HomeUncategorizedಮೋದಿ ರೋಡ್‌ ಶೋದಿಂದ ಬೆಂಗಳೂರು ನಿವಾಸಿಗಳಿಗೆ ತೊಂದರೆ: ವೇಳಾಪಟ್ಟಿಯಲ್ಲಿ ಬದಲಾವಣೆ

ಮೋದಿ ರೋಡ್‌ ಶೋದಿಂದ ಬೆಂಗಳೂರು ನಿವಾಸಿಗಳಿಗೆ ತೊಂದರೆ: ವೇಳಾಪಟ್ಟಿಯಲ್ಲಿ ಬದಲಾವಣೆ

- Advertisement -
- Advertisement -

ಪ್ರಧಾನಿ ಮೋದಿ ಅವರು ದಿನಪೂರ್ತಿ ರೋಡ್‌ಶೋ ನಡೆಸುವುದರಿಂದ ಬೆಂಗಳೂರು ನಿವಾಸಿಗಳು ಟ್ರಾಫಿಕ್ ತೊಂದರೆ ಅನುಭವಿಸುತ್ತಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಬಹಳ ಚರ್ಚೆ ನಡೆಯುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಶನಿವಾರ ನಡೆಯಬೇಕಿದ್ದ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರಚಾರ ಆರಂಭಿಸಿರುವ ಪ್ರಧಾನಿ ಮೋದಿ ಅವರು, ಕಳೆದ ಶನಿವಾರ ರೋಡ್‌ಶೋ ನಡೆಸಿದರು. ಈ ವೇಳೆ ಸಹಜವಾಗಯೇ ಭದ್ರತೆ ವಿಚಾರವಾಗಿ ಅಲ್ಲಲ್ಲಿ ಬ್ಯಾರಿಕೇಡ್ ಹಾಕುವುದು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಭಾರೀ ಟ್ರಾಫಿಕ್ ಸಮಸ್ಯೆ ಎದುರಿಸಿದರು. ಇದೀಗ ಮತ್ತೆ ನಾಳೆ(ಶನಿವಾರ) ರೋಡ್ ಶೋ ನಡೆಸಲು ವೇಳಾಪಟ್ಟಿ ಸಿದ್ದಪಡಿಸಲಾಗಿದೆ.

ಜನರಿಗೆ ಕಿರಿಕಿರಿ ಉಂಟಾಗುವುದರಿಂದ ಮೊದಲೇ ಎಚ್ಚೆತ್ತಿಕೊಂಡಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರು ಎಂಟು ಗಂಟೆಗಳ ರೋಡ್ ಶೋ ನಡೆಸುವ ಯೋಜನೆಯನ್ನು ಬಿಜೆಪಿ ಕೈಬಿಟ್ಟಿದೆ.

ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಮತ್ತು ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ರವರೆಗೆ ಎರಡು ದಿನಗಳ ಕಾಲ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಇದನ್ನೂ ಓದಿ: ತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

”ಪ್ರಧಾನಿ ಮೋದಿ ಶನಿವಾರ ಇಲ್ಲಿ 36.6 ಕಿಮೀ ರೋಡ್ ಶೋ ನಡೆಸಲಿದ್ದಾರೆ — ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ 10.1 ಕಿಮೀ ಮತ್ತು ಸಂಜೆ 4 ರಿಂದ ರಾತ್ರಿ 10 ರವರೆಗೆ 26.5 ಕಿಮೀ ದೂರವನ್ನು ಒಳಗೊಂಡಿದೆ ಎಂದು ಪಕ್ಷವು ಬುಧವಾರ ಹೇಳಿತ್ತು. ಆದರೆ, ಇಡೀ ದಿನ ರೋಡ್ ಶೋ ನಡೆಸಿದರೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅವರ ಭಾವನೆಗೆ ಗೌರವ ನೀಡಿ ಎರಡು ದಿನ ಪ್ರಚಾರ ಮಾಡಿದ್ದೇವೆ” ಎಂದು ಶೋಭಾ ಕರಂದ್ಲಾಜೆ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

”ಮೇ 6 ಮತ್ತು 7 ರಂದು ನಗರದ ಒಟ್ಟು 28 ವಿಧಾನಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಲ್ಲಿ ರೋಡ್ ಶೋಗಳು ನಡೆಯಲಿವೆ” ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೂ ಮೋದಿ ಶೋದಿಂದ ತೊಂದರೆ

ಶನಿವಾರ ಹಾಗೂ ಭಾನುವಾರ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್​ ಶೋ ನಡೆಸುತ್ತಿದ್ದು ಇದರಿಂದಾಗಿ ನೀಟ್​ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ.

ಪ್ರಧಾನಿ ರೋಡ್​ ಶೋ ನಡೆಸುವ ಕಾರಣ ಟ್ರಾಫಿಕ್​ ಜಾಮ್​ ಉಂಟಾಗಿ ರಸ್ತೆಗಳನ್ನು ಬಂದ್​ ಮಾಡಲಾಗುತ್ತದೆ. ಹೀಗಾಗಿ ನಗರದ ವಿವಿಧ ಭಾಗಗಳಿಂದ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆ ಉಂಟಾಗುತ್ತದೆ.

ಇದಕ್ಕೆ ಸಂಬಂಧಪಟ್ಟಿರೋ ಅಧಿಕಾರಿಗಳು ಕೂಡಲೇ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದ್ದಾರೆ.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕನಿಷ್ಠ ಎರಡು ತಾಸು ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಾಗುತ್ತದೆ. ವಿಶೇಷ ಭದ್ರತಾ ವ್ಯವಸ್ಥೆ ಇರುವ ಪ್ರಧಾನಿ ಮೋದಿ ರೋಡ್ ಶೋ, ಪ್ರಚಾರ ಸಭೆ, ರ್‍ಯಾಲಿ ಇದೇ ಸಮಯದಲ್ಲಿ ನಡೆಯಲಿವೆ. ಈ ವೇಳೆ ಅವರು ಸಾಗುವ ಮಾರ್ಗಗಳನ್ನು ಸಾಮಾನ್ಯವಾಗಿ ಮೂರ್ನಾಲ್ಕು ಗಂಟೆ ಮೊದಲೇ ಬಂದ್ ಮಾಡಲಾಗುತ್ತದೆ. ಪರೀಕ್ಷೆ ಎದುರಿಸುವ ಸವಾಲನ್ನು ಒಡಲೊಳಗೆ ಇಟ್ಟುಕೊಂಡ ಮಕ್ಕಳು, ಈ ಅಡೆತಡೆಗಳನ್ನು ದಾಟಿ ಪರೀಕ್ಷಾ ಕೇಂದ್ರಗಳನ್ನು ಮುಟ್ಟುವುದಕ್ಕೆ ಕಷ್ಟ ಪಡಬೇಕಾಗುತ್ತದೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ರೋಡ್ ಶೋ ನಡೆಸಲಿದ್ದಾರೆ. ಈಗ ನಿಗದಿಯಾಗಿರುವಂತೆ, ಬ್ರಿಗೇಡ್ ರಸ್ತೆಯ ಯುದ್ಧ ಸ್ಮಾರಕದ (ಒಪೆರಾ ಹೌಸ್ ವೃತ್ತ) ಬಳಿಯಿಂದ ಅವರ ರೋಡ್ ಶೋ ಶುರುವಾಗಲಿದೆ. ಅದು ಮಲ್ಲೇಶ್ವರದ ಸರ್ಕಲ್ ಮಾರಮ್ಮ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. ಮೋದಿಯವರ ರೋಡ್ ಶೋ ಯಾವ್ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ ಎಂಬ ನಿಖರ ಮಾಹಿತಿಯನ್ನು ಪ್ರಧಾನಿ ಕಾರ್ಯಾಲಯ ಇನ್ನೂ ಬಿಡುಗಡೆ ಮಾಡಿಲ್ಲ.

10 ಗಂಟೆಗೆ ರೋಡ್ ಶೋ ಆರಂಭವಾದರೆ ಅದು ಸಾಗುವ ಮಾರ್ಗವನ್ನು ಕನಿಷ್ಠ ಎರಡು ಗಂಟೆ ಮೊದಲೇ ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ತನ್ನ ಕಣ್ಗಾವಲಿನಲ್ಲಿ ಇಡುತ್ತದೆ. ರೋಡ್ ಶೋಗೆ ಯಾವುದೇ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ, ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ. ರೋಡ್ ಶೋ ಸಾಗುವ ಮುಖ್ಯಮಾರ್ಗಕ್ಕೆ ಸಂಪರ್ಕಿಸುವ ಎಲ್ಲ ಉಪ ಹಾಗೂ ಕಿರು ಮಾರ್ಗಗಳಲ್ಲಿ ಬ್ಯಾರಿಕೇಡ್ ಹಾಕಿ, ನಿರ್ಬಂಧ ವಿಧಿಸಲಾಗುತ್ತದೆ.

”ನಿಗದಿತ ಪರೀಕ್ಷಾ ಕೇಂದ್ರ ತಲುಪಲು ತಾವು ನಿತ್ಯವೂ ಓಡಾಡುವ ದಾರಿಯಲ್ಲಿ ಹೋಗುವುದು ರೋಡ್ ಶೋನಿಂದಾಗಿ ಭಾನುವಾರ  ಕಷ್ಟವಾಗುವ ಸಂಭವ ಇದೆ. ಎರಡು ಗಂಟೆ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಇರಬೇಕಾದರೆ, ಅದಕ್ಕಿಂತ 2–3 ಗಂಟೆ ಮೊದಲು ಮಕ್ಕಳನ್ನು ಮನೆಯಿಂದ ಹೊರಡಿಸಬೇಕಾಗುತ್ತದೆ” ಎಂದು ಪೋಷಕರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಮೇ 10 ರಂದು ಕರ್ನಾಟಕದ ಮತಗಳು. ಮೇ 8 ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ಮೇ 13 ರಂದು ಮತಗಳ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...