Homeಮುಖಪುಟಲಸಿಕೆ ಸರ್ಟಿಫಿಕೇಟ್‌‌ನಲ್ಲಿ ಮೋದಿ ಭಾವಚಿತ್ರ ಸ್ವೀಕರಿಸಲಾಗದಷ್ಟು ಅಸಹಿಷ್ಣುತೆ ಇರಬಾರದು: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌‌ನಲ್ಲಿ ಮೋದಿ ಭಾವಚಿತ್ರ ಸ್ವೀಕರಿಸಲಾಗದಷ್ಟು ಅಸಹಿಷ್ಣುತೆ ಇರಬಾರದು: ಕೇರಳ ಹೈಕೋರ್ಟ್

- Advertisement -
- Advertisement -

ಕೋವಿಡ್‌‌ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿಯವರ ಭಾವಚಿತ್ರ ಇರುವುದನ್ನು ಸ್ವೀಕರಿಸಲು ಸಾಧ್ಯವಾಗದ ಮಟ್ಟಿಗೆ ನಾಗರಿಕರು ಅಸಹಿಷ್ಣುತೆ ಹೊಂದಬಾರದು ಎಂದು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠವು ಶನಿವಾರ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ಅವರನ್ನೊಳಗೊಂಡ ಪೀಠವು, ಲಸಿಕೆ ಪ್ರಮಾಣಪತ್ರ ಸಂಬಂಧ ಏಕ ಸದಸ್ಯ ಪೀಠದ ನ್ಯಾಯಾಧೀಶರ ಆದೇಶದ ವಿರುದ್ಧದ ಮೇಲ್ಮನವಿಯನ್ನು ವಜಾಗೊಳಿಸಿತು. ಕೋವಿಡ್‌‌ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ನಾಗರಿಕರ ಗಮನವನ್ನು ಸೆಳೆಯಲು, ಗರಿಷ್ಠ ಸಂಖ್ಯೆಯ ಜನರು ಲಸಿಕೆಯನ್ನು ತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ತನ್ನ ಕರ್ತವ್ಯಗಳನ್ನು ನಿರ್ವಹಿಸುವ ಪ್ರಯತ್ನವಾಗಿ ಛಾಯಾಚಿತ್ರವು  ಇರುವುದಾಗಿ ವಿಭಾಗೀಯ ಪೀಠ ಹೇಳಿದೆ.

ಪ್ರಧಾನ ಮಂತ್ರಿಯವರ ಭಾವಚಿತ್ರವನ್ನು ಪ್ರಮಾಣಪತ್ರಗಳಿಂದ ತೆಗೆದುಹಾಕುವಂತೆ ಸರ್ಕಾರವನ್ನು ಪ್ರಶ್ನಿಸುವ ಮೂಲಕ ನಾಗರಿಕರು ಮೂಲಭೂತ ಹಕ್ಕನ್ನು ಪ್ರತಿಪಾದಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಕೇಂದ್ರ ಸರ್ಕಾರವು ಸಾರ್ವಜನಿಕರ ಮೂಲಭೂತ ಹಕ್ಕುಗಳ ಬಗ್ಗೆ ಕಾಳಜಿ ವಹಿಸುತ್ತದೆಯೇ ಹೊರತು ಕರೋನವೈರಸ್ ಸಾಂಕ್ರಾಮಿಕದಂತಹ ಪರಿಸ್ಥಿತಿಯಲ್ಲಿ ವ್ಯಕ್ತಿಯ ಮೂಲಭೂತ ಹಕ್ಕುಗಳ ಬಗ್ಗೆ ಅಲ್ಲ ಎಂದು ನ್ಯಾಯಾಲಯ ಹೇಳಿದೆ.

“ಯಾವುದೇ ಅಸ್ಥಿರ ಪರಿಸ್ಥಿತಿಯು ರಾಷ್ಟ್ರ ಮತ್ತು ಇಡೀ ಜಗತ್ತನ್ನು ಆವರಿಸಿದಾಗ ಭಾರತದ ಸಂವಿಧಾನದ ಭಾಗ IIIರ ಅಡಿಯಲ್ಲಿ ಖಾತರಿಪಡಿಸಿದ ವೈಯಕ್ತಿಕ ಹಕ್ಕು ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿಗೆ ಅಧೀನವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಇದಕ್ಕೂ ಮುನ್ನ ಏಕ ಸದಸ್ಯ ಪೀಠವು  ಅರ್ಜಿದಾರರಾದ ಪೀಟರ್ ಮೈಲಿಪರಂಪಿಲ್ ಅವರ ಮೇಲೆ 1 ಲಕ್ಷ ರೂ. ದಂಡ ವಿಧಿಸಿತ್ತು. ಆದರೆ ವಿಭಾಗೀಯ ಪೀಠ ಅದನ್ನು 25 ಸಾವಿರ ರೂ.ಗೆ ಇಳಿಸಿತು. ಕ್ಷುಲ್ಲಕ ಅರ್ಜಿಗಳನ್ನು ಸಲ್ಲಿಸದಂತೆ ಪೀಠವು ಎಚ್ಚರಿಕೆ ನೀಡಿದೆ.

ಪ್ರಧಾನಿಯವರು ರಾಜಕೀಯ ಪಕ್ಷವೊಂದರ ನಾಯಕರೂ ಆಗಿರುವುದರಿಂದ ಸರ್ಕಾರಿ ಅನುದಾನಿತ ಸಂದೇಶಗಳು, ಪ್ರಚಾರಗಳಲ್ಲಿ ಪ್ರಧಾನಿಯವರನ್ನು ಉದಾಹರಿಸುವುದನ್ನು ತಡೆಯಬೇಕು ಎಂದು ಮೈಲಿಪರಂಪಿಲ್ ವಾದಿಸಿದ್ದರು.

ಇಂತಹ ಪ್ರಚಾರವು ಚುನಾವಣಾ ವ್ಯವಸ್ಥೆಯಲ್ಲಿ ಅಳವಡಿಸಲಾಗಿರುವ ಮತದಾನದ ಸ್ವತಂತ್ರ ಆಯ್ಕೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಹೇಳಿದರು.

ಕೊರೊನಾ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆಯುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್‌, “ಪ್ರಧಾನಿ ಬಗ್ಗೆ ನಾಚಿಕೆ ಏಕೆ?” ಎಂದು ಅರ್ಜಿದಾರರನ್ನು ಪ್ರಶ್ನಿಸಿತ್ತು.

ಇತರ ದೇಶಗಳಲ್ಲಿ ಇಂತಹ ಪದ್ಧತಿ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ಕೇರಳ ಹೈಕೋರ್ಟ್‌ಗೆ ತಿಳಿಸಿದ್ದರು. ಇದಕ್ಕೆ ಮೌಖಿಕವಾಗಿ ಪ್ರತಿಕ್ರಿಯಿಸಿದ್ದ ನ್ಯಾಯಾಧೀಶರು, “ಅವರು ತಮ್ಮ ಪ್ರಧಾನಿಗಳ ಬಗ್ಗೆ ಹೆಮ್ಮೆಪಡದಿರಬಹುದು, ನಮ್ಮ ಪ್ರಧಾನಿ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಹೇಳಿದ್ದರು.

ದೇಶದ ಜನರು ಬಹುಮತದಿಂದ ಪ್ರಧಾನಿಯನ್ನು ಅಧಿಕಾರಕ್ಕೆ ಆಯ್ಕೆ ಮಾಡಿದ್ದಾರೆ. ಲಸಿಕೆ ಪ್ರಮಾಣ ಪತ್ರದಲ್ಲಿ ಅವರ ಭಾವಚಿತ್ರ ಇರುವುದರಲ್ಲಿ ತಪ್ಪೇನು ಎಂದು ನ್ಯಾಯಮೂರ್ತಿ ಪಿ ವಿ ಕುಂಞಿಕೃಷ್ಣನ್ ಕೇಳಿದ್ದರು.

“ನೀವು (ಅರ್ಜಿದಾರರು) ಪ್ರಧಾನ ಮಂತ್ರಿಯ ಬಗ್ಗೆ ಏಕೆ ನಾಚಿಕೆಪಡುತ್ತೀರಿ? ಅವರು ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ…. ನಾವು ವಿಭಿನ್ನ ರಾಜಕೀಯ ದೃಷ್ಟಿಕೋನಗಳನ್ನು ಹೊಂದಿರಬಹುದು, ಆದರೆ ಅವರು ಇನ್ನೂ ನಮ್ಮ ಪ್ರಧಾನಿ” ಎಂದು ನ್ಯಾಯಾಲಯ ಹೇಳಿತ್ತು.

ಅರ್ಜಿದಾರರ ಪರ ವಕೀಲ ಪೀಟರ್ ಮೈಲಿಪರಂಪಿಲ್ ಅವರು, “ಪ್ರಮಾಣಪತ್ರವು ಖಾಸಗಿ ದಾಖಲೆ ಆಗಿದ್ದು, ಅದರ ಮೇಲೆ ನಮಗೆ ಹಕ್ಕಿದೆ. ನಾವು ಹಣ ಕೊಟ್ಟು ಲಸಿಕೆ ಖರೀದಿಸಿದ್ದು, ಅದರ ಕ್ರೆಡಿಟ್ ಅನ್ನು ಪ್ರಭುತ್ವ ತೆಗೆದುಕೊಳ್ಳುವುದು ಸರಿಯಲ್ಲ” ಎಂದು ವಾದಿಸಿದ್ದಾರೆ.

ಪ್ರಮಾಣ ಪತ್ರಕ್ಕೆ ಪ್ರಧಾನಮಂತ್ರಿಯವರ ಭಾವಚಿತ್ರವನ್ನು ಸೇರಿಸಿರುವುದು ವ್ಯಕ್ತಿಯ ಖಾಸಗಿತನವನ್ನು ಉಲ್ಲಂಘಿಸಿದಂತಾಗುತ್ತದೆ ಪೀಟರ್‌ ಪ್ರತಿಪಾದಿಸಿದ್ದರು.

ಈ ದೇಶದಲ್ಲಿ ಜವಾಹಾರ್‌ ಲಾಲ್ ನೆಹರೂ ಹೆಸರಿನಲ್ಲಿ ವಿಶ್ವವಿದ್ಯಾಲಯವೇ ಇದೆ. ಹಾಗಿದ್ದಾಗ ಲಸಿಕೆ ಪ್ರಮಾಣ ಪತ್ರದ ಮೇಲೆ ಈಗಿನಿ ಪ್ರಧಾನಿಯವರ ಫೋಟೊ ಏಕಿರಬಾರದು ಎಂದು ಪೀಠ ಪ್ರಶ್ನಿಸಿತ್ತು.

ದೇಶದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೊ ಇರುವುದರಿಂದ ತೊಂದರೆಯಾಗಿಲ್ಲ. ನಿಮಗೇಕೆ ತೊಂದರೆ? ಎಂದು ಕೇಳಿತ್ತು. ಅರ್ಜಿಗೆ ಯಾವುದೇ ಅರ್ಹತೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಇಲ್ಲವೆಂದಾದರೆ, ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿತ್ತು.


ಇದನ್ನೂ ಓದಿರಿ: ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೊ: ಪ್ರಧಾನಿ ಬಗ್ಗೆ ನಾಚಿಕೆ ಏಕೆ? ಕೇರಳ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...