Homeಮುಖಪುಟರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ.

- Advertisement -
- Advertisement -

ದೇಶವು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರು ಪ್ರಜಾಪ್ರಭುತ್ವವನ್ನು ನಾಶಪಡಿಡುತ್ತಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿರುವ ಹಿನ್ನೆಲೆಯಲ್ಲಿ, ನಿಮ್ಮ ಎರಡನೇ ಅಭ್ಯರ್ಥಿಯನ್ನು ಗೆಲ್ಲಿಸಲು ನಿಮ್ಮ ಬಳಿ ಸಾಕಷ್ಟು ಸಂಖ್ಯೆಗಳಿವೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

“ವಿಶ್ವವು ವೈರಸ್ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿರುವಾಗಲೂ, ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು  ಬಿಜೆಪಿ ಉರುಳಿಸಿದೆ. ಈ ಸಮಯದಲ್ಲಿ ಯಾರು ನೋವು ಕೊಡುತ್ತಿದ್ದಾರೆ ಮತ್ತು ಯಾರು ಔಷಧಿ ವಿತರಿಸುತ್ತಿದ್ದಾರೆ ಎಂಬುದನ್ನು ನಾವು ನಿರ್ಧರಿಸಬೇಕಾಗಿದೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಪಕ್ಷವು “ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನಗಳ” ವಿರುದ್ಧ ದೂರು ನೀಡಿದೆ. ಕಾಂಗ್ರೆಸ್‌ ಮತ್ತು ಅದನ್ನು ಬೆಂಬಲಿಸುವ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು  ಆರೋಪಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ಆಳುತ್ತಿದ್ದ ಎರಡು ದೊಡ್ಡ ರಾಜ್ಯಗಳಾದ ಕರ್ನಾಟಕ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಆಪರೇಷನ್‌ ಕಮಲ ನಡೆಸಿ, ಶಾಸಕರನ್ನು ಕೊಂಡುಕೊಂಡು ಸರ್ಕಾರಗಳನ್ನು ಉರುಳಿಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ನಡುವೆ ಜೂನ್ 19 ರಂದು ನಡೆಯುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯ ಬಗ್ಗೆ ರಾಜಸ್ಥಾನದಲ್ಲಿ ಕೋಲಾಹಲ ಉತ್ತುಂಗಕ್ಕೇರಿದೆ. ಎರಡು ಸ್ಥಾನಗಳನ್ನು ಗೆಲ್ಲಲು ಪಕ್ಷಕ್ಕೆ ಸಾಕಷ್ಟು ಸಂಖ್ಯೆಯಿದೆ ಮತ್ತು ಯಾರೂ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ರಾಜಸ್ಥಾನ್ ಕಾಂಗ್ರೆಸ್ ಮುಖ್ಯಸ್ಥ ಸಚಿನ್ ಪೈಲಟ್ ಹೇಳಿದ್ದಾರೆ.

“ರಾಜ್ಯಸಭೆಯ ಎರಡೂ ಸ್ಥಾನಗಳನ್ನು ಗೆಲ್ಲಲು ನಮ್ಮಲ್ಲಿ ಸಂಖ್ಯೆಗಳಿವೆ. ನಮಗೆ ಸ್ವತಂತ್ರ ಶಾಸಕರ ಬೆಂಬಲವಿದೆ. ಊಹಾಪೋಹಗಳು ಹರಡಿ ಜನರನ್ನು ದಾರಿ ತಪ್ಪಿಸಬೇಡಿ. ಎಲ್ಲಾ ಶಾಸಕರು ನಮ್ಮೊಂದಿಗಿದ್ದಾರೆ” ಎಂದು ಸಚಿನ್‌ ಪೈಲಟ್ ತಮ್ಮ ಪಕ್ಷವು ಬಿಕ್ಕಟ್ಟಿನಲ್ಲಿದೆ ಎಂಬುದನ್ನು ನಿರಾಕರಿಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸಲಾಗುತ್ತಿದೆ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ನಾವು ಕಳೆದ ಮೂರು ತಿಂಗಳುಗಳಿಂದ ಭೇಟಿಯಾಗದ ಕಾರಣ ಈಗ ಹೋಟೆಲ್‌ಗಳಲ್ಲಿ ಒಟ್ಟಿಗೆ ಸೇರಿದ್ದೇವೆ” ಎಂದಿದ್ದಾರೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು 107 ಶಾಸಕರನ್ನು ಹೊಂದಿದೆ. ಅದರಲ್ಲಿ ಆರು ಜನ ಕಳೆದ ವರ್ಷ ಬಿಎಸ್‌ಪಿ ತ್ಯಜಿಸಿ ಕಾಂಗ್ರೆಸ್‌ ಸೇರಿದ್ದಾರೆ. 13 ಸ್ವತಂತ್ರ ಶಾಸಕರಲ್ಲಿ 12 ಜನರ ಬೆಂಬಲವೂ ಪಕ್ಷಕ್ಕೆ ಇದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಬಿಜೆಪಿಯು 72 ಶಾಸಕರು ಮತ್ತು ಸ್ವಂತತ್ರ ಶಾಸಕರು ಮತ್ತು ಪಾಲುದಾರ ಪಕ್ಷಗಳಿಂದ ನಾಲ್ವರ ಬೆಂಬಲ ಪಡೆದಿದೆ. ರಾಜ್ಯಸಭಾ ಸ್ಥಾನವನ್ನು ಗೆಲ್ಲಲು, ಪ್ರತಿ ಅಭ್ಯರ್ಥಿಗೆ 51 ಮೊದಲ ಆದ್ಯತೆಯ ಮತಗಳು ಬೇಕಾಗುತ್ತವೆ.

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ. ಹಾಗಾಗಿ “ನೀವು ಎರಡನೇ ಅಭ್ಯರ್ಥಿಗೆ ಸಂಖ್ಯೆಗಳನ್ನು ಹೊಂದಿದ್ದೀರಾ? ಇದು ನಿಮ್ಮ ದುಷ್ಟ ವಿನ್ಯಾಸಗಳನ್ನು ಬಹಿರಂಗಪಡಿಸುತ್ತದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...