Homeಕರ್ನಾಟಕಮೋದಿ ರ್ಯಾಲಿ: ಸುತ್ತಲಿನ ಜನರಿಗೆ 5 ನಿರ್ಬಂಧಗಳು; ಸಾರ್ವಜನಿಕರಿಂದ ವ್ಯಾಪಕ ಖಂಡನೆ

ಮೋದಿ ರ್ಯಾಲಿ: ಸುತ್ತಲಿನ ಜನರಿಗೆ 5 ನಿರ್ಬಂಧಗಳು; ಸಾರ್ವಜನಿಕರಿಂದ ವ್ಯಾಪಕ ಖಂಡನೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಶನಿವಾರ ಹಾಗೂ ರವಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಈ ವೇಳೆ ಪ್ರದೇಶದ ಜನರಿಗೆ ಪೊಲೀಸ್ ಇಲಾಖೆ ಕೆಲವು ನಿರ್ಬಂಧನೆಗಳನ್ನು ಹೊರಡಿಸಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯು ಪ್ರಧಾನಿ ಮೋದಿ ರೋಡ್‌ಶೋ ಹಿನ್ನೆಲೆ ಭದ್ರತೆ ಹಾಗೂ ಸುರಕ್ಷತಾ ಪ್ರೋಟೋಕಾಲ್‌ಗಳಿಗಾಗಿ ಸಾರ್ವಜನಿಕರಿಗೆ ಕೆಲವು ನಿರ್ಬಂಧನೆಗಳನ್ನು ಹೇರಿ ಪ್ರಕಟಣೆ ಹೊರಡಿಸಿದ್ದಾರೆ.

ಸಾರ್ವಜನರಿಕರಿಗೆ ಸೂಚನೆಗಳು: 

  • ನಿಮ್ಮ ಮನೆಯ ಟೆರೇಸ್/ಫಾಲ್ಕನಿಗಳಲ್ಲಿ ನಿಂತು ಮೋದಿ ರೋಡ್‌ ಶೋ ವೀಕ್ಷಿಸುವುದನ್ನು ನಿಷೇಧಿಸಲಾಗಿದೆ.
  • 07/04/2023 ರಂದು ಮೋದಿ ರೊಡ್ ಶೋ ಪೂರ್ಣಗೊಳ್ಳುವವರೆಗೆ ಅಂದರೆ ಸಂಜೆ 6 ಗಂಟೆಯವರೆಗೆ ವಾಹನಗಳು ಹೊರ ತೆಗೆಯುವಂತಿಲ್ಲ.
  •  ಕಟ್ಟಡದ ಒಳ ಮತ್ತು ಹೊರ ಹೋಗುವ ಮಾರ್ಗ ಬಂದ್ ಮಾಡಬೇಕು.
  •  ಕಟ್ಟಡದ ಒಳಗಡೆ ಅಪರಿಚಿತ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು.
  •  ರೋಡ್‌ ಶೋ ನೋಡ ಬಯಸುವವರು ನಿಗದಿತ ಸ್ಥಳಕ್ಕೆ ಆಗಮಿಸಿ ವೀಕ್ಷಿಸಬೇಕು.

ಪೊಲೀಸರ ಈ ನಿರ್ಬಂಧದಿಂದ ಬೆಂಗಳೂರಿನ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ವಾರವೂ ಇದೇ ರೀತಿ ರೋಡ್ ಶೋ ಮಾಡುವ ಮೂಲಕ ಪ್ರಯಾಣಿಕರು ಪರದಾಡುವಂತಾಗಿತ್ತು. ಇದೀಗ ಮತ್ತಷ್ಟು ನಿರ್ಬಂಧಗಳನ್ನು ಹೇರಿ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: ನೀಟ್ ಪರೀಕ್ಷೆ ಬರೆಯುವವರ ಗಮನಕ್ಕೆ: ಮೋದಿ ರೋಡ್ ಷೋ ಸಾಗುವ ಮಾರ್ಗವಿದು

ಬೆಂಗಳೂರಿನಲ್ಲಿ 38 ಕಿಮೀ ರೋಡ್ ಶೋ ಗೆ ಅವಕಾಶ ನೀಡಬಾರದು. ಇಂತಹ ಕಾರ್ಯಕ್ರಮಗಳಿಂದ ಜನರಿಗೆ ತೊಂದರೆ ಆಗುತ್ತದೆ ಎಂಬ ನಿಟ್ಟಿನಲ್ಲಿ ಹೈಕೋರ್ಟ್ ರಿಟ್ ಪಿಟಿಷನ್ ನಲ್ಲಿ ನಿರ್ದೇಶನ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನ ಪಾಲನೆ ಮಾಡದೆಯೇ ರೋಡ್ ಶೋ ಅವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನಗರದಲ್ಲಿ ಅಂಬ್ಯುಲೆನ್ಸ್ ಓಡಾಟಕ್ಕೆ ಅನನುಕೂಲ ಆಗುವ ನಿಟ್ಟಿನಲ್ಲಿ ರೋಡ್ ಶೋ ಅವಕಾಶ ನೀಡಬಾರದು. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಸರ್ಕಾರದ ಹಣವನ್ನೂ ಖರ್ಚು ಮಾಡಲಾಗುತ್ತಿದೆ. ಇದನ್ನು ಲೆಕ್ಕಹಾಕಲು ಸರಿಯಾದ ಸಿಬ್ಬಂದಿ ನೇಮಕ ಮಾಡಬೇಕು ಎಂದೂ ದೂರಿನಲ್ಲಿ ಕಾಂಗ್ರೆಸ್ ಕಾನೂನು ಘಟಕದ ಆರೋಪಿಸಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ ನಡೆಸಿದ್ದರು. ಈ ಸಂಬಂಧ ನೈಸ್ ರಸ್ತೆಯ ಜಂಕ್ಷನ್‌ ನಿಂದ ಸುಮ್ಮನಹಳ್ಳಿ ವೃತ್ತದವರೆಗೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಈ ವೇಳೆ ಮೆರವಣಿಗೆ ಮೂಲಕ ಕಲ್ಯಾಣ ಮಂಟಪ್ಪಕ್ಕೆ ಹೋಗುತ್ತಿದ್ದ ವಧು-ವರರ ವಾಹನವು ಗಂಟೆಗಟ್ಟಲೇ ರಸ್ತೆಯಲ್ಲೇ ನಿಲ್ಲಬೇಕಾಯಿತು. ಮದುವೆ ಧಿರಿಸಿನಲ್ಲಿ ಮದುಮಗ ನಿಂತ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರಷ್ಟೇ ಅಲ್ಲದೇ ಸಾರ್ವಜನಿಕರು ಸಹ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಸಮಸ್ಯೆ ಎದುರಿಸಿದ್ದರು.

ಇದೀಗ ಮತ್ತೆ ಅಂತದ್ದೆ ಸಮಸ್ಯೆ ಮೇ 06 ಮತ್ತು 7ರಂದು ಎದುರಾಗುವ ಸಂಭವವಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರೋಡ್ ಗೆ ಚುನಾವಣಾ ಆಯೋಗದ ಅಧಿಕಾರಿಗಳು ಅನುಮತಿ ನೀಡದಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...