Homeಮುಖಪುಟಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಮೋದಿ ಒತ್ತಡಕ್ಕೆ ಮಣಿದು ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ಗೌತಮ್ ಅದಾನಿ ಗುಂಪಿಗೆ ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸಿದ್ದಾರೆ. ಮೋದಿ ಒತ್ತಡಕ್ಕೆ ಮಣಿದು ಗೌತಮ್ ಅದಾನಿ ಗುಂಪಿಗೆ ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ಪವನ ವಿದ್ಯುತ್ ಯೋಜನೆಯನ್ನು ನೇರವಾಗಿ ಅದಾನಿ ಗ್ರೂಪ್‌ಗೆ ನೀಡುವಂತೆ ಭಾರತದ ಪ್ರಧಾನಿ ಮೋದಿ ಒತ್ತಡ ಹೇರಿದ್ದಾರೆ ಎಂದು ಅಧ್ಯಕ್ಷ ರಾಜಪಕ್ಸೆ ಅವರು ತಮಗೆ ಹೇಳಿರುವುದಾಗಿ ತಿಳಿಸಿದ್ದ ಶ್ರೀಲಂಕಾದ ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ (ಸಿಇಬಿ) ಅಧ್ಯಕ್ಷ ಎಂಎಂಸಿ ಫರ್ಡಿನಾಂಡೋ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಲಂಕಾದ ಮನ್ನಾರ್ ಜಿಲ್ಲೆಯಲ್ಲಿ 500-ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಯೋಜನೆಗೆ ಸಂಬಂಧಿಸಿದಂತೆ ಈ ಆರೋಪ ಮಾಡಲಾಗಿತ್ತು. ಸಾರ್ವಜನಿಕ ಉದ್ಯಮಗಳ ಸಮಿತಿಯ (COPE) ಮುಕ್ತ ವಿಚಾರಣೆಯಲ್ಲಿ ಫರ್ಡಿನಾಂಡೋ ಮಾತನಾಡಿರುವುದಾಗಿ ವರದಿಯಾಗಿತ್ತು. “ಮೋದಿಯವರ ಒತ್ತಡಕ್ಕೆ ಒಳಗಾಗಿರುವುದಾಗಿ ರಾಜಪಕ್ಸೆ ನನಗೆ ಹೇಳಿದರು” ಎಂದು ಫರ್ಡಿನಾಂಡೋ ಹೇಳಿಕೆ ನೀಡಿದ್ದು ಪತ್ರಿಕೆಗಳಲ್ಲಿಯೂ ವರದಿಯಾಗಿತ್ತು.

ಆ ಆರೋಪಗಳನ್ನು ಮಾಡಿದ ಮೂರು ದಿನಗಳ ನಂತರ ಫರ್ಡಿನಾಂಡೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಸಂಜೆ ಟ್ವಿಟರ್‌ನಲ್ಲಿ ಅಧ್ಯಕ್ಷ ರಾಜಪಕ್ಸೆ ಪ್ರತಿಕ್ರಿಯೆ ನೀಡಿದ್ದು, ಫರ್ಡಿನಾಂಡೋ ಅವರ ಅಭಿಪ್ರಾಯವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಫರ್ಡಿನಾಂಡೋ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಧ್ಯಕ್ಷರ ಕಚೇರಿಯೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಆರೋಪಗಳನ್ನು ಸಂಪೂರ್ಣ ನಿರಾಕರಿಸಲಾಗಿದೆ. ಮನ್ನಾರ್‌ನಲ್ಲಿ ಪವನ ವಿದ್ಯುತ್ ಯೋಜನೆಯನ್ನು ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಗೆ ನೀಡಲು ತಾನು ಯಾವುದೇ ಸಮಯದಲ್ಲಿ ಅಧಿಕಾರ ನೀಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಶ್ರೀಲಂಕಾ ದೇಶವು ಪ್ರಸ್ತುತ ಇಂಧನ ಕೊರತೆಯನ್ನು ತೀವ್ರತರನಾಗಿ ಎದುರಿಸುತ್ತಿದೆ. ಸಾಧ್ಯವಾದಷ್ಟು ಬೇಗ ಮೆಗಾ ಪವರ್ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕಿದೆ. ಇಷ್ಟಾಗಿಯೂ ಅಂತಹ ಯೋಜನೆಗಳನ್ನು ನೀಡುವಲ್ಲಿ ಯಾವುದೇ ಅನಗತ್ಯ ಪ್ರಭಾವವನ್ನು ಬಳಸಲಾಗುವುದಿಲ್ಲ. ದೊಡ್ಡ-ಪ್ರಮಾಣದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರಸ್ತಾಪಗಳು ಸೀಮಿತವಾಗಿವೆ. ಸಂಸ್ಥೆಗಳ ಆಯ್ಕೆಗೆ ವಿಶೇಷ ಗಮನ ನೀಡಲಾಗುವುದು. ಸರ್ಕಾರ ಪಾರದರ್ಶಕವಾಗಿರಲಿದೆ” ಎಂದು ಅಧ್ಯಕ್ಷ ರಾಜಪಕ್ಸೆ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ.

ಶ್ರೀಲಂಕಾದ ದಿನಪತ್ರಿಕೆ ‘ದಿ ಮಾರ್ನಿಂಗ್‌’ಗೆ ಒಂದು ದಿನದ ನಂತರ ಹೇಳಿಕೆ ನೀಡಿರುವ ಫರ್ಡಿನಾಂಡೋ ಕ್ಷಮೆಯಾಚಿಸಿದ್ದಾರೆ. ಅನಿರೀಕ್ಷಿತ ಒತ್ತಡ ಹಾಗೂ ಭಾವನೆಗಳಿಂದಾಗಿ ಮೋದಿಯವರ ಹೆಸರು ಬಂತು ಎಂದಿದ್ದಾರೆ.

ಶ್ರೀಲಂಕಾ ತನ್ನ ಕಾನೂನುಗಳನ್ನು ಬದಲಾಯಿಸಿದ ಒಂದು ದಿನದ ನಂತರ ಮತ್ತು ಇಂಧನ ಯೋಜನೆಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್ ವ್ಯವಸ್ಥೆ ಕೈಬಿಟ್ಟ ನಂತರ ವಿವಾದ ಉಂಟಾಗಿದೆ. ಅದಾನಿ ಗ್ರೂಪ್‌ಗೆ ನೀಡಿರುವ ಮನ್ನಾರ್ ಎನರ್ಜಿ ಪ್ರಾಜೆಕ್ಟ್ ಗುತ್ತಿಗೆಯನ್ನು ಸುಗಮಗೊಳಿಸಲು ಸರ್ಕಾರ ಈ ಬದಲಾವಣೆ ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿರಿ: ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ವಿದ್ಯುತ್ ತಿದ್ದುಪಡಿ ಮಸೂದೆಯ ಸಂಸತ್ತಿನ ಚರ್ಚೆಯಲ್ಲಿ ಅದಾನಿ ಗುಂಪಿನ ವಿಚಾರ ಬಂದಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಮಸೂದೆ ಅಂಗೀಕಾರವಾಗಿದೆ.

ಲಂಕಾದಲ್ಲಿನ ಪ್ರಮುಖ ಪ್ರತಿಪಕ್ಷ ಎಸ್‌ಜೆಬಿ ಪ್ರತಿಕ್ರಿಯೆ ನೀಡಿದ್ದು, “10 ಮೆಘಾವ್ಯಾಟ್‌ ಸಾಮರ್ಥ್ಯದ ಆಚೆಗಿನ ಯೋಜನೆಗಳು ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆಯ ಮೂಲಕ ನಿರ್ಧಾರವಾಗಬೇಕು” ಎಂದು ಒತ್ತಾಯಿಸಿತು. ಆದರೆ ಸರ್ಕಾರದ ಬಹುಪಾಲು ಸಂಸದರು ಈ ಷರತ್ತಿನ ವಿರುದ್ಧ ಮತ ಚಲಾಯಿಸಿದರು.

ಮನ್ನಾರ್ ಮತ್ತು ಪೂನೆರಿನ್‌ನಲ್ಲಿ ಎರಡು ಪವನ ವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಗುತ್ತಿಗೆಗಳನ್ನು ಅದಾನಿ ಗ್ರೂಪ್ ಡಿಸೆಂಬರ್‌ನಲ್ಲಿ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಗೌತಮ್ ಅದಾನಿ ಅಕ್ಟೋಬರ್‌ನಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಅಧ್ಯಕ್ಷ ರಾಜಪಕ್ಸೆ ಅವರ ಭೇಟಿಯ ಬಗ್ಗೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...