Homeಮುಖಪುಟಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಮೋದಿ ಒತ್ತಡಕ್ಕೆ ಮಣಿದು ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ಗೌತಮ್ ಅದಾನಿ ಗುಂಪಿಗೆ ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

- Advertisement -
- Advertisement -

ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸಿದ್ದಾರೆ. ಮೋದಿ ಒತ್ತಡಕ್ಕೆ ಮಣಿದು ಗೌತಮ್ ಅದಾನಿ ಗುಂಪಿಗೆ ಶ್ರೀಲಂಕಾದಲ್ಲಿ ಇಂಧನ ಯೋಜನೆಯ ಗುತ್ತಿಗೆಯನ್ನು ನೀಡಲಾಗಿದೆ ಎಂದು ಆರೋಪಿಸಿರುವ ಲಂಕಾ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ಪವನ ವಿದ್ಯುತ್ ಯೋಜನೆಯನ್ನು ನೇರವಾಗಿ ಅದಾನಿ ಗ್ರೂಪ್‌ಗೆ ನೀಡುವಂತೆ ಭಾರತದ ಪ್ರಧಾನಿ ಮೋದಿ ಒತ್ತಡ ಹೇರಿದ್ದಾರೆ ಎಂದು ಅಧ್ಯಕ್ಷ ರಾಜಪಕ್ಸೆ ಅವರು ತಮಗೆ ಹೇಳಿರುವುದಾಗಿ ತಿಳಿಸಿದ್ದ ಶ್ರೀಲಂಕಾದ ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ (ಸಿಇಬಿ) ಅಧ್ಯಕ್ಷ ಎಂಎಂಸಿ ಫರ್ಡಿನಾಂಡೋ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀಲಂಕಾದ ಮನ್ನಾರ್ ಜಿಲ್ಲೆಯಲ್ಲಿ 500-ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಯೋಜನೆಗೆ ಸಂಬಂಧಿಸಿದಂತೆ ಈ ಆರೋಪ ಮಾಡಲಾಗಿತ್ತು. ಸಾರ್ವಜನಿಕ ಉದ್ಯಮಗಳ ಸಮಿತಿಯ (COPE) ಮುಕ್ತ ವಿಚಾರಣೆಯಲ್ಲಿ ಫರ್ಡಿನಾಂಡೋ ಮಾತನಾಡಿರುವುದಾಗಿ ವರದಿಯಾಗಿತ್ತು. “ಮೋದಿಯವರ ಒತ್ತಡಕ್ಕೆ ಒಳಗಾಗಿರುವುದಾಗಿ ರಾಜಪಕ್ಸೆ ನನಗೆ ಹೇಳಿದರು” ಎಂದು ಫರ್ಡಿನಾಂಡೋ ಹೇಳಿಕೆ ನೀಡಿದ್ದು ಪತ್ರಿಕೆಗಳಲ್ಲಿಯೂ ವರದಿಯಾಗಿತ್ತು.

ಆ ಆರೋಪಗಳನ್ನು ಮಾಡಿದ ಮೂರು ದಿನಗಳ ನಂತರ ಫರ್ಡಿನಾಂಡೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಸಂಜೆ ಟ್ವಿಟರ್‌ನಲ್ಲಿ ಅಧ್ಯಕ್ಷ ರಾಜಪಕ್ಸೆ ಪ್ರತಿಕ್ರಿಯೆ ನೀಡಿದ್ದು, ಫರ್ಡಿನಾಂಡೋ ಅವರ ಅಭಿಪ್ರಾಯವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಫರ್ಡಿನಾಂಡೋ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಅಧ್ಯಕ್ಷರ ಕಚೇರಿಯೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಆರೋಪಗಳನ್ನು ಸಂಪೂರ್ಣ ನಿರಾಕರಿಸಲಾಗಿದೆ. ಮನ್ನಾರ್‌ನಲ್ಲಿ ಪವನ ವಿದ್ಯುತ್ ಯೋಜನೆಯನ್ನು ಯಾವುದೇ ವ್ಯಕ್ತಿ ಅಥವಾ ಯಾವುದೇ ಸಂಸ್ಥೆಗೆ ನೀಡಲು ತಾನು ಯಾವುದೇ ಸಮಯದಲ್ಲಿ ಅಧಿಕಾರ ನೀಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಶ್ರೀಲಂಕಾ ದೇಶವು ಪ್ರಸ್ತುತ ಇಂಧನ ಕೊರತೆಯನ್ನು ತೀವ್ರತರನಾಗಿ ಎದುರಿಸುತ್ತಿದೆ. ಸಾಧ್ಯವಾದಷ್ಟು ಬೇಗ ಮೆಗಾ ಪವರ್ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕಿದೆ. ಇಷ್ಟಾಗಿಯೂ ಅಂತಹ ಯೋಜನೆಗಳನ್ನು ನೀಡುವಲ್ಲಿ ಯಾವುದೇ ಅನಗತ್ಯ ಪ್ರಭಾವವನ್ನು ಬಳಸಲಾಗುವುದಿಲ್ಲ. ದೊಡ್ಡ-ಪ್ರಮಾಣದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರಸ್ತಾಪಗಳು ಸೀಮಿತವಾಗಿವೆ. ಸಂಸ್ಥೆಗಳ ಆಯ್ಕೆಗೆ ವಿಶೇಷ ಗಮನ ನೀಡಲಾಗುವುದು. ಸರ್ಕಾರ ಪಾರದರ್ಶಕವಾಗಿರಲಿದೆ” ಎಂದು ಅಧ್ಯಕ್ಷ ರಾಜಪಕ್ಸೆ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ.

ಶ್ರೀಲಂಕಾದ ದಿನಪತ್ರಿಕೆ ‘ದಿ ಮಾರ್ನಿಂಗ್‌’ಗೆ ಒಂದು ದಿನದ ನಂತರ ಹೇಳಿಕೆ ನೀಡಿರುವ ಫರ್ಡಿನಾಂಡೋ ಕ್ಷಮೆಯಾಚಿಸಿದ್ದಾರೆ. ಅನಿರೀಕ್ಷಿತ ಒತ್ತಡ ಹಾಗೂ ಭಾವನೆಗಳಿಂದಾಗಿ ಮೋದಿಯವರ ಹೆಸರು ಬಂತು ಎಂದಿದ್ದಾರೆ.

ಶ್ರೀಲಂಕಾ ತನ್ನ ಕಾನೂನುಗಳನ್ನು ಬದಲಾಯಿಸಿದ ಒಂದು ದಿನದ ನಂತರ ಮತ್ತು ಇಂಧನ ಯೋಜನೆಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್ ವ್ಯವಸ್ಥೆ ಕೈಬಿಟ್ಟ ನಂತರ ವಿವಾದ ಉಂಟಾಗಿದೆ. ಅದಾನಿ ಗ್ರೂಪ್‌ಗೆ ನೀಡಿರುವ ಮನ್ನಾರ್ ಎನರ್ಜಿ ಪ್ರಾಜೆಕ್ಟ್ ಗುತ್ತಿಗೆಯನ್ನು ಸುಗಮಗೊಳಿಸಲು ಸರ್ಕಾರ ಈ ಬದಲಾವಣೆ ಮಾಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿರಿ: ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ವಿದ್ಯುತ್ ತಿದ್ದುಪಡಿ ಮಸೂದೆಯ ಸಂಸತ್ತಿನ ಚರ್ಚೆಯಲ್ಲಿ ಅದಾನಿ ಗುಂಪಿನ ವಿಚಾರ ಬಂದಿದೆ. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಮಸೂದೆ ಅಂಗೀಕಾರವಾಗಿದೆ.

ಲಂಕಾದಲ್ಲಿನ ಪ್ರಮುಖ ಪ್ರತಿಪಕ್ಷ ಎಸ್‌ಜೆಬಿ ಪ್ರತಿಕ್ರಿಯೆ ನೀಡಿದ್ದು, “10 ಮೆಘಾವ್ಯಾಟ್‌ ಸಾಮರ್ಥ್ಯದ ಆಚೆಗಿನ ಯೋಜನೆಗಳು ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆಯ ಮೂಲಕ ನಿರ್ಧಾರವಾಗಬೇಕು” ಎಂದು ಒತ್ತಾಯಿಸಿತು. ಆದರೆ ಸರ್ಕಾರದ ಬಹುಪಾಲು ಸಂಸದರು ಈ ಷರತ್ತಿನ ವಿರುದ್ಧ ಮತ ಚಲಾಯಿಸಿದರು.

ಮನ್ನಾರ್ ಮತ್ತು ಪೂನೆರಿನ್‌ನಲ್ಲಿ ಎರಡು ಪವನ ವಿದ್ಯುತ್ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಗುತ್ತಿಗೆಗಳನ್ನು ಅದಾನಿ ಗ್ರೂಪ್ ಡಿಸೆಂಬರ್‌ನಲ್ಲಿ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಗೌತಮ್ ಅದಾನಿ ಅಕ್ಟೋಬರ್‌ನಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಅಧ್ಯಕ್ಷ ರಾಜಪಕ್ಸೆ ಅವರ ಭೇಟಿಯ ಬಗ್ಗೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...