Homeಮುಖಪುಟಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

ಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

- Advertisement -
- Advertisement -

ಭ್ರಷ್ಟರನ್ನು ಜೈಲಿಗೆ ತಳ್ಳುವ ನಮ್ಮ ಪ್ರತಿಜ್ಞೆಯ ಕೆಲಸ ಪ್ರಗತಿಯಲ್ಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದ್ದಂತೆ ಕೆಲವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ಕೆಲವರು ಶೀಘ್ರದಲ್ಲೇ ಸೇರಲಿದ್ದಾರೆ. ಇದು ಟ್ರೈಲರ್ ಮಾತ್ರ. ಪೂರ್ತಿ ಸಿನಿಮಾ ಇನ್ನು ಬಾಕಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸರ್ಕಾರವು 100 ದಿನ ಪೂರೈಸಿದ ಕಾರ್ಯಕ್ರಮದಲ್ಲಿ ಗುಡುಗಿದ್ದಾರೆ.

“ನಮ್ಮ ಹೋರಾಟವು ಭ್ರಷ್ಟಾಚಾರದ ವಿರುದ್ಧವಾಗಿದೆ ಮತ್ತು ಅಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳ ವಿರುದ್ಧ 100 ದಿನಗಳಲ್ಲಿ ನಾವು ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಅವರಲ್ಲಿ ಕೆಲವರನ್ನು ಜೈಲಿಗೆ ಕಳುಹಿಸಲಾಗಿದೆ. ಭ್ರಷ್ಟಾಚಾರವನ್ನು ಕೊನೆಗೊಳಿಸುವುದೇ ತಮ್ಮ ಸರ್ಕಾರದ ಗುರಿ”ಎಂದು ಪ್ರಧಾನಿ ಮೋದಿಯವರು ಜಾರ್ಖಂಡ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

ಆಡಳಿತದ ಮೊದಲ 100 ದಿನಗಳಲ್ಲಿ ತಮ್ಮ ಕ್ಯಾಬಿನೆಟ್ ಸಾಧಿಸಿದ ಸಾಧನೆಗಳು ಕೇವಲ “ಟ್ರೈಲರ್”, ಮತ್ತು ಮುಂದಿನ ವರ್ಷಗಳಲ್ಲಿ ಸಂಪೂರ್ಣ ಚಿತ್ರಣ ಹೊರಹೊಮ್ಮಲಿದೆ. “ಚುನಾವಣೆಗೆ ಮುಂಚಿತವಾಗಿ, ನಾನು ಬಲವಾದ ಮತ್ತು ಕೆಲಸ-ಆಧಾರಿತ ಸರ್ಕಾರವನ್ನು ರಚಿಸುವ ಭರವಸೆ ನೀಡಿದ್ದೆ – ಹಿಂದಿನ ಸರ್ಕಾರಕ್ಕಿಂತಲೂ ವೇಗವಾಗಿ ಕೆಲಸ ಮಾಡುವ ಈ ಸರ್ಕಾರ, ನಿಮ್ಮ ಎಲ್ಲ ಆಕಾಂಕ್ಷೆಗಳನ್ನು ನನಸಾಗಿಸಲು ಶ್ರಮಿಸುವ ಸರ್ಕಾರ ಎಂದು ಹೇಳಿದ್ದಾರೆ.

ದೇಶದ ಸರ್ವತೋಮುಖ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ಅದನ್ನು ಲೂಟಿ ಮಾಡುವವರಿಗೆ ಶಿಕ್ಷೆ ವಿಧಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಅಭಿವೃದ್ಧಿಯು ನಮ್ಮ ಭರವಸೆ ಮತ್ತು ಉದ್ದೇಶವಾಗಿದೆ. ದೇಶವು ಈ ರೀತಿಯ ಅಭಿವೃದ್ಧಿಯ ವೇಗವನ್ನು ಈ ಹಿಂದೆ ನೋಡಿಲ್ಲ” ಎಂದು ಅವರು ಹೇಳಿದರು. ಅದೇ ಸಮಯದಲ್ಲಿ, “ನಮ್ಮ ಸರ್ಕಾರ ಬಂದ ನಂತರ ಭ್ರಷ್ಟಾಚಾರದ ಮೇಲೆ ಭಾರಿ ದಬ್ಬಾಳಿಕೆ ಪ್ರಾರಂಭವಾಗಿದೆ. ಸಾರ್ವಜನಿಕರನ್ನು ಲೂಟಿ ಮಾಡಲು ಪ್ರಯತ್ನಿಸುವ ಜನರಿಗೆ ಸರಿಯಾದ ಸ್ಥಳಗಳನ್ನು ತೋರಿಸಲಾಗುತ್ತದೆ, ”ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಪ್ರತಿಪಕ್ಷ ಕಾಂಗ್ರೆಸ್ 100 ದಿನಗಳ ಅವಧಿಯ ಬಿಜೆಪಿಯ ಕ್ರಮವನ್ನು ಟೀಕಿಸಿದೆ. “ಬಿಜೆಪಿ 2.0 ಯ ಮೊದಲ 100 ದಿನಗಳನ್ನು ದಬ್ಬಾಳಿಕೆ, ಅವ್ಯವಸ್ಥೆ ಮತ್ತು ಅರಾಜಕತೆ ಎಂದು ಮೂರು ಪದಗಳಲ್ಲಿ ವಿವರಿಸಬಹುದು” ಎಂದು ಪಕ್ಷವು ಹೇಳಿದೆ, ಕೈಗಾರಿಕಾ ವಲಯದಲ್ಲಿನ ಮಂದಗತಿ ಮತ್ತು ದೇಶದ ಜಿ.ಡಿ.ಪಿ ಬೆಳವಣಿಗೆಯು ಶೇಕಡಾ 5 ಕ್ಕೆ ಇಳಿದಿದೆ. “ಎಂಟು ವಲಯಗಳು ಶೇಕಡಾ 2 ಕ್ಕಿಂತ ಕಡಿಮೆ ಬೆಳವಣಿಗೆಯ ದರವನ್ನು ದಾಖಲಿಸಿವೆ. ನಮ್ಮ ಆರ್ಥಿಕತೆಯು ತೀವ್ರ ಕುಸಿತದಲ್ಲಿದೆ ಎಂದು ಒಪ್ಪಿಕೊಳ್ಳಲು ನಮ್ಮ ಕೇಂದ್ರ ಹಣಕಾಸು ಸಚಿವರು ಇನ್ನೂ ನಿರಾಕರಿಸುತ್ತಿದ್ದಾರೆ. ಬಿಜೆಪಿಯ ಈ ನಿರ್ಲಕ್ಷ್ಯ ಮತ್ತು ವಂಚನೆಯು ಇದೇ ಹಾದಿಯಲ್ಲಿ ಮುಂದುವರಿದರೆ, ನಾವು ಆರ್ಥಿಕ ಹಿಂಜರಿತದತ್ತ ಸಾಗುತ್ತೇವೆ ಎಂದು ಕಾಂಗ್ರೆಸ್ ಟೀಕಿಸಿದೆ.

ಸ್ವತಃ ಖ್ಯಾತ ಅರ್ಥಶಾಸ್ತ್ರಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಈ ತಿಂಗಳ ಆರಂಭದಲ್ಲಿ ತನ್ನ ಕಾರ್ಯ ವಿಧಾನವನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದರು. “ಈ ಹಾದಿಯಲ್ಲಿ ಮುಂದುವರಿಯಲು ಭಾರತಕ್ಕೆ ಸಾಧ್ಯವಿಲ್ಲ. ಆದ್ದರಿಂದ, ನಮ್ಮ ಆರ್ಥಿಕತೆಯನ್ನು ಈ ಬಿಕ್ಕಟ್ಟಿನಿಂದ ದೂರವಿರಿಸಲು ದ್ವೇಷ ರಾಜಕೀಯವನ್ನು ಬದಿಗಿಟ್ಟು, ಮತ್ತು ಎಲ್ಲಾ ವಿವೇಕದ ಧ್ವನಿಗಳು ಮತ್ತು ಆಲೋಚನಾ ಮನಸ್ಸುಗಳನ್ನು ತಲುಪಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದ್ದರು.

ಕಳೆದ ಕೆಲವು ವಾರಗಳಿಂದ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನ ಪ್ರಮುಖ ನಾಯಕರಾದ ಪಿ.ಚಿದಂಬರಂ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ನರೇಂದ್ರ ಮೋದಿ ಸರ್ಕಾರದ ರಾಜಕೀಯ ಕುತಂತ್ರವಾಗಿದೆ. ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 21 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕಾಂಗ್ರೆಸ್ ನ ಪಿ ಚಿದಂಬರಂ ಅವರನ್ನು ಬಂಧಿಸಲಾಗಿತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಚಿದಂಬರಂ ಹಣಕಾಸು ಸಚಿವರಾಗಿದ್ದಾಗ 2007 ರಲ್ಲಿ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ವಿದೇಶಿ ಹೂಡಿಕೆಗೆ ಸರ್ಕಾರದ ಅನುಮೋದನೆಯೊಂದಿಗೆ ಭ್ರಷ್ಟಾಚಾರದ ಪ್ರಕರಣ ಸಂಬಂಧ ಹೊಂದಿದೆ. ಕಳೆದ ವಾರ 14 ದಿನಗಳ ನ್ಯಾಯಾಂಗ ಬಂಧನಕ್ಕಾಗಿ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು.

ಪಿ ಚಿದಂಬರಂ ಮತ್ತು ಅವರ ಮಗ ಕಾರ್ತಿ ಇಬ್ಬರೂ ಎಲ್ಲಾ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದಾರೆ ಮತ್ತು ಮೋದಿ ಸರ್ಕಾರವು “ರಾಜಕೀಯ ದುರುದ್ದೇಶದಿಂದ” ಪ್ರೇರೇಪಿಸಲ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಎರಡನೇ ಅವಧಿಗೆ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ತಿಂಗಳಲ್ಲಿ ದೇಶದ ಪ್ರಮುಖ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ವಿರೋಧಿ ಏಜೆನ್ಸಿಗಳಾದ ಕೇಂದ್ರ ತನಿಖಾ ಮತ್ತು ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಹಲವಾರು ಉನ್ನತ ರಾಜಕೀಯ ಮುಖಂಡರನ್ನು ಬಂಧಿಸಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ನಾಯಕರನ್ನು ಬೆದರಿಸಲು ಅಥವಾ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...