Homeಮುಖಪುಟ'ಜನರಲ್ ಬೋಗಿ' ಕಡಿಮೆ ಮಾಡಿ, 'ಗಣ್ಯರ ರೈಲು'ಗಳನ್ನು ಪ್ರಚಾರ ಮಾಡುತ್ತಿರುವ ಮೋದಿ: ರಾಹುಲ್ ಗಾಂಧಿ

‘ಜನರಲ್ ಬೋಗಿ’ ಕಡಿಮೆ ಮಾಡಿ, ‘ಗಣ್ಯರ ರೈಲು’ಗಳನ್ನು ಪ್ರಚಾರ ಮಾಡುತ್ತಿರುವ ಮೋದಿ: ರಾಹುಲ್ ಗಾಂಧಿ

- Advertisement -
- Advertisement -

ಕಿಕ್ಕಿರಿದ ರೈಲಿನ ಜನರಲ್ ಬೋಗಿಯಲ್ಲಿ ಪ್ರಯಾಣಿಸುವ ಜನರು ಶೌಚಾಲಯದೊಳಗೆ ಮಲಗಿರುವ ವೀಡಿಯೊವನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. “ನಾವು ಸಾಮಾನ್ಯ ಜನರನ್ನು ಉಳಿಸಲು ಬಯಸಿದರೆ, ಅವರನ್ನು (ಬಿಜೆಪಿಯನ್ನು) ತೆಗೆದುಹಾಕಬೇಕಾಗಿದೆ” ಎಂದು ಹೇಳಿದರು.

ಈ  ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ನರೇಂದ್ರ ಮೋದಿಯವರ ಆಡಳಿತದಲ್ಲಿ ರೈಲಿನಲ್ಲಿ ಪ್ರಯಾಣ ಮಾಡುವುದು ಒಂದು ಶಿಕ್ಷೆಯಾಗಿದೆ. ಸಾಮಾನ್ಯ ಜನರ ರೈಲುಗಳ ಜನರಲ್ ಕೋಚ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಿ, ಕೇವಲ ‘ಗಣ್ಯ ರೈಲು’ಗಳನ್ನು ಪ್ರಚಾರ ಮಾಡುತ್ತಿರುವ ಮೋದಿ ಸರ್ಕಾರದಲ್ಲಿ ಪ್ರತಿ ವರ್ಗದ ಪ್ರಯಾಣಿಕರು ಕಿರುಕುಳ ಅನುಭವಿಸುತ್ತಿದ್ದಾರೆ. ದೃಢೀಕೃತ ಟಿಕೆಟ್ ಪಡೆದ ನಂತರವೂ ಜನರು ತಮ್ಮ ಆಸನಗಳಲ್ಲಿ ಆರಾಮವಾಗಿ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ; ಸಾಮಾನ್ಯ ಜನರು ನೆಲದ ಮೇಲೆ ಪ್ರಯಾಣಿಸಲು ಮತ್ತು ಶೌಚಾಲಯಗಳಲ್ಲಿ ಅಡಗಿಕೊಳ್ಳಲು ಬಲವಂತ ಪಡಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

“ಮೋದಿ ಸರ್ಕಾರವು ತನ್ನ ನೀತಿಗಳ ಮೂಲಕ ರೈಲ್ವೆಯನ್ನು ದುರ್ಬಲಗೊಳಿಸಲು ಮತ್ತು ಅದನ್ನು ‘ಅಸಮರ್ಥ’ ಎಂದು ಸಾಬೀತುಪಡಿಸಲು ಬಯಸುತ್ತದೆ. ಈ ಮೂಲಕ ರೈಲ್ವೆಯನ್ನು ತನ್ನ ಸ್ನೇಹಿತರಿಗೆ ಮಾರಾಟ ಮಾಡಲು ವಿನಾಯಿತಿ ಪಡೆಯಬಹುದು. ನಾವು ಸಾಮಾನ್ಯರ ಪ್ರಯಾಣವನ್ನು ಉಳಿಸಬೇಕಾದರೆ, ರೈಲ್ವೆಯನ್ನು ಹಾಳು ಮಾಡುವಲ್ಲಿ ನಿರತರಾಗಿರುವ ಮೋದಿ ಸರ್ಕಾರವನ್ನು ತೆಗೆದುಹಾಕಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಅಸಹಾಯಕ ಪ್ರಯಾಣಿಕರು ರೈಲಿನ ನೆಲದಲ್ಲಿ ಮಲಗುವ ಅಥವಾ ಟಿಕೆಟ್ ಇಲ್ಲದ ಪ್ರಯಾಣಿಕರು ಹವಾನಿಯಂತ್ರಿತ ಕೋಚ್‌ಗಳನ್ನು ಹೈಜಾಕ್ ಮಾಡುವ ವೀಡಿಯೊಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಅಂತರ್ಜಾಲವು ಅಂತಹ ದೃಶ್ಯಗಳಿಂದ ತುಂಬಿದೆ ಮತ್ತು ಜನರು ಇಂತಹ ಘಟನೆಗಳ ಹಿಂದಿನ ತಾರ್ಕಿಕತೆಯ ಬಗ್ಗೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ.

2024ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆಗೆ ಕೆಲವು ದಿನಗಳ ಮೊದಲು ಪಿಎಂ ಮೋದಿ ವಿರುದ್ಧ ರಾಹುಲ್ ಗಾಂಧಿ ಹೊಸ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; ಕೇಜ್ರಿವಾಲ್ ದೇಹದಲ್ಲಿ 300 ದಾಟಿದ ಸಕ್ಕರೆ ಮಟ್ಟ: ತಿಹಾರ್ ಜೈಲಿನ ಹೊರಗೆ ‘ಇನ್ಸುಲಿನ್’ ಹಿಡಿದು ಪ್ರತಿಭಟಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...