Homeಮುಖಪುಟಹುಲಿ ಕಾಣಿಸದಿದ್ದಕ್ಕೆ ಭದ್ರತಾ ಸಿಬ್ಬಂದಿ ಮೇಲೆ ರೇಗಿದ ಮೋದಿ; ಸಫಾರಿ ಚಾಲಕನ ವಿರುದ್ಧ ಕ್ರಮಕ್ಕೆ ಬಿಜೆಪಿ...

ಹುಲಿ ಕಾಣಿಸದಿದ್ದಕ್ಕೆ ಭದ್ರತಾ ಸಿಬ್ಬಂದಿ ಮೇಲೆ ರೇಗಿದ ಮೋದಿ; ಸಫಾರಿ ಚಾಲಕನ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರ ಒತ್ತಾಯ

- Advertisement -
- Advertisement -

ಇತ್ತಿಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದರು. ಈ ವೇಳೆ ಅವರಿಗೆ ಹುಲಿಗಳೇ ಕಾಣದಿರುವುದಕ್ಕೆ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಆತನ ವಾಹನದ ನೋಂದಣಿ ರದ್ದುಪಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಬಿಜೆಪಿಯ ಕೆಲವು ಮುಖಂಡರು ಒತ್ತಡ ಹೇರುತ್ತಿದ್ದಾರೆ. ಆದರೆ ಪ್ರಧಾನಿ ಮತ್ತು ಅರಣ್ಯ ಅಧಿಕಾರಿಗಳು ಭದ್ರತಾ ತಂಡಗಳನ್ನು ದೂಷಿಸುತ್ತಿದ್ದಾರೆ.

ಪ್ರಧಾನಿ ಮೋದಿ ಅವರು 22 ಕಿಲೋಮೀಟರ್ ಸಫಾರಿ ನಡೆಸಿದರೂ ಒಂದೇ ಒಂದು ಹುಲಿ ಕೂಡ ಕಣ್ಣಿಗೆ ಬೀಳದಿರುವುದಕ್ಕೆ, ಸಫಾರಿ ವೇಳೆ ಚಾಲನೆ ಮಾಡಿದ 29 ವರ್ಷದ ಮಧುಸೂಧನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿರಿಯ ಅಧಿಕಾರಿಗಳಿಗೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಹುಲಿಗಳು ಕಾಣಿಸಿಕೊಳ್ಳುವ ಕಡೆಗೆ ಸಫಾರಿ ಮಾರ್ಗವನ್ನು ಆಯ್ಕೆ ಮಾಡಲಾಗಿದೆ ಆದರೆ ಮೋದಿ ಹೋದಾಗ ಕಾಣಲಿಲ್ಲ. ”ಚಾಲಕ ಮಾರ್ಗವನ್ನು ಬದಲಾಯಿಸಬಹುದಿತ್ತು, ಆದರೆ ಅದು ಮಾಡಲಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ‘ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!’: ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

ಆದಾಗ್ಯೂ, ಮುಖ್ಯ ಕಚೇರಿ ಮತ್ತು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಹಿರಿಯ ಅಧಿಕಾರಿಗಳು ”ಮಧುಸೂಧನ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಅವರು ತಮ್ಮ ಕೆಲಸವನ್ನು ಮಾಡಿದರು. ಭದ್ರತಾ ತಂಡ ಅಂತಿಮಗೊಳಿಸಿದ ಮಾರ್ಗದಲ್ಲಿ ಅವರು ಪ್ರಧಾನಿಯನ್ನು ಕರೆದೊಯ್ದರು. ವಾಸ್ತವವಾಗಿ, ಇದಕ್ಕೆ ನೇರ ಕಾರಣ ಮೋದಿ ಅವರ ಭದ್ರತಾ ತಂಡ ಹಾಗಾಗಿ ಅವರನ್ನು ದೂಷಿಸಬೇಕು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯ ನಿರ್ದೇಶಕ ರಮೇಶ್‌ಕುಮಾರ್‌ ಮಾತನಾಡಿ, ”ಮಧುಸೂಧನ್ ಅವರ ವಾಹನದ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂಬ ಹೇಳಿಕೆ ಸುಳ್ಳು. ಚಲಾವಣೆಯಲ್ಲಿರುವ ವಾಹನ ಸಂಖ್ಯೆ ಹಳೆಯದಾಗಿದ್ದು, ಅದರ ಅವಧಿ ಈಗಾಗಲೇ ಮುಗಿದಿದೆ. ವಾಹನ ಈಗ ಬಳಕೆಯಲ್ಲಿಲ್ಲ. ಮಧುಸೂಧನ್ ಅವರದ್ದು ಯಾವದೇ ತಪ್ಪಿಲ್ಲ. ಹೆಚ್ಚಿನ ಭದ್ರತೆಯ ಹೆಸರಿನಲ್ಲಿ, ವಾಹನಗಳು ಪದೇ ಪದೇ ಆಯ್ದ ಮಾರ್ಗದಲ್ಲಿ ಹೋಗುತ್ತಿದ್ದರಿಂದ ಅಲ್ಲಿ ಅವರಿಗೆ ಹುಲಿಗಳು ಕಾಣಿಸಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಹುಲಿಗಳು ಕಾಣಿಸದಿರುವದಕ್ಕೆ ಪ್ರಧಾನಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಭದ್ರತೆ ವಿಚಾರವಾಗಿ ಆ ಮಾರ್ಗದಲ್ಲಿ ಹೆಚ್ಚು ವಾಹನಗಳು ಓಡಾಡಿದ್ದರಿಂದ ಹುಲಿಗಳು ಕಾಣಿಸಿಕೊಂಡಿಲ್ಲ ಎಂದು ಅವರಿಗೆ ವಿವರಿಸಿದ್ದೇವೆ. ಈ ವಿಚಾರವಾಗಿ ಅವರು ಎಸ್‌ಪಿಜಿಯನ್ನು ಗದರಿಸಿದ್ದರು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...