Homeಮುಖಪುಟನರೇಂದ್ರ ಮೋದಿಯ ಅಸಲೀ ಜೀವನ ವೃತ್ತಾಂತದ ಬಗ್ಗೆ ನಿಮಗೆಷ್ಟು ಗೊತ್ತು?

ನರೇಂದ್ರ ಮೋದಿಯ ಅಸಲೀ ಜೀವನ ವೃತ್ತಾಂತದ ಬಗ್ಗೆ ನಿಮಗೆಷ್ಟು ಗೊತ್ತು?

- Advertisement -
| ಪ್ರವೀಣ್  ಎಸ್ ಶೆಟ್ಟಿ |
ಮೋದಿ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ, ಭಾರತೀಯರ ಪುಣ್ಯದಿಂದ ಕೊನೆಗೂ ಮೋದಿಯಂತಹಾ ಪ್ರಧಾನಿ ನಮಗೆ ಸಿಕ್ಕಿರುವುದು ಎಂಬೆಲ್ಲಾ ವಿಶೇಷಣಗಳೊಂದಿಗೆ ಮೋದಿಯ ಪ್ರಚಾರ ಮಾಡಲಾಗುತ್ತಿದೆ. ಈಗ ಮೋದಿಗೆ 69 ವರ್ಷ ವಯಸ್ಸು. 2001 ರಲ್ಲಿ ಅವರು ಗುಜರಾತಿನ ಮುಖ್ಯಮಂತ್ರಿ ಆಗುವುದಕ್ಕೆ ಮುಂಚೆ ಅವರು ಒಂದು ಸಣ್ಣ ಪಂಚಾಯತ್ ಸದಸ್ಯನಷ್ಟೂ ಜನಸೇವೆ ಅಥವಾ ದೇಶಸೇವೆ ಮಾಡಿಲ್ಲ. ಅವರು ನೇರವಾಗಿ ಆಗಿನ ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಕೇಶುಭಾಯಿ ಪಟೇಲ್, ಸುರೇಶ್ ಮೇಹತಾ, ಹಾಗೂ ಆರ್‌ಜೆ‌ಪಿ ಪಕ್ಷದ ಶಂಕರ್ ಸಿಂಹ ವಾಘೆಲಾ ಇವರೆಲ್ಲರ ಬೆನ್ನಿಗೆ ಇರಿದು ಗುಜರಾತ್ ಮುಖ್ಯಮಂತ್ರಿ ಸ್ಥಾನ ಕಬಳಿಸಿದ್ದು. ಅದಕ್ಕೆ ಮುಂಚೆ ಅವರು ಕೇವಲ ಅಡ್ವಾಣಿಯವರ ತಲೆಗೆ ಕೊಡೆ ಹಿಡಿದಿದ್ದು ಮತ್ತು ಬಾಯಿಗೆ ಲೌಡ್ ಸ್ಪೀಕರ್ ಹಿಡಿದಿದ್ದು ಮಾತ್ರ ಅವರು ಮಾಡಿರುವ ಜನಸೇವೆ.
ಮೋದಿ ಗುಜರಾತ್ ಮುಖ್ಯಮಂತ್ರಿ ಆಗುವಾಗ ಅವರಿಗೆ 52 ವರ್ಷ ವಯಸ್ಸು. ಅಲ್ಲಿಯವರೆಗೆ ಅವರು ಒಂದು ಪೈಸೆಯ ದೇಶಸೇವೆ ಅಥವಾ ಜನಸೇವೆ ಮಾಡಿರಲಿಲ್ಲ. ಗುಜರಾತ್ ಮುಖ್ಯಮಂತ್ರಿ ಆದ ಮೇಲೂ ಅವರು ಮಾಡಿಸಿದ್ದು ಕೋಮು ಗಲಭೆ, ನಕಲಿ ಎಂಕೌಂಟರ್, ಮುಖ್ಯಮಂತ್ರಿ ಹುದ್ದೆಯ ಸ್ಪರ್ಧಿ ಹರೇನ್ ಪಾಂಡ್ಯರ ಸಂದೇಹಾಸ್ಪದ ಮರಣ, ಗುಜರಾತ್ ಪೆಟ್ರೋಲಿಯಂನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ರೈತರ ಭೂಮಿ ಕಸಿದು ತನ್ನ ಚೇಲಾ ಉದ್ಯಮಿಗಳಿಗೆ ಕವಡೆ ಬೆಲೆಗೆ ಕೊಟ್ಟಿದ್ದು ಅಷ್ಟೇ, ಇವನ್ನೆಲ್ಲಾ ಗುಜರಾತಿಗಾಗಿ ಮೋದಿಯ ಜೀವನದ ಮುಡಿಪು ಅನ್ನಬೇಕೆ? ಅಥವಾ ಆರು ಕೋಟಿ ಗುಜರಾತಿಗಳ ಪುಣ್ಯದಿಂದ ಗುಜರಾತಿಗೆ ಸಿಕ್ಕ ಮಹಾನ್ ಮುಖ್ಯಮಂತ್ರಿ ಎಂಬ ವಿಶೇಷಣ ಸೇರಿಸಬೇಕೆ?
ಚಿಕ್ಕಂದಿನಿಂದ ಮೋದಿಯ ಜೀವನ ಹೇಗೆ ವಿಶ್ಲೇಶಿಸಿದರೂ ಅವರು ಒಂದಿಷ್ಟೂ ದೇಶಸೇವೆ ಅಥವಾ ಜನಸೇವೆ ಮಾಡಿದ ಉದಾಹರಣೆ ಇಲ್ಲ. ಅವರ ತಂದೆ ತುಂಬಾ ಬಡವರಾಗಿದ್ದರಿಂದ ರೇಲ್ವೇ ಸ್ಟೇಷನ್ನಲ್ಲಿ ಚಹಾ ಮಾರುತ್ತಿದರು ಎಂಬುದೆಲ್ಲಾ ಶುದ್ಧ ಸುಳ್ಳು. ಬನಿಯಾ/ವೈಶ್ಯಾ ಮೇಲ್ಜಾತಿಯವರಾದ ಅವರ ತಂದೆಯ ಆರ್ಥಿಕ ಸ್ಥಿತಿ ಚೆನ್ನಾಗಿಯೇ ಇತ್ತು ಎಂದು ಅವರ ಮಾವನ ಮಗ ಕಲ್ಪೇಶ್ ಭಾಟಿಯಾ ಮೋದಿ ಎಂಬವರೇ ಹೇಳಿದ್ದಾರೆ. ಮೋದಿಯ ತಾಯಿ ಇತರರ ಮನೆಯ ಮುಸುರೆ ತಿಕ್ಕುವುದು ಒತ್ತಟ್ಟಿಗಿರಲಿ ಅವರು ತನ್ನ ಸ್ವಂತ ಮನೆಯ ಮುಸುರೆ ಸಹಾ ತಿಕ್ಕುತ್ತಿರಲಿಲ್ಲ. ಯಾಕೆಂದರೆ ಅವರು ಆರು ಮಕ್ಕಳನ್ನು ಹೆತ್ತು ಹೊತ್ತು ಸಾಕುವುದರಲ್ಲಿಯೇ ಅವರ ಜೀವನ ಕಳೆದು ಹೋಗಿತ್ತು.
ಮೋದಿಯ ತಂದೆಯ ಆರ್ಥಿಕ ಸ್ಥಿತಿ ಚೆನ್ನಾಗಿದ್ದುದರಿಂದಲೇ ಮೋದಿಯ ಇಬ್ಬರು ಅಣ್ಣಂದಿರು ಮತ್ತು ಇಬ್ಬರು ತಮ್ಮಂದಿರು ಸರಿಯಾಗಿ ಶಾಲೆ ಕಾಲೇಜು ಮುಗಿಸಿ ಡಿಗ್ರಿ ಪಡೆದು ಇಬ್ಬರು ಸರಕಾರಿ ನೌಕರಿ ಗಳಿಸಿದರೆ ಇನ್ನಿಬ್ಬರು ತಮ್ಮ ಸ್ವಂತ ಉದ್ಯಮ ಸ್ಥಾಪಿಸಿದರು. ತಂಗಿ ಜಯಂತಿಬೆನ್ ಸಹಾ ಪದವೀಧರೆ ಹಾಗೂ ಅವಳ ಗಂಡ ಎಲ್‌ಐಸಿ ಯಲ್ಲಿ ಅಧಿಕಾರಿಯಾಗಿದ್ದರು. ಹಾಗಿರುವಾಗ ಕೇವಲ ಮೋದಿ ಒಬ್ಬರೇ ಮಾನಸಿಕ ಸಮಸ್ಯೆಯಿಂದಾಗಿ ಸರಿಯಾಗಿ ಶಾಲೆಗೂ ಹೋಗದೆ ಉದ್ಯೋಗವನ್ನೂ ಮಾಡದೇ ಉಂಡಾಡಿಯಾಗಿ ತಿರುಗಾಡಿಕೊಂಡಿದ್ದು! ಅದನ್ನು ನೋಡಿ ಅವರ ತಂದೆ ಮೋದಿಗೆ 20 ವರ್ಷ ಆಗಿದ್ದಾಗ ಮಿಲಿಟರಿಯಲ್ಲಿ ಸೈನಿಕನಾಗಿ ಸೇರುವಂತೆ ಒತ್ತಾಯಿಸಿದರು. ಆದರೆ ಮೋದಿ ಮಿಲಿಟರಿ ಸೇರಲು ಭಯಪಟ್ಟು ಮನೆ ಬಿಟ್ಟು ಓಡಿ ಗುಜರಾತಿ ನಾಟಕ ಕಂಪನಿಯಲ್ಲಿ ತಬಲವಾದಕನಾಗಿ ಕೆಲಸಕ್ಕೆ ಸೇರಿದರು. ನಾಟಕ ಕಂಪನಿಯಲ್ಲಿ ಮೋದಿ 12 ವರ್ಷ ಕೆಲಸ ಮಾಡಿದ್ದನ್ನೇ ಅವರು ತಾನು ಹಿಮಾಲಯದಲ್ಲಿ ತಪಸ್ಸು ಮಾಡಿದ್ದೇನೆ ಎಂದು ಸುಳ್ಳು ಹೇಳಿದ್ದು. (ಯವ್ವನದಲ್ಲಿ ಮಿಲಿಟರಿ ಸೇರಲು ಭಯಪಟ್ಟ ಮೋದಿ ಈಗ ಮಾತ್ರ ವೀರ ಸೈನಿಕರ ಹೆಸರಲ್ಲಿ ವೋಟು ಕೇಳುತ್ತಿರುವುದು ವಿಪರ್ಯಾಸ).
1973 ರಲ್ಲಿ ಮೋದಿ 24 ವರ್ಷದವರಾಗಿದ್ದಾಗ ಅವರ ಹುಟ್ಟೂರು ವಡ್ನಗರದಲ್ಲಿ ಹೊಸ ರೇಲ್ವೆ ಸ್ಟೇಷನ್ ಕಟ್ಟಿದ್ದು. ಹಾಗಾದರೆ ಮೋದಿ ಚಿಕ್ಕಂದಿನಲ್ಲಿ ಚಹಾ ಮಾರಿದ್ದು ಯಾವ ರೇಲ್ವೆ ಸ್ಟೇಷನ್ನಿನಲ್ಲಿ? ಮೋದಿ 35 ವರ್ಷದವರಾಗಿದ್ದಾಗ ಅವರು ಆರೆಸ್ಸೆಸ್ಸ್ ಸೇರಿ ಅಲ್ಲಿ ಚಡ್ಡಿ ಹಾಕಿ ಹದಿನೈದು ವರ್ಷ ಲಾಠಿ ತಿರುಗಿಸಿದ್ದನ್ನು ದೇಶಸೇವೆ ಅನ್ನಲು ಸಾಧ್ಯವಿಲ್ಲ. ಮೋದಿ ಚಹಾ ಮಾರಿದ್ದು ಸುಳ್ಳು, ಹಿಮಾಲಯದಲ್ಲಿ ತಪಸ್ಸು ಮಾಡಿದ್ದು ಸುಳ್ಳು, ಮೊಸಳೆಯೊಂದಿಗೆ ಹೊಡೆದಾಡಿದ್ದು ಸುಳ್ಳು, ಬಡತನದಿಂದ ಬಳಲಿದ್ದು ಸುಳ್ಳು. ಹೀಗೆ ಸುಳ್ಳುಗಳ ಸರಮಾಲೆ ಹೆಣೆದು ಸೋಷಿಯಲ್ ಮೀಡಿಯಾದಲ್ಲಿ ಮತ್ತು ಪೇಡ್ ಪತ್ರಿಕೆಗಳಲ್ಲಿ ಈ ಕಟ್ಟುಕಥೆಗಳನ್ನು ಹರಡಿಯೇ 2014 ರಲ್ಲಿ ಮೋದಿ ಭಾರತೀಯ ಮತದಾರರ ಸಹಾನುಭೂತಿ ಗಳಿಸಿದ್ದು. ಈಗ ಸತ್ಯ ಹೊರಬಂದ ಮೇಲಾದರೂ ಮತದಾರರು ಕಣ್ಣು ತರೆಯುವರೇ?
ಟಿ‌ವಿಯಲ್ಲಿ ಬರುವ ರಿಯಾಲಿಟಿ ಶೋಗಳಲ್ಲಿ ವೇದಿಕೆಯಲ್ಲಿ ಜೋರು ಜೋರಾಗಿ ಅಳುತ್ತಾ ತಮ್ಮ ಜೀವನದ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಳ್ಳುವ ಹುಡುಗ-ಹುಡುಗಿಯರನ್ನು ಎಲ್ಲರೂ ನೋಡಿರುವರು. ಆದರೆ ಈ ಸ್ಪರ್ಧಿಗಳಲ್ಲಿ ಹೆಚ್ಚಿನವರು ನಿಜ ಜೀವನದಲ್ಲಿ ಯಾವುದೇ ಕಷ್ಟ ಕಾರ್ಪಣ್ಯ ಎದುರಿಸಿರುವುದಿಲ್ಲ. ಆದರೂ ಆ ರಿಯಾಲಿಟಿ ಶೋಗಳ ನಿರ್ದೇಶಕರೇ ಈ ಸ್ಪರ್ಧಿಗಳಿಗೆ ಕಾಲ್ಪನಿಕ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಂಡು ವೀಕ್ಷಕರ ಅತಿ ಹೆಚ್ಚು ಸಹಾನುಭೂತಿ ಗಳಿಸಿ ಟಿ‌ಆರ್‌ಪಿ ಏರಿಸಲು ಸಹಾಯ ಮಾಡಿದರೆ ಮಾತ್ರ ಅವರನ್ನು ಗೆಲ್ಲಿಸುವುದು ಎಂಬ ಅಮಿಷೆ ಒಡ್ಡಿರುತ್ತಾರೆ. ಅದೇ ಪ್ರಕಾರ ಮೋದಿಯ ಜೀವನದ ಕಷ್ಟಕಾರ್ಪಣ್ಯ ಬಡತನ ಎಲ್ಲವೂ ಟಿ‌ವಿ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಗಳು ಅಳುತ್ತಾ ಹೇಳುವ ಕಥೆಗಳಂತೆ ಶುದ್ಧ ಕಾಲ್ಪನಿಕ. ಅದು ಕೇವಲ ಹೆಂಗರುಳಿನ ಮತದಾರರ ಮನದಲ್ಲಿ ಮೋದಿಯ ಬಗ್ಗೆ ವಯುಕ್ತಿಕವಾಗಿ ಕನಿಕರ ಹುಟ್ಟಿಸಿ ಅವರ ವೋಟು ಸೆಳೆಯಲು ಮಾಡಿರುವ “ಫೇಕೂ ರಿಯಾಲಿಟಿ ಶೋ” ಅಷ್ಟೇ. ನಟ ಭಯಂಕರ, ಅಭಿನಯ ವಿಶಾರದ, ನಟಶೇಖರ, ಕಲಾ ಸಾಮ್ರಾಟ ಮೋದಿಯ ಎದುರು ದಿಲೀಪ್ ಕುಮಾರ್, ಶಿವಾಜಿ ಗಣೇಶನ್, ಎನ್‌ಟಿ‌ಆರ್, ಮಮ್ಮುಟ್ಟಿ, ಕಮಲ ಹಾಸನ್, ನಮ್ಮ ವರನಟ ಡಾ.ರಾಜ್ ಕುಮಾರ್, ಇವರೆಲ್ಲರೂ ಅತ್ಯಂತ ಸಪ್ಪೆಯಾಗಿ ಕಾಣುತ್ತಾರೆ ಪಾಪ!
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...