ್ರು ಸರ್ಕಾರ ಆಗ್ಯದೆ. ಅದು ಐದು ವರ್ಸ ಅಲ್ಲಾಡಕಿಲ್ಲ ನೋಡ್ತಾ ಇರಿ…
– ಸಾರಾ ಮಹೇಶ್, ಮೇಡಂ ಭವಾನಿಯವರ ಕೃಪಾಶೀರ್ವಾದ ಇರುವ ಜೆಡಿಎಸ್ ಮಂತ್ರಿ

*****

ನಂ ಮ್ವೋದಿ ಸಾಹೇಬ್ರು ಪರ್ದಾನಿಯಾದ ಮ್ಯಾಕೆ ದ್ಯೇಸ ಶ್ಯಾನೆ ಅಭಿರುದ್ದಿ ಆಗ್ಯದೆ. ಕಳುದ ಎಂಟೇ ತಿಂಗ್ಳಾಗೆ ನಲ್ವತ್ತ್ವೊಂದು ಲಕ್ಸ ಉದ್ಯೋಗ ಹುಟ್ಕ್ಯಂಡವೆ ಮಹಾಸಯುರೆ. ಯಪ್ಪತ್ತು ವರ್ಸುದಿಂದ ಉದ್ದಾರುವೇ ಆಗುದೇ ಹಾಳು ಕ್ವೊಂಪ್ಯೆಯಾಗಿದ್ದ ಈಶಾನ್ಯುದ ರಾಜ್ಯಗಳು ಮ್ವೋದಿಯವುರ ಆಡಳಿತುದಾಗೆ ಯಾಪಾಟಿ ಉದ್ದಾರ ಆಗ್ಯವೆ ಅಂದ್ರೆ, ನಂಗೆ ಯೋಳಕ್ಕೆ ಮಾತ್ವುಗಳೇ ಬತ್ತಿಲ್ಲ ಕಣ್ರೀ, ಆಹ್ಞಾ…ಹಾ.. ಹಾ.. ಇಲ್ನೋಡಿ ಥೇಟು ನನ್ ಹಲ್ಲುಗುಳ ಥರಾ ಹೊಳೀತಾ ಕುಂತವೆ. ಇನ್ನು ಸಿಟಿಗುಳಂಗೆ ನಂ ಹಳ್ಳ್ಯಿಗುಳೂ ಸಿಕ್ಕಾಪಟ್ಟೆ ಇಂಪ್ರೂವ್ ಆಗ್ಯವೆ..
– ಡಿ.ವಿ.ಸದಾನಂದ ಗೌಡ, ಅಳುವಾಗ್ಲೂ ನಗುತ್ತಿರುವಷ್ಟೇ ಕಳೆಯಿಂದ
ಕಾಣುವ ಬಿಜೆಪಿಯ ವಜ್ರದಂತಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....