Homeಮುಖಪುಟಮೋದಿ ಮೊದಲ 90 ನಿಮಿಷದಲ್ಲಿ ಮಣಿಪುರದ ಬಗ್ಗೆ ಪ್ರಸ್ತಾಪಿಸಿಲ್ಲ: ಪ್ರತಿಪಕ್ಷಗಳಿಂದ ಟೀಕೆ

ಮೋದಿ ಮೊದಲ 90 ನಿಮಿಷದಲ್ಲಿ ಮಣಿಪುರದ ಬಗ್ಗೆ ಪ್ರಸ್ತಾಪಿಸಿಲ್ಲ: ಪ್ರತಿಪಕ್ಷಗಳಿಂದ ಟೀಕೆ

- Advertisement -
- Advertisement -

ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಪ್ರತಿಕ್ರಿಯೆಯನ್ನು ಪ್ರತಿಪಕ್ಷಗಳು ಟೀಕಿಸಿದೆ. ಅವರು ಮಣಿಪುರ ಹಿಂಸಾಚಾರದ ಬಗ್ಗೆ 90 ನಿಮಿಷಗಳ ಕಾಲ ಭಾಷಣ ಮಾಡಿದರೂ ಮಾತನಾಡಲಿಲ್ಲ ಮತ್ತು ನಾವು ಸದನದಿಂದ ಹೊರನಡೆದ ನಂತರ ಮಾತ್ರ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕಿಸಿದೆ.

ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ಮೋದಿಯವರ ಉತ್ತರದ ಸಮಯದಲ್ಲಿ ಪ್ರತಿಪಕ್ಷ  I.N.D.I.A ಯ ಸಂಸದರು ಲೋಕಸಭೆಯಿಂದ ಹೊರನಡೆದಿದ್ದಾರೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ’ಬ್ರೇನ್ ಅವರುಈ ಕುರಿತು ಟ್ವೀಟ್ ಮಾಡಿದ್ದು  , 21 ದಿನಗಳ ಕಾಲ ತಲೆಮರೆಸಿಕೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದುಕೊಂಡು ಲೋಕಸಭೆಗೆ ವಿಶ್ವಾಸಮತ ಯಾಚನೆಯೊಂದಿಗೆ ಬರುವಂತೆ ಮಾಡಬೇಕಾಯಿತು.ಮೊದಲ ಒಂದು ಗಂಟೆ ಭಾಷಣದಲ್ಲಿ, ಕಲ್ಲು ಹೃದಯದ ವ್ಯಕ್ತಿ ಮಣಿಪುರದ ಬಗ್ಗೆ ಒಂದು ಮಾತನ್ನು ಕೂಡ ಹೇಳಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪ್ರಧಾನಿ ಮೋದಿಗಿಂತ ಹೆಚ್ಚು ಸಂಸತ್ತಿಗೆ ಅವಮಾನ ಮಾಡಿಲ್ಲ ಎಂದು ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ.

ವಿರೋಧ ಪಕ್ಷವು ನಿರ್ಗಮಿಸಿದ ಮೂವತ್ತು ಸೆಕೆಂಡುಗಳಲ್ಲಿ, ಪ್ರಧಾನಿ ಮೋದಿ ಮಣಿಪುರದ ಬಗ್ಗೆ ಕೇವಲ ನಾಲ್ಕು ನಿಮಿಷಗಳ ಭಾಷಣದಲ್ಲಿ ತೊಡಗಿದರು ಎಂದು ಟಿಎಂಸಿ ಪ್ರಧಾನಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದೆ.

ಪ್ರಧಾನಿಯವರು ತಮ್ಮ ಭಾಷಣದಲ್ಲಿ ಪ್ರತಿಪಕ್ಷಗಳನ್ನು, ಮುಖ್ಯವಾಗಿ ಕಾಂಗ್ರೆಸ್‌ನ್ನು ತರಾಟೆಗೆ ತೆಗೆದುಕೊಂಡರು, “ಅವರಿಗೆ ಬಡವರ ಹಸಿವಿನ ಬಗ್ಗೆ ಚಿಂತೆ ಇಲ್ಲ, ಅಧಿಕಾರದ ಬಗ್ಗೆ ಮಾತ್ರ ಚಿಂತೆ” ಎಂದು ಹೇಳಿದರು.

ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು ಮತ್ತು 2028ರಲ್ಲಿ ಮತ್ತೊಂದು ಅವಿಶ್ವಾಸ ನಿರ್ಣಯಕ್ಕೆ  ಸಿದ್ಧರಾಗಿ ಬರಲು ಪ್ರತಿಪಕ್ಷಗಳನ್ನು ಲೇವಡಿ ಮಾಡಿದರು.

ಮಣಿಪುರ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಇಡೀ ದೇಶವು ಮಣಿಪುರದೊಂದಿಗೆ ಇದೆ ಮತ್ತು ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಪ್ರಧಾನಿ ಮೋದಿಯವರಿಗೆ ಕಾಂಗ್ರೆಸ್ ನ ಭಯ  ಆವರಿಸಿದೆ ಮತ್ತು ಅದಕ್ಕಾಗಿಯೇ ಅವರು ಲೋಕಸಭೆಯಲ್ಲಿ ಮಾಡಿದ ಭಾಷಣದುದ್ದಕ್ಕೂ ಪಕ್ಷವನ್ನು ಟೀಕಿಸಿದರು ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಾತನಾಡಿ, ಪ್ರಧಾನಿ ಅವರು ಎರಡು ಗಂಟೆಗಳ ಕಾಲ ಮಾತನಾಡಿದ್ದಾರೆ. ಈ ಸಮಯದಲ್ಲಿ ಅವರು ಮಣಿಪುರದ ಬಗ್ಗೆ ಮಾತನಾಡುವ ಬದಲು ಪಕ್ಷವನ್ನು ಟೀಕಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಭಾಷಣಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಲೋಕಸಭೆಯ ಚರ್ಚೆಯನ್ನು ಚುನಾವಣಾ ರ್ಯಾಲಿಯಂತೆ ಬಳಸುತ್ತಿದ್ದಾರೆ.ನೀವು ಮೊದಲು ನಿಮ್ಮ ಮೊಂಡುತನ ಮತ್ತು ದುರಹಂಕಾರವನ್ನು ತ್ಯಜಿಸಿದ್ದರೆ, ಸಂಸತ್ತಿನ ಈ ಅಮೂಲ್ಯ ಸಮಯವನ್ನು ಉಳಿಸಬಹುದಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರ:ಪತ್ರಕರ್ತನ ಮೇಲೆ ಶಾಸಕನ ಬೆಂಬಲಿಗರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...