Homeಮುಖಪುಟ'ರೈತರ ನರಮೇಧ ನಡೆಸುತ್ತಿರುವ ಮೋದಿ' - ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ- ಟ್ವಿಟರ್ ಬಳಕೆದಾರ ಧೀರಜ್

- Advertisement -
- Advertisement -

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದರು.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆ. ಇದು ಸರ್ಕಾರವೇ ಪಿತೂರಿ ನಡೆಸಿ ಕಳುಹಿಸಿರುವ ಗುಂಪು ಎಂದು ಹಲವರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ಇದರ ಭಾಗವಾಗಿ ಟ್ವಿಟರ್‌ನಲ್ಲಿ #ModiPlanningFarmerGenocide (ರೈತರ ನರಮೇಧ ನಡೆಸಲು ಯೋಜಿಸುತ್ತಿರುವ ಮೋದಿ) ಎಂದು ಆಕ್ರೋಶ ಭುಗಿಲೆದ್ದಿದೆ. ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು.

ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ನಡೆಸಿದ ಹಲ್ಲೆಯಿಂದ ಗಾಯಗೊಂಡವರ ಚಿತ್ರವನ್ನು ಹಂಚಿಕೊಂಡಿರುವ ಧೀರಜ್, “ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ” ಎಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ದೆಹಲಿ ಪೊಲೀಸರು ರೈತರ ಟ್ರ್ಯಾಕ್ಟರ್ ಮೇಲಿರುವ ರಾಷ್ಟ್ರಧ್ವಜವನ್ನು ಕಿತ್ತುಹಾಕುತ್ತಿರುವ ವೀಡಿಯೋವನ್ನು ಹಂಚಿಕೊಂಡಿರುವ ಕುಲ್ವೀರ್ ತಿವಾನಾ, “ದೆಹಲಿ ಪೊಲೀಸರು ರಾಷ್ಟ್ರಧ್ವಜವನ್ನು ಏನು ಮಾಡುತ್ತಿದ್ದಾರೆ? ರೈತರನ್ನು ದೂಷಿಸಲಾಗಿತ್ತಿದೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಮೇಲೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿರುವ ರೈತರ ವೀಡಿಯೋವನ್ನು ಹಂಚಿಕೊಂಡಿರುವ ದವಿಂದರ್ ಸಿಂಗ್, “ಪೆಟ್ರೋಲ್ ಬಾಂಬ್‌ಗಳಿಗೆ, ಅಶ್ರುವಾಯು ದಾಳಿಗೆ ಮತ್ತು ಮತ್ತು ಕಲ್ಲೇಟಿಗೆ ಸಾಕ್ಷಿಯಾದ ರೈತರು” ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ಸಿಎಎ-ಎನ್‌ಆರ್‌ಸಿ ಪ್ರತಿಭಟನಾಕಾರರ ವಿರುದ್ಧ ಬಂದೂಕು ಹಿಡಿದಿರುವ ಚಿತ್ರ ಮತ್ತು ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ಪ್ರತಿಭಟನಾ ನಿರತ ರೈತರ ಮೇಲೆ ಕಲ್ಲು ಎಸೆಯುತ್ತಿರುವ ಚಿತ್ರವನ್ನು ಹಂಚಿಕೊಂಡಿರುವ ಡಿ ಎನ್‌ ಯಾದವ್, “ಎರಡೂ ಚಿತ್ರಗಳಲ್ಲಿಯೂ ನೀವು ದೆಹಲಿ ಪೊಲೀಸರನ್ನು ನೋಡಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ರೈತರ ಮೇಲಿನ ಈ ಹಲ್ಲೆಯು ಸರ್ಕಾರಿ ಪ್ರಾಯೋಜಿತ ಎಂಬುದು ಇಂತಹ ಚಿತ್ರಗಳಿಂದ ತಿಳಿದುಬರುತ್ತದೆ ಎಂದು ಟ್ವಿಟ್ಟಿಗರು ಆರೋಪಿಸಿದ್ದಾರೆ. ಈ ಚಿತ್ರದಲ್ಲಿ ವ್ಯಕ್ತಿಯೊಬ್ಬ ರೈತರ ಕಡೆ ಕಲ್ಲು ಬೀಸುತ್ತಿದ್ದಾನೆ. ಆದರೆ ಅವನ ಹಿಂದೆಯೇ ಪೊಲೀಸರು ಇದನ್ನು ನೋಡುತ್ತಾ ನಿಂತಿದ್ದಾರೆ.

ರೈತರ ಉತ್ಸಾಹದ ಮಾತುಗಳನ್ನು ಉಲ್ಲೇಖಿಸುವ ವೀಡಿಯೋವನ್ನು ಹಂಚಿಕೊಂಡಿರುವ ಮಂದೀಪ್ ಜಸ್ಸಿ, “ನಮ್ಮ  ಹಿರಿಯರ ಉತ್ಸಾಹ ಮತ್ತು ಸ್ಪೂರ್ತಿಯನ್ನು ನೋಡಿ” ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರನ್ನು ಬೆಂಬಲಿಸಿ ದೇಶದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದುಷ್ಕರ್ಮಿಗಳಿಂದ ಕಲ್ಲೆಸೆತ, ರೈತರ ಟೆಂಟುಗಳ ನಾಶ: ಸಿಂಘು ಗಡಿಯಲ್ಲಿ ಪ್ರತ್ಯುತ್ತರ ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...