Homeಕರ್ನಾಟಕಮೋದಿ ರ್ಯಾಲಿ: ಸುತ್ತಲಿನ ಜನರಿಗೆ 5 ನಿರ್ಬಂಧಗಳು; ಸಾರ್ವಜನಿಕರಿಂದ ವ್ಯಾಪಕ ಖಂಡನೆ

ಮೋದಿ ರ್ಯಾಲಿ: ಸುತ್ತಲಿನ ಜನರಿಗೆ 5 ನಿರ್ಬಂಧಗಳು; ಸಾರ್ವಜನಿಕರಿಂದ ವ್ಯಾಪಕ ಖಂಡನೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಶನಿವಾರ ಹಾಗೂ ರವಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಈ ವೇಳೆ ಪ್ರದೇಶದ ಜನರಿಗೆ ಪೊಲೀಸ್ ಇಲಾಖೆ ಕೆಲವು ನಿರ್ಬಂಧನೆಗಳನ್ನು ಹೊರಡಿಸಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯು ಪ್ರಧಾನಿ ಮೋದಿ ರೋಡ್‌ಶೋ ಹಿನ್ನೆಲೆ ಭದ್ರತೆ ಹಾಗೂ ಸುರಕ್ಷತಾ ಪ್ರೋಟೋಕಾಲ್‌ಗಳಿಗಾಗಿ ಸಾರ್ವಜನಿಕರಿಗೆ ಕೆಲವು ನಿರ್ಬಂಧನೆಗಳನ್ನು ಹೇರಿ ಪ್ರಕಟಣೆ ಹೊರಡಿಸಿದ್ದಾರೆ.

ಸಾರ್ವಜನರಿಕರಿಗೆ ಸೂಚನೆಗಳು: 

  • ನಿಮ್ಮ ಮನೆಯ ಟೆರೇಸ್/ಫಾಲ್ಕನಿಗಳಲ್ಲಿ ನಿಂತು ಮೋದಿ ರೋಡ್‌ ಶೋ ವೀಕ್ಷಿಸುವುದನ್ನು ನಿಷೇಧಿಸಲಾಗಿದೆ.
  • 07/04/2023 ರಂದು ಮೋದಿ ರೊಡ್ ಶೋ ಪೂರ್ಣಗೊಳ್ಳುವವರೆಗೆ ಅಂದರೆ ಸಂಜೆ 6 ಗಂಟೆಯವರೆಗೆ ವಾಹನಗಳು ಹೊರ ತೆಗೆಯುವಂತಿಲ್ಲ.
  •  ಕಟ್ಟಡದ ಒಳ ಮತ್ತು ಹೊರ ಹೋಗುವ ಮಾರ್ಗ ಬಂದ್ ಮಾಡಬೇಕು.
  •  ಕಟ್ಟಡದ ಒಳಗಡೆ ಅಪರಿಚಿತ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು.
  •  ರೋಡ್‌ ಶೋ ನೋಡ ಬಯಸುವವರು ನಿಗದಿತ ಸ್ಥಳಕ್ಕೆ ಆಗಮಿಸಿ ವೀಕ್ಷಿಸಬೇಕು.

ಪೊಲೀಸರ ಈ ನಿರ್ಬಂಧದಿಂದ ಬೆಂಗಳೂರಿನ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ವಾರವೂ ಇದೇ ರೀತಿ ರೋಡ್ ಶೋ ಮಾಡುವ ಮೂಲಕ ಪ್ರಯಾಣಿಕರು ಪರದಾಡುವಂತಾಗಿತ್ತು. ಇದೀಗ ಮತ್ತಷ್ಟು ನಿರ್ಬಂಧಗಳನ್ನು ಹೇರಿ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: ನೀಟ್ ಪರೀಕ್ಷೆ ಬರೆಯುವವರ ಗಮನಕ್ಕೆ: ಮೋದಿ ರೋಡ್ ಷೋ ಸಾಗುವ ಮಾರ್ಗವಿದು

ಬೆಂಗಳೂರಿನಲ್ಲಿ 38 ಕಿಮೀ ರೋಡ್ ಶೋ ಗೆ ಅವಕಾಶ ನೀಡಬಾರದು. ಇಂತಹ ಕಾರ್ಯಕ್ರಮಗಳಿಂದ ಜನರಿಗೆ ತೊಂದರೆ ಆಗುತ್ತದೆ ಎಂಬ ನಿಟ್ಟಿನಲ್ಲಿ ಹೈಕೋರ್ಟ್ ರಿಟ್ ಪಿಟಿಷನ್ ನಲ್ಲಿ ನಿರ್ದೇಶನ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನ ಪಾಲನೆ ಮಾಡದೆಯೇ ರೋಡ್ ಶೋ ಅವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನಗರದಲ್ಲಿ ಅಂಬ್ಯುಲೆನ್ಸ್ ಓಡಾಟಕ್ಕೆ ಅನನುಕೂಲ ಆಗುವ ನಿಟ್ಟಿನಲ್ಲಿ ರೋಡ್ ಶೋ ಅವಕಾಶ ನೀಡಬಾರದು. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಸರ್ಕಾರದ ಹಣವನ್ನೂ ಖರ್ಚು ಮಾಡಲಾಗುತ್ತಿದೆ. ಇದನ್ನು ಲೆಕ್ಕಹಾಕಲು ಸರಿಯಾದ ಸಿಬ್ಬಂದಿ ನೇಮಕ ಮಾಡಬೇಕು ಎಂದೂ ದೂರಿನಲ್ಲಿ ಕಾಂಗ್ರೆಸ್ ಕಾನೂನು ಘಟಕದ ಆರೋಪಿಸಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ ನಡೆಸಿದ್ದರು. ಈ ಸಂಬಂಧ ನೈಸ್ ರಸ್ತೆಯ ಜಂಕ್ಷನ್‌ ನಿಂದ ಸುಮ್ಮನಹಳ್ಳಿ ವೃತ್ತದವರೆಗೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಈ ವೇಳೆ ಮೆರವಣಿಗೆ ಮೂಲಕ ಕಲ್ಯಾಣ ಮಂಟಪ್ಪಕ್ಕೆ ಹೋಗುತ್ತಿದ್ದ ವಧು-ವರರ ವಾಹನವು ಗಂಟೆಗಟ್ಟಲೇ ರಸ್ತೆಯಲ್ಲೇ ನಿಲ್ಲಬೇಕಾಯಿತು. ಮದುವೆ ಧಿರಿಸಿನಲ್ಲಿ ಮದುಮಗ ನಿಂತ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರಷ್ಟೇ ಅಲ್ಲದೇ ಸಾರ್ವಜನಿಕರು ಸಹ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಸಮಸ್ಯೆ ಎದುರಿಸಿದ್ದರು.

ಇದೀಗ ಮತ್ತೆ ಅಂತದ್ದೆ ಸಮಸ್ಯೆ ಮೇ 06 ಮತ್ತು 7ರಂದು ಎದುರಾಗುವ ಸಂಭವವಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರೋಡ್ ಗೆ ಚುನಾವಣಾ ಆಯೋಗದ ಅಧಿಕಾರಿಗಳು ಅನುಮತಿ ನೀಡದಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...