HomeUncategorizedಮೋದಿ ರೋಡ್‌ ಶೋದಿಂದ ಬೆಂಗಳೂರು ನಿವಾಸಿಗಳಿಗೆ ತೊಂದರೆ: ವೇಳಾಪಟ್ಟಿಯಲ್ಲಿ ಬದಲಾವಣೆ

ಮೋದಿ ರೋಡ್‌ ಶೋದಿಂದ ಬೆಂಗಳೂರು ನಿವಾಸಿಗಳಿಗೆ ತೊಂದರೆ: ವೇಳಾಪಟ್ಟಿಯಲ್ಲಿ ಬದಲಾವಣೆ

- Advertisement -
- Advertisement -

ಪ್ರಧಾನಿ ಮೋದಿ ಅವರು ದಿನಪೂರ್ತಿ ರೋಡ್‌ಶೋ ನಡೆಸುವುದರಿಂದ ಬೆಂಗಳೂರು ನಿವಾಸಿಗಳು ಟ್ರಾಫಿಕ್ ತೊಂದರೆ ಅನುಭವಿಸುತ್ತಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಬಹಳ ಚರ್ಚೆ ನಡೆಯುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಶನಿವಾರ ನಡೆಯಬೇಕಿದ್ದ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಚಾರ ಆರಂಭಿಸಿರುವ ಪ್ರಧಾನಿ ಮೋದಿ ಅವರು, ಕಳೆದ ಶನಿವಾರ ರೋಡ್‌ಶೋ ನಡೆಸಿದರು. ಈ ವೇಳೆ ಸಹಜವಾಗಯೇ ಭದ್ರತೆ ವಿಚಾರವಾಗಿ ಅಲ್ಲಲ್ಲಿ ಬ್ಯಾರಿಕೇಡ್ ಹಾಕುವುದು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಭಾರೀ ಟ್ರಾಫಿಕ್ ಸಮಸ್ಯೆ ಎದುರಿಸಿದರು. ಇದೀಗ ಮತ್ತೆ ನಾಳೆ(ಶನಿವಾರ) ರೋಡ್ ಶೋ ನಡೆಸಲು ವೇಳಾಪಟ್ಟಿ ಸಿದ್ದಪಡಿಸಲಾಗಿದೆ.

ಜನರಿಗೆ ಕಿರಿಕಿರಿ ಉಂಟಾಗುವುದರಿಂದ ಮೊದಲೇ ಎಚ್ಚೆತ್ತಿಕೊಂಡಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರು ಎಂಟು ಗಂಟೆಗಳ ರೋಡ್ ಶೋ ನಡೆಸುವ ಯೋಜನೆಯನ್ನು ಬಿಜೆಪಿ ಕೈಬಿಟ್ಟಿದೆ.

ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಮತ್ತು ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ರವರೆಗೆ ಎರಡು ದಿನಗಳ ಕಾಲ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಇದನ್ನೂ ಓದಿ: ತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

”ಪ್ರಧಾನಿ ಮೋದಿ ಶನಿವಾರ ಇಲ್ಲಿ 36.6 ಕಿಮೀ ರೋಡ್ ಶೋ ನಡೆಸಲಿದ್ದಾರೆ — ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ 10.1 ಕಿಮೀ ಮತ್ತು ಸಂಜೆ 4 ರಿಂದ ರಾತ್ರಿ 10 ರವರೆಗೆ 26.5 ಕಿಮೀ ದೂರವನ್ನು ಒಳಗೊಂಡಿದೆ ಎಂದು ಪಕ್ಷವು ಬುಧವಾರ ಹೇಳಿತ್ತು. ಆದರೆ, ಇಡೀ ದಿನ ರೋಡ್ ಶೋ ನಡೆಸಿದರೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅವರ ಭಾವನೆಗೆ ಗೌರವ ನೀಡಿ ಎರಡು ದಿನ ಪ್ರಚಾರ ಮಾಡಿದ್ದೇವೆ” ಎಂದು ಶೋಭಾ ಕರಂದ್ಲಾಜೆ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

”ಮೇ 6 ಮತ್ತು 7 ರಂದು ನಗರದ ಒಟ್ಟು 28 ವಿಧಾನಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಲ್ಲಿ ರೋಡ್ ಶೋಗಳು ನಡೆಯಲಿವೆ” ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೂ ಮೋದಿ ಶೋದಿಂದ ತೊಂದರೆ

ಶನಿವಾರ ಹಾಗೂ ಭಾನುವಾರ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ ನಡೆಸುತ್ತಿದ್ದು ಇದರಿಂದಾಗಿ ನೀಟ್​ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ.

ಪ್ರಧಾನಿ ರೋಡ್​ ಶೋ ನಡೆಸುವ ಕಾರಣ ಟ್ರಾಫಿಕ್​ ಜಾಮ್​ ಉಂಟಾಗಿ ರಸ್ತೆಗಳನ್ನು ಬಂದ್​ ಮಾಡಲಾಗುತ್ತದೆ. ಹೀಗಾಗಿ ನಗರದ ವಿವಿಧ ಭಾಗಗಳಿಂದ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆ ಉಂಟಾಗುತ್ತದೆ.

ಇದಕ್ಕೆ ಸಂಬಂಧಪಟ್ಟಿರೋ ಅಧಿಕಾರಿಗಳು ಕೂಡಲೇ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದ್ದಾರೆ.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕನಿಷ್ಠ ಎರಡು ತಾಸು ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಾಗುತ್ತದೆ. ವಿಶೇಷ ಭದ್ರತಾ ವ್ಯವಸ್ಥೆ ಇರುವ ಪ್ರಧಾನಿ ಮೋದಿ ರೋಡ್ ಶೋ, ಪ್ರಚಾರ ಸಭೆ, ರ್‍ಯಾಲಿ ಇದೇ ಸಮಯದಲ್ಲಿ ನಡೆಯಲಿವೆ. ಈ ವೇಳೆ ಅವರು ಸಾಗುವ ಮಾರ್ಗಗಳನ್ನು ಸಾಮಾನ್ಯವಾಗಿ ಮೂರ್ನಾಲ್ಕು ಗಂಟೆ ಮೊದಲೇ ಬಂದ್ ಮಾಡಲಾಗುತ್ತದೆ. ಪರೀಕ್ಷೆ ಎದುರಿಸುವ ಸವಾಲನ್ನು ಒಡಲೊಳಗೆ ಇಟ್ಟುಕೊಂಡ ಮಕ್ಕಳು, ಈ ಅಡೆತಡೆಗಳನ್ನು ದಾಟಿ ಪರೀಕ್ಷಾ ಕೇಂದ್ರಗಳನ್ನು ಮುಟ್ಟುವುದಕ್ಕೆ ಕಷ್ಟ ಪಡಬೇಕಾಗುತ್ತದೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ರೋಡ್ ಶೋ ನಡೆಸಲಿದ್ದಾರೆ. ಈಗ ನಿಗದಿಯಾಗಿರುವಂತೆ, ಬ್ರಿಗೇಡ್ ರಸ್ತೆಯ ಯುದ್ಧ ಸ್ಮಾರಕದ (ಒಪೆರಾ ಹೌಸ್ ವೃತ್ತ) ಬಳಿಯಿಂದ ಅವರ ರೋಡ್ ಶೋ ಶುರುವಾಗಲಿದೆ. ಅದು ಮಲ್ಲೇಶ್ವರದ ಸರ್ಕಲ್ ಮಾರಮ್ಮ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. ಮೋದಿಯವರ ರೋಡ್ ಶೋ ಯಾವ್ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ ಎಂಬ ನಿಖರ ಮಾಹಿತಿಯನ್ನು ಪ್ರಧಾನಿ ಕಾರ್ಯಾಲಯ ಇನ್ನೂ ಬಿಡುಗಡೆ ಮಾಡಿಲ್ಲ.

10 ಗಂಟೆಗೆ ರೋಡ್ ಶೋ ಆರಂಭವಾದರೆ ಅದು ಸಾಗುವ ಮಾರ್ಗವನ್ನು ಕನಿಷ್ಠ ಎರಡು ಗಂಟೆ ಮೊದಲೇ ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ತನ್ನ ಕಣ್ಗಾವಲಿನಲ್ಲಿ ಇಡುತ್ತದೆ. ರೋಡ್ ಶೋಗೆ ಯಾವುದೇ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ, ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ. ರೋಡ್ ಶೋ ಸಾಗುವ ಮುಖ್ಯಮಾರ್ಗಕ್ಕೆ ಸಂಪರ್ಕಿಸುವ ಎಲ್ಲ ಉಪ ಹಾಗೂ ಕಿರು ಮಾರ್ಗಗಳಲ್ಲಿ ಬ್ಯಾರಿಕೇಡ್ ಹಾಕಿ, ನಿರ್ಬಂಧ ವಿಧಿಸಲಾಗುತ್ತದೆ.

”ನಿಗದಿತ ಪರೀಕ್ಷಾ ಕೇಂದ್ರ ತಲುಪಲು ತಾವು ನಿತ್ಯವೂ ಓಡಾಡುವ ದಾರಿಯಲ್ಲಿ ಹೋಗುವುದು ರೋಡ್ ಶೋನಿಂದಾಗಿ ಭಾನುವಾರ  ಕಷ್ಟವಾಗುವ ಸಂಭವ ಇದೆ. ಎರಡು ಗಂಟೆ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಇರಬೇಕಾದರೆ, ಅದಕ್ಕಿಂತ 2–3 ಗಂಟೆ ಮೊದಲು ಮಕ್ಕಳನ್ನು ಮನೆಯಿಂದ ಹೊರಡಿಸಬೇಕಾಗುತ್ತದೆ” ಎಂದು ಪೋಷಕರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಮೇ 10 ರಂದು ಕರ್ನಾಟಕದ ಮತಗಳು. ಮೇ 8 ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ಮೇ 13 ರಂದು ಮತಗಳ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...