Homeಅಂತರಾಷ್ಟ್ರೀಯಗಂಗಾವತಿಯಲ್ಲಿ ಮೋದಿ ಭಾಷಣ: ಸಾಧನೆಗಳೇ ಇಲ್ಲದ ತರಾವರಿ ಕಾಲಹರಣ!

ಗಂಗಾವತಿಯಲ್ಲಿ ಮೋದಿ ಭಾಷಣ: ಸಾಧನೆಗಳೇ ಇಲ್ಲದ ತರಾವರಿ ಕಾಲಹರಣ!

- Advertisement -
- Advertisement -

| ಮಲ್ಲನಗೌಡರ್ ಪಿ.ಕೆ |

‘ಲೇ ತಮ್ಮಾ, ಈ ಸರೆ ಪರೀಕ್ಸೆ ಹೆಂಗಾಗ್ಯಾವ್ಲೇ….ನೀ ಓದಿದ್ದ ನೋಡಿಲ್ಲಲೇ…ಹ್ಯಂಗ್ ಬರದಿದಿ?’- ಸಂಬಂಧಿಯೊಬ್ಬರು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿರುವ ಹುಡುಗನನ್ನು ಪ್ರಶ್ನಿಸಿದರು.
ಹುಡುಗ: ಅಂವಾ ಅಣ್ಣಾ ನಮ್ ಮನಿ ಮಗ್ಗಲ ಅದಾನಲ್ರಿ. ಅವಾ ಹ್ವಾದ ವರ್ಷ ಫೇಲಾಗಿದ್ದಾರಿ…ಹಹಹಹಾ…
ಸಂಬಂಧಿ: ನೀ ಹ್ಯಾಂಗ ಬರದಿಯೋ?
ಹುಡುಗ: ಅಂವಾ ನಮ್ ಸ್ಕೂಲ್ ಸೆಕ್ಯುರಿಟಿ ಅದಾನಲ್ರಿ, ಬಾಳ ಸ್ಟ್ರಿಕ್ಟ್ ಅದಾನರಿ. ಕಾಪಿ ಚೀಟಿ ಒಯ್ಯಾಕ ಬಿಡದ ಇಲ್ರಿ.
ಸಂಬಂಧಿ: ಹಂಗ ಇರ್ಬೇಕೋ…
(ಹುಡುಗ ಮನಸ್ಸಲ್ಲೇ ನಗುತ್ತ, ಯಪ್ಪಾ, ಪರೀಕ್ಷೆ ವಿಷಯ ಬಿಟ್ರಲ್ಲ ಸಾಕು ಎಂದು ವಿಷಯಾಂತರ ಮಾಡುತ್ತ ಹೋದ)
**

2019ರ ಚುನಾವಣೆಯಲ್ಲಿ ಮೋದಿ ಈ ಹುಡುಗನ ತರಹ ಭಾಷಣ ಕುಟ್ಟುತ್ತಿದ್ದಾರೆ. ಶುಕ್ರವಾರ ಗಂಗಾವತಿಯಲ್ಲಿ ಅವರು ಅಕ್ಷರಶ: ತೌಡು ಕುಟ್ಟಿ ಹೋದರು. ವಿಷಯಗಳೇ ಇಲ್ಲದ, ಸಾಧನೆಗಳೇ ಇಲ್ಲದ ವ್ಯಕ್ತಿ, ‘ಪಕ್ಕದ ಮನೆ ಅಣ್ಣ ಫೇಲಾಗಿದ್ದನ್ನು, ಸ್ಕೂಲ್ ಸೆಕ್ಯರಿಟಿ ಗಾರ್ಡ್ ಸ್ಟ್ರಿಕ್ಟ್ ಇರುವುದನ್ನು’ ಹೇಳುತ್ತ ಕಾಲಹರಣ ಮಾಡಿ ಹೋಗಿದ್ದಾರೆ.

ಅವರ ಭಾಷಣ ಆರಂಭವಾಗುವುದೇ ಎಚ್.ಡಿ. ರೇವಣ್ಣರ ಹೇಳಿಕೆ ಪ್ರಸ್ತಾಪಿಸುವ ಮೂಲಕ! ‘2014ರಲ್ಲೂ ದೇವೇಗೌಡರು ಹೀಗೆ ಹೇಳಿದ್ದರು, ಮೋದಿ ಪ್ರಧಾನಿಯಾದರೆ ರಾಜಕೀಯ ಸನ್ಯಾಸ ತಗೊಳ್ತೀನಿ ಅಂತಾ. ಸನ್ಯಾಸ ತಗೊಂಡ್ರಾ? (ಪ್ರೇಕ್ಷಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲ!), ಅವರ ಮಗ ತಗಳ್ತಾರಾ?’- ಹೀಗೆ ಶುರುವಾಗಿ, ‘ಇದು ಕುಟುಂಬ ರಾಜಕಾರಣ ಮತ್ತು ರಾಷ್ಟ್ರವಾದಗಳ ನಡುವಿನ ಚುನಾವಣೆ’ ಎಂದು ನೀರು ಕುಡಿಯುತ್ತಾರೆ. ಅಷ್ಟರಲ್ಲಿ ‘ಮೋದಿ ಮೋದಿ’ ಎಂಬ ನಾದ ತೇಲಿ ಬಂದ ಕೂಡಲೇ, ‘ನಿಮ್ಮ ಪ್ರೀತಿಗೆ ಋಣಿ’ ಎನ್ನುತ್ತಾರೆ. ಒಟ್ಟು ಸುಮಾರು 40 ನಿಮಿಷದ ಭಾಷಣದಲ್ಲಿ ಐದು ಸಲ ಹೀಗೆ ‘ಡಿಸ್ಟರ್ಬ್’ ಆಗುತ್ತದೆ. ಮೋದಿ ಸುಧಾರಿಸಿಕೊಳ್ಳಲು ಭಕ್ತರು ಅವಕಾಶ ಮಾಡಿಕೊಡುತ್ತಾರೆ!

ಒಮ್ಮೆ ಬಲಗೈನ ತೋರುಬೆರಳು, ಮರುಕ್ಷಣವೇ ಎಡಗೈನ ತೋರುಬೆರಳನ್ನು ಆಕಾಶಕ್ಕೆ ತೋರಿಸುತ್ತ ಧ್ವನಿಯಲ್ಲಿ ಹಾವಭಾವ ತೋರಿಸಲು ಯತ್ನಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಸೈನಿಕರ ಕುರಿತು ಕಾಳಜಿಯಿಂದ ಮಾತಾಡಿದ್ದು, ಸೈನಿಕರ ಹೆಸರನ್ನು ಬಳಸಿಕೊಳ್ಳುವ ಮೋದಿಯನ್ನು ಟೀಕಿಸಿದ್ದನ್ನು ತಿರುಚಿದ ಮೋದಿ, ‘ಎರಡು ಹೊತ್ತು ಊಟ ಇಲ್ಲದವರು ಸೇನೆ ಸೇರುತ್ತಾರೆ ಎಂದು ಕುಮಾರಸ್ವಾಮಿ ಸೈನಿಕರನ್ನು ಅವಮಾನಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿವ ಅಭಿನಯ ಮಾಡಿದರು.

ಒಟ್ಟೂ ಭಾಷಣದಲ್ಲಿ ಆರು ಸಲ ಸೇನೆಯ ವಿಷಯ, ಎರಡು ಸಲ ಪಾಕ್ ವಿಷಯ ಬರುತ್ತದೆ. ‘ಮಾಸೂಮ್ ಬಚ್ಚೇ’ ಎಂದು ಐದು ಸಲ ಪ್ರಸ್ತಾಪಿಸುವ ಮೋದಿ, ‘ಮಧ್ಯಪ್ರದೇಶ ಸರ್ಕಾರವು ಮುಗ್ಧ ಮಕ್ಕಳ ಮತ್ತು ಗರ್ಭಿಣಿಯರಿಗೆ ಆಹಾರ ನೀಡುವ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿ ಕಾಂಗ್ರೆಸ್‍ಗೆ ದುಡ್ಡು ನೀಡಿದೆ’ ಎಂದು ಅಪಾದಿಸುತ್ತಾರೆ. ಮಾಸೂಮ್ ಬಚ್ಚೇ ಕೆ ಥಾಲಿ’ (ಮುಗ್ಧ ಮಕ್ಕಳ ರೊಟ್ಟಿ) ಕಸಿದಿದ್ದಾರೆ ಎಂಬ ಭಾವನಾತ್ಮಕ ಮಾತನ್ನು ರಿಪೀಟ್ ಮಾಡಿ ಸುಸ್ತಾಗಿ ಮತ್ತೆ ನೀರು ಕುಡಿಯುತ್ತಾರೆ. ಮತ್ತೆ ಮೋದಿ ಮೋದಿ…..

ಉದ್ಯೋಗ ಸೃಷ್ಟಿ, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು –ಇದ್ಯಾವುದರ ಕುರಿತು ಚಕಾರವೇ ಇಲ್ಲ. ‘ಮೇಕ್ ಇನ್ ಇಂಡಿಯಾ’ , ಸ್ಮಾರ್ಟ್ ಸಿಟಿ ಬಗ್ಗೆಯೂ ಮಾತೇ ಇಲ್ಲ. ರಫೇಲ್ ಕುರಿತು ಬಾಯಿ ಬಿಡಲೇ ಇಲ್ಲ!

ಮೋದಿಯ ಜೋಶ್ ಇಳಿದು ಹೋಗಿದೆ. ಅದು ವಯಸ್ಸಿನ ಕಾರಣಕ್ಕೆ , ದೇಹದ ಕಾರಣಕ್ಕೆ ಅಲ್ಲ. ಮಾನಸಿಕವಾಗಿ ಮೋದಿ ‘ವೀಕ್’ ಆಗಿದ್ದಾರೆ. ಭಾಷಣಕ್ಕೆ ವಸ್ತುಗಳಿಲ್ಲದೇ ಪಾಕ್, ಸೈನಿಕರ ಮೊರೆ ಹೋಗುತ್ತಿದ್ದಾರೆ. ಕೊಪ್ಪಳ, ಬಳ್ಳಾರಿ, ರಾಯಚೂರು ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಈ ಸಭೆ ಆಯೋಜಿಸಲಾಗಿತ್ತು. ಇಲ್ಲಿ ಮೂರೂ ಕಡೆ ಜೆಡಿಎಸ್ ಅಭ್ಯರ್ಥಿಗಳೇ ಇಲ್ಲ. ಆದರೆ ಭಾಷಣದ ಮೊದಲ ಹತ್ತು ನಿಮಿಷವನ್ನು ಜೆಡಿಎಸ್ ಟೀಕೆಯಲ್ಲೇ ಕಳೆದರು. ಇಡೀ ಭಾಷಣದಲ್ಲಿ ಅವರ ಕುಗ್ಗಿದ ಆತ್ಮವಿಶ್ವಾಸ ಎದ್ದು ಕಾಣುತ್ತಿತ್ತು. ಏನೋ ಮಾತಾಡಬೇಕು ಎಂಬಂತೆ ಕಾಲಹರಣ ಮಾಡಿದ್ದಷ್ಟೇ ಬಂತು. ಹಿಂದಿ ಭಾಷಿಕ ಪ್ರೇಕ್ಷಕರ ಎದುರೇ ಸಪ್ಪೆಯಾಗಿರುವ ಮೋದಿ, ಕನ್ನಡ-ತೆಲುಗು ಭಾಷಿಕ ಪ್ರೇಕ್ಷಕರ ಎದುರು ಫುಲ್ ಡಲ್. ಖಾಲಿ ಡಬ್ಬಿಯನ್ನು ಅಲ್ಲಾಡಿಸಿದಂತೆ ಇತ್ತು ಅವರ ಭಾಷಣ.. ನಡುನಡುವೆ ಮಬ್ಭಕ್ತರ ‘ಮೋದಿ ಮೋದಿ’ ಎಂಬುದಷ್ಟೇ ಮೋದಿಗೆ ಹಿತ ತಂದಿರಬಹುದು.

ರಾಹುಲ್ ಗಾಂಧಿ ಕನ್ನಡದಲ್ಲಿ ತಪ್ಪಾಗಿ ಮಾತಾಡಿದಾಗ ನ್ಯೂಸ್ ಮಾಡುವ ಮಾಧ್ಯಮಗಳು, ಮೋದಿ ಮಾಡಿದ ಅಪಭ್ರಂಶಗಳ ಬಗ್ಗೆ ಸುದ್ದಿನೇ ಮಾಡಿದಂತೆ ಕಾಣ್ತಾ ಇಲ್ಲ. ‘ಹಳ್ಳಿ ಹಳ್ಳಿಗೂ ಮೋದಿ’ ಎನ್ನುವಾಗ ಅವರು ‘ಹಲ್ಲಿ ಹಲ್ಲಿಗೂ ಮೋದಿ’ ಎಂದರು. ಸತ್ಯದ ಮಾತೇ ಎಂದು ಸುಮ್ಮನಿದ್ದು ಬಿಡೋಣವೇ?
***

ಈಗ ಮೊದಲ ಪ್ಯಾರಾಕ್ಕೆ ಬನ್ನಿ. ಈ ಸಲ ಪರೀಕ್ಷೆ ಬರೆದ ಎಸ್‍ಎಸ್‍ಎಲ್‍ಸಿ ಹುಡುಗ ಸಂಬಂಧಿಯನ್ನು ಯಾಮಾರಿಸುವ ರೀತಿಯಲ್ಲಿ ಮೋದಿ ಭಾಷಣವಿತ್ತು.
ಮನೆಗೆ ಹೋದ ಸಂಬಂಧಿ, ಆ ಹುಡುಗ ಫೇಲ್ ಆಗ್ತಾನೆ ಬಿಡು ಎಂದು ಪತ್ನಿಗೆ ಹೇಳಿ ಸುಮ್ಮನಾದರಂತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...