Homeಮುಖಪುಟಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಮೋದಿ ಒತ್ತಡಕ್ಕೆ ಮಣಿದು ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ಗೌತಮ್ ಅದಾನಿ ಗುಂಪಿಗೆ ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸಿದ್ದಾರೆ. ಮೋದಿ ಒತ್ತಡಕ್ಕೆ ಮಣಿದು ಗೌತಮ್ ಅದಾನಿ ಗುಂಪಿಗೆ ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ಪವನ ವಿದ್ಯುತ್ ಯೋಜನೆಯನ್ನು ನೇರವಾಗಿ ಅದಾನಿ ಗ್ರೂಪ್‌ಗೆ ನೀಡುವಂತೆ ಭಾರತದ ಪ್ರಧಾನಿ ಮೋದಿ ಒತ್ತಡ ಹೇರಿದ್ದಾರೆ ಎಂದು ಅಧ್ಯಕ್ಷ ರಾಜಪಕ್ಸೆ ಅವರು ತಮಗೆ ಹೇಳಿರುವುದಾಗಿ ತಿಳಿಸಿದ್ದ ಶ್ರೀಲಂಕಾದ ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ (ಸಿಇಬಿ) ಅಧ್ಯಕ್ಷ ಎಂಎಂಸಿ ಫರ್ಡಿನಾಂಡೋ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಲಂಕಾದ ಮನ್ನಾರ್ ಜಿಲ್ಲೆಯಲ್ಲಿ 500-ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಯೋಜನೆಗೆ ಸಂಬಂಧಿಸಿದಂತೆ ಈ ಆರೋಪ ಮಾಡಲಾಗಿತ್ತು. ಸಾರ್ವಜನಿಕ ಉದ್ಯಮಗಳ ಸಮಿತಿಯ (COPE) ಮುಕ್ತ ವಿಚಾರಣೆಯಲ್ಲಿ ಫರ್ಡಿನಾಂಡೋ ಮಾತನಾಡಿರುವುದಾಗಿ ವರದಿಯಾಗಿತ್ತು. “ಮೋದಿಯವರ ಒತ್ತಡಕ್ಕೆ ಒಳಗಾಗಿರುವುದಾಗಿ ರಾಜಪಕ್ಸೆ ನನಗೆ ಹೇಳಿದರು” ಎಂದು ಫರ್ಡಿನಾಂಡೋ ಹೇಳಿಕೆ ನೀಡಿದ್ದು ಪತ್ರಿಕೆಗಳಲ್ಲಿಯೂ ವರದಿಯಾಗಿತ್ತು.

ಆ ಆರೋಪಗಳನ್ನು ಮಾಡಿದ ಮೂರು ದಿನಗಳ ನಂತರ ಫರ್ಡಿನಾಂಡೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಸಂಜೆ ಟ್ವಿಟರ್‌ನಲ್ಲಿ ಅಧ್ಯಕ್ಷ ರಾಜಪಕ್ಸೆ ಪ್ರತಿಕ್ರಿಯೆ ನೀಡಿದ್ದು, ಫರ್ಡಿನಾಂಡೋ ಅವರ ಅಭಿಪ್ರಾಯವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಫರ್ಡಿನಾಂಡೋ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಧ್ಯಕ್ಷರ ಕಚೇರಿಯೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಆರೋಪಗಳನ್ನು ಸಂಪೂರ್ಣ ನಿರಾಕರಿಸಲಾಗಿದೆ. ಮನ್ನಾರ್‌ನಲ್ಲಿ ಪವನ ವಿದ್ಯುತ್ ಯೋಜನೆಯನ್ನು ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಗೆ ನೀಡಲು ತಾನು ಯಾವುದೇ ಸಮಯದಲ್ಲಿ ಅಧಿಕಾರ ನೀಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಶ್ರೀಲಂಕಾ ದೇಶವು ಪ್ರಸ್ತುತ ಇಂಧನ ಕೊರತೆಯನ್ನು ತೀವ್ರತರನಾಗಿ ಎದುರಿಸುತ್ತಿದೆ. ಸಾಧ್ಯವಾದಷ್ಟು ಬೇಗ ಮೆಗಾ ಪವರ್ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕಿದೆ. ಇಷ್ಟಾಗಿಯೂ ಅಂತಹ ಯೋಜನೆಗಳನ್ನು ನೀಡುವಲ್ಲಿ ಯಾವುದೇ ಅನಗತ್ಯ ಪ್ರಭಾವವನ್ನು ಬಳಸಲಾಗುವುದಿಲ್ಲ. ದೊಡ್ಡ-ಪ್ರಮಾಣದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರಸ್ತಾಪಗಳು ಸೀಮಿತವಾಗಿವೆ. ಸಂಸ್ಥೆಗಳ ಆಯ್ಕೆಗೆ ವಿಶೇಷ ಗಮನ ನೀಡಲಾಗುವುದು. ಸರ್ಕಾರ ಪಾರದರ್ಶಕವಾಗಿರಲಿದೆ” ಎಂದು ಅಧ್ಯಕ್ಷ ರಾಜಪಕ್ಸೆ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ.

ಶ್ರೀಲಂಕಾದ ದಿನಪತ್ರಿಕೆ ‘ದಿ ಮಾರ್ನಿಂಗ್‌’ಗೆ ಒಂದು ದಿನದ ನಂತರ ಹೇಳಿಕೆ ನೀಡಿರುವ ಫರ್ಡಿನಾಂಡೋ ಕ್ಷಮೆಯಾಚಿಸಿದ್ದಾರೆ. ಅನಿರೀಕ್ಷಿತ ಒತ್ತಡ ಹಾಗೂ ಭಾವನೆಗಳಿಂದಾಗಿ ಮೋದಿಯವರ ಹೆಸರು ಬಂತು ಎಂದಿದ್ದಾರೆ.

ಶ್ರೀಲಂಕಾ ತನ್ನ ಕಾನೂನುಗಳನ್ನು ಬದಲಾಯಿಸಿದ ಒಂದು ದಿನದ ನಂತರ ಮತ್ತು ಇಂಧನ ಯೋಜನೆಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್ ವ್ಯವಸ್ಥೆ ಕೈಬಿಟ್ಟ ನಂತರ ವಿವಾದ ಉಂಟಾಗಿದೆ. ಅದಾನಿ ಗ್ರೂಪ್‌ಗೆ ನೀಡಿರುವ ಮನ್ನಾರ್ ಎನರ್ಜಿ ಪ್ರಾಜೆಕ್ಟ್ ಗುತ್ತಿಗೆಯನ್ನು ಸುಗಮಗೊಳಿಸಲು ಸರ್ಕಾರ ಈ ಬದಲಾವಣೆ ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿರಿ: ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ವಿದ್ಯುತ್ ತಿದ್ದುಪಡಿ ಮಸೂದೆಯ ಸಂಸತ್ತಿನ ಚರ್ಚೆಯಲ್ಲಿ ಅದಾನಿ ಗುಂಪಿನ ವಿಚಾರ ಬಂದಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಮಸೂದೆ ಅಂಗೀಕಾರವಾಗಿದೆ.

ಲಂಕಾದಲ್ಲಿನ ಪ್ರಮುಖ ಪ್ರತಿಪಕ್ಷ ಎಸ್‌ಜೆಬಿ ಪ್ರತಿಕ್ರಿಯೆ ನೀಡಿದ್ದು, “10 ಮೆಘಾವ್ಯಾಟ್‌ ಸಾಮರ್ಥ್ಯದ ಆಚೆಗಿನ ಯೋಜನೆಗಳು ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆಯ ಮೂಲಕ ನಿರ್ಧಾರವಾಗಬೇಕು” ಎಂದು ಒತ್ತಾಯಿಸಿತು. ಆದರೆ ಸರ್ಕಾರದ ಬಹುಪಾಲು ಸಂಸದರು ಈ ಷರತ್ತಿನ ವಿರುದ್ಧ ಮತ ಚಲಾಯಿಸಿದರು.

ಮನ್ನಾರ್ ಮತ್ತು ಪೂನೆರಿನ್‌ನಲ್ಲಿ ಎರಡು ಪವನ ವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಗುತ್ತಿಗೆಗಳನ್ನು ಅದಾನಿ ಗ್ರೂಪ್ ಡಿಸೆಂಬರ್‌ನಲ್ಲಿ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಗೌತಮ್ ಅದಾನಿ ಅಕ್ಟೋಬರ್‌ನಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಅಧ್ಯಕ್ಷ ರಾಜಪಕ್ಸೆ ಅವರ ಭೇಟಿಯ ಬಗ್ಗೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...