Homeಮುಖಪುಟಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

ಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

- Advertisement -
- Advertisement -

ಭ್ರಷ್ಟರನ್ನು ಜೈಲಿಗೆ ತಳ್ಳುವ ನಮ್ಮ ಪ್ರತಿಜ್ಞೆಯ ಕೆಲಸ ಪ್ರಗತಿಯಲ್ಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದ್ದಂತೆ ಕೆಲವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ಕೆಲವರು ಶೀಘ್ರದಲ್ಲೇ ಸೇರಲಿದ್ದಾರೆ. ಇದು ಟ್ರೈಲರ್ ಮಾತ್ರ. ಪೂರ್ತಿ ಸಿನಿಮಾ ಇನ್ನು ಬಾಕಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸರ್ಕಾರವು 100 ದಿನ ಪೂರೈಸಿದ ಕಾರ್ಯಕ್ರಮದಲ್ಲಿ ಗುಡುಗಿದ್ದಾರೆ.

“ನಮ್ಮ ಹೋರಾಟವು ಭ್ರಷ್ಟಾಚಾರದ ವಿರುದ್ಧವಾಗಿದೆ ಮತ್ತು ಅಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳ ವಿರುದ್ಧ 100 ದಿನಗಳಲ್ಲಿ ನಾವು ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಅವರಲ್ಲಿ ಕೆಲವರನ್ನು ಜೈಲಿಗೆ ಕಳುಹಿಸಲಾಗಿದೆ. ಭ್ರಷ್ಟಾಚಾರವನ್ನು ಕೊನೆಗೊಳಿಸುವುದೇ ತಮ್ಮ ಸರ್ಕಾರದ ಗುರಿ”ಎಂದು ಪ್ರಧಾನಿ ಮೋದಿಯವರು ಜಾರ್ಖಂಡ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

ಆಡಳಿತದ ಮೊದಲ 100 ದಿನಗಳಲ್ಲಿ ತಮ್ಮ ಕ್ಯಾಬಿನೆಟ್ ಸಾಧಿಸಿದ ಸಾಧನೆಗಳು ಕೇವಲ “ಟ್ರೈಲರ್”, ಮತ್ತು ಮುಂದಿನ ವರ್ಷಗಳಲ್ಲಿ ಸಂಪೂರ್ಣ ಚಿತ್ರಣ ಹೊರಹೊಮ್ಮಲಿದೆ. “ಚುನಾವಣೆಗೆ ಮುಂಚಿತವಾಗಿ, ನಾನು ಬಲವಾದ ಮತ್ತು ಕೆಲಸ-ಆಧಾರಿತ ಸರ್ಕಾರವನ್ನು ರಚಿಸುವ ಭರವಸೆ ನೀಡಿದ್ದೆ – ಹಿಂದಿನ ಸರ್ಕಾರಕ್ಕಿಂತಲೂ ವೇಗವಾಗಿ ಕೆಲಸ ಮಾಡುವ ಈ ಸರ್ಕಾರ, ನಿಮ್ಮ ಎಲ್ಲ ಆಕಾಂಕ್ಷೆಗಳನ್ನು ನನಸಾಗಿಸಲು ಶ್ರಮಿಸುವ ಸರ್ಕಾರ ಎಂದು ಹೇಳಿದ್ದಾರೆ.

ದೇಶದ ಸರ್ವತೋಮುಖ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ಅದನ್ನು ಲೂಟಿ ಮಾಡುವವರಿಗೆ ಶಿಕ್ಷೆ ವಿಧಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಅಭಿವೃದ್ಧಿಯು ನಮ್ಮ ಭರವಸೆ ಮತ್ತು ಉದ್ದೇಶವಾಗಿದೆ. ದೇಶವು ಈ ರೀತಿಯ ಅಭಿವೃದ್ಧಿಯ ವೇಗವನ್ನು ಈ ಹಿಂದೆ ನೋಡಿಲ್ಲ” ಎಂದು ಅವರು ಹೇಳಿದರು. ಅದೇ ಸಮಯದಲ್ಲಿ, “ನಮ್ಮ ಸರ್ಕಾರ ಬಂದ ನಂತರ ಭ್ರಷ್ಟಾಚಾರದ ಮೇಲೆ ಭಾರಿ ದಬ್ಬಾಳಿಕೆ ಪ್ರಾರಂಭವಾಗಿದೆ. ಸಾರ್ವಜನಿಕರನ್ನು ಲೂಟಿ ಮಾಡಲು ಪ್ರಯತ್ನಿಸುವ ಜನರಿಗೆ ಸರಿಯಾದ ಸ್ಥಳಗಳನ್ನು ತೋರಿಸಲಾಗುತ್ತದೆ, ”ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಪ್ರತಿಪಕ್ಷ ಕಾಂಗ್ರೆಸ್ 100 ದಿನಗಳ ಅವಧಿಯ ಬಿಜೆಪಿಯ ಕ್ರಮವನ್ನು ಟೀಕಿಸಿದೆ. “ಬಿಜೆಪಿ 2.0 ಯ ಮೊದಲ 100 ದಿನಗಳನ್ನು ದಬ್ಬಾಳಿಕೆ, ಅವ್ಯವಸ್ಥೆ ಮತ್ತು ಅರಾಜಕತೆ ಎಂದು ಮೂರು ಪದಗಳಲ್ಲಿ ವಿವರಿಸಬಹುದು” ಎಂದು ಪಕ್ಷವು ಹೇಳಿದೆ, ಕೈಗಾರಿಕಾ ವಲಯದಲ್ಲಿನ ಮಂದಗತಿ ಮತ್ತು ದೇಶದ ಜಿ.ಡಿ.ಪಿ ಬೆಳವಣಿಗೆಯು ಶೇಕಡಾ 5 ಕ್ಕೆ ಇಳಿದಿದೆ. “ಎಂಟು ವಲಯಗಳು ಶೇಕಡಾ 2 ಕ್ಕಿಂತ ಕಡಿಮೆ ಬೆಳವಣಿಗೆಯ ದರವನ್ನು ದಾಖಲಿಸಿವೆ. ನಮ್ಮ ಆರ್ಥಿಕತೆಯು ತೀವ್ರ ಕುಸಿತದಲ್ಲಿದೆ ಎಂದು ಒಪ್ಪಿಕೊಳ್ಳಲು ನಮ್ಮ ಕೇಂದ್ರ ಹಣಕಾಸು ಸಚಿವರು ಇನ್ನೂ ನಿರಾಕರಿಸುತ್ತಿದ್ದಾರೆ. ಬಿಜೆಪಿಯ ಈ ನಿರ್ಲಕ್ಷ್ಯ ಮತ್ತು ವಂಚನೆಯು ಇದೇ ಹಾದಿಯಲ್ಲಿ ಮುಂದುವರಿದರೆ, ನಾವು ಆರ್ಥಿಕ ಹಿಂಜರಿತದತ್ತ ಸಾಗುತ್ತೇವೆ ಎಂದು ಕಾಂಗ್ರೆಸ್ ಟೀಕಿಸಿದೆ.

ಸ್ವತಃ ಖ್ಯಾತ ಅರ್ಥಶಾಸ್ತ್ರಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಈ ತಿಂಗಳ ಆರಂಭದಲ್ಲಿ ತನ್ನ ಕಾರ್ಯ ವಿಧಾನವನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದರು. “ಈ ಹಾದಿಯಲ್ಲಿ ಮುಂದುವರಿಯಲು ಭಾರತಕ್ಕೆ ಸಾಧ್ಯವಿಲ್ಲ. ಆದ್ದರಿಂದ, ನಮ್ಮ ಆರ್ಥಿಕತೆಯನ್ನು ಈ ಬಿಕ್ಕಟ್ಟಿನಿಂದ ದೂರವಿರಿಸಲು ದ್ವೇಷ ರಾಜಕೀಯವನ್ನು ಬದಿಗಿಟ್ಟು, ಮತ್ತು ಎಲ್ಲಾ ವಿವೇಕದ ಧ್ವನಿಗಳು ಮತ್ತು ಆಲೋಚನಾ ಮನಸ್ಸುಗಳನ್ನು ತಲುಪಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದ್ದರು.

ಕಳೆದ ಕೆಲವು ವಾರಗಳಿಂದ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನ ಪ್ರಮುಖ ನಾಯಕರಾದ ಪಿ.ಚಿದಂಬರಂ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ನರೇಂದ್ರ ಮೋದಿ ಸರ್ಕಾರದ ರಾಜಕೀಯ ಕುತಂತ್ರವಾಗಿದೆ. ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 21 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕಾಂಗ್ರೆಸ್ ನ ಪಿ ಚಿದಂಬರಂ ಅವರನ್ನು ಬಂಧಿಸಲಾಗಿತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಚಿದಂಬರಂ ಹಣಕಾಸು ಸಚಿವರಾಗಿದ್ದಾಗ 2007 ರಲ್ಲಿ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ವಿದೇಶಿ ಹೂಡಿಕೆಗೆ ಸರ್ಕಾರದ ಅನುಮೋದನೆಯೊಂದಿಗೆ ಭ್ರಷ್ಟಾಚಾರದ ಪ್ರಕರಣ ಸಂಬಂಧ ಹೊಂದಿದೆ. ಕಳೆದ ವಾರ 14 ದಿನಗಳ ನ್ಯಾಯಾಂಗ ಬಂಧನಕ್ಕಾಗಿ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು.

ಪಿ ಚಿದಂಬರಂ ಮತ್ತು ಅವರ ಮಗ ಕಾರ್ತಿ ಇಬ್ಬರೂ ಎಲ್ಲಾ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದಾರೆ ಮತ್ತು ಮೋದಿ ಸರ್ಕಾರವು “ರಾಜಕೀಯ ದುರುದ್ದೇಶದಿಂದ” ಪ್ರೇರೇಪಿಸಲ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಎರಡನೇ ಅವಧಿಗೆ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ತಿಂಗಳಲ್ಲಿ ದೇಶದ ಪ್ರಮುಖ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ವಿರೋಧಿ ಏಜೆನ್ಸಿಗಳಾದ ಕೇಂದ್ರ ತನಿಖಾ ಮತ್ತು ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಹಲವಾರು ಉನ್ನತ ರಾಜಕೀಯ ಮುಖಂಡರನ್ನು ಬಂಧಿಸಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ನಾಯಕರನ್ನು ಬೆದರಿಸಲು ಅಥವಾ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...