Homeಕರ್ನಾಟಕಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಮಾಡಲು ರಾಜ್ಯಕ್ಕೆ ಬಂದಿದ್ದಾರೆ. ಈ ವೇಳೆ ಅವರು ರೋಡ್‌ ಶೋ ನಡೆಸಲಿದ್ದು, ಆ ರಸ್ತೆಯ ಒಂದು ಬದಿಗಷ್ಟೇ ಡಾಂಬರು ಹಾಕಿದ್ದು, ಇನ್ನೊಂದು ಬದಿಯಲ್ಲಿ ಗುಂಡಿಗಳನ್ನು ಹಾಗೇ ಉಳಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

ನಗರದ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ಚತುಷ್ಫಥದ ನಡುವೆ ರಸ್ತೆ ವಿಭಜಕವಿದ್ದು, ಪ್ರಧಾನಿ ಸಂಚರಿಸುವ ರಸ್ತೆಯ ಎಡಬದಿಗೆ ಮಾತ್ರ ಡಾಂಬರು ಹಾಕಿ ಬಣ್ಣ ಬಳಿಯಲಾಗಿದೆ. ಬಲಬದಿಯಲ್ಲಿ ಎಂದಿನಂತೆ ಗುಂಡಿಗಳಿದ್ದು ಬಣ್ಣ, ಅಲಂಕಾರವಿಲ್ಲ ಇದು ಎಲ್ಲರ ಗಮನ ಸೆಳೆಯುತ್ತಿದೆ. ಈ ಬಗ್ಗೆ ಶನಿವಾರ ಸಿದ್ಧತೆಯಲ್ಲಿ ತೊಡಗಿದ್ದ ಸಿಬ್ಬಂದಿಯನ್ನು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಈ ಅವ್ಯವಸ್ಥೆ ಬಗ್ಗೆ ನಾಕರಿಕರೊಬ್ಬರು ಮಾತನಾಡಿದ್ದು, ‘ಡಾಂಬರು ಹಾಕಬಹುದೆಂದು ನಿರೀಕ್ಷಿಸಿದ್ದೆವು. ಆದರೆ ಇನ್ನೊಂದು ಬದಿಗೆ ಹಾಕುವುದಿಲ್ಲ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ. ಇದು ನಿಜಕ್ಕೂ ನಾಚಿಕೆಗೇಡಿನ ವಿಷಯ. ಪ್ರಧಾನಿಗೆ ಮಾಡುತ್ತಿರುವ ಅವಮಾನ. ಸರ್ಕಾರದ ಹುಳುಕು ಎದ್ದು ಕಾಣಿಸುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ಪ್ರವಾಸಿ ಮಂದಿರದಿಂದ ನಂದಾ ಟಾಕೀಸ್‌ವರೆಗೆ ಪ್ರಧಾನಿ 1.8 ಕಿ.ಮೀ ರೋಡ್‌ ಶೋ ನಡೆಸಲಿದ್ದಾರೆ. ಅಲ್ಲಿಂದ ಅಮರಾವತಿ ಹೋಟೆಲ್‌ವರೆಗೆ 6 ಕಿ.ಮೀ ಕಾರಿನಲ್ಲಿ ಮುಂದುವರಿಯುತ್ತಾರೆ. ಅವರು ಸಂಚರಿಸುವ ಅಷ್ಟು ದೂರಕ್ಕೂ ರಸ್ತೆಯ ಒಂದೇ ಬದಿಗಷ್ಟೇ ಡಾಂಬರು ಹಾಕಲಾಗಿದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ.

ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಸಿದ್ದು, ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಅಪೂರ್ಣಗೊಂಡಿರುವ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಅಲ್ಲದೆ, ಈ ರಾಷ್ಟ್ರೀಯ ಹೆದ್ದಾರಿಯ ಟೋಲ್‌ ಮೂಲಕ ₹25 ಸಾವಿರ ಕೋಟಿ ಸಂಗ್ರಹಿಸುವ ಗುರಿ ಹೊಂದಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಈ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ತಳ್ಳಿ ಅಪೂರ್ಣಗೊಂಡಿರುವ ಹೆದ್ದಾರಿ ಉದ್ಘಾಟನೆ ಮಾಡುತ್ತಿದ್ದು, ಟೋಲ್ ಹೆಸರಲ್ಲಿ ಕನ್ನಡಿಗರಿಂದ ಹಣ ಸಂಗ್ರಹಿಸಲು ಬಿಜೆಪಿ ಹೊರಟಿದೆ. ಈ ಹೆದ್ದಾರಿಯ ವಿನ್ಯಾಸ ಅವೈಜ್ಞಾನಿಕವಾಗಿದ್ದು, ನೀರು ಸುಗಮವಾಗಿ ಹರಿದುಹೋಗಲು ಅವಕಾಶ ಕಲ್ಪಿಸಿಲ್ಲ’ ಎಂದು ಅವರು ದೂರಿದ್ದಾರೆ.‌

ಸುಜೇವಾಲಾರಿಂದ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆ

ಇದನ್ನೂ ಓದಿ: ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

  1. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 21 ಕಿ.ಮೀ (118 ಕಿ.ಮೀ ಪೈಕಿ) ಉದ್ದದಷ್ಟು ರಸ್ತೆ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿದೆ. ಈ ಕುರಿತ ಚಿತ್ರಗಳನ್ನು ಸೇರಿಸಲಾಗಿದೆ. ಅಪೂರ್ಣಗೊಂಡಿರುವ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದು ಚುನಾವಣೆ ಗಿಮಿಕ್ ಅಲ್ಲವೇ?
  2. ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು- ಮೈಸೂರು ರಸ್ತೆ ಅಪೂರ್ಣಗೊಂಡಿದ್ದು, ಈ ರಸ್ತೆಯ ಅನೇಕ ಕಾಮಗಾರಿಗಳು ಪೂರ್ಣಗೊಂಡಿಲ್ಲ. 50 ಅಂಡರ್ ಪಾಸ್ ಗಳ ಪೈಕಿ ಕೇವಲ 22 ಅಂಡರ್ ಪಾಸ್ ಮಾತ್ರ ಪೂರ್ಣಗೊಂಡಿದೆ. 12 ಓವರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣಗೊಂಡಿವೆ. 12 ಹಗುರ ವಾಹನ ಅಂಡರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣವಾಗಿವೆ. 18 ಪಾದಚಾರಿ ಅಂಡರ್ ಪಾಸ್ ಗಳ ಪೈಕಿ ಕೇವಲ 8 ಮಾತ್ರ ಪೂರ್ಣಗೊಂಡಿವೆ. ಅಪೂರ್ಣಗೊಂಡಿರುವ, ಛಿದ್ರವಾಗಿರುವ ಹಾಗೂ ತೇಪೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದೇಕೆ?
  3. 118 ಕಿ.ಮೀ ಉದ್ದದ ಹೆದ್ದಾರಿಯ ಎರಡೂ ಭಾಗಗಳಲ್ಲಿ ಸರ್ವೀಸ್ ರಸ್ತೆ ಅಪೂರ್ಣಗೊಂಡಿದೆ. ಪರಿಣಾಮ ಈ ಹೆದ್ದಾರಿಯ ಭಾಗದ ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗಿದ್ದು, ಜನಜೀವನ ಹಾಗೂ ದಿನನಿತ್ಯದ ಚಟುವಟಿಕೆಗೆ ತೊಡಕಾಗಿದೆ. ಪ್ರಧಾನಮಂತ್ರಿಗಳು ಸರ್ವೀಸ್ ರಸ್ತೆ ಪೂರ್ಣಗೊಳಿಸದೇ ರೈತರು, ಜನಸಾಮಾನ್ಯರ ರಕ್ಷಣೆ ಪಣಕ್ಕಿಟ್ಟಿರುವುದೇಕೆ?
  4. ಬೆಂಗಳೂರು ಮೈಸೂರು ಹೆದ್ದಾರಿಯನ್ನು ಇಂಡಿಯನ್ ರೋಡ್ ಕಾಂಗ್ರೆಸ್ (IRC) ಗುಣಮಟ್ಟದಲ್ಲಿ ನಿರ್ಮಾಣ ಮಾಡಿಲ್ಲ. ಹಲವೆಡೆಗಳಲ್ಲಿ ಈ ಹೆದ್ದಾರಿ ನಿರ್ಮಾಣ ಅವೈಜ್ಞಾನಿಕವಾಗಿದೆ. ಅಲ್ಲದೆ ಕಳಪೆ ಗುಣಮಟ್ಟದ ಸಾಮಾಗ್ರಿ ಬಳಸಿದ್ದು, ಒಟ್ಟಾರೆ ರಸ್ತೆಯ ನಿರ್ಮಾಣ ಯೋಜನೆ ಕಳಪೆಯಾಗಿದೆ. 2022ರ ಅಕ್ಟೋಬರ್ ನಿಂದ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 122 ಜನರಿಗೆ ಗಂಭೀರ ಗಾಯಗಳಾಗಿವೆ. ಆದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ. ಪ್ರಧಾನಮಂತ್ರಿಗಳಿಗೆ ಸಾರ್ವಜನಿಕರ ರಕ್ಷಣೆಯನ್ನು ಅಪಾಯಕ್ಕೆ ಸಿಲುಕಿರುವ ಹಾಗೂ ಅಮಾಯಕ ಜೀವಗಳನ್ನು ಬಲಿಯಾಗುತ್ತಿರುವ ಬಗ್ಗೆ ಅರಿವಿಲ್ಲವೇಕೆ?
  5. ಸಂಚಾರಿ ಸಮೀಕ್ಷೆ ಪ್ರಕಾರ 2018ರಲ್ಲಿ ಈ ರಸ್ತೆಯಲ್ಲಿ 53 ಸಾವಿರ ಪ್ಯಾಸೆಂಜರ್ ಕಾರ್ ಯುನಿಟ್ (PCU) ನಷ್ಟಿದ್ದು ಇದು 2023ಕ್ಕೆ 90 ಸಾವಿರ ತಲುಪುವ ನಿರೀಕ್ಷೆ ಇದೆ. ಇದರ ಜತೆಗೆ ವಾಣಿಜ್ಯ ಉದ್ದೇಶಿತ ವಾಹನಗಳು ಸೇರ್ಪಡೆಯಾಗಲಿವೆ. 118 ಕಿ.ಮೀ ರಸ್ತೆಯ ಟೋಲ್ (56 ಕಿ.ಮೀ.ಗೆ 135 ಹಾಗೂ 62 ಕಿ.ಮೀ.ಗೆ 165) ಒಂದು ಕಡೆಗೆ ಸಾಗಲು 300 ರೂ. ನಿಗದಿ ಮಾಡಿದ್ದು, ಎರಡೂ ಕಡೆ ಓಡಾಡಲು ಕಾರಿಗೆ 600 ರೂ. ನಿಗದಿ ಮಾಡಲಾಗಿದೆ. ಇನ್ನು ಭಾರಿ ವಾಹನ ಹಾಗೂ ವಾಣಿಜ್ಯ ವಾಹನಗಳಿಗೆ ಒಂದು ಕಡೆಗೆ 2 ಸಾವಿರದಂತೆ ಎರಡೂ ಕಡೆ ಸಾಗಲು 4 ಸಾವಿರ ನಿಗದಿ ಮಾಡಲಾಗಿದೆ. ಈ ಲೆಕ್ಕಾಚಾರದಲ್ಲಿ 90 ಸಾವಿರ ಕಾರುಗಳಿಗೆ 600 ರೂನಂತೆ ಪ್ರತಿನಿತ್ಯ 5,40,00,000 (5.40 ಕೋಟಿ) ರೂ. ಸಂಗ್ರಹವಾಗಲಿದೆ. ಆಮೂಲಕ ವರ್ಷದ 365 ದಿನಕ್ಕೆ 1971 ಕೋಟಿಯಿಂದ 2 ಸಾವಿರ ಕೋಟಿಯಷ್ಟು ಸಂಗ್ರಹವಾಗಲಿದೆ. 10 ವರ್ಷ ಟೋಲ್ ಸಂಗ್ರಹಿಸಿದರೆ 20 ಸಾವಿರ ಕೋಟಿ ಸಂಗ್ರಹವಾಗಲಿದ್ದು, ಪ್ರತಿ ಎರಡು ವರ್ಷಕ್ಕೊಮ್ಮೆ ಟೋಲ್ ದರ ಹೆಚ್ಚಳ ಮಾಡಿದಾಗ 110 ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಹಣವನ್ನು ಟೋಲ್ ಮೂಲಕ ಸಂಗ್ರಹವಾಗಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮೋದಿ ಸರ್ಕಾರ 15 ಸಾವಿರ ಕೋಟಿ ಲಾಭ ಮಾಡಲು ಮುಂದಾಗಿರುವುದೇಕೆ?
  6. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೆಚ್ಚ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 6420 ಕೋಟಿಯಷ್ಟಿತ್ತು. ಬಿಜೆಪಿ ಅವಧಿಯಲ್ಲಿ ಇದು 10 ಸಾವಿರ ಕೋಟಿಗೆ ಹೆಚ್ಚಾಗಿದೆ. ಈ ಹೆದ್ದಾರಿಯ ನಿರ್ಮಾಣದ ವೆಚ್ಚ ದುಪ್ಪಟ್ಟಾಗಲು ಕಾರಣವೇನು ಎಂದು ಪ್ರಧಾನಮಂತ್ರಿಗಳು ಉತ್ತರಿಸುವರೇ?
  7. 2022ರ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಬಳಿ ನೀರು ಸುಗಮವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸದ ಕಾರಣ ಕುಂಬಳಗೋಡು, ಇನೋರು ಪಾಳ್ಯ ಟೋಲ್ ಹಗೇಟೆ, ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಪ್ರವಾಹ ಉಂಟಾಗಿತ್ತು. ಇನ್ನು ಹೆದ್ದಾರಿಯ ಎರಡೂ ಬದಿಯಲ್ಲಿರುವ ರೈತರ ಕೃಷಿ ಭೂಮಿಗೆ ನೀರಾವರಿ ನೀರು ಹರಿಯಲು ಅಡ್ಡಿಯುಂಟಾಗಿದೆ. ಪರಿಣಾಮ ಪ್ರತಿ ಮಳೆಗಾಲದಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿದೆ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸದೇ, ಹೆದ್ದಾರಿಯ ಎರಡೂ ಬದಿಯ ರೈತರಿಗೆ ಸರಿಯಾದ ನೀರಾವರಿ ವ್ಯವಸ್ಥೆ ಕಲ್ಪಿಸದೇ ಪ್ರಧಾನಮಂತ್ರಿಗಳು ಈ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದೇಕೆ?
  8. ಬಿಜೆಪಿ ಸರ್ಕಾರದ ಈ ಮಾನವ ನಿರ್ಮಿತ ಪ್ರವಾಹ ಪರಿಸ್ಥಿತಿಯನ್ನು ಕಂಡರೂ ಕಾಣದಂತೆ ಮಂಡ್ಯ ಹಾಗೂ ಮೈಸೂರು ಭಾಗದ ಸಂಸದರು ವರ್ತಿಸುತ್ತಿದ್ದಾರೆ. ಪ್ರಧಾನಮಂತ್ರಿಗಳು ಹಾಗೂ ಮಂಡ್ಯ ಮತ್ತು ಮೈಸೂರಿನ ಸಂಸದರು ಪ್ರಯಾಣಿಕರು ಹಾಗೂ ರೈತರ ದುರಾವಸ್ಥೆಯನ್ನು ಕಂಡರೂ ಈ ಬಗ್ಗೆ ಅಸಡ್ಡೆ ತೋರುತ್ತಿರುವುದೇಕೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...