Homeಕರ್ನಾಟಕಮೋದಿ ರ್ಯಾಲಿ: ಸುತ್ತಲಿನ ಜನರಿಗೆ 5 ನಿರ್ಬಂಧಗಳು; ಸಾರ್ವಜನಿಕರಿಂದ ವ್ಯಾಪಕ ಖಂಡನೆ

ಮೋದಿ ರ್ಯಾಲಿ: ಸುತ್ತಲಿನ ಜನರಿಗೆ 5 ನಿರ್ಬಂಧಗಳು; ಸಾರ್ವಜನಿಕರಿಂದ ವ್ಯಾಪಕ ಖಂಡನೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಶನಿವಾರ ಹಾಗೂ ರವಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಈ ವೇಳೆ ಪ್ರದೇಶದ ಜನರಿಗೆ ಪೊಲೀಸ್ ಇಲಾಖೆ ಕೆಲವು ನಿರ್ಬಂಧನೆಗಳನ್ನು ಹೊರಡಿಸಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯು ಪ್ರಧಾನಿ ಮೋದಿ ರೋಡ್‌ಶೋ ಹಿನ್ನೆಲೆ ಭದ್ರತೆ ಹಾಗೂ ಸುರಕ್ಷತಾ ಪ್ರೋಟೋಕಾಲ್‌ಗಳಿಗಾಗಿ ಸಾರ್ವಜನಿಕರಿಗೆ ಕೆಲವು ನಿರ್ಬಂಧನೆಗಳನ್ನು ಹೇರಿ ಪ್ರಕಟಣೆ ಹೊರಡಿಸಿದ್ದಾರೆ.

ಸಾರ್ವಜನರಿಕರಿಗೆ ಸೂಚನೆಗಳು: 

  • ನಿಮ್ಮ ಮನೆಯ ಟೆರೇಸ್/ಫಾಲ್ಕನಿಗಳಲ್ಲಿ ನಿಂತು ಮೋದಿ ರೋಡ್‌ ಶೋ ವೀಕ್ಷಿಸುವುದನ್ನು ನಿಷೇಧಿಸಲಾಗಿದೆ.
  • 07/04/2023 ರಂದು ಮೋದಿ ರೊಡ್ ಶೋ ಪೂರ್ಣಗೊಳ್ಳುವವರೆಗೆ ಅಂದರೆ ಸಂಜೆ 6 ಗಂಟೆಯವರೆಗೆ ವಾಹನಗಳು ಹೊರ ತೆಗೆಯುವಂತಿಲ್ಲ.
  •  ಕಟ್ಟಡದ ಒಳ ಮತ್ತು ಹೊರ ಹೋಗುವ ಮಾರ್ಗ ಬಂದ್ ಮಾಡಬೇಕು.
  •  ಕಟ್ಟಡದ ಒಳಗಡೆ ಅಪರಿಚಿತ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು.
  •  ರೋಡ್‌ ಶೋ ನೋಡ ಬಯಸುವವರು ನಿಗದಿತ ಸ್ಥಳಕ್ಕೆ ಆಗಮಿಸಿ ವೀಕ್ಷಿಸಬೇಕು.

ಪೊಲೀಸರ ಈ ನಿರ್ಬಂಧದಿಂದ ಬೆಂಗಳೂರಿನ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ವಾರವೂ ಇದೇ ರೀತಿ ರೋಡ್ ಶೋ ಮಾಡುವ ಮೂಲಕ ಪ್ರಯಾಣಿಕರು ಪರದಾಡುವಂತಾಗಿತ್ತು. ಇದೀಗ ಮತ್ತಷ್ಟು ನಿರ್ಬಂಧಗಳನ್ನು ಹೇರಿ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: ನೀಟ್ ಪರೀಕ್ಷೆ ಬರೆಯುವವರ ಗಮನಕ್ಕೆ: ಮೋದಿ ರೋಡ್ ಷೋ ಸಾಗುವ ಮಾರ್ಗವಿದು

ಬೆಂಗಳೂರಿನಲ್ಲಿ 38 ಕಿಮೀ ರೋಡ್ ಶೋ ಗೆ ಅವಕಾಶ ನೀಡಬಾರದು. ಇಂತಹ ಕಾರ್ಯಕ್ರಮಗಳಿಂದ ಜನರಿಗೆ ತೊಂದರೆ ಆಗುತ್ತದೆ ಎಂಬ ನಿಟ್ಟಿನಲ್ಲಿ ಹೈಕೋರ್ಟ್ ರಿಟ್ ಪಿಟಿಷನ್ ನಲ್ಲಿ ನಿರ್ದೇಶನ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನ ಪಾಲನೆ ಮಾಡದೆಯೇ ರೋಡ್ ಶೋ ಅವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನಗರದಲ್ಲಿ ಅಂಬ್ಯುಲೆನ್ಸ್ ಓಡಾಟಕ್ಕೆ ಅನನುಕೂಲ ಆಗುವ ನಿಟ್ಟಿನಲ್ಲಿ ರೋಡ್ ಶೋ ಅವಕಾಶ ನೀಡಬಾರದು. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಸರ್ಕಾರದ ಹಣವನ್ನೂ ಖರ್ಚು ಮಾಡಲಾಗುತ್ತಿದೆ. ಇದನ್ನು ಲೆಕ್ಕಹಾಕಲು ಸರಿಯಾದ ಸಿಬ್ಬಂದಿ ನೇಮಕ ಮಾಡಬೇಕು ಎಂದೂ ದೂರಿನಲ್ಲಿ ಕಾಂಗ್ರೆಸ್ ಕಾನೂನು ಘಟಕದ ಆರೋಪಿಸಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ ನಡೆಸಿದ್ದರು. ಈ ಸಂಬಂಧ ನೈಸ್ ರಸ್ತೆಯ ಜಂಕ್ಷನ್‌ ನಿಂದ ಸುಮ್ಮನಹಳ್ಳಿ ವೃತ್ತದವರೆಗೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಈ ವೇಳೆ ಮೆರವಣಿಗೆ ಮೂಲಕ ಕಲ್ಯಾಣ ಮಂಟಪ್ಪಕ್ಕೆ ಹೋಗುತ್ತಿದ್ದ ವಧು-ವರರ ವಾಹನವು ಗಂಟೆಗಟ್ಟಲೇ ರಸ್ತೆಯಲ್ಲೇ ನಿಲ್ಲಬೇಕಾಯಿತು. ಮದುವೆ ಧಿರಿಸಿನಲ್ಲಿ ಮದುಮಗ ನಿಂತ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರಷ್ಟೇ ಅಲ್ಲದೇ ಸಾರ್ವಜನಿಕರು ಸಹ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಸಮಸ್ಯೆ ಎದುರಿಸಿದ್ದರು.

ಇದೀಗ ಮತ್ತೆ ಅಂತದ್ದೆ ಸಮಸ್ಯೆ ಮೇ 06 ಮತ್ತು 7ರಂದು ಎದುರಾಗುವ ಸಂಭವವಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರೋಡ್ ಗೆ ಚುನಾವಣಾ ಆಯೋಗದ ಅಧಿಕಾರಿಗಳು ಅನುಮತಿ ನೀಡದಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...