Homeಅಂತರಾಷ್ಟ್ರೀಯಗಂಗಾವತಿಯಲ್ಲಿ ಮೋದಿ ಭಾಷಣ: ಸಾಧನೆಗಳೇ ಇಲ್ಲದ ತರಾವರಿ ಕಾಲಹರಣ!

ಗಂಗಾವತಿಯಲ್ಲಿ ಮೋದಿ ಭಾಷಣ: ಸಾಧನೆಗಳೇ ಇಲ್ಲದ ತರಾವರಿ ಕಾಲಹರಣ!

- Advertisement -
- Advertisement -

| ಮಲ್ಲನಗೌಡರ್ ಪಿ.ಕೆ |

‘ಲೇ ತಮ್ಮಾ, ಈ ಸರೆ ಪರೀಕ್ಸೆ ಹೆಂಗಾಗ್ಯಾವ್ಲೇ….ನೀ ಓದಿದ್ದ ನೋಡಿಲ್ಲಲೇ…ಹ್ಯಂಗ್ ಬರದಿದಿ?’- ಸಂಬಂಧಿಯೊಬ್ಬರು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿರುವ ಹುಡುಗನನ್ನು ಪ್ರಶ್ನಿಸಿದರು.
ಹುಡುಗ: ಅಂವಾ ಅಣ್ಣಾ ನಮ್ ಮನಿ ಮಗ್ಗಲ ಅದಾನಲ್ರಿ. ಅವಾ ಹ್ವಾದ ವರ್ಷ ಫೇಲಾಗಿದ್ದಾರಿ…ಹಹಹಹಾ…
ಸಂಬಂಧಿ: ನೀ ಹ್ಯಾಂಗ ಬರದಿಯೋ?
ಹುಡುಗ: ಅಂವಾ ನಮ್ ಸ್ಕೂಲ್ ಸೆಕ್ಯುರಿಟಿ ಅದಾನಲ್ರಿ, ಬಾಳ ಸ್ಟ್ರಿಕ್ಟ್ ಅದಾನರಿ. ಕಾಪಿ ಚೀಟಿ ಒಯ್ಯಾಕ ಬಿಡದ ಇಲ್ರಿ.
ಸಂಬಂಧಿ: ಹಂಗ ಇರ್ಬೇಕೋ…
(ಹುಡುಗ ಮನಸ್ಸಲ್ಲೇ ನಗುತ್ತ, ಯಪ್ಪಾ, ಪರೀಕ್ಷೆ ವಿಷಯ ಬಿಟ್ರಲ್ಲ ಸಾಕು ಎಂದು ವಿಷಯಾಂತರ ಮಾಡುತ್ತ ಹೋದ)
**

2019ರ ಚುನಾವಣೆಯಲ್ಲಿ ಮೋದಿ ಈ ಹುಡುಗನ ತರಹ ಭಾಷಣ ಕುಟ್ಟುತ್ತಿದ್ದಾರೆ. ಶುಕ್ರವಾರ ಗಂಗಾವತಿಯಲ್ಲಿ ಅವರು ಅಕ್ಷರಶ: ತೌಡು ಕುಟ್ಟಿ ಹೋದರು. ವಿಷಯಗಳೇ ಇಲ್ಲದ, ಸಾಧನೆಗಳೇ ಇಲ್ಲದ ವ್ಯಕ್ತಿ, ‘ಪಕ್ಕದ ಮನೆ ಅಣ್ಣ ಫೇಲಾಗಿದ್ದನ್ನು, ಸ್ಕೂಲ್ ಸೆಕ್ಯರಿಟಿ ಗಾರ್ಡ್ ಸ್ಟ್ರಿಕ್ಟ್ ಇರುವುದನ್ನು’ ಹೇಳುತ್ತ ಕಾಲಹರಣ ಮಾಡಿ ಹೋಗಿದ್ದಾರೆ.

ಅವರ ಭಾಷಣ ಆರಂಭವಾಗುವುದೇ ಎಚ್.ಡಿ. ರೇವಣ್ಣರ ಹೇಳಿಕೆ ಪ್ರಸ್ತಾಪಿಸುವ ಮೂಲಕ! ‘2014ರಲ್ಲೂ ದೇವೇಗೌಡರು ಹೀಗೆ ಹೇಳಿದ್ದರು, ಮೋದಿ ಪ್ರಧಾನಿಯಾದರೆ ರಾಜಕೀಯ ಸನ್ಯಾಸ ತಗೊಳ್ತೀನಿ ಅಂತಾ. ಸನ್ಯಾಸ ತಗೊಂಡ್ರಾ? (ಪ್ರೇಕ್ಷಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲ!), ಅವರ ಮಗ ತಗಳ್ತಾರಾ?’- ಹೀಗೆ ಶುರುವಾಗಿ, ‘ಇದು ಕುಟುಂಬ ರಾಜಕಾರಣ ಮತ್ತು ರಾಷ್ಟ್ರವಾದಗಳ ನಡುವಿನ ಚುನಾವಣೆ’ ಎಂದು ನೀರು ಕುಡಿಯುತ್ತಾರೆ. ಅಷ್ಟರಲ್ಲಿ ‘ಮೋದಿ ಮೋದಿ’ ಎಂಬ ನಾದ ತೇಲಿ ಬಂದ ಕೂಡಲೇ, ‘ನಿಮ್ಮ ಪ್ರೀತಿಗೆ ಋಣಿ’ ಎನ್ನುತ್ತಾರೆ. ಒಟ್ಟು ಸುಮಾರು 40 ನಿಮಿಷದ ಭಾಷಣದಲ್ಲಿ ಐದು ಸಲ ಹೀಗೆ ‘ಡಿಸ್ಟರ್ಬ್’ ಆಗುತ್ತದೆ. ಮೋದಿ ಸುಧಾರಿಸಿಕೊಳ್ಳಲು ಭಕ್ತರು ಅವಕಾಶ ಮಾಡಿಕೊಡುತ್ತಾರೆ!

ಒಮ್ಮೆ ಬಲಗೈನ ತೋರುಬೆರಳು, ಮರುಕ್ಷಣವೇ ಎಡಗೈನ ತೋರುಬೆರಳನ್ನು ಆಕಾಶಕ್ಕೆ ತೋರಿಸುತ್ತ ಧ್ವನಿಯಲ್ಲಿ ಹಾವಭಾವ ತೋರಿಸಲು ಯತ್ನಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಸೈನಿಕರ ಕುರಿತು ಕಾಳಜಿಯಿಂದ ಮಾತಾಡಿದ್ದು, ಸೈನಿಕರ ಹೆಸರನ್ನು ಬಳಸಿಕೊಳ್ಳುವ ಮೋದಿಯನ್ನು ಟೀಕಿಸಿದ್ದನ್ನು ತಿರುಚಿದ ಮೋದಿ, ‘ಎರಡು ಹೊತ್ತು ಊಟ ಇಲ್ಲದವರು ಸೇನೆ ಸೇರುತ್ತಾರೆ ಎಂದು ಕುಮಾರಸ್ವಾಮಿ ಸೈನಿಕರನ್ನು ಅವಮಾನಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿವ ಅಭಿನಯ ಮಾಡಿದರು.

ಒಟ್ಟೂ ಭಾಷಣದಲ್ಲಿ ಆರು ಸಲ ಸೇನೆಯ ವಿಷಯ, ಎರಡು ಸಲ ಪಾಕ್ ವಿಷಯ ಬರುತ್ತದೆ. ‘ಮಾಸೂಮ್ ಬಚ್ಚೇ’ ಎಂದು ಐದು ಸಲ ಪ್ರಸ್ತಾಪಿಸುವ ಮೋದಿ, ‘ಮಧ್ಯಪ್ರದೇಶ ಸರ್ಕಾರವು ಮುಗ್ಧ ಮಕ್ಕಳ ಮತ್ತು ಗರ್ಭಿಣಿಯರಿಗೆ ಆಹಾರ ನೀಡುವ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿ ಕಾಂಗ್ರೆಸ್‍ಗೆ ದುಡ್ಡು ನೀಡಿದೆ’ ಎಂದು ಅಪಾದಿಸುತ್ತಾರೆ. ಮಾಸೂಮ್ ಬಚ್ಚೇ ಕೆ ಥಾಲಿ’ (ಮುಗ್ಧ ಮಕ್ಕಳ ರೊಟ್ಟಿ) ಕಸಿದಿದ್ದಾರೆ ಎಂಬ ಭಾವನಾತ್ಮಕ ಮಾತನ್ನು ರಿಪೀಟ್ ಮಾಡಿ ಸುಸ್ತಾಗಿ ಮತ್ತೆ ನೀರು ಕುಡಿಯುತ್ತಾರೆ. ಮತ್ತೆ ಮೋದಿ ಮೋದಿ…..

ಉದ್ಯೋಗ ಸೃಷ್ಟಿ, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು –ಇದ್ಯಾವುದರ ಕುರಿತು ಚಕಾರವೇ ಇಲ್ಲ. ‘ಮೇಕ್ ಇನ್ ಇಂಡಿಯಾ’ , ಸ್ಮಾರ್ಟ್ ಸಿಟಿ ಬಗ್ಗೆಯೂ ಮಾತೇ ಇಲ್ಲ. ರಫೇಲ್ ಕುರಿತು ಬಾಯಿ ಬಿಡಲೇ ಇಲ್ಲ!

ಮೋದಿಯ ಜೋಶ್ ಇಳಿದು ಹೋಗಿದೆ. ಅದು ವಯಸ್ಸಿನ ಕಾರಣಕ್ಕೆ , ದೇಹದ ಕಾರಣಕ್ಕೆ ಅಲ್ಲ. ಮಾನಸಿಕವಾಗಿ ಮೋದಿ ‘ವೀಕ್’ ಆಗಿದ್ದಾರೆ. ಭಾಷಣಕ್ಕೆ ವಸ್ತುಗಳಿಲ್ಲದೇ ಪಾಕ್, ಸೈನಿಕರ ಮೊರೆ ಹೋಗುತ್ತಿದ್ದಾರೆ. ಕೊಪ್ಪಳ, ಬಳ್ಳಾರಿ, ರಾಯಚೂರು ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಈ ಸಭೆ ಆಯೋಜಿಸಲಾಗಿತ್ತು. ಇಲ್ಲಿ ಮೂರೂ ಕಡೆ ಜೆಡಿಎಸ್ ಅಭ್ಯರ್ಥಿಗಳೇ ಇಲ್ಲ. ಆದರೆ ಭಾಷಣದ ಮೊದಲ ಹತ್ತು ನಿಮಿಷವನ್ನು ಜೆಡಿಎಸ್ ಟೀಕೆಯಲ್ಲೇ ಕಳೆದರು. ಇಡೀ ಭಾಷಣದಲ್ಲಿ ಅವರ ಕುಗ್ಗಿದ ಆತ್ಮವಿಶ್ವಾಸ ಎದ್ದು ಕಾಣುತ್ತಿತ್ತು. ಏನೋ ಮಾತಾಡಬೇಕು ಎಂಬಂತೆ ಕಾಲಹರಣ ಮಾಡಿದ್ದಷ್ಟೇ ಬಂತು. ಹಿಂದಿ ಭಾಷಿಕ ಪ್ರೇಕ್ಷಕರ ಎದುರೇ ಸಪ್ಪೆಯಾಗಿರುವ ಮೋದಿ, ಕನ್ನಡ-ತೆಲುಗು ಭಾಷಿಕ ಪ್ರೇಕ್ಷಕರ ಎದುರು ಫುಲ್ ಡಲ್. ಖಾಲಿ ಡಬ್ಬಿಯನ್ನು ಅಲ್ಲಾಡಿಸಿದಂತೆ ಇತ್ತು ಅವರ ಭಾಷಣ.. ನಡುನಡುವೆ ಮಬ್ಭಕ್ತರ ‘ಮೋದಿ ಮೋದಿ’ ಎಂಬುದಷ್ಟೇ ಮೋದಿಗೆ ಹಿತ ತಂದಿರಬಹುದು.

ರಾಹುಲ್ ಗಾಂಧಿ ಕನ್ನಡದಲ್ಲಿ ತಪ್ಪಾಗಿ ಮಾತಾಡಿದಾಗ ನ್ಯೂಸ್ ಮಾಡುವ ಮಾಧ್ಯಮಗಳು, ಮೋದಿ ಮಾಡಿದ ಅಪಭ್ರಂಶಗಳ ಬಗ್ಗೆ ಸುದ್ದಿನೇ ಮಾಡಿದಂತೆ ಕಾಣ್ತಾ ಇಲ್ಲ. ‘ಹಳ್ಳಿ ಹಳ್ಳಿಗೂ ಮೋದಿ’ ಎನ್ನುವಾಗ ಅವರು ‘ಹಲ್ಲಿ ಹಲ್ಲಿಗೂ ಮೋದಿ’ ಎಂದರು. ಸತ್ಯದ ಮಾತೇ ಎಂದು ಸುಮ್ಮನಿದ್ದು ಬಿಡೋಣವೇ?
***

ಈಗ ಮೊದಲ ಪ್ಯಾರಾಕ್ಕೆ ಬನ್ನಿ. ಈ ಸಲ ಪರೀಕ್ಷೆ ಬರೆದ ಎಸ್‍ಎಸ್‍ಎಲ್‍ಸಿ ಹುಡುಗ ಸಂಬಂಧಿಯನ್ನು ಯಾಮಾರಿಸುವ ರೀತಿಯಲ್ಲಿ ಮೋದಿ ಭಾಷಣವಿತ್ತು.
ಮನೆಗೆ ಹೋದ ಸಂಬಂಧಿ, ಆ ಹುಡುಗ ಫೇಲ್ ಆಗ್ತಾನೆ ಬಿಡು ಎಂದು ಪತ್ನಿಗೆ ಹೇಳಿ ಸುಮ್ಮನಾದರಂತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...