Homeಮುಖಪುಟಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

ಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

- Advertisement -
- Advertisement -

ಭ್ರಷ್ಟರನ್ನು ಜೈಲಿಗೆ ತಳ್ಳುವ ನಮ್ಮ ಪ್ರತಿಜ್ಞೆಯ ಕೆಲಸ ಪ್ರಗತಿಯಲ್ಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದ್ದಂತೆ ಕೆಲವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ಕೆಲವರು ಶೀಘ್ರದಲ್ಲೇ ಸೇರಲಿದ್ದಾರೆ. ಇದು ಟ್ರೈಲರ್ ಮಾತ್ರ. ಪೂರ್ತಿ ಸಿನಿಮಾ ಇನ್ನು ಬಾಕಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸರ್ಕಾರವು 100 ದಿನ ಪೂರೈಸಿದ ಕಾರ್ಯಕ್ರಮದಲ್ಲಿ ಗುಡುಗಿದ್ದಾರೆ.

“ನಮ್ಮ ಹೋರಾಟವು ಭ್ರಷ್ಟಾಚಾರದ ವಿರುದ್ಧವಾಗಿದೆ ಮತ್ತು ಅಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳ ವಿರುದ್ಧ 100 ದಿನಗಳಲ್ಲಿ ನಾವು ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಅವರಲ್ಲಿ ಕೆಲವರನ್ನು ಜೈಲಿಗೆ ಕಳುಹಿಸಲಾಗಿದೆ. ಭ್ರಷ್ಟಾಚಾರವನ್ನು ಕೊನೆಗೊಳಿಸುವುದೇ ತಮ್ಮ ಸರ್ಕಾರದ ಗುರಿ”ಎಂದು ಪ್ರಧಾನಿ ಮೋದಿಯವರು ಜಾರ್ಖಂಡ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

ಆಡಳಿತದ ಮೊದಲ 100 ದಿನಗಳಲ್ಲಿ ತಮ್ಮ ಕ್ಯಾಬಿನೆಟ್ ಸಾಧಿಸಿದ ಸಾಧನೆಗಳು ಕೇವಲ “ಟ್ರೈಲರ್”, ಮತ್ತು ಮುಂದಿನ ವರ್ಷಗಳಲ್ಲಿ ಸಂಪೂರ್ಣ ಚಿತ್ರಣ ಹೊರಹೊಮ್ಮಲಿದೆ. “ಚುನಾವಣೆಗೆ ಮುಂಚಿತವಾಗಿ, ನಾನು ಬಲವಾದ ಮತ್ತು ಕೆಲಸ-ಆಧಾರಿತ ಸರ್ಕಾರವನ್ನು ರಚಿಸುವ ಭರವಸೆ ನೀಡಿದ್ದೆ – ಹಿಂದಿನ ಸರ್ಕಾರಕ್ಕಿಂತಲೂ ವೇಗವಾಗಿ ಕೆಲಸ ಮಾಡುವ ಈ ಸರ್ಕಾರ, ನಿಮ್ಮ ಎಲ್ಲ ಆಕಾಂಕ್ಷೆಗಳನ್ನು ನನಸಾಗಿಸಲು ಶ್ರಮಿಸುವ ಸರ್ಕಾರ ಎಂದು ಹೇಳಿದ್ದಾರೆ.

ದೇಶದ ಸರ್ವತೋಮುಖ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ಅದನ್ನು ಲೂಟಿ ಮಾಡುವವರಿಗೆ ಶಿಕ್ಷೆ ವಿಧಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಅಭಿವೃದ್ಧಿಯು ನಮ್ಮ ಭರವಸೆ ಮತ್ತು ಉದ್ದೇಶವಾಗಿದೆ. ದೇಶವು ಈ ರೀತಿಯ ಅಭಿವೃದ್ಧಿಯ ವೇಗವನ್ನು ಈ ಹಿಂದೆ ನೋಡಿಲ್ಲ” ಎಂದು ಅವರು ಹೇಳಿದರು. ಅದೇ ಸಮಯದಲ್ಲಿ, “ನಮ್ಮ ಸರ್ಕಾರ ಬಂದ ನಂತರ ಭ್ರಷ್ಟಾಚಾರದ ಮೇಲೆ ಭಾರಿ ದಬ್ಬಾಳಿಕೆ ಪ್ರಾರಂಭವಾಗಿದೆ. ಸಾರ್ವಜನಿಕರನ್ನು ಲೂಟಿ ಮಾಡಲು ಪ್ರಯತ್ನಿಸುವ ಜನರಿಗೆ ಸರಿಯಾದ ಸ್ಥಳಗಳನ್ನು ತೋರಿಸಲಾಗುತ್ತದೆ, ”ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಪ್ರತಿಪಕ್ಷ ಕಾಂಗ್ರೆಸ್ 100 ದಿನಗಳ ಅವಧಿಯ ಬಿಜೆಪಿಯ ಕ್ರಮವನ್ನು ಟೀಕಿಸಿದೆ. “ಬಿಜೆಪಿ 2.0 ಯ ಮೊದಲ 100 ದಿನಗಳನ್ನು ದಬ್ಬಾಳಿಕೆ, ಅವ್ಯವಸ್ಥೆ ಮತ್ತು ಅರಾಜಕತೆ ಎಂದು ಮೂರು ಪದಗಳಲ್ಲಿ ವಿವರಿಸಬಹುದು” ಎಂದು ಪಕ್ಷವು ಹೇಳಿದೆ, ಕೈಗಾರಿಕಾ ವಲಯದಲ್ಲಿನ ಮಂದಗತಿ ಮತ್ತು ದೇಶದ ಜಿ.ಡಿ.ಪಿ ಬೆಳವಣಿಗೆಯು ಶೇಕಡಾ 5 ಕ್ಕೆ ಇಳಿದಿದೆ. “ಎಂಟು ವಲಯಗಳು ಶೇಕಡಾ 2 ಕ್ಕಿಂತ ಕಡಿಮೆ ಬೆಳವಣಿಗೆಯ ದರವನ್ನು ದಾಖಲಿಸಿವೆ. ನಮ್ಮ ಆರ್ಥಿಕತೆಯು ತೀವ್ರ ಕುಸಿತದಲ್ಲಿದೆ ಎಂದು ಒಪ್ಪಿಕೊಳ್ಳಲು ನಮ್ಮ ಕೇಂದ್ರ ಹಣಕಾಸು ಸಚಿವರು ಇನ್ನೂ ನಿರಾಕರಿಸುತ್ತಿದ್ದಾರೆ. ಬಿಜೆಪಿಯ ಈ ನಿರ್ಲಕ್ಷ್ಯ ಮತ್ತು ವಂಚನೆಯು ಇದೇ ಹಾದಿಯಲ್ಲಿ ಮುಂದುವರಿದರೆ, ನಾವು ಆರ್ಥಿಕ ಹಿಂಜರಿತದತ್ತ ಸಾಗುತ್ತೇವೆ ಎಂದು ಕಾಂಗ್ರೆಸ್ ಟೀಕಿಸಿದೆ.

ಸ್ವತಃ ಖ್ಯಾತ ಅರ್ಥಶಾಸ್ತ್ರಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಈ ತಿಂಗಳ ಆರಂಭದಲ್ಲಿ ತನ್ನ ಕಾರ್ಯ ವಿಧಾನವನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದರು. “ಈ ಹಾದಿಯಲ್ಲಿ ಮುಂದುವರಿಯಲು ಭಾರತಕ್ಕೆ ಸಾಧ್ಯವಿಲ್ಲ. ಆದ್ದರಿಂದ, ನಮ್ಮ ಆರ್ಥಿಕತೆಯನ್ನು ಈ ಬಿಕ್ಕಟ್ಟಿನಿಂದ ದೂರವಿರಿಸಲು ದ್ವೇಷ ರಾಜಕೀಯವನ್ನು ಬದಿಗಿಟ್ಟು, ಮತ್ತು ಎಲ್ಲಾ ವಿವೇಕದ ಧ್ವನಿಗಳು ಮತ್ತು ಆಲೋಚನಾ ಮನಸ್ಸುಗಳನ್ನು ತಲುಪಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದ್ದರು.

ಕಳೆದ ಕೆಲವು ವಾರಗಳಿಂದ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನ ಪ್ರಮುಖ ನಾಯಕರಾದ ಪಿ.ಚಿದಂಬರಂ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ನರೇಂದ್ರ ಮೋದಿ ಸರ್ಕಾರದ ರಾಜಕೀಯ ಕುತಂತ್ರವಾಗಿದೆ. ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 21 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕಾಂಗ್ರೆಸ್ ನ ಪಿ ಚಿದಂಬರಂ ಅವರನ್ನು ಬಂಧಿಸಲಾಗಿತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಚಿದಂಬರಂ ಹಣಕಾಸು ಸಚಿವರಾಗಿದ್ದಾಗ 2007 ರಲ್ಲಿ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ವಿದೇಶಿ ಹೂಡಿಕೆಗೆ ಸರ್ಕಾರದ ಅನುಮೋದನೆಯೊಂದಿಗೆ ಭ್ರಷ್ಟಾಚಾರದ ಪ್ರಕರಣ ಸಂಬಂಧ ಹೊಂದಿದೆ. ಕಳೆದ ವಾರ 14 ದಿನಗಳ ನ್ಯಾಯಾಂಗ ಬಂಧನಕ್ಕಾಗಿ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು.

ಪಿ ಚಿದಂಬರಂ ಮತ್ತು ಅವರ ಮಗ ಕಾರ್ತಿ ಇಬ್ಬರೂ ಎಲ್ಲಾ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದಾರೆ ಮತ್ತು ಮೋದಿ ಸರ್ಕಾರವು “ರಾಜಕೀಯ ದುರುದ್ದೇಶದಿಂದ” ಪ್ರೇರೇಪಿಸಲ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಎರಡನೇ ಅವಧಿಗೆ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ತಿಂಗಳಲ್ಲಿ ದೇಶದ ಪ್ರಮುಖ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ವಿರೋಧಿ ಏಜೆನ್ಸಿಗಳಾದ ಕೇಂದ್ರ ತನಿಖಾ ಮತ್ತು ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಹಲವಾರು ಉನ್ನತ ರಾಜಕೀಯ ಮುಖಂಡರನ್ನು ಬಂಧಿಸಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ನಾಯಕರನ್ನು ಬೆದರಿಸಲು ಅಥವಾ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...