Homeಮುಖಪುಟರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ.

- Advertisement -
- Advertisement -

ದೇಶವು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರು ಪ್ರಜಾಪ್ರಭುತ್ವವನ್ನು ನಾಶಪಡಿಡುತ್ತಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿರುವ ಹಿನ್ನೆಲೆಯಲ್ಲಿ, ನಿಮ್ಮ ಎರಡನೇ ಅಭ್ಯರ್ಥಿಯನ್ನು ಗೆಲ್ಲಿಸಲು ನಿಮ್ಮ ಬಳಿ ಸಾಕಷ್ಟು ಸಂಖ್ಯೆಗಳಿವೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

“ವಿಶ್ವವು ವೈರಸ್ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿರುವಾಗಲೂ, ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು  ಬಿಜೆಪಿ ಉರುಳಿಸಿದೆ. ಈ ಸಮಯದಲ್ಲಿ ಯಾರು ನೋವು ಕೊಡುತ್ತಿದ್ದಾರೆ ಮತ್ತು ಯಾರು ಔಷಧಿ ವಿತರಿಸುತ್ತಿದ್ದಾರೆ ಎಂಬುದನ್ನು ನಾವು ನಿರ್ಧರಿಸಬೇಕಾಗಿದೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಪಕ್ಷವು “ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನಗಳ” ವಿರುದ್ಧ ದೂರು ನೀಡಿದೆ. ಕಾಂಗ್ರೆಸ್‌ ಮತ್ತು ಅದನ್ನು ಬೆಂಬಲಿಸುವ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು  ಆರೋಪಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ಆಳುತ್ತಿದ್ದ ಎರಡು ದೊಡ್ಡ ರಾಜ್ಯಗಳಾದ ಕರ್ನಾಟಕ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಆಪರೇಷನ್‌ ಕಮಲ ನಡೆಸಿ, ಶಾಸಕರನ್ನು ಕೊಂಡುಕೊಂಡು ಸರ್ಕಾರಗಳನ್ನು ಉರುಳಿಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ನಡುವೆ ಜೂನ್ 19 ರಂದು ನಡೆಯುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯ ಬಗ್ಗೆ ರಾಜಸ್ಥಾನದಲ್ಲಿ ಕೋಲಾಹಲ ಉತ್ತುಂಗಕ್ಕೇರಿದೆ. ಎರಡು ಸ್ಥಾನಗಳನ್ನು ಗೆಲ್ಲಲು ಪಕ್ಷಕ್ಕೆ ಸಾಕಷ್ಟು ಸಂಖ್ಯೆಯಿದೆ ಮತ್ತು ಯಾರೂ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ರಾಜಸ್ಥಾನ್ ಕಾಂಗ್ರೆಸ್ ಮುಖ್ಯಸ್ಥ ಸಚಿನ್ ಪೈಲಟ್ ಹೇಳಿದ್ದಾರೆ.

“ರಾಜ್ಯಸಭೆಯ ಎರಡೂ ಸ್ಥಾನಗಳನ್ನು ಗೆಲ್ಲಲು ನಮ್ಮಲ್ಲಿ ಸಂಖ್ಯೆಗಳಿವೆ. ನಮಗೆ ಸ್ವತಂತ್ರ ಶಾಸಕರ ಬೆಂಬಲವಿದೆ. ಊಹಾಪೋಹಗಳು ಹರಡಿ ಜನರನ್ನು ದಾರಿ ತಪ್ಪಿಸಬೇಡಿ. ಎಲ್ಲಾ ಶಾಸಕರು ನಮ್ಮೊಂದಿಗಿದ್ದಾರೆ” ಎಂದು ಸಚಿನ್‌ ಪೈಲಟ್ ತಮ್ಮ ಪಕ್ಷವು ಬಿಕ್ಕಟ್ಟಿನಲ್ಲಿದೆ ಎಂಬುದನ್ನು ನಿರಾಕರಿಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸಲಾಗುತ್ತಿದೆ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ನಾವು ಕಳೆದ ಮೂರು ತಿಂಗಳುಗಳಿಂದ ಭೇಟಿಯಾಗದ ಕಾರಣ ಈಗ ಹೋಟೆಲ್‌ಗಳಲ್ಲಿ ಒಟ್ಟಿಗೆ ಸೇರಿದ್ದೇವೆ” ಎಂದಿದ್ದಾರೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು 107 ಶಾಸಕರನ್ನು ಹೊಂದಿದೆ. ಅದರಲ್ಲಿ ಆರು ಜನ ಕಳೆದ ವರ್ಷ ಬಿಎಸ್‌ಪಿ ತ್ಯಜಿಸಿ ಕಾಂಗ್ರೆಸ್‌ ಸೇರಿದ್ದಾರೆ. 13 ಸ್ವತಂತ್ರ ಶಾಸಕರಲ್ಲಿ 12 ಜನರ ಬೆಂಬಲವೂ ಪಕ್ಷಕ್ಕೆ ಇದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಬಿಜೆಪಿಯು 72 ಶಾಸಕರು ಮತ್ತು ಸ್ವಂತತ್ರ ಶಾಸಕರು ಮತ್ತು ಪಾಲುದಾರ ಪಕ್ಷಗಳಿಂದ ನಾಲ್ವರ ಬೆಂಬಲ ಪಡೆದಿದೆ. ರಾಜ್ಯಸಭಾ ಸ್ಥಾನವನ್ನು ಗೆಲ್ಲಲು, ಪ್ರತಿ ಅಭ್ಯರ್ಥಿಗೆ 51 ಮೊದಲ ಆದ್ಯತೆಯ ಮತಗಳು ಬೇಕಾಗುತ್ತವೆ.

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ. ಹಾಗಾಗಿ “ನೀವು ಎರಡನೇ ಅಭ್ಯರ್ಥಿಗೆ ಸಂಖ್ಯೆಗಳನ್ನು ಹೊಂದಿದ್ದೀರಾ? ಇದು ನಿಮ್ಮ ದುಷ್ಟ ವಿನ್ಯಾಸಗಳನ್ನು ಬಹಿರಂಗಪಡಿಸುತ್ತದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...