Homeಮುಖಪುಟಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಮೋದಿ ಒತ್ತಡಕ್ಕೆ ಮಣಿದು ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ಗೌತಮ್ ಅದಾನಿ ಗುಂಪಿಗೆ ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸಿದ್ದಾರೆ. ಮೋದಿ ಒತ್ತಡಕ್ಕೆ ಮಣಿದು ಗೌತಮ್ ಅದಾನಿ ಗುಂಪಿಗೆ ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ಪವನ ವಿದ್ಯುತ್ ಯೋಜನೆಯನ್ನು ನೇರವಾಗಿ ಅದಾನಿ ಗ್ರೂಪ್‌ಗೆ ನೀಡುವಂತೆ ಭಾರತದ ಪ್ರಧಾನಿ ಮೋದಿ ಒತ್ತಡ ಹೇರಿದ್ದಾರೆ ಎಂದು ಅಧ್ಯಕ್ಷ ರಾಜಪಕ್ಸೆ ಅವರು ತಮಗೆ ಹೇಳಿರುವುದಾಗಿ ತಿಳಿಸಿದ್ದ ಶ್ರೀಲಂಕಾದ ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ (ಸಿಇಬಿ) ಅಧ್ಯಕ್ಷ ಎಂಎಂಸಿ ಫರ್ಡಿನಾಂಡೋ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಲಂಕಾದ ಮನ್ನಾರ್ ಜಿಲ್ಲೆಯಲ್ಲಿ 500-ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಯೋಜನೆಗೆ ಸಂಬಂಧಿಸಿದಂತೆ ಈ ಆರೋಪ ಮಾಡಲಾಗಿತ್ತು. ಸಾರ್ವಜನಿಕ ಉದ್ಯಮಗಳ ಸಮಿತಿಯ (COPE) ಮುಕ್ತ ವಿಚಾರಣೆಯಲ್ಲಿ ಫರ್ಡಿನಾಂಡೋ ಮಾತನಾಡಿರುವುದಾಗಿ ವರದಿಯಾಗಿತ್ತು. “ಮೋದಿಯವರ ಒತ್ತಡಕ್ಕೆ ಒಳಗಾಗಿರುವುದಾಗಿ ರಾಜಪಕ್ಸೆ ನನಗೆ ಹೇಳಿದರು” ಎಂದು ಫರ್ಡಿನಾಂಡೋ ಹೇಳಿಕೆ ನೀಡಿದ್ದು ಪತ್ರಿಕೆಗಳಲ್ಲಿಯೂ ವರದಿಯಾಗಿತ್ತು.

ಆ ಆರೋಪಗಳನ್ನು ಮಾಡಿದ ಮೂರು ದಿನಗಳ ನಂತರ ಫರ್ಡಿನಾಂಡೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಸಂಜೆ ಟ್ವಿಟರ್‌ನಲ್ಲಿ ಅಧ್ಯಕ್ಷ ರಾಜಪಕ್ಸೆ ಪ್ರತಿಕ್ರಿಯೆ ನೀಡಿದ್ದು, ಫರ್ಡಿನಾಂಡೋ ಅವರ ಅಭಿಪ್ರಾಯವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಫರ್ಡಿನಾಂಡೋ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಧ್ಯಕ್ಷರ ಕಚೇರಿಯೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಆರೋಪಗಳನ್ನು ಸಂಪೂರ್ಣ ನಿರಾಕರಿಸಲಾಗಿದೆ. ಮನ್ನಾರ್‌ನಲ್ಲಿ ಪವನ ವಿದ್ಯುತ್ ಯೋಜನೆಯನ್ನು ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಗೆ ನೀಡಲು ತಾನು ಯಾವುದೇ ಸಮಯದಲ್ಲಿ ಅಧಿಕಾರ ನೀಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಶ್ರೀಲಂಕಾ ದೇಶವು ಪ್ರಸ್ತುತ ಇಂಧನ ಕೊರತೆಯನ್ನು ತೀವ್ರತರನಾಗಿ ಎದುರಿಸುತ್ತಿದೆ. ಸಾಧ್ಯವಾದಷ್ಟು ಬೇಗ ಮೆಗಾ ಪವರ್ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕಿದೆ. ಇಷ್ಟಾಗಿಯೂ ಅಂತಹ ಯೋಜನೆಗಳನ್ನು ನೀಡುವಲ್ಲಿ ಯಾವುದೇ ಅನಗತ್ಯ ಪ್ರಭಾವವನ್ನು ಬಳಸಲಾಗುವುದಿಲ್ಲ. ದೊಡ್ಡ-ಪ್ರಮಾಣದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರಸ್ತಾಪಗಳು ಸೀಮಿತವಾಗಿವೆ. ಸಂಸ್ಥೆಗಳ ಆಯ್ಕೆಗೆ ವಿಶೇಷ ಗಮನ ನೀಡಲಾಗುವುದು. ಸರ್ಕಾರ ಪಾರದರ್ಶಕವಾಗಿರಲಿದೆ” ಎಂದು ಅಧ್ಯಕ್ಷ ರಾಜಪಕ್ಸೆ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ.

ಶ್ರೀಲಂಕಾದ ದಿನಪತ್ರಿಕೆ ‘ದಿ ಮಾರ್ನಿಂಗ್‌’ಗೆ ಒಂದು ದಿನದ ನಂತರ ಹೇಳಿಕೆ ನೀಡಿರುವ ಫರ್ಡಿನಾಂಡೋ ಕ್ಷಮೆಯಾಚಿಸಿದ್ದಾರೆ. ಅನಿರೀಕ್ಷಿತ ಒತ್ತಡ ಹಾಗೂ ಭಾವನೆಗಳಿಂದಾಗಿ ಮೋದಿಯವರ ಹೆಸರು ಬಂತು ಎಂದಿದ್ದಾರೆ.

ಶ್ರೀಲಂಕಾ ತನ್ನ ಕಾನೂನುಗಳನ್ನು ಬದಲಾಯಿಸಿದ ಒಂದು ದಿನದ ನಂತರ ಮತ್ತು ಇಂಧನ ಯೋಜನೆಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್ ವ್ಯವಸ್ಥೆ ಕೈಬಿಟ್ಟ ನಂತರ ವಿವಾದ ಉಂಟಾಗಿದೆ. ಅದಾನಿ ಗ್ರೂಪ್‌ಗೆ ನೀಡಿರುವ ಮನ್ನಾರ್ ಎನರ್ಜಿ ಪ್ರಾಜೆಕ್ಟ್ ಗುತ್ತಿಗೆಯನ್ನು ಸುಗಮಗೊಳಿಸಲು ಸರ್ಕಾರ ಈ ಬದಲಾವಣೆ ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿರಿ: ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ವಿದ್ಯುತ್ ತಿದ್ದುಪಡಿ ಮಸೂದೆಯ ಸಂಸತ್ತಿನ ಚರ್ಚೆಯಲ್ಲಿ ಅದಾನಿ ಗುಂಪಿನ ವಿಚಾರ ಬಂದಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಮಸೂದೆ ಅಂಗೀಕಾರವಾಗಿದೆ.

ಲಂಕಾದಲ್ಲಿನ ಪ್ರಮುಖ ಪ್ರತಿಪಕ್ಷ ಎಸ್‌ಜೆಬಿ ಪ್ರತಿಕ್ರಿಯೆ ನೀಡಿದ್ದು, “10 ಮೆಘಾವ್ಯಾಟ್‌ ಸಾಮರ್ಥ್ಯದ ಆಚೆಗಿನ ಯೋಜನೆಗಳು ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆಯ ಮೂಲಕ ನಿರ್ಧಾರವಾಗಬೇಕು” ಎಂದು ಒತ್ತಾಯಿಸಿತು. ಆದರೆ ಸರ್ಕಾರದ ಬಹುಪಾಲು ಸಂಸದರು ಈ ಷರತ್ತಿನ ವಿರುದ್ಧ ಮತ ಚಲಾಯಿಸಿದರು.

ಮನ್ನಾರ್ ಮತ್ತು ಪೂನೆರಿನ್‌ನಲ್ಲಿ ಎರಡು ಪವನ ವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಗುತ್ತಿಗೆಗಳನ್ನು ಅದಾನಿ ಗ್ರೂಪ್ ಡಿಸೆಂಬರ್‌ನಲ್ಲಿ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಗೌತಮ್ ಅದಾನಿ ಅಕ್ಟೋಬರ್‌ನಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಅಧ್ಯಕ್ಷ ರಾಜಪಕ್ಸೆ ಅವರ ಭೇಟಿಯ ಬಗ್ಗೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...