Homeಮುಖಪುಟಮೋದಿ ಮೊದಲ 90 ನಿಮಿಷದಲ್ಲಿ ಮಣಿಪುರದ ಬಗ್ಗೆ ಪ್ರಸ್ತಾಪಿಸಿಲ್ಲ: ಪ್ರತಿಪಕ್ಷಗಳಿಂದ ಟೀಕೆ

ಮೋದಿ ಮೊದಲ 90 ನಿಮಿಷದಲ್ಲಿ ಮಣಿಪುರದ ಬಗ್ಗೆ ಪ್ರಸ್ತಾಪಿಸಿಲ್ಲ: ಪ್ರತಿಪಕ್ಷಗಳಿಂದ ಟೀಕೆ

- Advertisement -
- Advertisement -

ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಪ್ರತಿಕ್ರಿಯೆಯನ್ನು ಪ್ರತಿಪಕ್ಷಗಳು ಟೀಕಿಸಿದೆ. ಅವರು ಮಣಿಪುರ ಹಿಂಸಾಚಾರದ ಬಗ್ಗೆ 90 ನಿಮಿಷಗಳ ಕಾಲ ಭಾಷಣ ಮಾಡಿದರೂ ಮಾತನಾಡಲಿಲ್ಲ ಮತ್ತು ನಾವು ಸದನದಿಂದ ಹೊರನಡೆದ ನಂತರ ಮಾತ್ರ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕಿಸಿದೆ.

ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ಮೋದಿಯವರ ಉತ್ತರದ ಸಮಯದಲ್ಲಿ ಪ್ರತಿಪಕ್ಷ  I.N.D.I.A ಯ ಸಂಸದರು ಲೋಕಸಭೆಯಿಂದ ಹೊರನಡೆದಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ’ಬ್ರೇನ್ ಅವರುಈ ಕುರಿತು ಟ್ವೀಟ್ ಮಾಡಿದ್ದು  , 21 ದಿನಗಳ ಕಾಲ ತಲೆಮರೆಸಿಕೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದುಕೊಂಡು ಲೋಕಸಭೆಗೆ ವಿಶ್ವಾಸಮತ ಯಾಚನೆಯೊಂದಿಗೆ ಬರುವಂತೆ ಮಾಡಬೇಕಾಯಿತು.ಮೊದಲ ಒಂದು ಗಂಟೆ ಭಾಷಣದಲ್ಲಿ, ಕಲ್ಲು ಹೃದಯದ ವ್ಯಕ್ತಿ ಮಣಿಪುರದ ಬಗ್ಗೆ ಒಂದು ಮಾತನ್ನು ಕೂಡ ಹೇಳಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪ್ರಧಾನಿ ಮೋದಿಗಿಂತ ಹೆಚ್ಚು ಸಂಸತ್ತಿಗೆ ಅವಮಾನ ಮಾಡಿಲ್ಲ ಎಂದು ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ.

ವಿರೋಧ ಪಕ್ಷವು ನಿರ್ಗಮಿಸಿದ ಮೂವತ್ತು ಸೆಕೆಂಡುಗಳಲ್ಲಿ, ಪ್ರಧಾನಿ ಮೋದಿ ಮಣಿಪುರದ ಬಗ್ಗೆ ಕೇವಲ ನಾಲ್ಕು ನಿಮಿಷಗಳ ಭಾಷಣದಲ್ಲಿ ತೊಡಗಿದರು ಎಂದು ಟಿಎಂಸಿ ಪ್ರಧಾನಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದೆ.

ಪ್ರಧಾನಿಯವರು ತಮ್ಮ ಭಾಷಣದಲ್ಲಿ ಪ್ರತಿಪಕ್ಷಗಳನ್ನು, ಮುಖ್ಯವಾಗಿ ಕಾಂಗ್ರೆಸ್‌ನ್ನು ತರಾಟೆಗೆ ತೆಗೆದುಕೊಂಡರು, “ಅವರಿಗೆ ಬಡವರ ಹಸಿವಿನ ಬಗ್ಗೆ ಚಿಂತೆ ಇಲ್ಲ, ಅಧಿಕಾರದ ಬಗ್ಗೆ ಮಾತ್ರ ಚಿಂತೆ” ಎಂದು ಹೇಳಿದರು.

ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು ಮತ್ತು 2028ರಲ್ಲಿ ಮತ್ತೊಂದು ಅವಿಶ್ವಾಸ ನಿರ್ಣಯಕ್ಕೆ  ಸಿದ್ಧರಾಗಿ ಬರಲು ಪ್ರತಿಪಕ್ಷಗಳನ್ನು ಲೇವಡಿ ಮಾಡಿದರು.

ಮಣಿಪುರ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಇಡೀ ದೇಶವು ಮಣಿಪುರದೊಂದಿಗೆ ಇದೆ ಮತ್ತು ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಪ್ರಧಾನಿ ಮೋದಿಯವರಿಗೆ ಕಾಂಗ್ರೆಸ್ ನ ಭಯ  ಆವರಿಸಿದೆ ಮತ್ತು ಅದಕ್ಕಾಗಿಯೇ ಅವರು ಲೋಕಸಭೆಯಲ್ಲಿ ಮಾಡಿದ ಭಾಷಣದುದ್ದಕ್ಕೂ ಪಕ್ಷವನ್ನು ಟೀಕಿಸಿದರು ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಾತನಾಡಿ, ಪ್ರಧಾನಿ ಅವರು ಎರಡು ಗಂಟೆಗಳ ಕಾಲ ಮಾತನಾಡಿದ್ದಾರೆ. ಈ ಸಮಯದಲ್ಲಿ ಅವರು ಮಣಿಪುರದ ಬಗ್ಗೆ ಮಾತನಾಡುವ ಬದಲು ಪಕ್ಷವನ್ನು ಟೀಕಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಭಾಷಣಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಲೋಕಸಭೆಯ ಚರ್ಚೆಯನ್ನು ಚುನಾವಣಾ ರ್ಯಾಲಿಯಂತೆ ಬಳಸುತ್ತಿದ್ದಾರೆ.ನೀವು ಮೊದಲು ನಿಮ್ಮ ಮೊಂಡುತನ ಮತ್ತು ದುರಹಂಕಾರವನ್ನು ತ್ಯಜಿಸಿದ್ದರೆ, ಸಂಸತ್ತಿನ ಈ ಅಮೂಲ್ಯ ಸಮಯವನ್ನು ಉಳಿಸಬಹುದಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...