Homeಮುಖಪುಟಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

- Advertisement -
- Advertisement -

ಸಂಪುಟ ಪುನರ್‌‌ರಚನೆಗೆ ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿದ್ದರೆ ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್‌ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿಯೆ ಆಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಕೇಂದ್ರ ಸಚಿವ ಸಂಪುಟದ ವಿಸ್ತರಣೆಗೆ ಯಾವ ಮಹತ್ವವೂ ಇಲ್ಲ. ಮೋದಿಯವರ ಸಂಪುಟದಲ್ಲಿ ಯಾರು ಸಚಿವರಾದರೂ ಅವರೆಲ್ಲರೂ ನಾಮಕಾವಸ್ತೆ, ಹಣಕಾಸು, ಆರೋಗ್ಯ, ಶಿಕ್ಷಣ,ವಿದೇಶಾಂಗ ಯಾವುದೇ ಖಾತೆ ಇರಲಿ, ಅವುಗಳಿಗೆ ಸಂಬಂಧಿಸಿದ ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ಮತ್ತು ಅದರ ಬಗ್ಗೆ ಮಾತನಾಡುವುದು ನರೇಂದ್ರ ಮೋದಿಯವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ ಹೊರಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಕೊರೊನಾ ಕಾಲದಲ್ಲಿ ಹತ್ತಾರು ಬಾರಿ ಟಿವಿಗಳಲ್ಲಿ ಮೋದಿಯವರು ಕಾಣಿಸಿಕೊಂಡಿದ್ದಾರೆ. ಜಾಗಟೆ ಬಡಿದು, ದೀಪ ಹಚ್ಚಿ ಕೊರೊನಾ ವೈರಸ್ ಓಡಿಸಲು ಹೇಳಿದ ಮಹಾನುಭಾವ ಮೋದಿ. ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ರಾಜ್ಯಗಳಿಗೆ ಹಣ ನೀಡದೆ ಸತಾಯಿಸಿದವರು. ಕಾರ್ಮಿಕರು ವಲಸೆ ಹೋಗುತ್ತಿರುವಾಗ ಕಣ್ಣುಮುಚ್ಚಿ ಕೂತವರು. ಕೊರೊನಾ ಸೋಂಕು ಹರಡುತ್ತಿರುವಾಗಲೇ ಚುನಾವಣಾ ಪ್ರಚಾರ ಸಭೆ ನಡೆಸಿದವರು.

ವ್ಯಾಕ್ಸಿನ್ ಬಗ್ಗೆ ಸುಳ್ಳು ಹೇಳಿದವರು. ನಮ್ಮಲ್ಲಿ ವ್ಯಾಕ್ಸಿನ್ ಕೊಡದೆ ವಿದೇಶಕ್ಕೆ ರಫ್ತು ಮಾಡಿದವರು ನರೇಂದ್ರ ಮೋದಿ. ಈಗ ಕೊರೊನಾ ನಿಯಂತ್ರಣದಲ್ಲಿನ ವೈಫಲ್ಯಕ್ಕೆ ಯಾರೋ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕು ” ಎಂದು ಅವರು ಆಗ್ರಹಿಸಿದ್ದಾರೆ.

“ಹಿಂದಿನ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ವತ: ವೈದ್ಯರಾಗಿದ್ದರೆ, ಹೊಸ ಆರೋಗ್ಯ ಸಚಿವ ಮನಸೂಕ್ ಮಾಂಡವೀಯ ರಾಜಕೀಯ ಶಾಸ್ತ್ರದಲ್ಲಿ ಪದವೀದರ. ಕೋರೊನಾ ಕಾಲದಲ್ಲಿ ಆರೋಗ್ಯ ಖಾತೆಯಲ್ಲಿಯೇ ಕೈತುಂಬಾ ಕೆಲಸ ಇರುವಾಗ ಹೊಸ ಆರೋಗ್ಯ ಸಚಿವರಿಗೆ ಹೆಚ್ಚುವರಿಯಾಗಿ ರಾಸಾಯಾನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಇವರಿಂದ ಯಾವ ಸಾಧನೆಯನ್ನು ನಿರೀಕ್ಷಿಸಬಹುದು?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

“ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಕಾಣುವುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್‌ಬ್ಯಾನ್, ಜಿಎಸ್‌ಟಿ, ಕೊರೊನಾ ಪರಿಹಾರ ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ಇಂದಿನ ದುಸ್ಥಿತಿಗೆ ಬಂದಿದೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅದೇ ಖಾತೆಯಲ್ಲಿ ಮುಂದುವರಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿರುವುದು. ಈಗ ಹೊಸದಾಗಿ ಸೇರ್ಪಡೆಯಾದ ಸಚಿವರದ್ದೂ ಇದೇ ಕತೆ. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರನ್ನು ಕಟ್ಟಿಕೊಂಡು ಮೋದಿಯವರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ. ಹಾಗಿದೆ ಹೊಸ ಸಂಪುಟ” ಎಂದು ಅವರು ತಿಳಿಸಿದ್ದಾರೆ.

“ನರೇಂದ್ರ ಮೋದಿಯವರು ಮೊದಲು ಅಧಿಕಾರಕ್ಕೆ ಬಂದಾಗ ‘Minimum Government Maximum Governence’ ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ Minimum Government? ಹೇಳುವುದೊಂದು, ಮಾಡುವುದೊಂದು. ಇದಕ್ಕಾಗಿಯೇ ನಾನು ಮೋದಿಯವರ ಮನೆ ದೇವರೇ ಸುಳ್ಳು ಎಂದು ಹೇಳುತ್ತಿರುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

“ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೋದಿಯವರು ಸೋಷಿಯಲ್ ಎಂಜನಿಯರಿಂಗ್ ಮಾಡಿದ್ದಾರೆ, ಸಾಮಾಜಿಕ ನ್ಯಾಯವನ್ನು ಪಾಲಿಸಿದ್ದಾರೆ ಎಂದೆಲ್ಲ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಕರ್ನಾಟಕದಿಂದ ಆರು ಮಂದಿ ಈಗ ಕೇಂದ್ರ ಸಚಿವರಾಗಿದ್ದಾರೆ. ಇವರಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ಜಾತಿಗೆ ಸೇರಿದವರಿಲ್ಲ. ಮೂವರು ಬ್ರಾಹ್ಮಣರು, ಒಕ್ಕಲಿಗ, ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾ ಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂ ನನ್ನ ಆಕ್ಷೇಪ ಇಲ್ಲ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸೋಷಿಯಲ್ ಎಂಜನಿಯರಿಂಗ್? ಯಾವ ಸಾಮಾಜಿಕ ನ್ಯಾಯ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕರ್ನಾಟಕದಿಂದ ಸಚಿವರ ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಮೋದಿಯವರಿಗೆ ಗೊತ್ತಾಗಿರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

“ಆದ್ದರಿಂದ ಈ ಸಂಪುಟ ವಿಸ್ತರಣೆ, ಪುನರ್ರಚನೆಯಿಂದ ರಾಜ್ಯಕ್ಕೆ ಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಎದುರು ಬಾಯಿಬಿಡುವ ಶಕ್ತಿ ಇಲ್ಲ. 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...