Homeಮುಖಪುಟರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ.

- Advertisement -
- Advertisement -

ದೇಶವು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರು ಪ್ರಜಾಪ್ರಭುತ್ವವನ್ನು ನಾಶಪಡಿಡುತ್ತಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿರುವ ಹಿನ್ನೆಲೆಯಲ್ಲಿ, ನಿಮ್ಮ ಎರಡನೇ ಅಭ್ಯರ್ಥಿಯನ್ನು ಗೆಲ್ಲಿಸಲು ನಿಮ್ಮ ಬಳಿ ಸಾಕಷ್ಟು ಸಂಖ್ಯೆಗಳಿವೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

“ವಿಶ್ವವು ವೈರಸ್ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿರುವಾಗಲೂ, ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು  ಬಿಜೆಪಿ ಉರುಳಿಸಿದೆ. ಈ ಸಮಯದಲ್ಲಿ ಯಾರು ನೋವು ಕೊಡುತ್ತಿದ್ದಾರೆ ಮತ್ತು ಯಾರು ಔಷಧಿ ವಿತರಿಸುತ್ತಿದ್ದಾರೆ ಎಂಬುದನ್ನು ನಾವು ನಿರ್ಧರಿಸಬೇಕಾಗಿದೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಪಕ್ಷವು “ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನಗಳ” ವಿರುದ್ಧ ದೂರು ನೀಡಿದೆ. ಕಾಂಗ್ರೆಸ್‌ ಮತ್ತು ಅದನ್ನು ಬೆಂಬಲಿಸುವ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು  ಆರೋಪಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ಆಳುತ್ತಿದ್ದ ಎರಡು ದೊಡ್ಡ ರಾಜ್ಯಗಳಾದ ಕರ್ನಾಟಕ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಆಪರೇಷನ್‌ ಕಮಲ ನಡೆಸಿ, ಶಾಸಕರನ್ನು ಕೊಂಡುಕೊಂಡು ಸರ್ಕಾರಗಳನ್ನು ಉರುಳಿಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ನಡುವೆ ಜೂನ್ 19 ರಂದು ನಡೆಯುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯ ಬಗ್ಗೆ ರಾಜಸ್ಥಾನದಲ್ಲಿ ಕೋಲಾಹಲ ಉತ್ತುಂಗಕ್ಕೇರಿದೆ. ಎರಡು ಸ್ಥಾನಗಳನ್ನು ಗೆಲ್ಲಲು ಪಕ್ಷಕ್ಕೆ ಸಾಕಷ್ಟು ಸಂಖ್ಯೆಯಿದೆ ಮತ್ತು ಯಾರೂ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ರಾಜಸ್ಥಾನ್ ಕಾಂಗ್ರೆಸ್ ಮುಖ್ಯಸ್ಥ ಸಚಿನ್ ಪೈಲಟ್ ಹೇಳಿದ್ದಾರೆ.

“ರಾಜ್ಯಸಭೆಯ ಎರಡೂ ಸ್ಥಾನಗಳನ್ನು ಗೆಲ್ಲಲು ನಮ್ಮಲ್ಲಿ ಸಂಖ್ಯೆಗಳಿವೆ. ನಮಗೆ ಸ್ವತಂತ್ರ ಶಾಸಕರ ಬೆಂಬಲವಿದೆ. ಊಹಾಪೋಹಗಳು ಹರಡಿ ಜನರನ್ನು ದಾರಿ ತಪ್ಪಿಸಬೇಡಿ. ಎಲ್ಲಾ ಶಾಸಕರು ನಮ್ಮೊಂದಿಗಿದ್ದಾರೆ” ಎಂದು ಸಚಿನ್‌ ಪೈಲಟ್ ತಮ್ಮ ಪಕ್ಷವು ಬಿಕ್ಕಟ್ಟಿನಲ್ಲಿದೆ ಎಂಬುದನ್ನು ನಿರಾಕರಿಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸಲಾಗುತ್ತಿದೆ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ನಾವು ಕಳೆದ ಮೂರು ತಿಂಗಳುಗಳಿಂದ ಭೇಟಿಯಾಗದ ಕಾರಣ ಈಗ ಹೋಟೆಲ್‌ಗಳಲ್ಲಿ ಒಟ್ಟಿಗೆ ಸೇರಿದ್ದೇವೆ” ಎಂದಿದ್ದಾರೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು 107 ಶಾಸಕರನ್ನು ಹೊಂದಿದೆ. ಅದರಲ್ಲಿ ಆರು ಜನ ಕಳೆದ ವರ್ಷ ಬಿಎಸ್‌ಪಿ ತ್ಯಜಿಸಿ ಕಾಂಗ್ರೆಸ್‌ ಸೇರಿದ್ದಾರೆ. 13 ಸ್ವತಂತ್ರ ಶಾಸಕರಲ್ಲಿ 12 ಜನರ ಬೆಂಬಲವೂ ಪಕ್ಷಕ್ಕೆ ಇದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಬಿಜೆಪಿಯು 72 ಶಾಸಕರು ಮತ್ತು ಸ್ವಂತತ್ರ ಶಾಸಕರು ಮತ್ತು ಪಾಲುದಾರ ಪಕ್ಷಗಳಿಂದ ನಾಲ್ವರ ಬೆಂಬಲ ಪಡೆದಿದೆ. ರಾಜ್ಯಸಭಾ ಸ್ಥಾನವನ್ನು ಗೆಲ್ಲಲು, ಪ್ರತಿ ಅಭ್ಯರ್ಥಿಗೆ 51 ಮೊದಲ ಆದ್ಯತೆಯ ಮತಗಳು ಬೇಕಾಗುತ್ತವೆ.

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ. ಹಾಗಾಗಿ “ನೀವು ಎರಡನೇ ಅಭ್ಯರ್ಥಿಗೆ ಸಂಖ್ಯೆಗಳನ್ನು ಹೊಂದಿದ್ದೀರಾ? ಇದು ನಿಮ್ಮ ದುಷ್ಟ ವಿನ್ಯಾಸಗಳನ್ನು ಬಹಿರಂಗಪಡಿಸುತ್ತದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...