Homeಮುಖಪುಟ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

- Advertisement -
- Advertisement -

ರೈತ ಪ್ರತಿಭಟನೆಯ ಪರವಾಗಿ ಹರಿಯಾಣದಲ್ಲಿ ನಡೆದ ಈ ಮಹಾ ಪಂಚಾಯತ್‌ನಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಧ್ಯಮಗಳು ಬರೆದಿವೆ/ಪ್ರಕಟಿಸಿವೆ. ಆದರೆ ಅವು ಹೈಲೈಟ್ ಮಾಡದ ಒಂದು ಮಿಸ್ಸಿಂಗ್ ಪಾಯಿಂಟ್ ಇದೆ: ’ಮೋದಿ-ಶಾ ಮಾತುಕತೆಯಲ್ಲಿ ಪಾಲ್ಗೊಳ್ಳಲಿ/ ಮಾತುಕತೆಗೆ ಬರಲಿ’ ಎಂಬ ನಿರ್ಣಯ!

ನವೆಂಬರ್‌ನಿಂದ ದೆಹಲಿಯ ಹೊರಗಿನ ರೈತ ಪ್ರತಿಭಟನೆಯು ಹೃದಯಭಾಗದಲ್ಲಿ ಮೂರು ಹೊಸ ಕಾನೂನುಗಳನ್ನು ರದ್ದುಗೊಳಿಸುವಂತೆ ನಡೆದಿರುವ ಪ್ರತಿಭಟನೆಗೆ ಬೆಂಬಲಾರ್ಥವಾಗಿ, ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಬುಧವಾರ ನಡೆದ ರೈತರ “ಮಹಾಪಂಚಾಯತ್”ಗೆ ಭಾರಿ ಜನಸಮೂಹ ಜಮಾಯಿಸಿತ್ತು. ಉತ್ತರಪ್ರದೇಶದಲ್ಲಿ ಕಳೆದ ಕೆಲವು ದಿನಗಳಲ್ಲಿ ಇಂತಹ ಹಲವಾರು ಸಮಾವೇಶಗಳು ಕಂಡುಬಂದಿವೆ, ಆದರೆ ಬುಧವಾರದ ಸಭೆ ಅದನ್ನು ಹರಿಯಾಣದ ಜಾಟ್ ಹೃದಯಭಾಗಕ್ಕೆ ಕೊಂಡೊಯ್ದಿದೆ.

ಇದನ್ನೂ ಓದಿ: ’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ…

ಹರಿಯಾಣದಲ್ಲಿ ಜಾಟ್ ರಾಜಕೀಯದ ಕೇಂದ್ರಬಿಂದುವೆಂದು ಪರಿಗಣಿಸಲಾದ ಜಿಂದ್ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಭಾಷಣ ಮಾಡಿದರು. (ಟಿಕಾಯತ್ ಮತ್ತು ಇತರರು ವೇದಿಕೆಯಲ್ಲಿದ್ದಾಗ ಅದು ಇದ್ದಕ್ಕಿದ್ದಂತೆ ಕುಸಿಯಿತು, ಸಭೆಯನ್ನು ಸಂಕ್ಷಿಪ್ತವಾಗಿ ಅಡ್ಡಿಪಡಿಸಿತು ಅಷ್ಟೇ)

“ಹೊಸ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಅಧಿಕಾರದಲ್ಲಿ ಉಳಿಯುವುದು ಕಷ್ಟವಾಗುತ್ತದೆ” ಎಂದು ಟಿಕಾಯತ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ನಾವು ಇಲ್ಲಿಯವರೆಗೆ ’ಬಿಲ್ ವಾಪ್ಸಿ’ (ಕೃಷಿ ಕಾನೂನುಗಳನ್ನು ರದ್ದುಪಡಿಸುವುದು) ಬಗ್ಗೆ ಮಾತನಾಡಿದ್ದೇವೆ. ಸರ್ಕಾರ ಎಚ್ಚರಿಕೆಯಿಂದ ಆಲಿಸಬೇಕು. ಯುವಕರು ’ಗದ್ದಿ ವಾಪ್ಸಿ’ (ಅಧಿಕಾರದಿಂದ ತೆಗೆದುಹಾಕುವುದು)ಗೆ ಕರೆ ಮಾಡಿದರೆ ನೀವು ಏನು ಮಾಡುತ್ತೀರಿ?” ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಹಿರಿಯ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

ಗಣರಾಜ್ಯ ದಿನದ ಟ್ರಾಕ್ಟರ್ ರ್‍ಯಾಲಿಯಲ್ಲಿ ಕೆಲವು ಸಂಚುಕೊರರು ಮಾಡಿದ ಹಿಂಸಾಚಾರದ ಹಿನ್ನಡೆಯ ನಂತರ ರೈತ ಆಂದೋಲನವು ಸಂಚಯನಗೊಳ್ಳಲು ಕಳೆದ ವಾರ ಟಿಕಾಯತ್ ಮಾಡಿದ ಭಾವನಾತ್ಮಕ ಭಾಷಣವೂ ಪ್ರಬಲ ಕಾರಣವಾಗಿದೆ.

ಜನವರಿ 26 ರ ಹಿಂಸಾಚಾರದ ನಂತರ, ದೆಹಲಿಯ ಗಡಿಯ ಹೊರಗಿನ ಪ್ರತಿಭಟನಾ ಸ್ಥಳಗಳನ್ನು ಪೊಲೀಸರು ಬ್ಯಾರಿಕೇಡ್, ಸಿಮೆಂಟ್ ಗೋಡೆ, ಕಬ್ಬಿಣದ ಮೊಳೆಗಳು, ತಂತಿಗಳ ಮೂಲಕ ಸುತ್ತುವರೆದು, ಅಲ್ಲಿ ಒಂದು ಕೋಟೆಯನ್ನೆ ನಿರ್ಮಿಸಿದ್ದಾರೆ.

ಬುಧವಾರ ಮಹಾಪಂಚಾಯತ್ ನಡೆದ ಕಾಂಡೇಲಾ ಪಟ್ಟಣವು, ದೆಹಲಿ-ಯುಪಿ ಗಾಜಿಪುರ ಗಡಿಯಲ್ಲಿ ಟಿಕಾಯತ್ ಅವರ ಧರಣಿಗೆ ಜನರನ್ನು ಕಳುಹಿಸಿದ ಆ ಪ್ರದೇಶದ ಮೊದಲನೆಯ ಪಟ್ಟಣವಾಗಿದೆ.

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ಮಹಾಪಂಚಾಯತ್‌ನಲ್ಲಿ ಐದು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಕೃಷಿ ಕಾನೂನುಗಳನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು ಎಂಬ ಬೇಡಿಕೆಯ ಹೊರತಾಗಿ, ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ, ಕೃಷಿ ಸಾಲ ಮನ್ನಾ ಮತ್ತು ಗಣರಾಜ್ಯೋತ್ಸವದ ಹಿಂಸಾಚಾರದ ನಂತರ ಬಂಧಿತ ರೈತರನ್ನು ಬಿಡುಗಡೆ ಮಾಡಲು ಕಾನೂನು ಖಾತರಿ ನೀಡಬೇಕೆಂದು ನಿರ್ಣಯಗಳು ಕರೆ ನೀಡಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇರವಾಗಿ ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಬೇಕು ಎಂದೂ ಸಮಾವೇಶ ಆಗ್ರಹಿಸಿದೆ.

ಜಿಂದ್‌ನ ಜಾಟ್ ರೈತರ ಬೆಂಬಲವು ಮುಖ್ಯವಾಗಿ ಬಿಜೆಪಿಯ ಹರಿಯಾಣ ಮಿತ್ರ ದುಶ್ಯಂತ್ ಚೌತಾಲ್ ಅವರಿಗೆ ಹಿನ್ನಡೆಯಾಗಿ ಪರಿಣಮಿಸಬಹುದು. ಜಿಂದ್ ಜಿಲ್ಲೆಯಲ್ಲಿ ಮೂರು ಶಾಸಕರನ್ನು ದುಷ್ಯಂತ್ ಅವರ ಜೆಜೆಪಿ ಹೊಂದಿದೆ. ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಳ್ಳದೇ ಇದ್ದರೆ, ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಅದು ದೊಡ್ಡ ನಷ್ಟವನ್ನು ಉಂಟುಮಾಡಲಿದೆ ಎಂದು ಅವರ ಪಕ್ಷದ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...