Homeಮುಖಪುಟಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

- Advertisement -
- Advertisement -

ಸಂಪುಟ ಪುನರ್‌‌ರಚನೆಗೆ ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿದ್ದರೆ ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್‌ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿಯೆ ಆಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಕೇಂದ್ರ ಸಚಿವ ಸಂಪುಟದ ವಿಸ್ತರಣೆಗೆ ಯಾವ ಮಹತ್ವವೂ ಇಲ್ಲ. ಮೋದಿಯವರ ಸಂಪುಟದಲ್ಲಿ ಯಾರು ಸಚಿವರಾದರೂ ಅವರೆಲ್ಲರೂ ನಾಮಕಾವಸ್ತೆ, ಹಣಕಾಸು, ಆರೋಗ್ಯ, ಶಿಕ್ಷಣ,ವಿದೇಶಾಂಗ ಯಾವುದೇ ಖಾತೆ ಇರಲಿ, ಅವುಗಳಿಗೆ ಸಂಬಂಧಿಸಿದ ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ಮತ್ತು ಅದರ ಬಗ್ಗೆ ಮಾತನಾಡುವುದು ನರೇಂದ್ರ ಮೋದಿಯವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ ಹೊರಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಕೊರೊನಾ ಕಾಲದಲ್ಲಿ ಹತ್ತಾರು ಬಾರಿ ಟಿವಿಗಳಲ್ಲಿ ಮೋದಿಯವರು ಕಾಣಿಸಿಕೊಂಡಿದ್ದಾರೆ. ಜಾಗಟೆ ಬಡಿದು, ದೀಪ ಹಚ್ಚಿ ಕೊರೊನಾ ವೈರಸ್ ಓಡಿಸಲು ಹೇಳಿದ ಮಹಾನುಭಾವ ಮೋದಿ. ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ರಾಜ್ಯಗಳಿಗೆ ಹಣ ನೀಡದೆ ಸತಾಯಿಸಿದವರು. ಕಾರ್ಮಿಕರು ವಲಸೆ ಹೋಗುತ್ತಿರುವಾಗ ಕಣ್ಣುಮುಚ್ಚಿ ಕೂತವರು. ಕೊರೊನಾ ಸೋಂಕು ಹರಡುತ್ತಿರುವಾಗಲೇ ಚುನಾವಣಾ ಪ್ರಚಾರ ಸಭೆ ನಡೆಸಿದವರು.

ವ್ಯಾಕ್ಸಿನ್ ಬಗ್ಗೆ ಸುಳ್ಳು ಹೇಳಿದವರು. ನಮ್ಮಲ್ಲಿ ವ್ಯಾಕ್ಸಿನ್ ಕೊಡದೆ ವಿದೇಶಕ್ಕೆ ರಫ್ತು ಮಾಡಿದವರು ನರೇಂದ್ರ ಮೋದಿ. ಈಗ ಕೊರೊನಾ ನಿಯಂತ್ರಣದಲ್ಲಿನ ವೈಫಲ್ಯಕ್ಕೆ ಯಾರೋ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕು ” ಎಂದು ಅವರು ಆಗ್ರಹಿಸಿದ್ದಾರೆ.

“ಹಿಂದಿನ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ವತ: ವೈದ್ಯರಾಗಿದ್ದರೆ, ಹೊಸ ಆರೋಗ್ಯ ಸಚಿವ ಮನಸೂಕ್ ಮಾಂಡವೀಯ ರಾಜಕೀಯ ಶಾಸ್ತ್ರದಲ್ಲಿ ಪದವೀದರ. ಕೋರೊನಾ ಕಾಲದಲ್ಲಿ ಆರೋಗ್ಯ ಖಾತೆಯಲ್ಲಿಯೇ ಕೈತುಂಬಾ ಕೆಲಸ ಇರುವಾಗ ಹೊಸ ಆರೋಗ್ಯ ಸಚಿವರಿಗೆ ಹೆಚ್ಚುವರಿಯಾಗಿ ರಾಸಾಯಾನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಇವರಿಂದ ಯಾವ ಸಾಧನೆಯನ್ನು ನಿರೀಕ್ಷಿಸಬಹುದು?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

“ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಕಾಣುವುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್‌ಬ್ಯಾನ್, ಜಿಎಸ್‌ಟಿ, ಕೊರೊನಾ ಪರಿಹಾರ ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ಇಂದಿನ ದುಸ್ಥಿತಿಗೆ ಬಂದಿದೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅದೇ ಖಾತೆಯಲ್ಲಿ ಮುಂದುವರಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿರುವುದು. ಈಗ ಹೊಸದಾಗಿ ಸೇರ್ಪಡೆಯಾದ ಸಚಿವರದ್ದೂ ಇದೇ ಕತೆ. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರನ್ನು ಕಟ್ಟಿಕೊಂಡು ಮೋದಿಯವರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ. ಹಾಗಿದೆ ಹೊಸ ಸಂಪುಟ” ಎಂದು ಅವರು ತಿಳಿಸಿದ್ದಾರೆ.

“ನರೇಂದ್ರ ಮೋದಿಯವರು ಮೊದಲು ಅಧಿಕಾರಕ್ಕೆ ಬಂದಾಗ ‘Minimum Government Maximum Governence’ ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ Minimum Government? ಹೇಳುವುದೊಂದು, ಮಾಡುವುದೊಂದು. ಇದಕ್ಕಾಗಿಯೇ ನಾನು ಮೋದಿಯವರ ಮನೆ ದೇವರೇ ಸುಳ್ಳು ಎಂದು ಹೇಳುತ್ತಿರುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

“ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೋದಿಯವರು ಸೋಷಿಯಲ್ ಎಂಜನಿಯರಿಂಗ್ ಮಾಡಿದ್ದಾರೆ, ಸಾಮಾಜಿಕ ನ್ಯಾಯವನ್ನು ಪಾಲಿಸಿದ್ದಾರೆ ಎಂದೆಲ್ಲ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಕರ್ನಾಟಕದಿಂದ ಆರು ಮಂದಿ ಈಗ ಕೇಂದ್ರ ಸಚಿವರಾಗಿದ್ದಾರೆ. ಇವರಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ಜಾತಿಗೆ ಸೇರಿದವರಿಲ್ಲ. ಮೂವರು ಬ್ರಾಹ್ಮಣರು, ಒಕ್ಕಲಿಗ, ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾ ಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂ ನನ್ನ ಆಕ್ಷೇಪ ಇಲ್ಲ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸೋಷಿಯಲ್ ಎಂಜನಿಯರಿಂಗ್? ಯಾವ ಸಾಮಾಜಿಕ ನ್ಯಾಯ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕರ್ನಾಟಕದಿಂದ ಸಚಿವರ ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಮೋದಿಯವರಿಗೆ ಗೊತ್ತಾಗಿರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

“ಆದ್ದರಿಂದ ಈ ಸಂಪುಟ ವಿಸ್ತರಣೆ, ಪುನರ್ರಚನೆಯಿಂದ ರಾಜ್ಯಕ್ಕೆ ಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಎದುರು ಬಾಯಿಬಿಡುವ ಶಕ್ತಿ ಇಲ್ಲ. 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...