Homeಮುಖಪುಟಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

- Advertisement -
- Advertisement -

ಸಂಪುಟ ಪುನರ್‌‌ರಚನೆಗೆ ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿದ್ದರೆ ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್‌ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿಯೆ ಆಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಕೇಂದ್ರ ಸಚಿವ ಸಂಪುಟದ ವಿಸ್ತರಣೆಗೆ ಯಾವ ಮಹತ್ವವೂ ಇಲ್ಲ. ಮೋದಿಯವರ ಸಂಪುಟದಲ್ಲಿ ಯಾರು ಸಚಿವರಾದರೂ ಅವರೆಲ್ಲರೂ ನಾಮಕಾವಸ್ತೆ, ಹಣಕಾಸು, ಆರೋಗ್ಯ, ಶಿಕ್ಷಣ,ವಿದೇಶಾಂಗ ಯಾವುದೇ ಖಾತೆ ಇರಲಿ, ಅವುಗಳಿಗೆ ಸಂಬಂಧಿಸಿದ ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ಮತ್ತು ಅದರ ಬಗ್ಗೆ ಮಾತನಾಡುವುದು ನರೇಂದ್ರ ಮೋದಿಯವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ ಹೊರಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಕೊರೊನಾ ಕಾಲದಲ್ಲಿ ಹತ್ತಾರು ಬಾರಿ ಟಿವಿಗಳಲ್ಲಿ ಮೋದಿಯವರು ಕಾಣಿಸಿಕೊಂಡಿದ್ದಾರೆ. ಜಾಗಟೆ ಬಡಿದು, ದೀಪ ಹಚ್ಚಿ ಕೊರೊನಾ ವೈರಸ್ ಓಡಿಸಲು ಹೇಳಿದ ಮಹಾನುಭಾವ ಮೋದಿ. ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ರಾಜ್ಯಗಳಿಗೆ ಹಣ ನೀಡದೆ ಸತಾಯಿಸಿದವರು. ಕಾರ್ಮಿಕರು ವಲಸೆ ಹೋಗುತ್ತಿರುವಾಗ ಕಣ್ಣುಮುಚ್ಚಿ ಕೂತವರು. ಕೊರೊನಾ ಸೋಂಕು ಹರಡುತ್ತಿರುವಾಗಲೇ ಚುನಾವಣಾ ಪ್ರಚಾರ ಸಭೆ ನಡೆಸಿದವರು.

ವ್ಯಾಕ್ಸಿನ್ ಬಗ್ಗೆ ಸುಳ್ಳು ಹೇಳಿದವರು. ನಮ್ಮಲ್ಲಿ ವ್ಯಾಕ್ಸಿನ್ ಕೊಡದೆ ವಿದೇಶಕ್ಕೆ ರಫ್ತು ಮಾಡಿದವರು ನರೇಂದ್ರ ಮೋದಿ. ಈಗ ಕೊರೊನಾ ನಿಯಂತ್ರಣದಲ್ಲಿನ ವೈಫಲ್ಯಕ್ಕೆ ಯಾರೋ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕು ” ಎಂದು ಅವರು ಆಗ್ರಹಿಸಿದ್ದಾರೆ.

“ಹಿಂದಿನ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ವತ: ವೈದ್ಯರಾಗಿದ್ದರೆ, ಹೊಸ ಆರೋಗ್ಯ ಸಚಿವ ಮನಸೂಕ್ ಮಾಂಡವೀಯ ರಾಜಕೀಯ ಶಾಸ್ತ್ರದಲ್ಲಿ ಪದವೀದರ. ಕೋರೊನಾ ಕಾಲದಲ್ಲಿ ಆರೋಗ್ಯ ಖಾತೆಯಲ್ಲಿಯೇ ಕೈತುಂಬಾ ಕೆಲಸ ಇರುವಾಗ ಹೊಸ ಆರೋಗ್ಯ ಸಚಿವರಿಗೆ ಹೆಚ್ಚುವರಿಯಾಗಿ ರಾಸಾಯಾನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಇವರಿಂದ ಯಾವ ಸಾಧನೆಯನ್ನು ನಿರೀಕ್ಷಿಸಬಹುದು?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

“ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಕಾಣುವುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್‌ಬ್ಯಾನ್, ಜಿಎಸ್‌ಟಿ, ಕೊರೊನಾ ಪರಿಹಾರ ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ಇಂದಿನ ದುಸ್ಥಿತಿಗೆ ಬಂದಿದೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅದೇ ಖಾತೆಯಲ್ಲಿ ಮುಂದುವರಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿರುವುದು. ಈಗ ಹೊಸದಾಗಿ ಸೇರ್ಪಡೆಯಾದ ಸಚಿವರದ್ದೂ ಇದೇ ಕತೆ. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರನ್ನು ಕಟ್ಟಿಕೊಂಡು ಮೋದಿಯವರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ. ಹಾಗಿದೆ ಹೊಸ ಸಂಪುಟ” ಎಂದು ಅವರು ತಿಳಿಸಿದ್ದಾರೆ.

“ನರೇಂದ್ರ ಮೋದಿಯವರು ಮೊದಲು ಅಧಿಕಾರಕ್ಕೆ ಬಂದಾಗ ‘Minimum Government Maximum Governence’ ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ Minimum Government? ಹೇಳುವುದೊಂದು, ಮಾಡುವುದೊಂದು. ಇದಕ್ಕಾಗಿಯೇ ನಾನು ಮೋದಿಯವರ ಮನೆ ದೇವರೇ ಸುಳ್ಳು ಎಂದು ಹೇಳುತ್ತಿರುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

“ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೋದಿಯವರು ಸೋಷಿಯಲ್ ಎಂಜನಿಯರಿಂಗ್ ಮಾಡಿದ್ದಾರೆ, ಸಾಮಾಜಿಕ ನ್ಯಾಯವನ್ನು ಪಾಲಿಸಿದ್ದಾರೆ ಎಂದೆಲ್ಲ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಕರ್ನಾಟಕದಿಂದ ಆರು ಮಂದಿ ಈಗ ಕೇಂದ್ರ ಸಚಿವರಾಗಿದ್ದಾರೆ. ಇವರಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ಜಾತಿಗೆ ಸೇರಿದವರಿಲ್ಲ. ಮೂವರು ಬ್ರಾಹ್ಮಣರು, ಒಕ್ಕಲಿಗ, ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾ ಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂ ನನ್ನ ಆಕ್ಷೇಪ ಇಲ್ಲ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸೋಷಿಯಲ್ ಎಂಜನಿಯರಿಂಗ್? ಯಾವ ಸಾಮಾಜಿಕ ನ್ಯಾಯ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕರ್ನಾಟಕದಿಂದ ಸಚಿವರ ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಮೋದಿಯವರಿಗೆ ಗೊತ್ತಾಗಿರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

“ಆದ್ದರಿಂದ ಈ ಸಂಪುಟ ವಿಸ್ತರಣೆ, ಪುನರ್ರಚನೆಯಿಂದ ರಾಜ್ಯಕ್ಕೆ ಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಎದುರು ಬಾಯಿಬಿಡುವ ಶಕ್ತಿ ಇಲ್ಲ. 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....