Homeಮುಖಪುಟ'ರೈತರ ನರಮೇಧ ನಡೆಸುತ್ತಿರುವ ಮೋದಿ' - ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ- ಟ್ವಿಟರ್ ಬಳಕೆದಾರ ಧೀರಜ್

- Advertisement -
- Advertisement -

ಕಳೆದ 2 ತಿಂಗಳಿನಿಂದ ಶಾಂತಿಯುತವಾಗಿ ನಡೆದುಕೊಂಡು ಬಂದ ರೈತರ ಪ್ರತಿಭಟನೆ ಈಗ ಹಿಂಸಾತ್ಮಕ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಜನವರಿ 26 ರಂದು ಲಕ್ಷಾಂತರ ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ಪೆರೇಡ್ ನಡೆಸಿದ್ದರು. ಈ ವೇಳೆ ಪ್ರಚೋದಿತ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧಾರ್ಮಿಕ ಧ್ವಜ ಹಾರಿಸಿತ್ತು. ಇದರ ಕುರಿತು ದೇಶದಾದ್ಯಂತ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆದಿತ್ತು. ಇದರ ಬೆನ್ನಲ್ಲೇ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿರುವ ರೈತರು ಸ್ಥಳ ಖಾಲಿ ಮಾಡಬೇಕು ಎಂದು ಆದೇಶಿಸಲಾಗಿತ್ತು.

ಮರುದಿನ ರಾತ್ರಿ ರೈತರ ಮೇಲೆ ಪೊಲೀಸರು ಹಲ್ಲೆ ನಡೆಸಲು ಯೋಜಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿತ್ತು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ರಾತ್ರಿ ಭಾವನಾತ್ಮಕ ಭಾಷಣದ ನಂತರ ಶುಕ್ರವಾರ ಕಿಸಾನ್ ಮಹಾಪಂಚಾಯತ್‌ಗೆ 10 ಸಾವಿರಕ್ಕೂ ಹೆಚ್ಚು ರೈತರು ಮುಜಪ್ಪರ್‌ನಗರದಿಂದ ಗಾಜಿಪುರ ಗಡಿಗೆ ಬಂದರು.

ಇದರ ಬೆನ್ನಲ್ಲೇ ಸಿಂಘು ಗಡಿಯಲ್ಲಿ ಕೆಲವು ದುಷ್ಕರ್ಮಿಗಳ ಆಯುಧದಾರಿ ಗುಂಪೊಂದು ರೈತರ ಟೆಂಟುಗಳಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿತ್ತು. ಇಲ್ಲಿ ಕಲ್ಲು ತೂರಾಟ ಸೇರಿದಂತೆ ರೈತರು, ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆದಿತ್ತು. ಆದರೆ ದುಷ್ಕರ್ಮಿಗಳು ಗುಂಪು ಬ್ಯಾರಿಕೇಡ್ ದಾಟಿ ರೈತರ ಟೆಂಟುಗಳಿಗೆ ನುಗ್ಗುವ ತನಕ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಆರೋಪಿಸಲಾಗಿದೆ. ಇದು ಸರ್ಕಾರವೇ ಪಿತೂರಿ ನಡೆಸಿ ಕಳುಹಿಸಿರುವ ಗುಂಪು ಎಂದು ಹಲವರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ಇದರ ಭಾಗವಾಗಿ ಟ್ವಿಟರ್‌ನಲ್ಲಿ #ModiPlanningFarmerGenocide (ರೈತರ ನರಮೇಧ ನಡೆಸಲು ಯೋಜಿಸುತ್ತಿರುವ ಮೋದಿ) ಎಂದು ಆಕ್ರೋಶ ಭುಗಿಲೆದ್ದಿದೆ. ಈ ವರದಿ ಬರೆಯುವ ವೇಳೆಗೆ ಈ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 1.5 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು.

ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ನಡೆಸಿದ ಹಲ್ಲೆಯಿಂದ ಗಾಯಗೊಂಡವರ ಚಿತ್ರವನ್ನು ಹಂಚಿಕೊಂಡಿರುವ ಧೀರಜ್, “ನೋವು ಯಾವಾಗಲೂ ಕಣ್ಣೀರಿನಲ್ಲಿ ಮಾತ್ರ ಇರುವುದಿಲ್ಲ. ಕೆಲವೊಮ್ಮೆ ನಗುವಿನಲ್ಲೂ ಇರುತ್ತದೆ” ಎಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ದೆಹಲಿ ಪೊಲೀಸರು ರೈತರ ಟ್ರ್ಯಾಕ್ಟರ್ ಮೇಲಿರುವ ರಾಷ್ಟ್ರಧ್ವಜವನ್ನು ಕಿತ್ತುಹಾಕುತ್ತಿರುವ ವೀಡಿಯೋವನ್ನು ಹಂಚಿಕೊಂಡಿರುವ ಕುಲ್ವೀರ್ ತಿವಾನಾ, “ದೆಹಲಿ ಪೊಲೀಸರು ರಾಷ್ಟ್ರಧ್ವಜವನ್ನು ಏನು ಮಾಡುತ್ತಿದ್ದಾರೆ? ರೈತರನ್ನು ದೂಷಿಸಲಾಗಿತ್ತಿದೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಮೇಲೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿರುವ ರೈತರ ವೀಡಿಯೋವನ್ನು ಹಂಚಿಕೊಂಡಿರುವ ದವಿಂದರ್ ಸಿಂಗ್, “ಪೆಟ್ರೋಲ್ ಬಾಂಬ್‌ಗಳಿಗೆ, ಅಶ್ರುವಾಯು ದಾಳಿಗೆ ಮತ್ತು ಮತ್ತು ಕಲ್ಲೇಟಿಗೆ ಸಾಕ್ಷಿಯಾದ ರೈತರು” ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ಸಿಎಎ-ಎನ್‌ಆರ್‌ಸಿ ಪ್ರತಿಭಟನಾಕಾರರ ವಿರುದ್ಧ ಬಂದೂಕು ಹಿಡಿದಿರುವ ಚಿತ್ರ ಮತ್ತು ಶುಕ್ರವಾರ ಸಿಂಘು ಗಡಿಯಲ್ಲಿ ದುಷ್ಕರ್ಮಿಗಳ ಗುಂಪು ಪ್ರತಿಭಟನಾ ನಿರತ ರೈತರ ಮೇಲೆ ಕಲ್ಲು ಎಸೆಯುತ್ತಿರುವ ಚಿತ್ರವನ್ನು ಹಂಚಿಕೊಂಡಿರುವ ಡಿ ಎನ್‌ ಯಾದವ್, “ಎರಡೂ ಚಿತ್ರಗಳಲ್ಲಿಯೂ ನೀವು ದೆಹಲಿ ಪೊಲೀಸರನ್ನು ನೋಡಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

ರೈತರ ಮೇಲಿನ ಈ ಹಲ್ಲೆಯು ಸರ್ಕಾರಿ ಪ್ರಾಯೋಜಿತ ಎಂಬುದು ಇಂತಹ ಚಿತ್ರಗಳಿಂದ ತಿಳಿದುಬರುತ್ತದೆ ಎಂದು ಟ್ವಿಟ್ಟಿಗರು ಆರೋಪಿಸಿದ್ದಾರೆ. ಈ ಚಿತ್ರದಲ್ಲಿ ವ್ಯಕ್ತಿಯೊಬ್ಬ ರೈತರ ಕಡೆ ಕಲ್ಲು ಬೀಸುತ್ತಿದ್ದಾನೆ. ಆದರೆ ಅವನ ಹಿಂದೆಯೇ ಪೊಲೀಸರು ಇದನ್ನು ನೋಡುತ್ತಾ ನಿಂತಿದ್ದಾರೆ.

ರೈತರ ಉತ್ಸಾಹದ ಮಾತುಗಳನ್ನು ಉಲ್ಲೇಖಿಸುವ ವೀಡಿಯೋವನ್ನು ಹಂಚಿಕೊಂಡಿರುವ ಮಂದೀಪ್ ಜಸ್ಸಿ, “ನಮ್ಮ  ಹಿರಿಯರ ಉತ್ಸಾಹ ಮತ್ತು ಸ್ಪೂರ್ತಿಯನ್ನು ನೋಡಿ” ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರನ್ನು ಬೆಂಬಲಿಸಿ ದೇಶದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದುಷ್ಕರ್ಮಿಗಳಿಂದ ಕಲ್ಲೆಸೆತ, ರೈತರ ಟೆಂಟುಗಳ ನಾಶ: ಸಿಂಘು ಗಡಿಯಲ್ಲಿ ಪ್ರತ್ಯುತ್ತರ ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....