Homeಮುಖಪುಟಲಸಿಕೆ ಸರ್ಟಿಫಿಕೇಟ್‌‌ನಲ್ಲಿ ಮೋದಿ ಭಾವಚಿತ್ರ ಸ್ವೀಕರಿಸಲಾಗದಷ್ಟು ಅಸಹಿಷ್ಣುತೆ ಇರಬಾರದು: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌‌ನಲ್ಲಿ ಮೋದಿ ಭಾವಚಿತ್ರ ಸ್ವೀಕರಿಸಲಾಗದಷ್ಟು ಅಸಹಿಷ್ಣುತೆ ಇರಬಾರದು: ಕೇರಳ ಹೈಕೋರ್ಟ್

- Advertisement -
- Advertisement -

ಕೋವಿಡ್‌‌ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿಯವರ ಭಾವಚಿತ್ರ ಇರುವುದನ್ನು ಸ್ವೀಕರಿಸಲು ಸಾಧ್ಯವಾಗದ ಮಟ್ಟಿಗೆ ನಾಗರಿಕರು ಅಸಹಿಷ್ಣುತೆ ಹೊಂದಬಾರದು ಎಂದು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠವು ಶನಿವಾರ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ಅವರನ್ನೊಳಗೊಂಡ ಪೀಠವು, ಲಸಿಕೆ ಪ್ರಮಾಣಪತ್ರ ಸಂಬಂಧ ಏಕ ಸದಸ್ಯ ಪೀಠದ ನ್ಯಾಯಾಧೀಶರ ಆದೇಶದ ವಿರುದ್ಧದ ಮೇಲ್ಮನವಿಯನ್ನು ವಜಾಗೊಳಿಸಿತು. ಕೋವಿಡ್‌‌ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ನಾಗರಿಕರ ಗಮನವನ್ನು ಸೆಳೆಯಲು, ಗರಿಷ್ಠ ಸಂಖ್ಯೆಯ ಜನರು ಲಸಿಕೆಯನ್ನು ತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ತನ್ನ ಕರ್ತವ್ಯಗಳನ್ನು ನಿರ್ವಹಿಸುವ ಪ್ರಯತ್ನವಾಗಿ ಛಾಯಾಚಿತ್ರವು  ಇರುವುದಾಗಿ ವಿಭಾಗೀಯ ಪೀಠ ಹೇಳಿದೆ.

ಪ್ರಧಾನ ಮಂತ್ರಿಯವರ ಭಾವಚಿತ್ರವನ್ನು ಪ್ರಮಾಣಪತ್ರಗಳಿಂದ ತೆಗೆದುಹಾಕುವಂತೆ ಸರ್ಕಾರವನ್ನು ಪ್ರಶ್ನಿಸುವ ಮೂಲಕ ನಾಗರಿಕರು ಮೂಲಭೂತ ಹಕ್ಕನ್ನು ಪ್ರತಿಪಾದಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಕೇಂದ್ರ ಸರ್ಕಾರವು ಸಾರ್ವಜನಿಕರ ಮೂಲಭೂತ ಹಕ್ಕುಗಳ ಬಗ್ಗೆ ಕಾಳಜಿ ವಹಿಸುತ್ತದೆಯೇ ಹೊರತು ಕರೋನವೈರಸ್ ಸಾಂಕ್ರಾಮಿಕದಂತಹ ಪರಿಸ್ಥಿತಿಯಲ್ಲಿ ವ್ಯಕ್ತಿಯ ಮೂಲಭೂತ ಹಕ್ಕುಗಳ ಬಗ್ಗೆ ಅಲ್ಲ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಅಸ್ಥಿರ ಪರಿಸ್ಥಿತಿಯು ರಾಷ್ಟ್ರ ಮತ್ತು ಇಡೀ ಜಗತ್ತನ್ನು ಆವರಿಸಿದಾಗ ಭಾರತದ ಸಂವಿಧಾನದ ಭಾಗ IIIರ ಅಡಿಯಲ್ಲಿ ಖಾತರಿಪಡಿಸಿದ ವೈಯಕ್ತಿಕ ಹಕ್ಕು ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿಗೆ ಅಧೀನವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಇದಕ್ಕೂ ಮುನ್ನ ಏಕ ಸದಸ್ಯ ಪೀಠವು  ಅರ್ಜಿದಾರರಾದ ಪೀಟರ್ ಮೈಲಿಪರಂಪಿಲ್ ಅವರ ಮೇಲೆ 1 ಲಕ್ಷ ರೂ. ದಂಡ ವಿಧಿಸಿತ್ತು. ಆದರೆ ವಿಭಾಗೀಯ ಪೀಠ ಅದನ್ನು 25 ಸಾವಿರ ರೂ.ಗೆ ಇಳಿಸಿತು. ಕ್ಷುಲ್ಲಕ ಅರ್ಜಿಗಳನ್ನು ಸಲ್ಲಿಸದಂತೆ ಪೀಠವು ಎಚ್ಚರಿಕೆ ನೀಡಿದೆ.

ಪ್ರಧಾನಿಯವರು ರಾಜಕೀಯ ಪಕ್ಷವೊಂದರ ನಾಯಕರೂ ಆಗಿರುವುದರಿಂದ ಸರ್ಕಾರಿ ಅನುದಾನಿತ ಸಂದೇಶಗಳು, ಪ್ರಚಾರಗಳಲ್ಲಿ ಪ್ರಧಾನಿಯವರನ್ನು ಉದಾಹರಿಸುವುದನ್ನು ತಡೆಯಬೇಕು ಎಂದು ಮೈಲಿಪರಂಪಿಲ್ ವಾದಿಸಿದ್ದರು.

ಇಂತಹ ಪ್ರಚಾರವು ಚುನಾವಣಾ ವ್ಯವಸ್ಥೆಯಲ್ಲಿ ಅಳವಡಿಸಲಾಗಿರುವ ಮತದಾನದ ಸ್ವತಂತ್ರ ಆಯ್ಕೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದರು.

ಕೊರೊನಾ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆಯುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್‌, “ಪ್ರಧಾನಿ ಬಗ್ಗೆ ನಾಚಿಕೆ ಏಕೆ?” ಎಂದು ಅರ್ಜಿದಾರರನ್ನು ಪ್ರಶ್ನಿಸಿತ್ತು.

ಇತರ ದೇಶಗಳಲ್ಲಿ ಇಂತಹ ಪದ್ಧತಿ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ಕೇರಳ ಹೈಕೋರ್ಟ್‌ಗೆ ತಿಳಿಸಿದ್ದರು. ಇದಕ್ಕೆ ಮೌಖಿಕವಾಗಿ ಪ್ರತಿಕ್ರಿಯಿಸಿದ್ದ ನ್ಯಾಯಾಧೀಶರು, “ಅವರು ತಮ್ಮ ಪ್ರಧಾನಿಗಳ ಬಗ್ಗೆ ಹೆಮ್ಮೆಪಡದಿರಬಹುದು, ನಮ್ಮ ಪ್ರಧಾನಿ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಹೇಳಿದ್ದರು.

ದೇಶದ ಜನರು ಬಹುಮತದಿಂದ ಪ್ರಧಾನಿಯನ್ನು ಅಧಿಕಾರಕ್ಕೆ ಆಯ್ಕೆ ಮಾಡಿದ್ದಾರೆ. ಲಸಿಕೆ ಪ್ರಮಾಣ ಪತ್ರದಲ್ಲಿ ಅವರ ಭಾವಚಿತ್ರ ಇರುವುದರಲ್ಲಿ ತಪ್ಪೇನು ಎಂದು ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಕೇಳಿದ್ದರು.

“ನೀವು (ಅರ್ಜಿದಾರರು) ಪ್ರಧಾನ ಮಂತ್ರಿಯ ಬಗ್ಗೆ ಏಕೆ ನಾಚಿಕೆಪಡುತ್ತೀರಿ? ಅವರು ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ…. ನಾವು ವಿಭಿನ್ನ ರಾಜಕೀಯ ದೃಷ್ಟಿಕೋನಗಳನ್ನು ಹೊಂದಿರಬಹುದು, ಆದರೆ ಅವರು ಇನ್ನೂ ನಮ್ಮ ಪ್ರಧಾನಿ” ಎಂದು ನ್ಯಾಯಾಲಯ ಹೇಳಿತ್ತು.

ಅರ್ಜಿದಾರರ ಪರ ವಕೀಲ ಪೀಟರ್ ಮೈಲಿಪರಂಪಿಲ್ ಅವರು, “ಪ್ರಮಾಣಪತ್ರವು ಖಾಸಗಿ ದಾಖಲೆ ಆಗಿದ್ದು, ಅದರ ಮೇಲೆ ನಮಗೆ ಹಕ್ಕಿದೆ. ನಾವು ಹಣ ಕೊಟ್ಟು ಲಸಿಕೆ ಖರೀದಿಸಿದ್ದು, ಅದರ ಕ್ರೆಡಿಟ್ ಅನ್ನು ಪ್ರಭುತ್ವ ತೆಗೆದುಕೊಳ್ಳುವುದು ಸರಿಯಲ್ಲ” ಎಂದು ವಾದಿಸಿದ್ದಾರೆ.

ಪ್ರಮಾಣ ಪತ್ರಕ್ಕೆ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಸೇರಿಸಿರುವುದು ವ್ಯಕ್ತಿಯ ಖಾಸಗಿತನವನ್ನು ಉಲ್ಲಂಘಿಸಿದಂತಾಗುತ್ತದೆ ಪೀಟರ್‌ ಪ್ರತಿಪಾದಿಸಿದ್ದರು.

ಈ ದೇಶದಲ್ಲಿ ಜವಾಹಾರ್‌ ಲಾಲ್ ನೆಹರೂ ಹೆಸರಿನಲ್ಲಿ ವಿಶ್ವವಿದ್ಯಾಲಯವೇ ಇದೆ. ಹಾಗಿದ್ದಾಗ ಲಸಿಕೆ ಪ್ರಮಾಣ ಪತ್ರದ ಮೇಲೆ ಈಗಿನಿ ಪ್ರಧಾನಿಯವರ ಫೋಟೊ ಏಕಿರಬಾರದು ಎಂದು ಪೀಠ ಪ್ರಶ್ನಿಸಿತ್ತು.

ದೇಶದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೊ ಇರುವುದರಿಂದ ತೊಂದರೆಯಾಗಿಲ್ಲ. ನಿಮಗೇಕೆ ತೊಂದರೆ? ಎಂದು ಕೇಳಿತ್ತು. ಅರ್ಜಿಗೆ ಯಾವುದೇ ಅರ್ಹತೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಇಲ್ಲವೆಂದಾದರೆ, ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿತ್ತು.


ಇದನ್ನೂ ಓದಿರಿ: ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...