Homeಮುಖಪುಟರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ.

- Advertisement -
- Advertisement -

ದೇಶವು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರು ಪ್ರಜಾಪ್ರಭುತ್ವವನ್ನು ನಾಶಪಡಿಡುತ್ತಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿರುವ ಹಿನ್ನೆಲೆಯಲ್ಲಿ, ನಿಮ್ಮ ಎರಡನೇ ಅಭ್ಯರ್ಥಿಯನ್ನು ಗೆಲ್ಲಿಸಲು ನಿಮ್ಮ ಬಳಿ ಸಾಕಷ್ಟು ಸಂಖ್ಯೆಗಳಿವೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

“ವಿಶ್ವವು ವೈರಸ್ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿರುವಾಗಲೂ, ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು  ಬಿಜೆಪಿ ಉರುಳಿಸಿದೆ. ಈ ಸಮಯದಲ್ಲಿ ಯಾರು ನೋವು ಕೊಡುತ್ತಿದ್ದಾರೆ ಮತ್ತು ಯಾರು ಔಷಧಿ ವಿತರಿಸುತ್ತಿದ್ದಾರೆ ಎಂಬುದನ್ನು ನಾವು ನಿರ್ಧರಿಸಬೇಕಾಗಿದೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಪಕ್ಷವು “ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನಗಳ” ವಿರುದ್ಧ ದೂರು ನೀಡಿದೆ. ಕಾಂಗ್ರೆಸ್‌ ಮತ್ತು ಅದನ್ನು ಬೆಂಬಲಿಸುವ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು  ಆರೋಪಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ಆಳುತ್ತಿದ್ದ ಎರಡು ದೊಡ್ಡ ರಾಜ್ಯಗಳಾದ ಕರ್ನಾಟಕ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಆಪರೇಷನ್‌ ಕಮಲ ನಡೆಸಿ, ಶಾಸಕರನ್ನು ಕೊಂಡುಕೊಂಡು ಸರ್ಕಾರಗಳನ್ನು ಉರುಳಿಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ನಡುವೆ ಜೂನ್ 19 ರಂದು ನಡೆಯುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯ ಬಗ್ಗೆ ರಾಜಸ್ಥಾನದಲ್ಲಿ ಕೋಲಾಹಲ ಉತ್ತುಂಗಕ್ಕೇರಿದೆ. ಎರಡು ಸ್ಥಾನಗಳನ್ನು ಗೆಲ್ಲಲು ಪಕ್ಷಕ್ಕೆ ಸಾಕಷ್ಟು ಸಂಖ್ಯೆಯಿದೆ ಮತ್ತು ಯಾರೂ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ರಾಜಸ್ಥಾನ್ ಕಾಂಗ್ರೆಸ್ ಮುಖ್ಯಸ್ಥ ಸಚಿನ್ ಪೈಲಟ್ ಹೇಳಿದ್ದಾರೆ.

“ರಾಜ್ಯಸಭೆಯ ಎರಡೂ ಸ್ಥಾನಗಳನ್ನು ಗೆಲ್ಲಲು ನಮ್ಮಲ್ಲಿ ಸಂಖ್ಯೆಗಳಿವೆ. ನಮಗೆ ಸ್ವತಂತ್ರ ಶಾಸಕರ ಬೆಂಬಲವಿದೆ. ಊಹಾಪೋಹಗಳು ಹರಡಿ ಜನರನ್ನು ದಾರಿ ತಪ್ಪಿಸಬೇಡಿ. ಎಲ್ಲಾ ಶಾಸಕರು ನಮ್ಮೊಂದಿಗಿದ್ದಾರೆ” ಎಂದು ಸಚಿನ್‌ ಪೈಲಟ್ ತಮ್ಮ ಪಕ್ಷವು ಬಿಕ್ಕಟ್ಟಿನಲ್ಲಿದೆ ಎಂಬುದನ್ನು ನಿರಾಕರಿಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸಲಾಗುತ್ತಿದೆ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ನಾವು ಕಳೆದ ಮೂರು ತಿಂಗಳುಗಳಿಂದ ಭೇಟಿಯಾಗದ ಕಾರಣ ಈಗ ಹೋಟೆಲ್‌ಗಳಲ್ಲಿ ಒಟ್ಟಿಗೆ ಸೇರಿದ್ದೇವೆ” ಎಂದಿದ್ದಾರೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು 107 ಶಾಸಕರನ್ನು ಹೊಂದಿದೆ. ಅದರಲ್ಲಿ ಆರು ಜನ ಕಳೆದ ವರ್ಷ ಬಿಎಸ್‌ಪಿ ತ್ಯಜಿಸಿ ಕಾಂಗ್ರೆಸ್‌ ಸೇರಿದ್ದಾರೆ. 13 ಸ್ವತಂತ್ರ ಶಾಸಕರಲ್ಲಿ 12 ಜನರ ಬೆಂಬಲವೂ ಪಕ್ಷಕ್ಕೆ ಇದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಬಿಜೆಪಿಯು 72 ಶಾಸಕರು ಮತ್ತು ಸ್ವಂತತ್ರ ಶಾಸಕರು ಮತ್ತು ಪಾಲುದಾರ ಪಕ್ಷಗಳಿಂದ ನಾಲ್ವರ ಬೆಂಬಲ ಪಡೆದಿದೆ. ರಾಜ್ಯಸಭಾ ಸ್ಥಾನವನ್ನು ಗೆಲ್ಲಲು, ಪ್ರತಿ ಅಭ್ಯರ್ಥಿಗೆ 51 ಮೊದಲ ಆದ್ಯತೆಯ ಮತಗಳು ಬೇಕಾಗುತ್ತವೆ.

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ. ಹಾಗಾಗಿ “ನೀವು ಎರಡನೇ ಅಭ್ಯರ್ಥಿಗೆ ಸಂಖ್ಯೆಗಳನ್ನು ಹೊಂದಿದ್ದೀರಾ? ಇದು ನಿಮ್ಮ ದುಷ್ಟ ವಿನ್ಯಾಸಗಳನ್ನು ಬಹಿರಂಗಪಡಿಸುತ್ತದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....