Homeಮುಖಪುಟಮೋದಿ-ಶಾ ಅವರ ಸೈದ್ಧಾಂತಿಕ ಪೂರ್ವಜರು ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ವಿರುದ್ಧ ಬ್ರಿಟಿಷರು, ಮುಸ್ಲಿಂ ಲೀಗ್‌ನ್ನು ಬೆಂಬಲಿಸಿದರು:...

ಮೋದಿ-ಶಾ ಅವರ ಸೈದ್ಧಾಂತಿಕ ಪೂರ್ವಜರು ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ವಿರುದ್ಧ ಬ್ರಿಟಿಷರು, ಮುಸ್ಲಿಂ ಲೀಗ್‌ನ್ನು ಬೆಂಬಲಿಸಿದರು: ಪ್ರಣಾಳಿಕೆ ಕುರಿತ ಟೀಕೆಗೆ ಖರ್ಗೆ ಪ್ರತಿಕ್ರಿಯೆ

- Advertisement -
- Advertisement -

ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್, ರಾಜ್ಯಸಭಾ ಸಂಸದ ಮುಕುಲ್ ವಾಸ್ನಿಕ್, ಪವನ್ ಖೇರಾ ಮತ್ತು ಗುರುದೀಪ್ ಸಪ್ಪಲ್ ಅವರ ನಿಯೋಗ ಸೋಮವಾರ ಮಧ್ಯಾಹ್ನ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.

ಏಪ್ರಿಲ್ 6 ರಂದು ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಪ್ರಣಾಳಿಕೆಯನ್ನು “ಸುಳ್ಳಿನ ಕಂತೆ” ಎಂದು ಕರೆದಿದ್ದರು ಮತ್ತು ಪ್ರಣಾಳಿಕೆಯ ಪ್ರತಿ ಪುಟವು ಭಾರತವನ್ನು ತುಂಡು ಮಾಡುವ ಪ್ರಯತ್ನದ ಬಗ್ಗೆ ಗಬ್ಬು ವಾಸನೆ ಬೀರುತ್ತಿದೆ ಎಂದು ಹೇಳಿದ್ದರು.

ಮುಸ್ಲಿಂ ಲೀಗ್‌ನ ಮುದ್ರೆಯಂತೆ ಈ ಪ್ರಣಾಳಿಕೆಯಿದೆ ಅಂದರೆ ಮುಸ್ಲಿಂಲೀಗ್‌ ಸಿದ್ದಾಂತವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದರು. ಇಂದು ಕಾಂಗ್ರೆಸ್‌ಗೆ ಯಾವುದೇ ತತ್ವಗಳು ಅಥವಾ ನೀತಿಗಳಿಲ್ಲ. ಕಾಂಗ್ರೆಸ್ ಎಲ್ಲವನ್ನೂ ಒಪ್ಪಂದದ ಮೇಲೆ ನೀಡಿದೆ ಮತ್ತು ಇಡೀ ಪಕ್ಷವನ್ನು ಹೊರಗುತ್ತಿಗೆ ನೀಡಿದಂತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಪ್ರಧಾನಿಯವರ ಟೀಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 180 ಸ್ಥಾನಗಳ ಗಡಿ ದಾಟಲು ಹೆಣಗಾಡುತ್ತಿರುವ ಮಧ್ಯೆ ಮತ್ತೆ ಅದೇ  ಹಿಂದೂ-ಮುಸ್ಲಿಂ ಸ್ಕ್ರಿಪ್ಟನ್ನು ಆಶ್ರಯಿಸಿದ್ದಾರೆ ಎಂದು ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ “ಸೈದ್ಧಾಂತಿಕ ಪೂರ್ವಜರು” ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ವಿರುದ್ಧ ಬ್ರಿಟಿಷರು ಮತ್ತು ಮುಸ್ಲಿಂ ಲೀಗ್‌ನ್ನು ಬೆಂಬಲಿಸಿದರು ಎಂದು ಆರೋಪಿಸಿದರು.

ಈ ಕುರಿತು ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದ ಖರ್ಗೆ, ಮೋದಿ-ಶಾ ಅವರ ರಾಜಕೀಯ ಮತ್ತು ಸೈದ್ಧಾಂತಿಕ ಪೂರ್ವಜರು ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ವಿರುದ್ಧ ಬ್ರಿಟಿಷ್ ಮತ್ತು ಮುಸ್ಲಿಂ ಲೀಗ್‌ನ್ನು ಬೆಂಬಲಿಸಿದರು. ಸಾಮಾನ್ಯ ಭಾರತೀಯರ ಆಕಾಂಕ್ಷೆಗಳು, ಅಗತ್ಯಗಳು ಮತ್ತು ಬೇಡಿಕೆಗಳಿಗೆ ಅನುಗುಣವಾಗಿ ‘ಕಾಂಗ್ರೆಸ್ ನ್ಯಾಯ ಪತ್ರ’ವನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಮೋದಿ-ಶಾ ಅವರ ಸೈದ್ಧಾಂತಿಕ ಪೂರ್ವಜರು 1942ರಲ್ಲಿ ಮಹಾತ್ಮ ಗಾಂಧಿಯವರ “ಕ್ವಿಟ್ ಇಂಡಿಯಾ” ಕರೆಯನ್ನು ವಿರೋಧಿಸಿದರು, ಇದು ಮೌಲಾನಾ ಆಝಾದ್ ಅವರ ಅಧ್ಯಕ್ಷತೆಯಲ್ಲಿ ಚಳುವಳಿಯಾಗಿತ್ತು. ಪ್ರಸಾದ್ ಮುಖರ್ಜಿಯವರು ಬಂಗಾಳದಲ್ಲಿ ಹೇಗೆ ಸರಕಾರವನ್ನು ರಚಿಸಿದರು ಎಂದು ಎಲ್ಲರಿಗೂ ಗೊತ್ತಿದೆ, 1940ರ ದಶಕದಲ್ಲಿ ಸಿಂಧ್ ಮತ್ತು NWFP ಮುಸ್ಲಿಂ ಲೀಗ್‌ನೊಂದಿಗೆ ತಮ್ಮ ಸರ್ಕಾರಗಳನ್ನು ರಚಿಸಿದ್ದರು. 1942ರ ಕ್ವಿಟ್ ಇಂಡಿಯಾ ಚಳುವಳಿಯ ವೇಳೆ ಹೇಗೆ “ಹೋರಾಟ” ಮಾಡಬಹುದು ಮತ್ತು ಕಾಂಗ್ರೆಸ್‌ನ್ನು  ಹೇಗೆ ದಮನ ಮಾಡಬೇಕು ಎಂದು ಶ್ಯಾಮ ಪ್ರಸಾದ್ ಮುಖರ್ಜಿ ಅಂದಿನ ಬ್ರಿಟಿಷ್ ಗವರ್ನರ್‌ಗೆ ಪತ್ರ ಬರೆದಿಲ್ಲವೇ? ಮೋದಿ-ಶಾ ಮತ್ತು ಅವರ ಪಕ್ಷದ ನಾಮನಿರ್ದೇಶಿತ ಅಧ್ಯಕ್ಷರು ಇಂದು ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮೋದಿಯ ಭಾಷಣಗಳಲ್ಲಿ ಆರೆಸ್ಸೆಸ್‌ ಗಬ್ಬು ನಾರುತ್ತಿದೆ, ಬಿಜೆಪಿಯ ಚುನಾವಣಾ ಗ್ರಾಫ್ ದಿನದಿಂದ ದಿನಕ್ಕೆ ಕುಸಿಯುತ್ತಿದೆ, ಆದ್ದರಿಂದ ಆರೆಸ್ಸೆಸ್‌ ತನ್ನ ಆತ್ಮೀಯ ಸ್ನೇಹಿತ ಮುಸ್ಲಿಂ ಲೀಗ್‌ನ್ನು ನೆನಪಿಸಿಕೊಳ್ಳಲು ಪ್ರಾರಂಭಿಸಿದೆ. ಇದರಲ್ಲಿ ಒಂದೇ ಒಂದು ಸತ್ಯವಿದೆ. ಕಾಂಗ್ರೆಸ್‌ನ ನ್ಯಾಯ ಪತ್ರವು ಭಾರತದ 140 ಕೋಟಿ ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಅವರ ಸಂಯೋಜಿತ ಶಕ್ತಿಯು ಮೋದಿಯ 10 ವರ್ಷಗಳ ಅನ್ಯಾಯವನ್ನು ಕೊನೆಗೊಳಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ಕೇಂದ್ರದಿಂದ ಪ್ರತಿಕ್ರಿಯೆ ಕೋರಿದ ಸುಪ್ರೀಂಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...