Homeಮುಖಪುಟಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

- Advertisement -
- Advertisement -

ಸಂಪುಟ ಪುನರ್‌‌ರಚನೆಗೆ ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿದ್ದರೆ ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್‌ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿಯೆ ಆಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಕೇಂದ್ರ ಸಚಿವ ಸಂಪುಟದ ವಿಸ್ತರಣೆಗೆ ಯಾವ ಮಹತ್ವವೂ ಇಲ್ಲ. ಮೋದಿಯವರ ಸಂಪುಟದಲ್ಲಿ ಯಾರು ಸಚಿವರಾದರೂ ಅವರೆಲ್ಲರೂ ನಾಮಕಾವಸ್ತೆ, ಹಣಕಾಸು, ಆರೋಗ್ಯ, ಶಿಕ್ಷಣ,ವಿದೇಶಾಂಗ ಯಾವುದೇ ಖಾತೆ ಇರಲಿ, ಅವುಗಳಿಗೆ ಸಂಬಂಧಿಸಿದ ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ಮತ್ತು ಅದರ ಬಗ್ಗೆ ಮಾತನಾಡುವುದು ನರೇಂದ್ರ ಮೋದಿಯವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ ಹೊರಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಕೊರೊನಾ ಕಾಲದಲ್ಲಿ ಹತ್ತಾರು ಬಾರಿ ಟಿವಿಗಳಲ್ಲಿ ಮೋದಿಯವರು ಕಾಣಿಸಿಕೊಂಡಿದ್ದಾರೆ. ಜಾಗಟೆ ಬಡಿದು, ದೀಪ ಹಚ್ಚಿ ಕೊರೊನಾ ವೈರಸ್ ಓಡಿಸಲು ಹೇಳಿದ ಮಹಾನುಭಾವ ಮೋದಿ. ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ರಾಜ್ಯಗಳಿಗೆ ಹಣ ನೀಡದೆ ಸತಾಯಿಸಿದವರು. ಕಾರ್ಮಿಕರು ವಲಸೆ ಹೋಗುತ್ತಿರುವಾಗ ಕಣ್ಣುಮುಚ್ಚಿ ಕೂತವರು. ಕೊರೊನಾ ಸೋಂಕು ಹರಡುತ್ತಿರುವಾಗಲೇ ಚುನಾವಣಾ ಪ್ರಚಾರ ಸಭೆ ನಡೆಸಿದವರು.

ವ್ಯಾಕ್ಸಿನ್ ಬಗ್ಗೆ ಸುಳ್ಳು ಹೇಳಿದವರು. ನಮ್ಮಲ್ಲಿ ವ್ಯಾಕ್ಸಿನ್ ಕೊಡದೆ ವಿದೇಶಕ್ಕೆ ರಫ್ತು ಮಾಡಿದವರು ನರೇಂದ್ರ ಮೋದಿ. ಈಗ ಕೊರೊನಾ ನಿಯಂತ್ರಣದಲ್ಲಿನ ವೈಫಲ್ಯಕ್ಕೆ ಯಾರೋ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕು ” ಎಂದು ಅವರು ಆಗ್ರಹಿಸಿದ್ದಾರೆ.

“ಹಿಂದಿನ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ವತ: ವೈದ್ಯರಾಗಿದ್ದರೆ, ಹೊಸ ಆರೋಗ್ಯ ಸಚಿವ ಮನಸೂಕ್ ಮಾಂಡವೀಯ ರಾಜಕೀಯ ಶಾಸ್ತ್ರದಲ್ಲಿ ಪದವೀದರ. ಕೋರೊನಾ ಕಾಲದಲ್ಲಿ ಆರೋಗ್ಯ ಖಾತೆಯಲ್ಲಿಯೇ ಕೈತುಂಬಾ ಕೆಲಸ ಇರುವಾಗ ಹೊಸ ಆರೋಗ್ಯ ಸಚಿವರಿಗೆ ಹೆಚ್ಚುವರಿಯಾಗಿ ರಾಸಾಯಾನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಇವರಿಂದ ಯಾವ ಸಾಧನೆಯನ್ನು ನಿರೀಕ್ಷಿಸಬಹುದು?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

“ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಕಾಣುವುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್‌ಬ್ಯಾನ್, ಜಿಎಸ್‌ಟಿ, ಕೊರೊನಾ ಪರಿಹಾರ ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ಇಂದಿನ ದುಸ್ಥಿತಿಗೆ ಬಂದಿದೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅದೇ ಖಾತೆಯಲ್ಲಿ ಮುಂದುವರಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿರುವುದು. ಈಗ ಹೊಸದಾಗಿ ಸೇರ್ಪಡೆಯಾದ ಸಚಿವರದ್ದೂ ಇದೇ ಕತೆ. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರನ್ನು ಕಟ್ಟಿಕೊಂಡು ಮೋದಿಯವರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ. ಹಾಗಿದೆ ಹೊಸ ಸಂಪುಟ” ಎಂದು ಅವರು ತಿಳಿಸಿದ್ದಾರೆ.

“ನರೇಂದ್ರ ಮೋದಿಯವರು ಮೊದಲು ಅಧಿಕಾರಕ್ಕೆ ಬಂದಾಗ ‘Minimum Government Maximum Governence’ ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ Minimum Government? ಹೇಳುವುದೊಂದು, ಮಾಡುವುದೊಂದು. ಇದಕ್ಕಾಗಿಯೇ ನಾನು ಮೋದಿಯವರ ಮನೆ ದೇವರೇ ಸುಳ್ಳು ಎಂದು ಹೇಳುತ್ತಿರುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

“ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೋದಿಯವರು ಸೋಷಿಯಲ್ ಎಂಜನಿಯರಿಂಗ್ ಮಾಡಿದ್ದಾರೆ, ಸಾಮಾಜಿಕ ನ್ಯಾಯವನ್ನು ಪಾಲಿಸಿದ್ದಾರೆ ಎಂದೆಲ್ಲ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಕರ್ನಾಟಕದಿಂದ ಆರು ಮಂದಿ ಈಗ ಕೇಂದ್ರ ಸಚಿವರಾಗಿದ್ದಾರೆ. ಇವರಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ಜಾತಿಗೆ ಸೇರಿದವರಿಲ್ಲ. ಮೂವರು ಬ್ರಾಹ್ಮಣರು, ಒಕ್ಕಲಿಗ, ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾ ಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂ ನನ್ನ ಆಕ್ಷೇಪ ಇಲ್ಲ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸೋಷಿಯಲ್ ಎಂಜನಿಯರಿಂಗ್? ಯಾವ ಸಾಮಾಜಿಕ ನ್ಯಾಯ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕರ್ನಾಟಕದಿಂದ ಸಚಿವರ ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಮೋದಿಯವರಿಗೆ ಗೊತ್ತಾಗಿರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

“ಆದ್ದರಿಂದ ಈ ಸಂಪುಟ ವಿಸ್ತರಣೆ, ಪುನರ್ರಚನೆಯಿಂದ ರಾಜ್ಯಕ್ಕೆ ಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಎದುರು ಬಾಯಿಬಿಡುವ ಶಕ್ತಿ ಇಲ್ಲ. 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...