Homeಮುಖಪುಟನರೇಂದ್ರ ಮೋದಿಯ ಅಸಲೀ ಜೀವನ ವೃತ್ತಾಂತದ ಬಗ್ಗೆ ನಿಮಗೆಷ್ಟು ಗೊತ್ತು?

ನರೇಂದ್ರ ಮೋದಿಯ ಅಸಲೀ ಜೀವನ ವೃತ್ತಾಂತದ ಬಗ್ಗೆ ನಿಮಗೆಷ್ಟು ಗೊತ್ತು?

- Advertisement -
| ಪ್ರವೀಣ್  ಎಸ್ ಶೆಟ್ಟಿ |
ಮೋದಿ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ, ಭಾರತೀಯರ ಪುಣ್ಯದಿಂದ ಕೊನೆಗೂ ಮೋದಿಯಂತಹಾ ಪ್ರಧಾನಿ ನಮಗೆ ಸಿಕ್ಕಿರುವುದು ಎಂಬೆಲ್ಲಾ ವಿಶೇಷಣಗಳೊಂದಿಗೆ ಮೋದಿಯ ಪ್ರಚಾರ ಮಾಡಲಾಗುತ್ತಿದೆ. ಈಗ ಮೋದಿಗೆ 69 ವರ್ಷ ವಯಸ್ಸು. 2001 ರಲ್ಲಿ ಅವರು ಗುಜರಾತಿನ ಮುಖ್ಯಮಂತ್ರಿ ಆಗುವುದಕ್ಕೆ ಮುಂಚೆ ಅವರು ಒಂದು ಸಣ್ಣ ಪಂಚಾಯತ್ ಸದಸ್ಯನಷ್ಟೂ ಜನಸೇವೆ ಅಥವಾ ದೇಶಸೇವೆ ಮಾಡಿಲ್ಲ. ಅವರು ನೇರವಾಗಿ ಆಗಿನ ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಕೇಶುಭಾಯಿ ಪಟೇಲ್, ಸುರೇಶ್ ಮೇಹತಾ, ಹಾಗೂ ಆರ್‌ಜೆ‌ಪಿ ಪಕ್ಷದ ಶಂಕರ್ ಸಿಂಹ ವಾಘೆಲಾ ಇವರೆಲ್ಲರ ಬೆನ್ನಿಗೆ ಇರಿದು ಗುಜರಾತ್ ಮುಖ್ಯಮಂತ್ರಿ ಸ್ಥಾನ ಕಬಳಿಸಿದ್ದು. ಅದಕ್ಕೆ ಮುಂಚೆ ಅವರು ಕೇವಲ ಅಡ್ವಾಣಿಯವರ ತಲೆಗೆ ಕೊಡೆ ಹಿಡಿದಿದ್ದು ಮತ್ತು ಬಾಯಿಗೆ ಲೌಡ್ ಸ್ಪೀಕರ್ ಹಿಡಿದಿದ್ದು ಮಾತ್ರ ಅವರು ಮಾಡಿರುವ ಜನಸೇವೆ.
ಮೋದಿ ಗುಜರಾತ್ ಮುಖ್ಯಮಂತ್ರಿ ಆಗುವಾಗ ಅವರಿಗೆ 52 ವರ್ಷ ವಯಸ್ಸು. ಅಲ್ಲಿಯವರೆಗೆ ಅವರು ಒಂದು ಪೈಸೆಯ ದೇಶಸೇವೆ ಅಥವಾ ಜನಸೇವೆ ಮಾಡಿರಲಿಲ್ಲ. ಗುಜರಾತ್ ಮುಖ್ಯಮಂತ್ರಿ ಆದ ಮೇಲೂ ಅವರು ಮಾಡಿಸಿದ್ದು ಕೋಮು ಗಲಭೆ, ನಕಲಿ ಎಂಕೌಂಟರ್, ಮುಖ್ಯಮಂತ್ರಿ ಹುದ್ದೆಯ ಸ್ಪರ್ಧಿ ಹರೇನ್ ಪಾಂಡ್ಯರ ಸಂದೇಹಾಸ್ಪದ ಮರಣ, ಗುಜರಾತ್ ಪೆಟ್ರೋಲಿಯಂನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ರೈತರ ಭೂಮಿ ಕಸಿದು ತನ್ನ ಚೇಲಾ ಉದ್ಯಮಿಗಳಿಗೆ ಕವಡೆ ಬೆಲೆಗೆ ಕೊಟ್ಟಿದ್ದು ಅಷ್ಟೇ, ಇವನ್ನೆಲ್ಲಾ ಗುಜರಾತಿಗಾಗಿ ಮೋದಿಯ ಜೀವನದ ಮುಡಿಪು ಅನ್ನಬೇಕೆ? ಅಥವಾ ಆರು ಕೋಟಿ ಗುಜರಾತಿಗಳ ಪುಣ್ಯದಿಂದ ಗುಜರಾತಿಗೆ ಸಿಕ್ಕ ಮಹಾನ್ ಮುಖ್ಯಮಂತ್ರಿ ಎಂಬ ವಿಶೇಷಣ ಸೇರಿಸಬೇಕೆ?
ಚಿಕ್ಕಂದಿನಿಂದ ಮೋದಿಯ ಜೀವನ ಹೇಗೆ ವಿಶ್ಲೇಶಿಸಿದರೂ ಅವರು ಒಂದಿಷ್ಟೂ ದೇಶಸೇವೆ ಅಥವಾ ಜನಸೇವೆ ಮಾಡಿದ ಉದಾಹರಣೆ ಇಲ್ಲ. ಅವರ ತಂದೆ ತುಂಬಾ ಬಡವರಾಗಿದ್ದರಿಂದ ರೇಲ್ವೇ ಸ್ಟೇಷನ್ನಲ್ಲಿ ಚಹಾ ಮಾರುತ್ತಿದರು ಎಂಬುದೆಲ್ಲಾ ಶುದ್ಧ ಸುಳ್ಳು. ಬನಿಯಾ/ವೈಶ್ಯಾ ಮೇಲ್ಜಾತಿಯವರಾದ ಅವರ ತಂದೆಯ ಆರ್ಥಿಕ ಸ್ಥಿತಿ ಚೆನ್ನಾಗಿಯೇ ಇತ್ತು ಎಂದು ಅವರ ಮಾವನ ಮಗ ಕಲ್ಪೇಶ್ ಭಾಟಿಯಾ ಮೋದಿ ಎಂಬವರೇ ಹೇಳಿದ್ದಾರೆ. ಮೋದಿಯ ತಾಯಿ ಇತರರ ಮನೆಯ ಮುಸುರೆ ತಿಕ್ಕುವುದು ಒತ್ತಟ್ಟಿಗಿರಲಿ ಅವರು ತನ್ನ ಸ್ವಂತ ಮನೆಯ ಮುಸುರೆ ಸಹಾ ತಿಕ್ಕುತ್ತಿರಲಿಲ್ಲ. ಯಾಕೆಂದರೆ ಅವರು ಆರು ಮಕ್ಕಳನ್ನು ಹೆತ್ತು ಹೊತ್ತು ಸಾಕುವುದರಲ್ಲಿಯೇ ಅವರ ಜೀವನ ಕಳೆದು ಹೋಗಿತ್ತು.
ಮೋದಿಯ ತಂದೆಯ ಆರ್ಥಿಕ ಸ್ಥಿತಿ ಚೆನ್ನಾಗಿದ್ದುದರಿಂದಲೇ ಮೋದಿಯ ಇಬ್ಬರು ಅಣ್ಣಂದಿರು ಮತ್ತು ಇಬ್ಬರು ತಮ್ಮಂದಿರು ಸರಿಯಾಗಿ ಶಾಲೆ ಕಾಲೇಜು ಮುಗಿಸಿ ಡಿಗ್ರಿ ಪಡೆದು ಇಬ್ಬರು ಸರಕಾರಿ ನೌಕರಿ ಗಳಿಸಿದರೆ ಇನ್ನಿಬ್ಬರು ತಮ್ಮ ಸ್ವಂತ ಉದ್ಯಮ ಸ್ಥಾಪಿಸಿದರು. ತಂಗಿ ಜಯಂತಿಬೆನ್ ಸಹಾ ಪದವೀಧರೆ ಹಾಗೂ ಅವಳ ಗಂಡ ಎಲ್‌ಐಸಿ ಯಲ್ಲಿ ಅಧಿಕಾರಿಯಾಗಿದ್ದರು. ಹಾಗಿರುವಾಗ ಕೇವಲ ಮೋದಿ ಒಬ್ಬರೇ ಮಾನಸಿಕ ಸಮಸ್ಯೆಯಿಂದಾಗಿ ಸರಿಯಾಗಿ ಶಾಲೆಗೂ ಹೋಗದೆ ಉದ್ಯೋಗವನ್ನೂ ಮಾಡದೇ ಉಂಡಾಡಿಯಾಗಿ ತಿರುಗಾಡಿಕೊಂಡಿದ್ದು! ಅದನ್ನು ನೋಡಿ ಅವರ ತಂದೆ ಮೋದಿಗೆ 20 ವರ್ಷ ಆಗಿದ್ದಾಗ ಮಿಲಿಟರಿಯಲ್ಲಿ ಸೈನಿಕನಾಗಿ ಸೇರುವಂತೆ ಒತ್ತಾಯಿಸಿದರು. ಆದರೆ ಮೋದಿ ಮಿಲಿಟರಿ ಸೇರಲು ಭಯಪಟ್ಟು ಮನೆ ಬಿಟ್ಟು ಓಡಿ ಗುಜರಾತಿ ನಾಟಕ ಕಂಪನಿಯಲ್ಲಿ ತಬಲವಾದಕನಾಗಿ ಕೆಲಸಕ್ಕೆ ಸೇರಿದರು. ನಾಟಕ ಕಂಪನಿಯಲ್ಲಿ ಮೋದಿ 12 ವರ್ಷ ಕೆಲಸ ಮಾಡಿದ್ದನ್ನೇ ಅವರು ತಾನು ಹಿಮಾಲಯದಲ್ಲಿ ತಪಸ್ಸು ಮಾಡಿದ್ದೇನೆ ಎಂದು ಸುಳ್ಳು ಹೇಳಿದ್ದು. (ಯವ್ವನದಲ್ಲಿ ಮಿಲಿಟರಿ ಸೇರಲು ಭಯಪಟ್ಟ ಮೋದಿ ಈಗ ಮಾತ್ರ ವೀರ ಸೈನಿಕರ ಹೆಸರಲ್ಲಿ ವೋಟು ಕೇಳುತ್ತಿರುವುದು ವಿಪರ್ಯಾಸ).
1973 ರಲ್ಲಿ ಮೋದಿ 24 ವರ್ಷದವರಾಗಿದ್ದಾಗ ಅವರ ಹುಟ್ಟೂರು ವಡ್ನಗರದಲ್ಲಿ ಹೊಸ ರೇಲ್ವೆ ಸ್ಟೇಷನ್ ಕಟ್ಟಿದ್ದು. ಹಾಗಾದರೆ ಮೋದಿ ಚಿಕ್ಕಂದಿನಲ್ಲಿ ಚಹಾ ಮಾರಿದ್ದು ಯಾವ ರೇಲ್ವೆ ಸ್ಟೇಷನ್ನಿನಲ್ಲಿ? ಮೋದಿ 35 ವರ್ಷದವರಾಗಿದ್ದಾಗ ಅವರು ಆರೆಸ್ಸೆಸ್ಸ್ ಸೇರಿ ಅಲ್ಲಿ ಚಡ್ಡಿ ಹಾಕಿ ಹದಿನೈದು ವರ್ಷ ಲಾಠಿ ತಿರುಗಿಸಿದ್ದನ್ನು ದೇಶಸೇವೆ ಅನ್ನಲು ಸಾಧ್ಯವಿಲ್ಲ. ಮೋದಿ ಚಹಾ ಮಾರಿದ್ದು ಸುಳ್ಳು, ಹಿಮಾಲಯದಲ್ಲಿ ತಪಸ್ಸು ಮಾಡಿದ್ದು ಸುಳ್ಳು, ಮೊಸಳೆಯೊಂದಿಗೆ ಹೊಡೆದಾಡಿದ್ದು ಸುಳ್ಳು, ಬಡತನದಿಂದ ಬಳಲಿದ್ದು ಸುಳ್ಳು. ಹೀಗೆ ಸುಳ್ಳುಗಳ ಸರಮಾಲೆ ಹೆಣೆದು ಸೋಷಿಯಲ್ ಮೀಡಿಯಾದಲ್ಲಿ ಮತ್ತು ಪೇಡ್ ಪತ್ರಿಕೆಗಳಲ್ಲಿ ಈ ಕಟ್ಟುಕಥೆಗಳನ್ನು ಹರಡಿಯೇ 2014 ರಲ್ಲಿ ಮೋದಿ ಭಾರತೀಯ ಮತದಾರರ ಸಹಾನುಭೂತಿ ಗಳಿಸಿದ್ದು. ಈಗ ಸತ್ಯ ಹೊರಬಂದ ಮೇಲಾದರೂ ಮತದಾರರು ಕಣ್ಣು ತರೆಯುವರೇ?
ಟಿ‌ವಿಯಲ್ಲಿ ಬರುವ ರಿಯಾಲಿಟಿ ಶೋಗಳಲ್ಲಿ ವೇದಿಕೆಯಲ್ಲಿ ಜೋರು ಜೋರಾಗಿ ಅಳುತ್ತಾ ತಮ್ಮ ಜೀವನದ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಳ್ಳುವ ಹುಡುಗ-ಹುಡುಗಿಯರನ್ನು ಎಲ್ಲರೂ ನೋಡಿರುವರು. ಆದರೆ ಈ ಸ್ಪರ್ಧಿಗಳಲ್ಲಿ ಹೆಚ್ಚಿನವರು ನಿಜ ಜೀವನದಲ್ಲಿ ಯಾವುದೇ ಕಷ್ಟ ಕಾರ್ಪಣ್ಯ ಎದುರಿಸಿರುವುದಿಲ್ಲ. ಆದರೂ ಆ ರಿಯಾಲಿಟಿ ಶೋಗಳ ನಿರ್ದೇಶಕರೇ ಈ ಸ್ಪರ್ಧಿಗಳಿಗೆ ಕಾಲ್ಪನಿಕ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಂಡು ವೀಕ್ಷಕರ ಅತಿ ಹೆಚ್ಚು ಸಹಾನುಭೂತಿ ಗಳಿಸಿ ಟಿ‌ಆರ್‌ಪಿ ಏರಿಸಲು ಸಹಾಯ ಮಾಡಿದರೆ ಮಾತ್ರ ಅವರನ್ನು ಗೆಲ್ಲಿಸುವುದು ಎಂಬ ಅಮಿಷೆ ಒಡ್ಡಿರುತ್ತಾರೆ. ಅದೇ ಪ್ರಕಾರ ಮೋದಿಯ ಜೀವನದ ಕಷ್ಟಕಾರ್ಪಣ್ಯ ಬಡತನ ಎಲ್ಲವೂ ಟಿ‌ವಿ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಗಳು ಅಳುತ್ತಾ ಹೇಳುವ ಕಥೆಗಳಂತೆ ಶುದ್ಧ ಕಾಲ್ಪನಿಕ. ಅದು ಕೇವಲ ಹೆಂಗರುಳಿನ ಮತದಾರರ ಮನದಲ್ಲಿ ಮೋದಿಯ ಬಗ್ಗೆ ವಯುಕ್ತಿಕವಾಗಿ ಕನಿಕರ ಹುಟ್ಟಿಸಿ ಅವರ ವೋಟು ಸೆಳೆಯಲು ಮಾಡಿರುವ “ಫೇಕೂ ರಿಯಾಲಿಟಿ ಶೋ” ಅಷ್ಟೇ. ನಟ ಭಯಂಕರ, ಅಭಿನಯ ವಿಶಾರದ, ನಟಶೇಖರ, ಕಲಾ ಸಾಮ್ರಾಟ ಮೋದಿಯ ಎದುರು ದಿಲೀಪ್ ಕುಮಾರ್, ಶಿವಾಜಿ ಗಣೇಶನ್, ಎನ್‌ಟಿ‌ಆರ್, ಮಮ್ಮುಟ್ಟಿ, ಕಮಲ ಹಾಸನ್, ನಮ್ಮ ವರನಟ ಡಾ.ರಾಜ್ ಕುಮಾರ್, ಇವರೆಲ್ಲರೂ ಅತ್ಯಂತ ಸಪ್ಪೆಯಾಗಿ ಕಾಣುತ್ತಾರೆ ಪಾಪ!
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...