Homeಮುಖಪುಟಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

ಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

- Advertisement -
- Advertisement -

ಭ್ರಷ್ಟರನ್ನು ಜೈಲಿಗೆ ತಳ್ಳುವ ನಮ್ಮ ಪ್ರತಿಜ್ಞೆಯ ಕೆಲಸ ಪ್ರಗತಿಯಲ್ಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದ್ದಂತೆ ಕೆಲವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ಕೆಲವರು ಶೀಘ್ರದಲ್ಲೇ ಸೇರಲಿದ್ದಾರೆ. ಇದು ಟ್ರೈಲರ್ ಮಾತ್ರ. ಪೂರ್ತಿ ಸಿನಿಮಾ ಇನ್ನು ಬಾಕಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸರ್ಕಾರವು 100 ದಿನ ಪೂರೈಸಿದ ಕಾರ್ಯಕ್ರಮದಲ್ಲಿ ಗುಡುಗಿದ್ದಾರೆ.

“ನಮ್ಮ ಹೋರಾಟವು ಭ್ರಷ್ಟಾಚಾರದ ವಿರುದ್ಧವಾಗಿದೆ ಮತ್ತು ಅಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳ ವಿರುದ್ಧ 100 ದಿನಗಳಲ್ಲಿ ನಾವು ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಅವರಲ್ಲಿ ಕೆಲವರನ್ನು ಜೈಲಿಗೆ ಕಳುಹಿಸಲಾಗಿದೆ. ಭ್ರಷ್ಟಾಚಾರವನ್ನು ಕೊನೆಗೊಳಿಸುವುದೇ ತಮ್ಮ ಸರ್ಕಾರದ ಗುರಿ”ಎಂದು ಪ್ರಧಾನಿ ಮೋದಿಯವರು ಜಾರ್ಖಂಡ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

ಆಡಳಿತದ ಮೊದಲ 100 ದಿನಗಳಲ್ಲಿ ತಮ್ಮ ಕ್ಯಾಬಿನೆಟ್ ಸಾಧಿಸಿದ ಸಾಧನೆಗಳು ಕೇವಲ “ಟ್ರೈಲರ್”, ಮತ್ತು ಮುಂದಿನ ವರ್ಷಗಳಲ್ಲಿ ಸಂಪೂರ್ಣ ಚಿತ್ರಣ ಹೊರಹೊಮ್ಮಲಿದೆ. “ಚುನಾವಣೆಗೆ ಮುಂಚಿತವಾಗಿ, ನಾನು ಬಲವಾದ ಮತ್ತು ಕೆಲಸ-ಆಧಾರಿತ ಸರ್ಕಾರವನ್ನು ರಚಿಸುವ ಭರವಸೆ ನೀಡಿದ್ದೆ – ಹಿಂದಿನ ಸರ್ಕಾರಕ್ಕಿಂತಲೂ ವೇಗವಾಗಿ ಕೆಲಸ ಮಾಡುವ ಈ ಸರ್ಕಾರ, ನಿಮ್ಮ ಎಲ್ಲ ಆಕಾಂಕ್ಷೆಗಳನ್ನು ನನಸಾಗಿಸಲು ಶ್ರಮಿಸುವ ಸರ್ಕಾರ ಎಂದು ಹೇಳಿದ್ದಾರೆ.

ದೇಶದ ಸರ್ವತೋಮುಖ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ಅದನ್ನು ಲೂಟಿ ಮಾಡುವವರಿಗೆ ಶಿಕ್ಷೆ ವಿಧಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಅಭಿವೃದ್ಧಿಯು ನಮ್ಮ ಭರವಸೆ ಮತ್ತು ಉದ್ದೇಶವಾಗಿದೆ. ದೇಶವು ಈ ರೀತಿಯ ಅಭಿವೃದ್ಧಿಯ ವೇಗವನ್ನು ಈ ಹಿಂದೆ ನೋಡಿಲ್ಲ” ಎಂದು ಅವರು ಹೇಳಿದರು. ಅದೇ ಸಮಯದಲ್ಲಿ, “ನಮ್ಮ ಸರ್ಕಾರ ಬಂದ ನಂತರ ಭ್ರಷ್ಟಾಚಾರದ ಮೇಲೆ ಭಾರಿ ದಬ್ಬಾಳಿಕೆ ಪ್ರಾರಂಭವಾಗಿದೆ. ಸಾರ್ವಜನಿಕರನ್ನು ಲೂಟಿ ಮಾಡಲು ಪ್ರಯತ್ನಿಸುವ ಜನರಿಗೆ ಸರಿಯಾದ ಸ್ಥಳಗಳನ್ನು ತೋರಿಸಲಾಗುತ್ತದೆ, ”ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಪ್ರತಿಪಕ್ಷ ಕಾಂಗ್ರೆಸ್ 100 ದಿನಗಳ ಅವಧಿಯ ಬಿಜೆಪಿಯ ಕ್ರಮವನ್ನು ಟೀಕಿಸಿದೆ. “ಬಿಜೆಪಿ 2.0 ಯ ಮೊದಲ 100 ದಿನಗಳನ್ನು ದಬ್ಬಾಳಿಕೆ, ಅವ್ಯವಸ್ಥೆ ಮತ್ತು ಅರಾಜಕತೆ ಎಂದು ಮೂರು ಪದಗಳಲ್ಲಿ ವಿವರಿಸಬಹುದು” ಎಂದು ಪಕ್ಷವು ಹೇಳಿದೆ, ಕೈಗಾರಿಕಾ ವಲಯದಲ್ಲಿನ ಮಂದಗತಿ ಮತ್ತು ದೇಶದ ಜಿ.ಡಿ.ಪಿ ಬೆಳವಣಿಗೆಯು ಶೇಕಡಾ 5 ಕ್ಕೆ ಇಳಿದಿದೆ. “ಎಂಟು ವಲಯಗಳು ಶೇಕಡಾ 2 ಕ್ಕಿಂತ ಕಡಿಮೆ ಬೆಳವಣಿಗೆಯ ದರವನ್ನು ದಾಖಲಿಸಿವೆ. ನಮ್ಮ ಆರ್ಥಿಕತೆಯು ತೀವ್ರ ಕುಸಿತದಲ್ಲಿದೆ ಎಂದು ಒಪ್ಪಿಕೊಳ್ಳಲು ನಮ್ಮ ಕೇಂದ್ರ ಹಣಕಾಸು ಸಚಿವರು ಇನ್ನೂ ನಿರಾಕರಿಸುತ್ತಿದ್ದಾರೆ. ಬಿಜೆಪಿಯ ಈ ನಿರ್ಲಕ್ಷ್ಯ ಮತ್ತು ವಂಚನೆಯು ಇದೇ ಹಾದಿಯಲ್ಲಿ ಮುಂದುವರಿದರೆ, ನಾವು ಆರ್ಥಿಕ ಹಿಂಜರಿತದತ್ತ ಸಾಗುತ್ತೇವೆ ಎಂದು ಕಾಂಗ್ರೆಸ್ ಟೀಕಿಸಿದೆ.

ಸ್ವತಃ ಖ್ಯಾತ ಅರ್ಥಶಾಸ್ತ್ರಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಈ ತಿಂಗಳ ಆರಂಭದಲ್ಲಿ ತನ್ನ ಕಾರ್ಯ ವಿಧಾನವನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದರು. “ಈ ಹಾದಿಯಲ್ಲಿ ಮುಂದುವರಿಯಲು ಭಾರತಕ್ಕೆ ಸಾಧ್ಯವಿಲ್ಲ. ಆದ್ದರಿಂದ, ನಮ್ಮ ಆರ್ಥಿಕತೆಯನ್ನು ಈ ಬಿಕ್ಕಟ್ಟಿನಿಂದ ದೂರವಿರಿಸಲು ದ್ವೇಷ ರಾಜಕೀಯವನ್ನು ಬದಿಗಿಟ್ಟು, ಮತ್ತು ಎಲ್ಲಾ ವಿವೇಕದ ಧ್ವನಿಗಳು ಮತ್ತು ಆಲೋಚನಾ ಮನಸ್ಸುಗಳನ್ನು ತಲುಪಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದ್ದರು.

ಕಳೆದ ಕೆಲವು ವಾರಗಳಿಂದ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನ ಪ್ರಮುಖ ನಾಯಕರಾದ ಪಿ.ಚಿದಂಬರಂ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ನರೇಂದ್ರ ಮೋದಿ ಸರ್ಕಾರದ ರಾಜಕೀಯ ಕುತಂತ್ರವಾಗಿದೆ. ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 21 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕಾಂಗ್ರೆಸ್ ನ ಪಿ ಚಿದಂಬರಂ ಅವರನ್ನು ಬಂಧಿಸಲಾಗಿತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಚಿದಂಬರಂ ಹಣಕಾಸು ಸಚಿವರಾಗಿದ್ದಾಗ 2007 ರಲ್ಲಿ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ವಿದೇಶಿ ಹೂಡಿಕೆಗೆ ಸರ್ಕಾರದ ಅನುಮೋದನೆಯೊಂದಿಗೆ ಭ್ರಷ್ಟಾಚಾರದ ಪ್ರಕರಣ ಸಂಬಂಧ ಹೊಂದಿದೆ. ಕಳೆದ ವಾರ 14 ದಿನಗಳ ನ್ಯಾಯಾಂಗ ಬಂಧನಕ್ಕಾಗಿ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು.

ಪಿ ಚಿದಂಬರಂ ಮತ್ತು ಅವರ ಮಗ ಕಾರ್ತಿ ಇಬ್ಬರೂ ಎಲ್ಲಾ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದಾರೆ ಮತ್ತು ಮೋದಿ ಸರ್ಕಾರವು “ರಾಜಕೀಯ ದುರುದ್ದೇಶದಿಂದ” ಪ್ರೇರೇಪಿಸಲ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಎರಡನೇ ಅವಧಿಗೆ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ತಿಂಗಳಲ್ಲಿ ದೇಶದ ಪ್ರಮುಖ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ವಿರೋಧಿ ಏಜೆನ್ಸಿಗಳಾದ ಕೇಂದ್ರ ತನಿಖಾ ಮತ್ತು ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಹಲವಾರು ಉನ್ನತ ರಾಜಕೀಯ ಮುಖಂಡರನ್ನು ಬಂಧಿಸಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ನಾಯಕರನ್ನು ಬೆದರಿಸಲು ಅಥವಾ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...