Homeಮುಖಪುಟಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಮೋದಿ ಒತ್ತಡಕ್ಕೆ ಮಣಿದು ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ಗೌತಮ್ ಅದಾನಿ ಗುಂಪಿಗೆ ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸಿದ್ದಾರೆ. ಮೋದಿ ಒತ್ತಡಕ್ಕೆ ಮಣಿದು ಗೌತಮ್ ಅದಾನಿ ಗುಂಪಿಗೆ ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ಪವನ ವಿದ್ಯುತ್ ಯೋಜನೆಯನ್ನು ನೇರವಾಗಿ ಅದಾನಿ ಗ್ರೂಪ್‌ಗೆ ನೀಡುವಂತೆ ಭಾರತದ ಪ್ರಧಾನಿ ಮೋದಿ ಒತ್ತಡ ಹೇರಿದ್ದಾರೆ ಎಂದು ಅಧ್ಯಕ್ಷ ರಾಜಪಕ್ಸೆ ಅವರು ತಮಗೆ ಹೇಳಿರುವುದಾಗಿ ತಿಳಿಸಿದ್ದ ಶ್ರೀಲಂಕಾದ ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ (ಸಿಇಬಿ) ಅಧ್ಯಕ್ಷ ಎಂಎಂಸಿ ಫರ್ಡಿನಾಂಡೋ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಲಂಕಾದ ಮನ್ನಾರ್ ಜಿಲ್ಲೆಯಲ್ಲಿ 500-ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಯೋಜನೆಗೆ ಸಂಬಂಧಿಸಿದಂತೆ ಈ ಆರೋಪ ಮಾಡಲಾಗಿತ್ತು. ಸಾರ್ವಜನಿಕ ಉದ್ಯಮಗಳ ಸಮಿತಿಯ (COPE) ಮುಕ್ತ ವಿಚಾರಣೆಯಲ್ಲಿ ಫರ್ಡಿನಾಂಡೋ ಮಾತನಾಡಿರುವುದಾಗಿ ವರದಿಯಾಗಿತ್ತು. “ಮೋದಿಯವರ ಒತ್ತಡಕ್ಕೆ ಒಳಗಾಗಿರುವುದಾಗಿ ರಾಜಪಕ್ಸೆ ನನಗೆ ಹೇಳಿದರು” ಎಂದು ಫರ್ಡಿನಾಂಡೋ ಹೇಳಿಕೆ ನೀಡಿದ್ದು ಪತ್ರಿಕೆಗಳಲ್ಲಿಯೂ ವರದಿಯಾಗಿತ್ತು.

ಆ ಆರೋಪಗಳನ್ನು ಮಾಡಿದ ಮೂರು ದಿನಗಳ ನಂತರ ಫರ್ಡಿನಾಂಡೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಸಂಜೆ ಟ್ವಿಟರ್‌ನಲ್ಲಿ ಅಧ್ಯಕ್ಷ ರಾಜಪಕ್ಸೆ ಪ್ರತಿಕ್ರಿಯೆ ನೀಡಿದ್ದು, ಫರ್ಡಿನಾಂಡೋ ಅವರ ಅಭಿಪ್ರಾಯವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಫರ್ಡಿನಾಂಡೋ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಧ್ಯಕ್ಷರ ಕಚೇರಿಯೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಆರೋಪಗಳನ್ನು ಸಂಪೂರ್ಣ ನಿರಾಕರಿಸಲಾಗಿದೆ. ಮನ್ನಾರ್‌ನಲ್ಲಿ ಪವನ ವಿದ್ಯುತ್ ಯೋಜನೆಯನ್ನು ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಗೆ ನೀಡಲು ತಾನು ಯಾವುದೇ ಸಮಯದಲ್ಲಿ ಅಧಿಕಾರ ನೀಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಶ್ರೀಲಂಕಾ ದೇಶವು ಪ್ರಸ್ತುತ ಇಂಧನ ಕೊರತೆಯನ್ನು ತೀವ್ರತರನಾಗಿ ಎದುರಿಸುತ್ತಿದೆ. ಸಾಧ್ಯವಾದಷ್ಟು ಬೇಗ ಮೆಗಾ ಪವರ್ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕಿದೆ. ಇಷ್ಟಾಗಿಯೂ ಅಂತಹ ಯೋಜನೆಗಳನ್ನು ನೀಡುವಲ್ಲಿ ಯಾವುದೇ ಅನಗತ್ಯ ಪ್ರಭಾವವನ್ನು ಬಳಸಲಾಗುವುದಿಲ್ಲ. ದೊಡ್ಡ-ಪ್ರಮಾಣದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರಸ್ತಾಪಗಳು ಸೀಮಿತವಾಗಿವೆ. ಸಂಸ್ಥೆಗಳ ಆಯ್ಕೆಗೆ ವಿಶೇಷ ಗಮನ ನೀಡಲಾಗುವುದು. ಸರ್ಕಾರ ಪಾರದರ್ಶಕವಾಗಿರಲಿದೆ” ಎಂದು ಅಧ್ಯಕ್ಷ ರಾಜಪಕ್ಸೆ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ.

ಶ್ರೀಲಂಕಾದ ದಿನಪತ್ರಿಕೆ ‘ದಿ ಮಾರ್ನಿಂಗ್‌’ಗೆ ಒಂದು ದಿನದ ನಂತರ ಹೇಳಿಕೆ ನೀಡಿರುವ ಫರ್ಡಿನಾಂಡೋ ಕ್ಷಮೆಯಾಚಿಸಿದ್ದಾರೆ. ಅನಿರೀಕ್ಷಿತ ಒತ್ತಡ ಹಾಗೂ ಭಾವನೆಗಳಿಂದಾಗಿ ಮೋದಿಯವರ ಹೆಸರು ಬಂತು ಎಂದಿದ್ದಾರೆ.

ಶ್ರೀಲಂಕಾ ತನ್ನ ಕಾನೂನುಗಳನ್ನು ಬದಲಾಯಿಸಿದ ಒಂದು ದಿನದ ನಂತರ ಮತ್ತು ಇಂಧನ ಯೋಜನೆಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್ ವ್ಯವಸ್ಥೆ ಕೈಬಿಟ್ಟ ನಂತರ ವಿವಾದ ಉಂಟಾಗಿದೆ. ಅದಾನಿ ಗ್ರೂಪ್‌ಗೆ ನೀಡಿರುವ ಮನ್ನಾರ್ ಎನರ್ಜಿ ಪ್ರಾಜೆಕ್ಟ್ ಗುತ್ತಿಗೆಯನ್ನು ಸುಗಮಗೊಳಿಸಲು ಸರ್ಕಾರ ಈ ಬದಲಾವಣೆ ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿರಿ: ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ವಿದ್ಯುತ್ ತಿದ್ದುಪಡಿ ಮಸೂದೆಯ ಸಂಸತ್ತಿನ ಚರ್ಚೆಯಲ್ಲಿ ಅದಾನಿ ಗುಂಪಿನ ವಿಚಾರ ಬಂದಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಮಸೂದೆ ಅಂಗೀಕಾರವಾಗಿದೆ.

ಲಂಕಾದಲ್ಲಿನ ಪ್ರಮುಖ ಪ್ರತಿಪಕ್ಷ ಎಸ್‌ಜೆಬಿ ಪ್ರತಿಕ್ರಿಯೆ ನೀಡಿದ್ದು, “10 ಮೆಘಾವ್ಯಾಟ್‌ ಸಾಮರ್ಥ್ಯದ ಆಚೆಗಿನ ಯೋಜನೆಗಳು ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆಯ ಮೂಲಕ ನಿರ್ಧಾರವಾಗಬೇಕು” ಎಂದು ಒತ್ತಾಯಿಸಿತು. ಆದರೆ ಸರ್ಕಾರದ ಬಹುಪಾಲು ಸಂಸದರು ಈ ಷರತ್ತಿನ ವಿರುದ್ಧ ಮತ ಚಲಾಯಿಸಿದರು.

ಮನ್ನಾರ್ ಮತ್ತು ಪೂನೆರಿನ್‌ನಲ್ಲಿ ಎರಡು ಪವನ ವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಗುತ್ತಿಗೆಗಳನ್ನು ಅದಾನಿ ಗ್ರೂಪ್ ಡಿಸೆಂಬರ್‌ನಲ್ಲಿ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಗೌತಮ್ ಅದಾನಿ ಅಕ್ಟೋಬರ್‌ನಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಅಧ್ಯಕ್ಷ ರಾಜಪಕ್ಸೆ ಅವರ ಭೇಟಿಯ ಬಗ್ಗೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...