Homeಮುಖಪುಟಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

- Advertisement -
- Advertisement -

ಸಂಪುಟ ಪುನರ್‌‌ರಚನೆಗೆ ಸಚಿವರ ಕಾರ್ಯನಿರ್ವಹಣೆಯೇ ಮಾನದಂಡವಾಗಿದ್ದರೆ ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು. ನೋಟ್‌ಬ್ಯಾನ್ ನಿಂದ ಹಿಡಿದು ಕೊರೊನಾ ನಿಯಂತ್ರಣದವರೆಗೆ ಈ ಸರ್ಕಾರ ವಿಫಲಗೊಂಡಿದ್ದರೆ ಅದಕ್ಕೆ ನೇರ ಹೊಣೆ ನರೇಂದ್ರ ಮೋದಿಯೆ ಆಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಂತರಿಕ ಪ್ರಜಾಪ್ರಭುತ್ವವೇ ಇಲ್ಲದ ಏಕವ್ಯಕ್ತಿ ಪ್ರದರ್ಶನವಾಗಿರುವ ಕೇಂದ್ರ ಸಚಿವ ಸಂಪುಟದ ವಿಸ್ತರಣೆಗೆ ಯಾವ ಮಹತ್ವವೂ ಇಲ್ಲ. ಮೋದಿಯವರ ಸಂಪುಟದಲ್ಲಿ ಯಾರು ಸಚಿವರಾದರೂ ಅವರೆಲ್ಲರೂ ನಾಮಕಾವಸ್ತೆ, ಹಣಕಾಸು, ಆರೋಗ್ಯ, ಶಿಕ್ಷಣ,ವಿದೇಶಾಂಗ ಯಾವುದೇ ಖಾತೆ ಇರಲಿ, ಅವುಗಳಿಗೆ ಸಂಬಂಧಿಸಿದ ನೀತಿ ನಿರ್ಧಾರಗಳನ್ನು ಪ್ರಕಟಿಸುವುದು ಮತ್ತು ಅದರ ಬಗ್ಗೆ ಮಾತನಾಡುವುದು ನರೇಂದ್ರ ಮೋದಿಯವರೇ ಆಗಿರುವ ಕಾರಣ ಆ ಖಾತೆಗಳ ವೈಫಲ್ಯಕ್ಕೆ ಅವರೇ ಹೊಣೆ ಹೊರಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಕೊರೊನಾ ಕಾಲದಲ್ಲಿ ಹತ್ತಾರು ಬಾರಿ ಟಿವಿಗಳಲ್ಲಿ ಮೋದಿಯವರು ಕಾಣಿಸಿಕೊಂಡಿದ್ದಾರೆ. ಜಾಗಟೆ ಬಡಿದು, ದೀಪ ಹಚ್ಚಿ ಕೊರೊನಾ ವೈರಸ್ ಓಡಿಸಲು ಹೇಳಿದ ಮಹಾನುಭಾವ ಮೋದಿ. ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ರಾಜ್ಯಗಳಿಗೆ ಹಣ ನೀಡದೆ ಸತಾಯಿಸಿದವರು. ಕಾರ್ಮಿಕರು ವಲಸೆ ಹೋಗುತ್ತಿರುವಾಗ ಕಣ್ಣುಮುಚ್ಚಿ ಕೂತವರು. ಕೊರೊನಾ ಸೋಂಕು ಹರಡುತ್ತಿರುವಾಗಲೇ ಚುನಾವಣಾ ಪ್ರಚಾರ ಸಭೆ ನಡೆಸಿದವರು.

ವ್ಯಾಕ್ಸಿನ್ ಬಗ್ಗೆ ಸುಳ್ಳು ಹೇಳಿದವರು. ನಮ್ಮಲ್ಲಿ ವ್ಯಾಕ್ಸಿನ್ ಕೊಡದೆ ವಿದೇಶಕ್ಕೆ ರಫ್ತು ಮಾಡಿದವರು ನರೇಂದ್ರ ಮೋದಿ. ಈಗ ಕೊರೊನಾ ನಿಯಂತ್ರಣದಲ್ಲಿನ ವೈಫಲ್ಯಕ್ಕೆ ಯಾರೋ ಡಾ.ಹರ್ಷವರ್ಧನ್ ಎಂಬ ಆರೋಗ್ಯ ಸಚಿವರನ್ನು ಕಿತ್ತುಹಾಕಿದ್ದಾರಂತೆ. ನಿಜವಾಗಿ ಮೋದಿಯವರು ರಾಜೀನಾಮೆ ನೀಡಬೇಕು ” ಎಂದು ಅವರು ಆಗ್ರಹಿಸಿದ್ದಾರೆ.

“ಹಿಂದಿನ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸ್ವತ: ವೈದ್ಯರಾಗಿದ್ದರೆ, ಹೊಸ ಆರೋಗ್ಯ ಸಚಿವ ಮನಸೂಕ್ ಮಾಂಡವೀಯ ರಾಜಕೀಯ ಶಾಸ್ತ್ರದಲ್ಲಿ ಪದವೀದರ. ಕೋರೊನಾ ಕಾಲದಲ್ಲಿ ಆರೋಗ್ಯ ಖಾತೆಯಲ್ಲಿಯೇ ಕೈತುಂಬಾ ಕೆಲಸ ಇರುವಾಗ ಹೊಸ ಆರೋಗ್ಯ ಸಚಿವರಿಗೆ ಹೆಚ್ಚುವರಿಯಾಗಿ ರಾಸಾಯಾನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಇವರಿಂದ ಯಾವ ಸಾಧನೆಯನ್ನು ನಿರೀಕ್ಷಿಸಬಹುದು?” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

“ಸಾಧನೆಯೇ ಮಾನದಂಡವಾಗಿದ್ದರೆ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಿತ್ತುಹಾಕಬೇಕಿತ್ತಲ್ವಾ? ಆರೋಗ್ಯ ಕ್ಷೇತ್ರಕ್ಕಿಂತಲೂ ಹೆಚ್ಚಿನ ವೈಫಲ್ಯ ಕಾಣುವುವುದು ಆರ್ಥಿಕ ಕ್ಷೇತ್ರದಲ್ಲಿ. ನೋಟ್‌ಬ್ಯಾನ್, ಜಿಎಸ್‌ಟಿ, ಕೊರೊನಾ ಪರಿಹಾರ ಹೀಗೆ ಹಣಕಾಸು ಖಾತೆಗೆ ಸಂಬಂಧಿಸಿದ ವೈಫಲ್ಯಗಳಿಂದಾಗಿಯೇ ದೇಶ ಇಂದಿನ ದುಸ್ಥಿತಿಗೆ ಬಂದಿದೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅದೇ ಖಾತೆಯಲ್ಲಿ ಮುಂದುವರಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಬಹಳ ಮಂದಿ ಸಚಿವರನ್ನು ಕೈಬಿಟ್ಟಿರುವ ಸುದ್ದಿ ಕೇಳಿಯೇ ಅವರೆಲ್ಲ ಸಂಪುಟದಲ್ಲಿದ್ದರೆಂದು ದೇಶದ ಜನರಿಗೆ ಗೊತ್ತಾಗಿರುವುದು. ಈಗ ಹೊಸದಾಗಿ ಸೇರ್ಪಡೆಯಾದ ಸಚಿವರದ್ದೂ ಇದೇ ಕತೆ. ಇವರಲ್ಲಿ ಬಹಳಷ್ಟು ಮಂದಿ ಹೊಸಬರು. ದೇಶ ಎದುರಿಸುತ್ತಿರುವ ಇಂದಿನ ಸಂಕಷ್ಟದ ಕಾಲದಲ್ಲಿ ಈ ಹೊಸಬರನ್ನು ಕಟ್ಟಿಕೊಂಡು ಮೋದಿಯವರು ಏನು ಮಾಡುತ್ತಾರೋ ಗೊತ್ತಿಲ್ಲ. ಸಾಮಾನ್ಯವಾಗಿ ಅಸಮರ್ಥರು ಅಸಮರ್ಥರನ್ನೇ ಆಯ್ಕೆ ಮಾಡಿಕೊಂಡು ಜೊತೆಯಲ್ಲಿಟ್ಟುಕೊಳ್ತಾರೆ. ಹಾಗಿದೆ ಹೊಸ ಸಂಪುಟ” ಎಂದು ಅವರು ತಿಳಿಸಿದ್ದಾರೆ.

“ನರೇಂದ್ರ ಮೋದಿಯವರು ಮೊದಲು ಅಧಿಕಾರಕ್ಕೆ ಬಂದಾಗ ‘Minimum Government Maximum Governence’ ಎಂಬ ಘೋಷಣೆ ಕೂಗುತ್ತಿದ್ದರು. ಈಗಿನ ಸಚಿವ ಸಂಪುಟದಲ್ಲಿ 77 ಸದಸ್ಯರಿದ್ದಾರೆ. ಇದೇನಾ Minimum Government? ಹೇಳುವುದೊಂದು, ಮಾಡುವುದೊಂದು. ಇದಕ್ಕಾಗಿಯೇ ನಾನು ಮೋದಿಯವರ ಮನೆ ದೇವರೇ ಸುಳ್ಳು ಎಂದು ಹೇಳುತ್ತಿರುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್‌‌: ರಾಜ್ಯ ಕಾಂಗ್ರೆಸ್‌‌ನಲ್ಲಿ ಎಲ್ಲವೂ ಸರಿಯಿಲ್ಲ!

“ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೋದಿಯವರು ಸೋಷಿಯಲ್ ಎಂಜನಿಯರಿಂಗ್ ಮಾಡಿದ್ದಾರೆ, ಸಾಮಾಜಿಕ ನ್ಯಾಯವನ್ನು ಪಾಲಿಸಿದ್ದಾರೆ ಎಂದೆಲ್ಲ ವ್ಯಾಖ್ಯಾನಗಳು ಕೇಳಿ ಬರುತ್ತಿವೆ. ಕರ್ನಾಟಕದಿಂದ ಆರು ಮಂದಿ ಈಗ ಕೇಂದ್ರ ಸಚಿವರಾಗಿದ್ದಾರೆ. ಇವರಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ಜಾತಿಗೆ ಸೇರಿದವರಿಲ್ಲ. ಮೂವರು ಬ್ರಾಹ್ಮಣರು, ಒಕ್ಕಲಿಗ, ಲಿಂಗಾಯತ ಮತ್ತು ಪರಿಶಿಷ್ಟ ಜಾತಿಗೆ ಸೇರಿದ ತಲಾ ಒಬ್ಬರು ಸಚಿವರಾಗಿದ್ದಾರೆ. ಯಾವ ಜಾತಿಗೆ ಕೊಟ್ಟರೂ ನನ್ನ ಆಕ್ಷೇಪ ಇಲ್ಲ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯಗಳಿಗೆ ಪ್ರಾತಿನಿಧ್ಯ ನಿರಾಕರಿಸುವುದು ಯಾವ ಸೋಷಿಯಲ್ ಎಂಜನಿಯರಿಂಗ್? ಯಾವ ಸಾಮಾಜಿಕ ನ್ಯಾಯ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಕರ್ನಾಟಕದಿಂದ ಸಚಿವರ ಆರಾಗಲಿ, ಹನ್ನೆರಡಾಗಲಿ ಅದರಿಂದ ರಾಜ್ಯಕ್ಕೆ ಏನೂ ಲಾಭವಾಗದು ಎನ್ನುವುದು ಈಗಾಗಲೇ ಸಾಬೀತಾಗಿದೆ. ಹೊಸಬರಲ್ಲಿ ಯಾರೂ ಸಂಪುಟ ದರ್ಜೆಯ ಸಚಿವರಿಲ್ಲ. ಮಹತ್ವದ ಖಾತೆಗಳೂ ಇಲ್ಲ. ಮಹತ್ವದ ಖಾತೆಗಳನ್ನು ಕೊಟ್ಟರೂ ಇವರಿಗೆ ನಿಭಾಯಿಸುವ ಸಾಮರ್ಥ್ಯವೂ ಇಲ್ಲ ಎಂದು ನರೇಂದ್ರ ಮೋದಿಯವರಿಗೆ ಗೊತ್ತಾಗಿರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

“ಆದ್ದರಿಂದ ಈ ಸಂಪುಟ ವಿಸ್ತರಣೆ, ಪುನರ್ರಚನೆಯಿಂದ ರಾಜ್ಯಕ್ಕೆ ಯಾವ ಲಾಭವೂ ಇಲ್ಲ. ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಎದುರು ಬಾಯಿಬಿಡುವ ಶಕ್ತಿ ಇಲ್ಲ. 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಹೀಗಿರುವಾಗ ಹೊಸದಾಗಿ ಸಚಿವ ಖಾತೆಯ ಕಿರೀಟ ಇಟ್ಟುಕೊಂಡು ಇವರೇನು ಮಾಡಬಹುದು?” ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...