Homeರಾಜಕೀಯಮೇರೆ ಪ್ಯಾರೇ ದೇಶ್‍ವಾಸಿಯೋಂ, ಭಾಯಿಯೋ ಔರ್ ಬೆಹನೋ,

ಮೇರೆ ಪ್ಯಾರೇ ದೇಶ್‍ವಾಸಿಯೋಂ, ಭಾಯಿಯೋ ಔರ್ ಬೆಹನೋ,

- Advertisement -
- Advertisement -

ಮೇರೆ ಪ್ಯಾರೇ ದೇಶ್‍ವಾಸಿಯೋಂ, ಭಾಯಿಯೋ ಔರ್ ಬೆಹನೋ, ಇವತ್ತು ನಂ ದೇಸುದಾಗೆ ಏನೇನ್ ಅನಾನುಕೂಲ ಆಗ್ಯದೆ ಅನ್ನೋದುನ್ನ ಮರತುಬಿಡಿ. ಅಜಮಾಸು ನಲುವತ್ತು ವರ್ಸುದ ಹಿಂದಿನ ಇತಿಹಾಸುವ ಒಸಿ ನ್ಯೆಪ್ತಿ ಮಾಡ್ಕಳಿ. ಅದುಕ್ಕೆ ಸಮಂಧಪಟ್ಟಂಗೆ ಜಾಗೃತ್ರಾಗಿ. ಅವುತ್ತು ಈ ದ್ಯೇಸುದ ಮ್ಯಾಕೆ ಎಮುರ್ಜೆನ್ಸಿ ಹ್ಯೇರಿದ್ದವುರು, ಅದುನ್ನು ವಿರೋಧಿಸಿದ್ದವುರು, ಇವತ್ತು ಕೇವುಲ ಅಧಿಕಾರುಕ್ಕಾಗಿ ಒಬ್ಬರ ಕೈಯೊಳಿಕ್ಕೆ ಮತ್ತೊಬ್ಬರು ಕೈ ಜ್ಯೋಡಿಸ್ಕ್ಯಂಡ ಕುಂತವುರೆ. ಅವುರಿಗೆ ತಕ್ಕುನ ಪಾಟ ಕಲುಸಿ. ಈಗ ನಾನು ಮೂರು ಸಲ ಎಮುರ್ಜನ್ಸಿ ಅಂತೀನಿ, ನೀವೆಲ್ಲ ಕೈಯೆತ್ತಿ ಅಂಗೇ ಆಕ್ಷುನ್ ಮಾಡ್ಕ್ಯಂತ ರಿಪೀಟ್ ಮಾಡಿ…..’
– ನರೇಂದ್ರ ಮೋದಿ, ಮಾತಿಗೆ ಮರುಳಾದ ದೇಶಕ್ಕೆ ಸಿಕ್ಕಿರೋ ದುಬಾರಿ ದೊರೆ

*****

ಅನಂತ್ಕುಮಾರ್ ಹೆಗುಡೆ ಒಬ್ಬ ಲೋಪರ್ರು ಕಣ್ರೀ… ನೀಚ ಕಣ್ರೀ… ಹುಬ್ಳಿಯಾಗೆ ಯಾರೋ ಹಾರುಸಿದ್ದ ಧ್ವಜುವಾ ನಾನೇ ಹಾರುಸಿದ್ದು ಅಂತ ಆರೆಸ್ಸೆಸ್ನೋರ ಸಭೆಗಳುಲ್ಲಿ ಹ್ಯೇಳ್ಕಂಡ ತಿರುಗ್ಯಾಡ್ತಾ ಅವುನೆ. ಅವುನು ಎಲ್ಲರಿಗೂ ಹೊಡುದವುನೆ. ಬೀಜೇಪಿ ಪಾಲ್ಟಿ ಆಪಿಸ್ನಾಗೇ ಆ ಇಸ್ವೇಸ್ವರ ಹೆಗುಡೆ ಕಾಗೇರಿಗೆ ಯಕ್ಕಡಾ ತಕೊಂಡು ಹೊಡುದಿದ್ದ. ಅವುನಂಥಾ ನೀಚ ಇಡಿ ದೇಸುದಾಗೇ ಯಾರು ಇಲ್ಲ ಬಿಡಿ. ಅವುನು ನಂ ಜಿಲ್ಲೆಗೆ ಸಂಸುದ ಆಗ್ಯಿರೋದೆ ದುರಂತ’
– ಆನಂದ್ ಆಸ್ನೋಟಿಕರ್, ಕರಾವಳಿ ಭಾಗದ ಜೆಡಿಎಸ್ ಪಳೆಯುಳಿಕೆ

*****

ಈ ತಾಜಮಹಲು ಏನ್ ಇದ್ಯೆಲಾ, ಅದು ಅಕ್ಚುಲೀ ಸಿವುನ ದ್ಯೇವುಸ್ತಾನುವಂತೆ. ಅಂಥಾ ದ್ಯೇವುಸ್ತಾನ ಕಂ ಮಹಲುನ್ನ ಹೊಡೆಯೋಕ್ಕೆ ಅಂತ ನಂ ಯೂಪಿ ಸೀಎಂ ಸ್ವಾಮಿಗೊಳಾದ ಆದಿತ್ಯನಾಥುರು ಹೊಂಟವುರೆ. ಅವುರೇನಾದ್ರು ದಿಟವಾಗ್ಲೂ ಆ ಕ್ಯೆಲುಸಕ್ಕೆ ಕೈ ಹಾಕುದ್ರೆ, ಅದುಕ್ಕೆ ಹ್ಯೆಗಲು ಕ್ವೊಡಕ್ಕೆ ನಾನೂ ಸಿದ್ದ. ಬೇಕಾರೆ ಬೀಜೇಪಿಗೂ ಸೇರ್ಕಂಬುಡ್ತೀನಿ. ಜ್ವತೀಗೆ ಇಪ್ಪತ್ತು ಸಾವುರ ಜನಾನು ಕರ್ಕಂಬತ್ತೀನಿ. ಈ ಆಪರ್ರು ಒಪ್ಕಂಡಾರಾ ನಂ ಯೂಪಿ ಸೀಎಂ…
– ಆಜಂ ಖಾನ್, ಸಮಾಜವಾದಿ ಪಾರ್ಟಿಯ ಕಾಂಟ್ರವರ್ಸಿಯಲ್ ಕಿಲಾಡಿ

*****

ನಂ ಕರ್ನಾಟುಕದಲ್ಲಿರೋ ಪರಬಾಸಿಕರನ್ನ ನಡು ರಸ್ತೇನಾಗೇ ಸುಟ್ಟು ಹಾಕ್ಬೇಕು ಕಣ್ರೀ. ಅವುರೆಲ್ಲ ಇಲ್ಲಿಗೆ ಬಂದು ವಕ್ಕರಿಸಿಕ್ಯಂಡಿದ್ದುರಿಂದ್ಲೇ ಬೆಂಗ್ಳೂರು ನಂ ಕೈತ್ಯೆಪ್ಪಿ ಹೋಗೈತಿ. ಅವುರನ್ನು ಇಲ್ಲಿಂದ ಹೊರಕ್ಕೆ ದೂಡಕ್ಕೆ ನಾವೆಲ್ಲ ಮತ್ತೆ ಚಳುವಳಿ ಸುರು ಮಾಡ್ಬೇಕಾಗೈತಿ. ಜೈ ಕನ್ನುಡಾಂಬೆ…                                                                                  – ವಾಟಾಳ್ ನಾಗರಾಜ್, ವಿಚಿತ್ರ ಚಳುವಳಿಗಳ ಸಚಿತ್ರ ಕಾರ್ಟೂನ್

*****

ನಾ ಹ್ಯೇಳ್ತೀನಿ ಕ್ಯೇಳಿ, ಈ ಸಮ್ಮಿಸ್ರು ಸರ್ಕಾರ ಬಾಳ ದಿನ ಉಳಿಯಂಗಿಲ್ಲ. ಯಾಕಂದ್ರೆ ನಂ ಬಳ್ಳಾರಿ ರಾಜ್ಯುದ ಇತಿಹಾಸುದಾಗೆ ಯಾವ ಕೊಲೀಷನ್ ಗೋರ್ಮೆಂಟೂ ಪುಲ್‍ಟೇಮು ಅಧಿಕಾರುವ ಮಾಡಿದ ಎಜ್ಜಾಂಪಲ್ಲೇ ಇಲ್ಲ. ಅಂತದ್ರಾಗೆ ಇವುರು ಮಾಡ್ಯಾರಾ? ನೋ ಚಾನ್ಸ್. ಬಿದ್ದೋಯ್ತರೆ ನೋಡ್ತಾ ಇರಿ…
– ಬೀ ಶ್ರೀರಾಮುಲು, ಬಿಜೆಪಿಯ ಗಡ್ಡಧಾರಿ ಅವತಾರ ಪುರುಷ

*****

ಈ ಮಠಾಧೀಸರು ಏನವುರಲ್ಲ, ಅವುರು ಅಧಿಕಾರ ಇದ್ದಕಡೀಕೆ ವಾಲಿಕ್ಯಂತಾರೆ. ಜನುರ ಕಷ್ಟ ಸುಖದ ಬಗ್ಗೆ ಮಾತಾಡೋದು ಬುಟ್ಟು, ರಾಜಕಾರಣುದಾಗೆ ಮೂಗು ತ್ವೂರ್ಸಕ್ಕೆ ಬತ್ತಾರಲ್ಲ, ಇವ್ರಿಗೆ ಏನನ್ನಬೇಕು? ಇವತ್ತು ಸಿದ್ರಾಮಯ್ಯುನ ಪರುವಾಗಿ ಮಾತಾಡೊ ಕುರುಬರ ಸ್ವಾಮಿ, ಅವತ್ತು ಇದೇ ಸಿದ್ರಾಮಯ್ಯ ನನಿಗೆ ಅನ್ಯಾಯ ಮಾಡುವಾಗ ಎತ್ತಗೋಗಿದ್ರು. ಯಾಕೆ, ನಾನು ಕುರುಬನಲ್ಲುವಾ…?
– ಎಚ್ಚ್ ವಿಶ್ವನಾಥ್, ಗೌಡರ ಹಟ್ಟಿಯ ನಿರಾಶ್ರಿತ ಶಿಬಿರದ ಫಲಾನುಭವಿ

*****

ಸ್ವಿಸ್ ಬ್ಯಾಂಕಿನಾಗೆ ಇಟ್ಟಿರೋ ಭಾರತೀಯರ ಹಣ ಕಳುದ ವರ್ಸ ಡಬಲ್ ಆಗ್ಯದೆ ಅನ್ನೋ ಸುದ್ದಿ ನನಿಗೂ ಬಂದದೆ. ಹಾಗಂತ ಅದು ಬ್ಲ್ಯಾಕ್ ಮನಿ ಅಲ್ಲಾ ಕಣ್ರೀ. ನಂ ಎನ್ನಾರೈಗಳು ಶ್ಯಾನೆ ಕಸ್ಟಪಟ್ಟು ದುಡುದು ಕೂಡಿಟ್ಟ ನ್ಯಾಯಬದ್ಧ ಹಣ ಆಗಿರ್ಬೈದಲ್ವಾ. ಯಾಕ್ರೀ ನಂ ಜನುಕ್ಕೆ ಕನ್‍ಫ್ಯೂಜ್ ಮಾಡ್ತೀರಾ?
– ಪಿಯೂಷ್ ಗೋಯೆಲ್, ಬ್ಲ್ಯಾಕ್‍ಮನಿ ಸ್ಪೆಷಲಿಸ್ಟ್
ಮೋದಿ ಸಂಪುಟದ ಮನಿ ಮಂತ್ರಿ

*****

ಲುಕ್ ಮೈ ಡಿಯರ್ ಫ್ರೆಂಡ್ಸ್, ಒಂದು ಸತ್ಯುವ ಹ್ಯೇಳ್ತೀನಿ ಅರುಗಿಸಿಕೊಳ್ಳಿ. ನಾವು ಇವತ್ತು ಪ್ಲ್ಯಾಸ್ಟಿಕ್ ಕುರ್ಚಿನಾಗೆ ಕೂತ್ಕಂಡಿರೋದ್ಕೆ ಆ ಕಾಂಗ್ರೆಸ್ ಪಾಲ್ಟಿಯೇ ಕಾರುಣ. ಅಕಸುಮಾತ್ ಎಪ್ಪತ್ತು ವರ್ಸುದ ಹಿಂದೆಯೇ ದೇಸುದಾಗೆ ಬೀಜೇಪಿ ಅಧಿಕಾರುಕ್ಕೆ ಬಂದಿದ್ದ್ರೆ ಎಲ್ರೂ ಬ್ಯೆಳ್ಳಿ ಕುರ್ಚಿನಾಗೆ ಕುಂತ್ಕಂಡಿರ್ತಿದ್ವಿ. ಎಲ್ಡು ಸಾವುರದ ಹತ್ರೊಂಬ್ವತ್ತರ ಎಲೆಕ್ಸೆನ್ನಾಗೆ ಒಂದು ಹ್ವುಲೀನ ಸೋಲುಸಕ್ಕೆ ಕಾಗ್ಯಣ್ಣ, ನರಿಯಣ್ಣ, ತ್ವಾಳಣ್ಣ, ಕರಿಡ್ಯಣ್ಣಗಳು ಒಂದಾಗ್ಯವೆ. ಈ ಕತ್ತೆಕ್ಯಿರುಬಗಳು ಗ್ಯೆಲ್ಲಬೇಕೊ, ಅಥುವಾ ನಂ ಹ್ವುಲಿ ಗ್ಯೆಲ್ಲಬೇಕೊ ನೀವೇ ಡಿಸೈಡ್ ಮಾಡಿ…
– ಅನಂತ್‍ಕುಮಾರ್ ಹೆಗಡೆ, ನಾಲಿಗೆ ನರದ ಸ್ವಾಧೀನ ಕಳೆದುಕೊಂಡಿರುವ ಕೇಂದ್ರ ಮಂತ್ರಿ

*****

ಒಬ್ಬೊಬ್ರ ಅಕೋಂಟಿಗೂ ಹದುನೈದು ಲಕ್ಸುವ ರೊಕ್ಕ ಹಾಕ್ತೀನಿ ಅಂತ ಎಲೆಕ್ಸನ್ ಟೇಮಿನಾಗೆ ಹ್ಯೇಳಿ, ಕಡೀಕೆ ಹದುನೈದ್ರುಪಾಯುನೂ ಹಾಕದ ಮ್ವೋದಿಯವುರಿಗೆ ನಂ ಸೀಎಂ ಕುಮಾರ್ಸೋಮಿ ಬಗ್ಗೆ ಮಾತಾಡಕ್ಕೆ ಅದೆಂತದೋ ಅಂತಾರಲ್ಲ, ಅದು ಇಲ್ಲ ಕಣ್ರೀ. ಸೋನ್ಯಾ ಗಾಂದಿ, ರಾಹುಲ್ ಗಾಂದಿ ಇಬ್ರೂನುವೆ, ಬೇಸರತ್ ಬೆಂಬುಲವ ಕೊಡ್ತೀವಿ ನೀವು ಜೇಡಿಯೆಸ್ ಗೋರ್ಮೆಂಟ್ ಮಾಡ್ಕಳಿ ಅಂತ ಹ್ಯೇಳಿದ್ದ್ರು. ಆದ್ರೆ ನಂ ದ್ವೊಡ್ಡಗೌಡ್ರು ಬ್ಯಾಡ, ಬ್ಯಾಡ ಇಬ್ರೂ ಕೂಡೇ ಸರ್ಕಾರುವ ಮಾಡನ ಅಂತೇಳಿದ್ದುಕ್ಕೆ ಇವತ್ತು ಸಮ್ಮಿಸ್ರು ಸರ್ಕಾರ ಆಗ್ಯದೆ. ಅದು ಐದು ವರ್ಸ ಅಲ್ಲಾಡಕಿಲ್ಲ ನೋಡ್ತಾ ಇರಿ…
– ಸಾರಾ ಮಹೇಶ್, ಮೇಡಂ ಭವಾನಿಯವರ ಕೃಪಾಶೀರ್ವಾದ ಇರುವ ಜೆಡಿಎಸ್ ಮಂತ್ರಿ

*****

ನಂ ಮ್ವೋದಿ ಸಾಹೇಬ್ರು ಪರ್ದಾನಿಯಾದ ಮ್ಯಾಕೆ ದ್ಯೇಸ ಶ್ಯಾನೆ ಅಭಿರುದ್ದಿ ಆಗ್ಯದೆ. ಕಳುದ ಎಂಟೇ ತಿಂಗ್ಳಾಗೆ ನಲ್ವತ್ತ್ವೊಂದು ಲಕ್ಸ ಉದ್ಯೋಗ ಹುಟ್ಕ್ಯಂಡವೆ ಮಹಾಸಯುರೆ. ಯಪ್ಪತ್ತು ವರ್ಸುದಿಂದ ಉದ್ದಾರುವೇ ಆಗುದೇ ಹಾಳು ಕ್ವೊಂಪ್ಯೆಯಾಗಿದ್ದ ಈಶಾನ್ಯುದ ರಾಜ್ಯಗಳು ಮ್ವೋದಿಯವುರ ಆಡಳಿತುದಾಗೆ ಯಾಪಾಟಿ ಉದ್ದಾರ ಆಗ್ಯವೆ ಅಂದ್ರೆ, ನಂಗೆ ಯೋಳಕ್ಕೆ ಮಾತ್ವುಗಳೇ ಬತ್ತಿಲ್ಲ ಕಣ್ರೀ, ಆಹ್ಞಾ…ಹಾ.. ಹಾ.. ಇಲ್ನೋಡಿ ಥೇಟು ನನ್ ಹಲ್ಲುಗುಳ ಥರಾ ಹೊಳೀತಾ ಕುಂತವೆ. ಇನ್ನು ಸಿಟಿಗುಳಂಗೆ ನಂ ಹಳ್ಳ್ಯಿಗುಳೂ ಸಿಕ್ಕಾಪಟ್ಟೆ ಇಂಪ್ರೂವ್ ಆಗ್ಯವೆ..
– ಡಿ.ವಿ.ಸದಾನಂದ ಗೌಡ, ಅಳುವಾಗ್ಲೂ ನಗುತ್ತಿರುವಷ್ಟೇ ಕಳೆಯಿಂದ
ಕಾಣುವ ಬಿಜೆಪಿಯ ವಜ್ರದಂತಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...