Homeಮುಖಪುಟಮೋದಿ ಮೊದಲ 90 ನಿಮಿಷದಲ್ಲಿ ಮಣಿಪುರದ ಬಗ್ಗೆ ಪ್ರಸ್ತಾಪಿಸಿಲ್ಲ: ಪ್ರತಿಪಕ್ಷಗಳಿಂದ ಟೀಕೆ

ಮೋದಿ ಮೊದಲ 90 ನಿಮಿಷದಲ್ಲಿ ಮಣಿಪುರದ ಬಗ್ಗೆ ಪ್ರಸ್ತಾಪಿಸಿಲ್ಲ: ಪ್ರತಿಪಕ್ಷಗಳಿಂದ ಟೀಕೆ

- Advertisement -
- Advertisement -

ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಪ್ರತಿಕ್ರಿಯೆಯನ್ನು ಪ್ರತಿಪಕ್ಷಗಳು ಟೀಕಿಸಿದೆ. ಅವರು ಮಣಿಪುರ ಹಿಂಸಾಚಾರದ ಬಗ್ಗೆ 90 ನಿಮಿಷಗಳ ಕಾಲ ಭಾಷಣ ಮಾಡಿದರೂ ಮಾತನಾಡಲಿಲ್ಲ ಮತ್ತು ನಾವು ಸದನದಿಂದ ಹೊರನಡೆದ ನಂತರ ಮಾತ್ರ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕಿಸಿದೆ.

ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ಮೋದಿಯವರ ಉತ್ತರದ ಸಮಯದಲ್ಲಿ ಪ್ರತಿಪಕ್ಷ  I.N.D.I.A ಯ ಸಂಸದರು ಲೋಕಸಭೆಯಿಂದ ಹೊರನಡೆದಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ’ಬ್ರೇನ್ ಅವರುಈ ಕುರಿತು ಟ್ವೀಟ್ ಮಾಡಿದ್ದು  , 21 ದಿನಗಳ ಕಾಲ ತಲೆಮರೆಸಿಕೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದುಕೊಂಡು ಲೋಕಸಭೆಗೆ ವಿಶ್ವಾಸಮತ ಯಾಚನೆಯೊಂದಿಗೆ ಬರುವಂತೆ ಮಾಡಬೇಕಾಯಿತು.ಮೊದಲ ಒಂದು ಗಂಟೆ ಭಾಷಣದಲ್ಲಿ, ಕಲ್ಲು ಹೃದಯದ ವ್ಯಕ್ತಿ ಮಣಿಪುರದ ಬಗ್ಗೆ ಒಂದು ಮಾತನ್ನು ಕೂಡ ಹೇಳಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪ್ರಧಾನಿ ಮೋದಿಗಿಂತ ಹೆಚ್ಚು ಸಂಸತ್ತಿಗೆ ಅವಮಾನ ಮಾಡಿಲ್ಲ ಎಂದು ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ.

ವಿರೋಧ ಪಕ್ಷವು ನಿರ್ಗಮಿಸಿದ ಮೂವತ್ತು ಸೆಕೆಂಡುಗಳಲ್ಲಿ, ಪ್ರಧಾನಿ ಮೋದಿ ಮಣಿಪುರದ ಬಗ್ಗೆ ಕೇವಲ ನಾಲ್ಕು ನಿಮಿಷಗಳ ಭಾಷಣದಲ್ಲಿ ತೊಡಗಿದರು ಎಂದು ಟಿಎಂಸಿ ಪ್ರಧಾನಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದೆ.

ಪ್ರಧಾನಿಯವರು ತಮ್ಮ ಭಾಷಣದಲ್ಲಿ ಪ್ರತಿಪಕ್ಷಗಳನ್ನು, ಮುಖ್ಯವಾಗಿ ಕಾಂಗ್ರೆಸ್‌ನ್ನು ತರಾಟೆಗೆ ತೆಗೆದುಕೊಂಡರು, “ಅವರಿಗೆ ಬಡವರ ಹಸಿವಿನ ಬಗ್ಗೆ ಚಿಂತೆ ಇಲ್ಲ, ಅಧಿಕಾರದ ಬಗ್ಗೆ ಮಾತ್ರ ಚಿಂತೆ” ಎಂದು ಹೇಳಿದರು.

ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು ಮತ್ತು 2028ರಲ್ಲಿ ಮತ್ತೊಂದು ಅವಿಶ್ವಾಸ ನಿರ್ಣಯಕ್ಕೆ  ಸಿದ್ಧರಾಗಿ ಬರಲು ಪ್ರತಿಪಕ್ಷಗಳನ್ನು ಲೇವಡಿ ಮಾಡಿದರು.

ಮಣಿಪುರ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಇಡೀ ದೇಶವು ಮಣಿಪುರದೊಂದಿಗೆ ಇದೆ ಮತ್ತು ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಪ್ರಧಾನಿ ಮೋದಿಯವರಿಗೆ ಕಾಂಗ್ರೆಸ್ ನ ಭಯ  ಆವರಿಸಿದೆ ಮತ್ತು ಅದಕ್ಕಾಗಿಯೇ ಅವರು ಲೋಕಸಭೆಯಲ್ಲಿ ಮಾಡಿದ ಭಾಷಣದುದ್ದಕ್ಕೂ ಪಕ್ಷವನ್ನು ಟೀಕಿಸಿದರು ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಾತನಾಡಿ, ಪ್ರಧಾನಿ ಅವರು ಎರಡು ಗಂಟೆಗಳ ಕಾಲ ಮಾತನಾಡಿದ್ದಾರೆ. ಈ ಸಮಯದಲ್ಲಿ ಅವರು ಮಣಿಪುರದ ಬಗ್ಗೆ ಮಾತನಾಡುವ ಬದಲು ಪಕ್ಷವನ್ನು ಟೀಕಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಭಾಷಣಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಲೋಕಸಭೆಯ ಚರ್ಚೆಯನ್ನು ಚುನಾವಣಾ ರ್ಯಾಲಿಯಂತೆ ಬಳಸುತ್ತಿದ್ದಾರೆ.ನೀವು ಮೊದಲು ನಿಮ್ಮ ಮೊಂಡುತನ ಮತ್ತು ದುರಹಂಕಾರವನ್ನು ತ್ಯಜಿಸಿದ್ದರೆ, ಸಂಸತ್ತಿನ ಈ ಅಮೂಲ್ಯ ಸಮಯವನ್ನು ಉಳಿಸಬಹುದಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...