Homeಮುಖಪುಟ'ರೈತರ ನರಮೇಧ ನಡೆಸುತ್ತಿರುವ ಮೋದಿ' - ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ- ಟ್ವಿಟರ್ ಬಳಕೆದಾರ ಧೀರಜ್

- Advertisement -
- Advertisement -

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದರು.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆ. ಇದು ಸರ್ಕಾರವೇ ಪಿತೂರಿ ನಡೆಸಿ ಕಳುಹಿಸಿರುವ ಗುಂಪು ಎಂದು ಹಲವರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ಇದರ ಭಾಗವಾಗಿ ಟ್ವಿಟರ್‌ನಲ್ಲಿ #ModiPlanningFarmerGenocide (ರೈತರ ನರಮೇಧ ನಡೆಸಲು ಯೋಜಿಸುತ್ತಿರುವ ಮೋದಿ) ಎಂದು ಆಕ್ರೋಶ ಭುಗಿಲೆದ್ದಿದೆ. ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು.

ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ನಡೆಸಿದ ಹಲ್ಲೆಯಿಂದ ಗಾಯಗೊಂಡವರ ಚಿತ್ರವನ್ನು ಹಂಚಿಕೊಂಡಿರುವ ಧೀರಜ್, “ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ” ಎಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ದೆಹಲಿ ಪೊಲೀಸರು ರೈತರ ಟ್ರ್ಯಾಕ್ಟರ್ ಮೇಲಿರುವ ರಾಷ್ಟ್ರಧ್ವಜವನ್ನು ಕಿತ್ತುಹಾಕುತ್ತಿರುವ ವೀಡಿಯೋವನ್ನು ಹಂಚಿಕೊಂಡಿರುವ ಕುಲ್ವೀರ್ ತಿವಾನಾ, “ದೆಹಲಿ ಪೊಲೀಸರು ರಾಷ್ಟ್ರಧ್ವಜವನ್ನು ಏನು ಮಾಡುತ್ತಿದ್ದಾರೆ? ರೈತರನ್ನು ದೂಷಿಸಲಾಗಿತ್ತಿದೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಮೇಲೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿರುವ ರೈತರ ವೀಡಿಯೋವನ್ನು ಹಂಚಿಕೊಂಡಿರುವ ದವಿಂದರ್ ಸಿಂಗ್, “ಪೆಟ್ರೋಲ್ ಬಾಂಬ್‌ಗಳಿಗೆ, ಅಶ್ರುವಾಯು ದಾಳಿಗೆ ಮತ್ತು ಮತ್ತು ಕಲ್ಲೇಟಿಗೆ ಸಾಕ್ಷಿಯಾದ ರೈತರು” ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ಸಿಎಎ-ಎನ್‌ಆರ್‌ಸಿ ಪ್ರತಿಭಟನಾಕಾರರ ವಿರುದ್ಧ ಬಂದೂಕು ಹಿಡಿದಿರುವ ಚಿತ್ರ ಮತ್ತು ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ಪ್ರತಿಭಟನಾ ನಿರತ ರೈತರ ಮೇಲೆ ಕಲ್ಲು ಎಸೆಯುತ್ತಿರುವ ಚಿತ್ರವನ್ನು ಹಂಚಿಕೊಂಡಿರುವ ಡಿ ಎನ್‌ ಯಾದವ್, “ಎರಡೂ ಚಿತ್ರಗಳಲ್ಲಿಯೂ ನೀವು ದೆಹಲಿ ಪೊಲೀಸರನ್ನು ನೋಡಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ರೈತರ ಮೇಲಿನ ಈ ಹಲ್ಲೆಯು ಸರ್ಕಾರಿ ಪ್ರಾಯೋಜಿತ ಎಂಬುದು ಇಂತಹ ಚಿತ್ರಗಳಿಂದ ತಿಳಿದುಬರುತ್ತದೆ ಎಂದು ಟ್ವಿಟ್ಟಿಗರು ಆರೋಪಿಸಿದ್ದಾರೆ. ಈ ಚಿತ್ರದಲ್ಲಿ ವ್ಯಕ್ತಿಯೊಬ್ಬ ರೈತರ ಕಡೆ ಕಲ್ಲು ಬೀಸುತ್ತಿದ್ದಾನೆ. ಆದರೆ ಅವನ ಹಿಂದೆಯೇ ಪೊಲೀಸರು ಇದನ್ನು ನೋಡುತ್ತಾ ನಿಂತಿದ್ದಾರೆ.

ರೈತರ ಉತ್ಸಾಹದ ಮಾತುಗಳನ್ನು ಉಲ್ಲೇಖಿಸುವ ವೀಡಿಯೋವನ್ನು ಹಂಚಿಕೊಂಡಿರುವ ಮಂದೀಪ್ ಜಸ್ಸಿ, “ನಮ್ಮ  ಹಿರಿಯರ ಉತ್ಸಾಹ ಮತ್ತು ಸ್ಪೂರ್ತಿಯನ್ನು ನೋಡಿ” ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರನ್ನು ಬೆಂಬಲಿಸಿ ದೇಶದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದುಷ್ಕರ್ಮಿಗಳಿಂದ ಕಲ್ಲೆಸೆತ, ರೈತರ ಟೆಂಟುಗಳ ನಾಶ: ಸಿಂಘು ಗಡಿಯಲ್ಲಿ ಪ್ರತ್ಯುತ್ತರ ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...