Homeಕರ್ನಾಟಕಮೋದಿ ರ್ಯಾಲಿ: ಸುತ್ತಲಿನ ಜನರಿಗೆ 5 ನಿರ್ಬಂಧಗಳು; ಸಾರ್ವಜನಿಕರಿಂದ ವ್ಯಾಪಕ ಖಂಡನೆ

ಮೋದಿ ರ್ಯಾಲಿ: ಸುತ್ತಲಿನ ಜನರಿಗೆ 5 ನಿರ್ಬಂಧಗಳು; ಸಾರ್ವಜನಿಕರಿಂದ ವ್ಯಾಪಕ ಖಂಡನೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಶನಿವಾರ ಹಾಗೂ ರವಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಈ ವೇಳೆ ಪ್ರದೇಶದ ಜನರಿಗೆ ಪೊಲೀಸ್ ಇಲಾಖೆ ಕೆಲವು ನಿರ್ಬಂಧನೆಗಳನ್ನು ಹೊರಡಿಸಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯು ಪ್ರಧಾನಿ ಮೋದಿ ರೋಡ್‌ಶೋ ಹಿನ್ನೆಲೆ ಭದ್ರತೆ ಹಾಗೂ ಸುರಕ್ಷತಾ ಪ್ರೋಟೋಕಾಲ್‌ಗಳಿಗಾಗಿ ಸಾರ್ವಜನಿಕರಿಗೆ ಕೆಲವು ನಿರ್ಬಂಧನೆಗಳನ್ನು ಹೇರಿ ಪ್ರಕಟಣೆ ಹೊರಡಿಸಿದ್ದಾರೆ.

ಸಾರ್ವಜನರಿಕರಿಗೆ ಸೂಚನೆಗಳು: 

  • ನಿಮ್ಮ ಮನೆಯ ಟೆರೇಸ್/ಫಾಲ್ಕನಿಗಳಲ್ಲಿ ನಿಂತು ಮೋದಿ ರೋಡ್‌ ಶೋ ವೀಕ್ಷಿಸುವುದನ್ನು ನಿಷೇಧಿಸಲಾಗಿದೆ.
  • 07/04/2023 ರಂದು ಮೋದಿ ರೊಡ್ ಶೋ ಪೂರ್ಣಗೊಳ್ಳುವವರೆಗೆ ಅಂದರೆ ಸಂಜೆ 6 ಗಂಟೆಯವರೆಗೆ ವಾಹನಗಳು ಹೊರ ತೆಗೆಯುವಂತಿಲ್ಲ.
  •  ಕಟ್ಟಡದ ಒಳ ಮತ್ತು ಹೊರ ಹೋಗುವ ಮಾರ್ಗ ಬಂದ್ ಮಾಡಬೇಕು.
  •  ಕಟ್ಟಡದ ಒಳಗಡೆ ಅಪರಿಚಿತ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು.
  •  ರೋಡ್‌ ಶೋ ನೋಡ ಬಯಸುವವರು ನಿಗದಿತ ಸ್ಥಳಕ್ಕೆ ಆಗಮಿಸಿ ವೀಕ್ಷಿಸಬೇಕು.

ಪೊಲೀಸರ ಈ ನಿರ್ಬಂಧದಿಂದ ಬೆಂಗಳೂರಿನ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ವಾರವೂ ಇದೇ ರೀತಿ ರೋಡ್ ಶೋ ಮಾಡುವ ಮೂಲಕ ಪ್ರಯಾಣಿಕರು ಪರದಾಡುವಂತಾಗಿತ್ತು. ಇದೀಗ ಮತ್ತಷ್ಟು ನಿರ್ಬಂಧಗಳನ್ನು ಹೇರಿ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: ನೀಟ್ ಪರೀಕ್ಷೆ ಬರೆಯುವವರ ಗಮನಕ್ಕೆ: ಮೋದಿ ರೋಡ್ ಷೋ ಸಾಗುವ ಮಾರ್ಗವಿದು

ಬೆಂಗಳೂರಿನಲ್ಲಿ 38 ಕಿಮೀ ರೋಡ್ ಶೋ ಗೆ ಅವಕಾಶ ನೀಡಬಾರದು. ಇಂತಹ ಕಾರ್ಯಕ್ರಮಗಳಿಂದ ಜನರಿಗೆ ತೊಂದರೆ ಆಗುತ್ತದೆ ಎಂಬ ನಿಟ್ಟಿನಲ್ಲಿ ಹೈಕೋರ್ಟ್ ರಿಟ್ ಪಿಟಿಷನ್ ನಲ್ಲಿ ನಿರ್ದೇಶನ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನ ಪಾಲನೆ ಮಾಡದೆಯೇ ರೋಡ್ ಶೋ ಅವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನಗರದಲ್ಲಿ ಅಂಬ್ಯುಲೆನ್ಸ್ ಓಡಾಟಕ್ಕೆ ಅನನುಕೂಲ ಆಗುವ ನಿಟ್ಟಿನಲ್ಲಿ ರೋಡ್ ಶೋ ಅವಕಾಶ ನೀಡಬಾರದು. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಸರ್ಕಾರದ ಹಣವನ್ನೂ ಖರ್ಚು ಮಾಡಲಾಗುತ್ತಿದೆ. ಇದನ್ನು ಲೆಕ್ಕಹಾಕಲು ಸರಿಯಾದ ಸಿಬ್ಬಂದಿ ನೇಮಕ ಮಾಡಬೇಕು ಎಂದೂ ದೂರಿನಲ್ಲಿ ಕಾಂಗ್ರೆಸ್ ಕಾನೂನು ಘಟಕದ ಆರೋಪಿಸಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ ನಡೆಸಿದ್ದರು. ಈ ಸಂಬಂಧ ನೈಸ್ ರಸ್ತೆಯ ಜಂಕ್ಷನ್‌ ನಿಂದ ಸುಮ್ಮನಹಳ್ಳಿ ವೃತ್ತದವರೆಗೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಈ ವೇಳೆ ಮೆರವಣಿಗೆ ಮೂಲಕ ಕಲ್ಯಾಣ ಮಂಟಪ್ಪಕ್ಕೆ ಹೋಗುತ್ತಿದ್ದ ವಧು-ವರರ ವಾಹನವು ಗಂಟೆಗಟ್ಟಲೇ ರಸ್ತೆಯಲ್ಲೇ ನಿಲ್ಲಬೇಕಾಯಿತು. ಮದುವೆ ಧಿರಿಸಿನಲ್ಲಿ ಮದುಮಗ ನಿಂತ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರಷ್ಟೇ ಅಲ್ಲದೇ ಸಾರ್ವಜನಿಕರು ಸಹ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಸಮಸ್ಯೆ ಎದುರಿಸಿದ್ದರು.

ಇದೀಗ ಮತ್ತೆ ಅಂತದ್ದೆ ಸಮಸ್ಯೆ ಮೇ 06 ಮತ್ತು 7ರಂದು ಎದುರಾಗುವ ಸಂಭವವಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರೋಡ್ ಗೆ ಚುನಾವಣಾ ಆಯೋಗದ ಅಧಿಕಾರಿಗಳು ಅನುಮತಿ ನೀಡದಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...