Homeಕರ್ನಾಟಕಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

ಮೋದಿ ರೋಡ್‌ ಶೋ: ಒಂದು ಬದಿಗಷ್ಟೇ ಡಾಂಬರು, ಅಲಂಕಾರ ಮತ್ತೊಂದು ಬದಿಯಲ್ಲಿ ಗುಂಡಿಗಳ ಸಾಲು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಮಾಡಲು ರಾಜ್ಯಕ್ಕೆ ಬಂದಿದ್ದಾರೆ. ಈ ವೇಳೆ ಅವರು ರೋಡ್‌ ಶೋ ನಡೆಸಲಿದ್ದು, ಆ ರಸ್ತೆಯ ಒಂದು ಬದಿಗಷ್ಟೇ ಡಾಂಬರು ಹಾಕಿದ್ದು, ಇನ್ನೊಂದು ಬದಿಯಲ್ಲಿ ಗುಂಡಿಗಳನ್ನು ಹಾಗೇ ಉಳಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ಕಿತ್ತೆಸೆದ ಯುವಕರು

ನಗರದ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ಚತುಷ್ಫಥದ ನಡುವೆ ರಸ್ತೆ ವಿಭಜಕವಿದ್ದು, ಪ್ರಧಾನಿ ಸಂಚರಿಸುವ ರಸ್ತೆಯ ಎಡಬದಿಗೆ ಮಾತ್ರ ಡಾಂಬರು ಹಾಕಿ ಬಣ್ಣ ಬಳಿಯಲಾಗಿದೆ. ಬಲಬದಿಯಲ್ಲಿ ಎಂದಿನಂತೆ ಗುಂಡಿಗಳಿದ್ದು ಬಣ್ಣ, ಅಲಂಕಾರವಿಲ್ಲ ಇದು ಎಲ್ಲರ ಗಮನ ಸೆಳೆಯುತ್ತಿದೆ. ಈ ಬಗ್ಗೆ ಶನಿವಾರ ಸಿದ್ಧತೆಯಲ್ಲಿ ತೊಡಗಿದ್ದ ಸಿಬ್ಬಂದಿಯನ್ನು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಈ ಅವ್ಯವಸ್ಥೆ ಬಗ್ಗೆ ನಾಕರಿಕರೊಬ್ಬರು ಮಾತನಾಡಿದ್ದು, ‘ಡಾಂಬರು ಹಾಕಬಹುದೆಂದು ನಿರೀಕ್ಷಿಸಿದ್ದೆವು. ಆದರೆ ಇನ್ನೊಂದು ಬದಿಗೆ ಹಾಕುವುದಿಲ್ಲ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ. ಇದು ನಿಜಕ್ಕೂ ನಾಚಿಕೆಗೇಡಿನ ವಿಷಯ. ಪ್ರಧಾನಿಗೆ ಮಾಡುತ್ತಿರುವ ಅವಮಾನ. ಸರ್ಕಾರದ ಹುಳುಕು ಎದ್ದು ಕಾಣಿಸುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರು ಪ್ರವಾಸಿ ಮಂದಿರದಿಂದ ನಂದಾ ಟಾಕೀಸ್‌ವರೆಗೆ ಪ್ರಧಾನಿ 1.8 ಕಿ.ಮೀ ರೋಡ್‌ ಶೋ ನಡೆಸಲಿದ್ದಾರೆ. ಅಲ್ಲಿಂದ ಅಮರಾವತಿ ಹೋಟೆಲ್‌ವರೆಗೆ 6 ಕಿ.ಮೀ ಕಾರಿನಲ್ಲಿ ಮುಂದುವರಿಯುತ್ತಾರೆ. ಅವರು ಸಂಚರಿಸುವ ಅಷ್ಟು ದೂರಕ್ಕೂ ರಸ್ತೆಯ ಒಂದೇ ಬದಿಗಷ್ಟೇ ಡಾಂಬರು ಹಾಕಲಾಗಿದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ.

ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಸಿದ್ದು, ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಅಪೂರ್ಣಗೊಂಡಿರುವ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಅಲ್ಲದೆ, ಈ ರಾಷ್ಟ್ರೀಯ ಹೆದ್ದಾರಿಯ ಟೋಲ್‌ ಮೂಲಕ ₹25 ಸಾವಿರ ಕೋಟಿ ಸಂಗ್ರಹಿಸುವ ಗುರಿ ಹೊಂದಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಈ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ತಳ್ಳಿ ಅಪೂರ್ಣಗೊಂಡಿರುವ ಹೆದ್ದಾರಿ ಉದ್ಘಾಟನೆ ಮಾಡುತ್ತಿದ್ದು, ಟೋಲ್ ಹೆಸರಲ್ಲಿ ಕನ್ನಡಿಗರಿಂದ ಹಣ ಸಂಗ್ರಹಿಸಲು ಬಿಜೆಪಿ ಹೊರಟಿದೆ. ಈ ಹೆದ್ದಾರಿಯ ವಿನ್ಯಾಸ ಅವೈಜ್ಞಾನಿಕವಾಗಿದ್ದು, ನೀರು ಸುಗಮವಾಗಿ ಹರಿದುಹೋಗಲು ಅವಕಾಶ ಕಲ್ಪಿಸಿಲ್ಲ’ ಎಂದು ಅವರು ದೂರಿದ್ದಾರೆ.‌

ಸುಜೇವಾಲಾರಿಂದ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆ

ಇದನ್ನೂ ಓದಿ: ತೀವ್ರ ವಿರೋಧದ ಬಳಿಕ ರಾತ್ರೋರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವು

  1. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 21 ಕಿ.ಮೀ (118 ಕಿ.ಮೀ ಪೈಕಿ) ಉದ್ದದಷ್ಟು ರಸ್ತೆ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿದೆ. ಈ ಕುರಿತ ಚಿತ್ರಗಳನ್ನು ಸೇರಿಸಲಾಗಿದೆ. ಅಪೂರ್ಣಗೊಂಡಿರುವ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದು ಚುನಾವಣೆ ಗಿಮಿಕ್ ಅಲ್ಲವೇ?
  2. ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು- ಮೈಸೂರು ರಸ್ತೆ ಅಪೂರ್ಣಗೊಂಡಿದ್ದು, ಈ ರಸ್ತೆಯ ಅನೇಕ ಕಾಮಗಾರಿಗಳು ಪೂರ್ಣಗೊಂಡಿಲ್ಲ. 50 ಅಂಡರ್ ಪಾಸ್ ಗಳ ಪೈಕಿ ಕೇವಲ 22 ಅಂಡರ್ ಪಾಸ್ ಮಾತ್ರ ಪೂರ್ಣಗೊಂಡಿದೆ. 12 ಓವರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣಗೊಂಡಿವೆ. 12 ಹಗುರ ವಾಹನ ಅಂಡರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣವಾಗಿವೆ. 18 ಪಾದಚಾರಿ ಅಂಡರ್ ಪಾಸ್ ಗಳ ಪೈಕಿ ಕೇವಲ 8 ಮಾತ್ರ ಪೂರ್ಣಗೊಂಡಿವೆ. ಅಪೂರ್ಣಗೊಂಡಿರುವ, ಛಿದ್ರವಾಗಿರುವ ಹಾಗೂ ತೇಪೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದೇಕೆ?
  3. 118 ಕಿ.ಮೀ ಉದ್ದದ ಹೆದ್ದಾರಿಯ ಎರಡೂ ಭಾಗಗಳಲ್ಲಿ ಸರ್ವೀಸ್ ರಸ್ತೆ ಅಪೂರ್ಣಗೊಂಡಿದೆ. ಪರಿಣಾಮ ಈ ಹೆದ್ದಾರಿಯ ಭಾಗದ ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗಿದ್ದು, ಜನಜೀವನ ಹಾಗೂ ದಿನನಿತ್ಯದ ಚಟುವಟಿಕೆಗೆ ತೊಡಕಾಗಿದೆ. ಪ್ರಧಾನಮಂತ್ರಿಗಳು ಸರ್ವೀಸ್ ರಸ್ತೆ ಪೂರ್ಣಗೊಳಿಸದೇ ರೈತರು, ಜನಸಾಮಾನ್ಯರ ರಕ್ಷಣೆ ಪಣಕ್ಕಿಟ್ಟಿರುವುದೇಕೆ?
  4. ಬೆಂಗಳೂರು ಮೈಸೂರು ಹೆದ್ದಾರಿಯನ್ನು ಇಂಡಿಯನ್ ರೋಡ್ ಕಾಂಗ್ರೆಸ್ (IRC) ಗುಣಮಟ್ಟದಲ್ಲಿ ನಿರ್ಮಾಣ ಮಾಡಿಲ್ಲ. ಹಲವೆಡೆಗಳಲ್ಲಿ ಈ ಹೆದ್ದಾರಿ ನಿರ್ಮಾಣ ಅವೈಜ್ಞಾನಿಕವಾಗಿದೆ. ಅಲ್ಲದೆ ಕಳಪೆ ಗುಣಮಟ್ಟದ ಸಾಮಾಗ್ರಿ ಬಳಸಿದ್ದು, ಒಟ್ಟಾರೆ ರಸ್ತೆಯ ನಿರ್ಮಾಣ ಯೋಜನೆ ಕಳಪೆಯಾಗಿದೆ. 2022ರ ಅಕ್ಟೋಬರ್ ನಿಂದ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 122 ಜನರಿಗೆ ಗಂಭೀರ ಗಾಯಗಳಾಗಿವೆ. ಆದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ. ಪ್ರಧಾನಮಂತ್ರಿಗಳಿಗೆ ಸಾರ್ವಜನಿಕರ ರಕ್ಷಣೆಯನ್ನು ಅಪಾಯಕ್ಕೆ ಸಿಲುಕಿರುವ ಹಾಗೂ ಅಮಾಯಕ ಜೀವಗಳನ್ನು ಬಲಿಯಾಗುತ್ತಿರುವ ಬಗ್ಗೆ ಅರಿವಿಲ್ಲವೇಕೆ?
  5. ಸಂಚಾರಿ ಸಮೀಕ್ಷೆ ಪ್ರಕಾರ 2018ರಲ್ಲಿ ಈ ರಸ್ತೆಯಲ್ಲಿ 53 ಸಾವಿರ ಪ್ಯಾಸೆಂಜರ್ ಕಾರ್ ಯುನಿಟ್ (PCU) ನಷ್ಟಿದ್ದು ಇದು 2023ಕ್ಕೆ 90 ಸಾವಿರ ತಲುಪುವ ನಿರೀಕ್ಷೆ ಇದೆ. ಇದರ ಜತೆಗೆ ವಾಣಿಜ್ಯ ಉದ್ದೇಶಿತ ವಾಹನಗಳು ಸೇರ್ಪಡೆಯಾಗಲಿವೆ. 118 ಕಿ.ಮೀ ರಸ್ತೆಯ ಟೋಲ್ (56 ಕಿ.ಮೀ.ಗೆ 135 ಹಾಗೂ 62 ಕಿ.ಮೀ.ಗೆ 165) ಒಂದು ಕಡೆಗೆ ಸಾಗಲು 300 ರೂ. ನಿಗದಿ ಮಾಡಿದ್ದು, ಎರಡೂ ಕಡೆ ಓಡಾಡಲು ಕಾರಿಗೆ 600 ರೂ. ನಿಗದಿ ಮಾಡಲಾಗಿದೆ. ಇನ್ನು ಭಾರಿ ವಾಹನ ಹಾಗೂ ವಾಣಿಜ್ಯ ವಾಹನಗಳಿಗೆ ಒಂದು ಕಡೆಗೆ 2 ಸಾವಿರದಂತೆ ಎರಡೂ ಕಡೆ ಸಾಗಲು 4 ಸಾವಿರ ನಿಗದಿ ಮಾಡಲಾಗಿದೆ. ಈ ಲೆಕ್ಕಾಚಾರದಲ್ಲಿ 90 ಸಾವಿರ ಕಾರುಗಳಿಗೆ 600 ರೂನಂತೆ ಪ್ರತಿನಿತ್ಯ 5,40,00,000 (5.40 ಕೋಟಿ) ರೂ. ಸಂಗ್ರಹವಾಗಲಿದೆ. ಆಮೂಲಕ ವರ್ಷದ 365 ದಿನಕ್ಕೆ 1971 ಕೋಟಿಯಿಂದ 2 ಸಾವಿರ ಕೋಟಿಯಷ್ಟು ಸಂಗ್ರಹವಾಗಲಿದೆ. 10 ವರ್ಷ ಟೋಲ್ ಸಂಗ್ರಹಿಸಿದರೆ 20 ಸಾವಿರ ಕೋಟಿ ಸಂಗ್ರಹವಾಗಲಿದ್ದು, ಪ್ರತಿ ಎರಡು ವರ್ಷಕ್ಕೊಮ್ಮೆ ಟೋಲ್ ದರ ಹೆಚ್ಚಳ ಮಾಡಿದಾಗ 110 ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಹಣವನ್ನು ಟೋಲ್ ಮೂಲಕ ಸಂಗ್ರಹವಾಗಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮೋದಿ ಸರ್ಕಾರ 15 ಸಾವಿರ ಕೋಟಿ ಲಾಭ ಮಾಡಲು ಮುಂದಾಗಿರುವುದೇಕೆ?
  6. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೆಚ್ಚ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 6420 ಕೋಟಿಯಷ್ಟಿತ್ತು. ಬಿಜೆಪಿ ಅವಧಿಯಲ್ಲಿ ಇದು 10 ಸಾವಿರ ಕೋಟಿಗೆ ಹೆಚ್ಚಾಗಿದೆ. ಈ ಹೆದ್ದಾರಿಯ ನಿರ್ಮಾಣದ ವೆಚ್ಚ ದುಪ್ಪಟ್ಟಾಗಲು ಕಾರಣವೇನು ಎಂದು ಪ್ರಧಾನಮಂತ್ರಿಗಳು ಉತ್ತರಿಸುವರೇ?
  7. 2022ರ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಬಳಿ ನೀರು ಸುಗಮವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸದ ಕಾರಣ ಕುಂಬಳಗೋಡು, ಇನೋರು ಪಾಳ್ಯ ಟೋಲ್ ಹಗೇಟೆ, ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಪ್ರವಾಹ ಉಂಟಾಗಿತ್ತು. ಇನ್ನು ಹೆದ್ದಾರಿಯ ಎರಡೂ ಬದಿಯಲ್ಲಿರುವ ರೈತರ ಕೃಷಿ ಭೂಮಿಗೆ ನೀರಾವರಿ ನೀರು ಹರಿಯಲು ಅಡ್ಡಿಯುಂಟಾಗಿದೆ. ಪರಿಣಾಮ ಪ್ರತಿ ಮಳೆಗಾಲದಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿದೆ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸದೇ, ಹೆದ್ದಾರಿಯ ಎರಡೂ ಬದಿಯ ರೈತರಿಗೆ ಸರಿಯಾದ ನೀರಾವರಿ ವ್ಯವಸ್ಥೆ ಕಲ್ಪಿಸದೇ ಪ್ರಧಾನಮಂತ್ರಿಗಳು ಈ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದೇಕೆ?
  8. ಬಿಜೆಪಿ ಸರ್ಕಾರದ ಈ ಮಾನವ ನಿರ್ಮಿತ ಪ್ರವಾಹ ಪರಿಸ್ಥಿತಿಯನ್ನು ಕಂಡರೂ ಕಾಣದಂತೆ ಮಂಡ್ಯ ಹಾಗೂ ಮೈಸೂರು ಭಾಗದ ಸಂಸದರು ವರ್ತಿಸುತ್ತಿದ್ದಾರೆ. ಪ್ರಧಾನಮಂತ್ರಿಗಳು ಹಾಗೂ ಮಂಡ್ಯ ಮತ್ತು ಮೈಸೂರಿನ ಸಂಸದರು ಪ್ರಯಾಣಿಕರು ಹಾಗೂ ರೈತರ ದುರಾವಸ್ಥೆಯನ್ನು ಕಂಡರೂ ಈ ಬಗ್ಗೆ ಅಸಡ್ಡೆ ತೋರುತ್ತಿರುವುದೇಕೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...