Homeಕರ್ನಾಟಕಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಮಾಡಲು ರಾಜ್ಯಕ್ಕೆ ಬಂದಿದ್ದಾರೆ. ಈ ವೇಳೆ ಅವರು ರೋಡ್‌ ಶೋ ನಡೆಸಲಿದ್ದು, ಆ ರಸ್ತೆಯ ಒಂದು ಬದಿಗಷ್ಟೇ ಡಾಂಬರು ಹಾಕಿದ್ದು, ಇನ್ನೊಂದು ಬದಿಯಲ್ಲಿ ಗುಂಡಿಗಳನ್ನು ಹಾಗೇ ಉಳಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

ನಗರದ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ಚತುಷ್ಫಥದ ನಡುವೆ ರಸ್ತೆ ವಿಭಜಕವಿದ್ದು, ಪ್ರಧಾನಿ ಸಂಚರಿಸುವ ರಸ್ತೆಯ ಎಡಬದಿಗೆ ಮಾತ್ರ ಡಾಂಬರು ಹಾಕಿ ಬಣ್ಣ ಬಳಿಯಲಾಗಿದೆ. ಬಲಬದಿಯಲ್ಲಿ ಎಂದಿನಂತೆ ಗುಂಡಿಗಳಿದ್ದು ಬಣ್ಣ, ಅಲಂಕಾರವಿಲ್ಲ ಇದು ಎಲ್ಲರ ಗಮನ ಸೆಳೆಯುತ್ತಿದೆ. ಈ ಬಗ್ಗೆ ಶನಿವಾರ ಸಿದ್ಧತೆಯಲ್ಲಿ ತೊಡಗಿದ್ದ ಸಿಬ್ಬಂದಿಯನ್ನು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಈ ಅವ್ಯವಸ್ಥೆ ಬಗ್ಗೆ ನಾಕರಿಕರೊಬ್ಬರು ಮಾತನಾಡಿದ್ದು, ‘ಡಾಂಬರು ಹಾಕಬಹುದೆಂದು ನಿರೀಕ್ಷಿಸಿದ್ದೆವು. ಆದರೆ ಇನ್ನೊಂದು ಬದಿಗೆ ಹಾಕುವುದಿಲ್ಲ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ. ಇದು ನಿಜಕ್ಕೂ ನಾಚಿಕೆಗೇಡಿನ ವಿಷಯ. ಪ್ರಧಾನಿಗೆ ಮಾಡುತ್ತಿರುವ ಅವಮಾನ. ಸರ್ಕಾರದ ಹುಳುಕು ಎದ್ದು ಕಾಣಿಸುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ಪ್ರವಾಸಿ ಮಂದಿರದಿಂದ ನಂದಾ ಟಾಕೀಸ್‌ವರೆಗೆ ಪ್ರಧಾನಿ 1.8 ಕಿ.ಮೀ ರೋಡ್‌ ಶೋ ನಡೆಸಲಿದ್ದಾರೆ. ಅಲ್ಲಿಂದ ಅಮರಾವತಿ ಹೋಟೆಲ್‌ವರೆಗೆ 6 ಕಿ.ಮೀ ಕಾರಿನಲ್ಲಿ ಮುಂದುವರಿಯುತ್ತಾರೆ. ಅವರು ಸಂಚರಿಸುವ ಅಷ್ಟು ದೂರಕ್ಕೂ ರಸ್ತೆಯ ಒಂದೇ ಬದಿಗಷ್ಟೇ ಡಾಂಬರು ಹಾಕಲಾಗಿದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ.

ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಸಿದ್ದು, ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಅಪೂರ್ಣಗೊಂಡಿರುವ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಅಲ್ಲದೆ, ಈ ರಾಷ್ಟ್ರೀಯ ಹೆದ್ದಾರಿಯ ಟೋಲ್‌ ಮೂಲಕ ₹25 ಸಾವಿರ ಕೋಟಿ ಸಂಗ್ರಹಿಸುವ ಗುರಿ ಹೊಂದಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಈ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ತಳ್ಳಿ ಅಪೂರ್ಣಗೊಂಡಿರುವ ಹೆದ್ದಾರಿ ಉದ್ಘಾಟನೆ ಮಾಡುತ್ತಿದ್ದು, ಟೋಲ್ ಹೆಸರಲ್ಲಿ ಕನ್ನಡಿಗರಿಂದ ಹಣ ಸಂಗ್ರಹಿಸಲು ಬಿಜೆಪಿ ಹೊರಟಿದೆ. ಈ ಹೆದ್ದಾರಿಯ ವಿನ್ಯಾಸ ಅವೈಜ್ಞಾನಿಕವಾಗಿದ್ದು, ನೀರು ಸುಗಮವಾಗಿ ಹರಿದುಹೋಗಲು ಅವಕಾಶ ಕಲ್ಪಿಸಿಲ್ಲ’ ಎಂದು ಅವರು ದೂರಿದ್ದಾರೆ.‌

ಸುಜೇವಾಲಾರಿಂದ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆ

ಇದನ್ನೂ ಓದಿ: ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

  1. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 21 ಕಿ.ಮೀ (118 ಕಿ.ಮೀ ಪೈಕಿ) ಉದ್ದದಷ್ಟು ರಸ್ತೆ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿದೆ. ಈ ಕುರಿತ ಚಿತ್ರಗಳನ್ನು ಸೇರಿಸಲಾಗಿದೆ. ಅಪೂರ್ಣಗೊಂಡಿರುವ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದು ಚುನಾವಣೆ ಗಿಮಿಕ್ ಅಲ್ಲವೇ?
  2. ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು- ಮೈಸೂರು ರಸ್ತೆ ಅಪೂರ್ಣಗೊಂಡಿದ್ದು, ಈ ರಸ್ತೆಯ ಅನೇಕ ಕಾಮಗಾರಿಗಳು ಪೂರ್ಣಗೊಂಡಿಲ್ಲ. 50 ಅಂಡರ್ ಪಾಸ್ ಗಳ ಪೈಕಿ ಕೇವಲ 22 ಅಂಡರ್ ಪಾಸ್ ಮಾತ್ರ ಪೂರ್ಣಗೊಂಡಿದೆ. 12 ಓವರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣಗೊಂಡಿವೆ. 12 ಹಗುರ ವಾಹನ ಅಂಡರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣವಾಗಿವೆ. 18 ಪಾದಚಾರಿ ಅಂಡರ್ ಪಾಸ್ ಗಳ ಪೈಕಿ ಕೇವಲ 8 ಮಾತ್ರ ಪೂರ್ಣಗೊಂಡಿವೆ. ಅಪೂರ್ಣಗೊಂಡಿರುವ, ಛಿದ್ರವಾಗಿರುವ ಹಾಗೂ ತೇಪೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದೇಕೆ?
  3. 118 ಕಿ.ಮೀ ಉದ್ದದ ಹೆದ್ದಾರಿಯ ಎರಡೂ ಭಾಗಗಳಲ್ಲಿ ಸರ್ವೀಸ್ ರಸ್ತೆ ಅಪೂರ್ಣಗೊಂಡಿದೆ. ಪರಿಣಾಮ ಈ ಹೆದ್ದಾರಿಯ ಭಾಗದ ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗಿದ್ದು, ಜನಜೀವನ ಹಾಗೂ ದಿನನಿತ್ಯದ ಚಟುವಟಿಕೆಗೆ ತೊಡಕಾಗಿದೆ. ಪ್ರಧಾನಮಂತ್ರಿಗಳು ಸರ್ವೀಸ್ ರಸ್ತೆ ಪೂರ್ಣಗೊಳಿಸದೇ ರೈತರು, ಜನಸಾಮಾನ್ಯರ ರಕ್ಷಣೆ ಪಣಕ್ಕಿಟ್ಟಿರುವುದೇಕೆ?
  4. ಬೆಂಗಳೂರು ಮೈಸೂರು ಹೆದ್ದಾರಿಯನ್ನು ಇಂಡಿಯನ್ ರೋಡ್ ಕಾಂಗ್ರೆಸ್ (IRC) ಗುಣಮಟ್ಟದಲ್ಲಿ ನಿರ್ಮಾಣ ಮಾಡಿಲ್ಲ. ಹಲವೆಡೆಗಳಲ್ಲಿ ಈ ಹೆದ್ದಾರಿ ನಿರ್ಮಾಣ ಅವೈಜ್ಞಾನಿಕವಾಗಿದೆ. ಅಲ್ಲದೆ ಕಳಪೆ ಗುಣಮಟ್ಟದ ಸಾಮಾಗ್ರಿ ಬಳಸಿದ್ದು, ಒಟ್ಟಾರೆ ರಸ್ತೆಯ ನಿರ್ಮಾಣ ಯೋಜನೆ ಕಳಪೆಯಾಗಿದೆ. 2022ರ ಅಕ್ಟೋಬರ್ ನಿಂದ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 122 ಜನರಿಗೆ ಗಂಭೀರ ಗಾಯಗಳಾಗಿವೆ. ಆದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ. ಪ್ರಧಾನಮಂತ್ರಿಗಳಿಗೆ ಸಾರ್ವಜನಿಕರ ರಕ್ಷಣೆಯನ್ನು ಅಪಾಯಕ್ಕೆ ಸಿಲುಕಿರುವ ಹಾಗೂ ಅಮಾಯಕ ಜೀವಗಳನ್ನು ಬಲಿಯಾಗುತ್ತಿರುವ ಬಗ್ಗೆ ಅರಿವಿಲ್ಲವೇಕೆ?
  5. ಸಂಚಾರಿ ಸಮೀಕ್ಷೆ ಪ್ರಕಾರ 2018ರಲ್ಲಿ ಈ ರಸ್ತೆಯಲ್ಲಿ 53 ಸಾವಿರ ಪ್ಯಾಸೆಂಜರ್ ಕಾರ್ ಯುನಿಟ್ (PCU) ನಷ್ಟಿದ್ದು ಇದು 2023ಕ್ಕೆ 90 ಸಾವಿರ ತಲುಪುವ ನಿರೀಕ್ಷೆ ಇದೆ. ಇದರ ಜತೆಗೆ ವಾಣಿಜ್ಯ ಉದ್ದೇಶಿತ ವಾಹನಗಳು ಸೇರ್ಪಡೆಯಾಗಲಿವೆ. 118 ಕಿ.ಮೀ ರಸ್ತೆಯ ಟೋಲ್ (56 ಕಿ.ಮೀ.ಗೆ 135 ಹಾಗೂ 62 ಕಿ.ಮೀ.ಗೆ 165) ಒಂದು ಕಡೆಗೆ ಸಾಗಲು 300 ರೂ. ನಿಗದಿ ಮಾಡಿದ್ದು, ಎರಡೂ ಕಡೆ ಓಡಾಡಲು ಕಾರಿಗೆ 600 ರೂ. ನಿಗದಿ ಮಾಡಲಾಗಿದೆ. ಇನ್ನು ಭಾರಿ ವಾಹನ ಹಾಗೂ ವಾಣಿಜ್ಯ ವಾಹನಗಳಿಗೆ ಒಂದು ಕಡೆಗೆ 2 ಸಾವಿರದಂತೆ ಎರಡೂ ಕಡೆ ಸಾಗಲು 4 ಸಾವಿರ ನಿಗದಿ ಮಾಡಲಾಗಿದೆ. ಈ ಲೆಕ್ಕಾಚಾರದಲ್ಲಿ 90 ಸಾವಿರ ಕಾರುಗಳಿಗೆ 600 ರೂನಂತೆ ಪ್ರತಿನಿತ್ಯ 5,40,00,000 (5.40 ಕೋಟಿ) ರೂ. ಸಂಗ್ರಹವಾಗಲಿದೆ. ಆಮೂಲಕ ವರ್ಷದ 365 ದಿನಕ್ಕೆ 1971 ಕೋಟಿಯಿಂದ 2 ಸಾವಿರ ಕೋಟಿಯಷ್ಟು ಸಂಗ್ರಹವಾಗಲಿದೆ. 10 ವರ್ಷ ಟೋಲ್ ಸಂಗ್ರಹಿಸಿದರೆ 20 ಸಾವಿರ ಕೋಟಿ ಸಂಗ್ರಹವಾಗಲಿದ್ದು, ಪ್ರತಿ ಎರಡು ವರ್ಷಕ್ಕೊಮ್ಮೆ ಟೋಲ್ ದರ ಹೆಚ್ಚಳ ಮಾಡಿದಾಗ 110 ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಹಣವನ್ನು ಟೋಲ್ ಮೂಲಕ ಸಂಗ್ರಹವಾಗಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮೋದಿ ಸರ್ಕಾರ 15 ಸಾವಿರ ಕೋಟಿ ಲಾಭ ಮಾಡಲು ಮುಂದಾಗಿರುವುದೇಕೆ?
  6. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೆಚ್ಚ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 6420 ಕೋಟಿಯಷ್ಟಿತ್ತು. ಬಿಜೆಪಿ ಅವಧಿಯಲ್ಲಿ ಇದು 10 ಸಾವಿರ ಕೋಟಿಗೆ ಹೆಚ್ಚಾಗಿದೆ. ಈ ಹೆದ್ದಾರಿಯ ನಿರ್ಮಾಣದ ವೆಚ್ಚ ದುಪ್ಪಟ್ಟಾಗಲು ಕಾರಣವೇನು ಎಂದು ಪ್ರಧಾನಮಂತ್ರಿಗಳು ಉತ್ತರಿಸುವರೇ?
  7. 2022ರ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಬಳಿ ನೀರು ಸುಗಮವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸದ ಕಾರಣ ಕುಂಬಳಗೋಡು, ಇನೋರು ಪಾಳ್ಯ ಟೋಲ್ ಹಗೇಟೆ, ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಪ್ರವಾಹ ಉಂಟಾಗಿತ್ತು. ಇನ್ನು ಹೆದ್ದಾರಿಯ ಎರಡೂ ಬದಿಯಲ್ಲಿರುವ ರೈತರ ಕೃಷಿ ಭೂಮಿಗೆ ನೀರಾವರಿ ನೀರು ಹರಿಯಲು ಅಡ್ಡಿಯುಂಟಾಗಿದೆ. ಪರಿಣಾಮ ಪ್ರತಿ ಮಳೆಗಾಲದಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿದೆ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸದೇ, ಹೆದ್ದಾರಿಯ ಎರಡೂ ಬದಿಯ ರೈತರಿಗೆ ಸರಿಯಾದ ನೀರಾವರಿ ವ್ಯವಸ್ಥೆ ಕಲ್ಪಿಸದೇ ಪ್ರಧಾನಮಂತ್ರಿಗಳು ಈ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದೇಕೆ?
  8. ಬಿಜೆಪಿ ಸರ್ಕಾರದ ಈ ಮಾನವ ನಿರ್ಮಿತ ಪ್ರವಾಹ ಪರಿಸ್ಥಿತಿಯನ್ನು ಕಂಡರೂ ಕಾಣದಂತೆ ಮಂಡ್ಯ ಹಾಗೂ ಮೈಸೂರು ಭಾಗದ ಸಂಸದರು ವರ್ತಿಸುತ್ತಿದ್ದಾರೆ. ಪ್ರಧಾನಮಂತ್ರಿಗಳು ಹಾಗೂ ಮಂಡ್ಯ ಮತ್ತು ಮೈಸೂರಿನ ಸಂಸದರು ಪ್ರಯಾಣಿಕರು ಹಾಗೂ ರೈತರ ದುರಾವಸ್ಥೆಯನ್ನು ಕಂಡರೂ ಈ ಬಗ್ಗೆ ಅಸಡ್ಡೆ ತೋರುತ್ತಿರುವುದೇಕೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...