Homeನಿಜವೋ ಸುಳ್ಳೋಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ ಮೋದಿ ಹೇಳಿಕೆಗೆ ಸೃಜನಾತ್ಮಕ ಪ್ರತಿಕ್ರಿಯೆಗಳು

- Advertisement -
- Advertisement -

ನಿಮಗೆ ಗೊತ್ತಿರಬೇಕಾದ ಎಲ್ಲಾ ಮಾಹಿತಿಗಳು

ನ್ಯೂಸ್ ನೇಷನ್ ಎಂಬ ಟಿವಿ ಚಾನೆಲ್‍ಗೆ ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ನೀಡಿದ ಸಂದರ್ಶನವನ್ನು ಇನ್ನಾವುದಾದರೂ ಸಂದರ್ಶನದ ಜೊತೆ ಹೋಲಿಸಬೇಕೆಂದರೆ, ಅದನ್ನು 2018ರ ಜನವರಿ 22ರಂದು ಜೀ ಟಿವಿಗೆ ನೀಡಿದ ಸಂದರ್ಶನಕ್ಕೆ ಮಾತ್ರ ಹೋಲಿಸಬಹುದು. ಏಕೆಂದರೆ, ಅದರಲ್ಲಿ ಅವರ ಪ್ರಸಿದ್ಧ ‘ಪಕೋಡಾ ಹೇಳಿಕೆ’ ಹೊರಬಂದಿತ್ತು. ಇದೀಗ ನ್ಯೂಸ್ ನೇಷನ್‍ನಲ್ಲಿ ಅವರು ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ಯ ಕುರಿತು ಮಾತನಾಡಿದ್ದಾರೆ. ಈ ಸುದ್ದಿ ಪ್ರಸಾರವಾದ ನಂತರ ಇಲ್ಲಿಯವರೆಗೂ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಎಣೆಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳ ಹಲವು ಜನರ ಸೃಜನಶೀಲತೆಯ ಅಭಿವ್ಯಕ್ತಿಯಾಗಿಯೂ ಅದನ್ನು ನೋಡಬಹುದಾಗಿದೆ. ಅದರ ಸಂಪೂರ್ಣ ವಿವರವನ್ನು ಇಲ್ಲಿ ಕೊಡಲಾಗಿದೆ.

ಮೊದಲಿಗೆ, ಮೋದಿಯವರು ಹೇಳಿದ್ದೇನು ನೋಡೋಣ.

ಇದೇ ಸಂದರ್ಭದಲ್ಲಿ ಮೋದಿಯವರ ಬಯೋಗ್ಯಾಸ್‍ಗೆ ಸಂಬಂಧಿಸಿದ ಇನ್ನೊಂದು ಹೇಳಿಕೆಯನ್ನೂ ಹಲವರು ನೆನಪಿಸಿಕೊಂಡಿದ್ದಾರೆ.

ಉದಾಹರಣೆಗೆ ವಿಜಯ ಕರ್ನಾಟಕದ ಅಂಕಣಕಾರರಾಗಿದ್ದ ಚಿಂತಕ ಕೆ.ಪಿ.ಸುರೇಶ್‍ರವರು ಹಳೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

https://m.facebook.com/story.php?story_fbid=1474653089338603&id=100003817783883

ಇದಕ್ಕೆ ಸಂಬಂಧಿಸಿದ ಹಳೆಯ ಕಾರ್ಟೂನ್ ಸಹಾ ಇಲ್ಲಿದೆ ನೋಡಿ

ಉದ್ಯಮಿ ರಾಜಾರಾಂ ತಲ್ಲೂರು ಅವರು ಮೋದಿಯವರ ಎಂಟೈಲ್ ಪೊಲಿಟಿಕಲ್ ಸೈನ್ಸ್ ಡಿಗ್ರಿಯನ್ನು ತಾವು ಪಡೆದುಕೊಂಡಿರದೇ ಇರುವುದಕ್ಕೆ ‘ಬೇಸರ ವ್ಯಕ್ತಪಡಿಸಿ’ ಈ ಪೋಸ್ಟ್ ಹಾಕಿದ್ದಾರೆ.

ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್‍ನ ಮುಖಂಡ ಓಮರ್ ಅಬ್ದುಲ್ಲಾರು ಟ್ವೀಟಿಸಿದ್ದು ಹೀಗೆ.

ವಾಯುಪಡೆಯಲ್ಲಿದ್ದ ಅಧಿಕಾರಿ (ಈಗ ಮೋದಿಯವರ ಟೀಕಾಕಾರ) ರಾಜೀವ್ ತ್ಯಾಗಿಯವರಿಗೆ ತುಂಬಾ ಸಿಟ್ಟು ಬಂದಿದ್ದರೂ, ವೈಜ್ಞಾನಿಕವಾಗಿ ಮೋಡಗಳಿಗೂ ವಾಯುದಾಳಿಗೂ ಇರುವ ಸಂಬಂಧದ ಬಗ್ಗೆ ವಿವರಿಸಿದ್ದಾರೆ. ಅವರ ಪ್ರಕಾರ ಬೇರೆ ಬೇರೆ ಬಗೆಯ ಮೋಡಗಳಿರುತ್ತವೆ ಮತ್ತು ಆ ಮೋಡಗಳಿದ್ದಾಗ ಒಂದೋ ಅವು ಏನೂ ಸಮಸ್ಯೆ ಮಾಡುವುದಿಲ್ಲ, ಇಲ್ಲವೇ ಶತ್ರುಪಡೆಯ ರಾಡಾರ್‍ನ ಅಗತ್ಯವೇ ಇಲ್ಲದೇ ಅವೇ ಧ್ವಂಸಗೊಳ್ಳುತ್ತವೆ. ಇವೆಲ್ಲಾ ವಾಯುಪಡೆಗಳಿಗೆ ಗೊತ್ತಿರುವ ಸಂಗತಿ. ಆದರೆ, ಇದಕ್ಕೆ ವಿರುದ್ಧವಾದ ಸಂಗತಿಯನ್ನು ಒಬ್ಬ ಅನಕ್ಷರಸ್ಥನಿಂದ ಕೇಳಬೇಕಾದ ದುರ್ಗತಿ ವಾಯುಪಡೆಗೆ ಬಂದಿತಲ್ಲಾ ಎಂದು ಕಿಡಿಕಾರಿದ್ದಾರೆ.

https://m.facebook.com/story.php?story_fbid=10161734759650176&id=817450175

ವೈದ್ಯರಾದ ಡಾ.ಅಶೋಕ್ ಕೆ.ಆರ್ ಅವರು ಮೊದಲು ಇದು ಯಾರೋ ಸುಳ್ಳೇ ಸೃಷ್ಟಿ ಮಾಡಿರುವುದು ಎಂದುಕೊಂಡರಂತೆ. ನಂತರ ನಿಜ ಎಂದು ಗೊತ್ತಾಯಿತು ಎಂದಿದ್ದಾರೆ. ಅವರಿಗೆ ಪ್ರತಿಕ್ರಿಯಿಸಿರುವ ಡಾ.ಸುಶಿ ಕಾಡನಕುಪ್ಪೆ ಸಹಾ ಅದೇ ಅಭಿಪ್ರಾಯವನ್ನು ಕಮೆಂಟಿಸಿದ್ದಾರೆ.

ಹಾಗೆಯೇ ಇನ್ನೊಬ್ಬ ನೆಟ್ಟಿಗರು ಹೀಗೆ ಹೇಳುತ್ತಾರೆ.

‘ಇದರಲ್ಲಿ ತಮಾಶೆ ಏನೂ ಇಲ್ಲ. ನಮ್ಮ ಮೋದಿಜಿಗೆ ಮತ್ತೆ ಅಧಿಕಾರ ಸಿಕ್ಕರೆ ಸೂರ್ಯನಿಗೂ ಮನುಷ್ಯರನ್ನು ಕಳಿಸುತ್ತಾರೆ. ಮೊದಲ ಬಾರಿ ಸೂರ್ಯಯಾನಕ್ಕೆ ತನ್ನ ಶಿಷ್ಯಂದಿರಾದ ಸಂಬಿತ್ ಪಾತ್ರ ಮತ್ತು ತೇಜಸ್ವಿ ಸೂರ್ಯಗಳನ್ನು ಕಳಿಸಬಹುದು. ಪಬ್ಲಿಸಿಟಿ ಜಾಸ್ತಿ ಸಿಗೋದರಿಂದ ತಾನೇ ಹೋದರೂ ಹೋಗಬಹುದು.’

ಎಲ್ಲಕ್ಕಿಂತ ಸತೀಶ್ ಆಚಾರ್ಯ ಅವರ ಕಾರ್ಟೂನು ಮೋದಿಯವರನ್ನು ವ್ಯಂಗ್ಯ ಮಾಡುವುದರಲ್ಲಿ ಸಾಕಷ್ಟು ಮುಂದೆ ಹೋಗಿದೆ. ಇಸ್ರೋದ ವಿಜ್ಞಾನಿಗಳಿಗೆ ಸೂರ್ಯಯಾನಕ್ಕೆ ತಯಾರಿ ಮಾಡಲು ಸೂಚಿಸುವ ಮೋದಿ, ನಾವು ಸೂರ್ಯನಲ್ಲಿಗೆ ರಾತ್ರಿ ಹೋದರಾಯಿತು ಎನ್ನುತ್ತಿದ್ದಾರೆ.

ಇನ್ನು ಚಂದ್ರಯಾನವನ್ನೂ ನೆಟ್ಟಿಗರು ಬಿಟ್ಟಿಲ್ಲ. ಚಂದ್ರನ ಮೇಲೆ ಲ್ಯಾಂಡ್ ಆಗಲು ಕಡಿಮೆ ಜಾಗವಿದೆ ಎಂದು ಹೇಳುವ ವಿಜ್ಞಾನಿಗಳಿಗೆ, ‘ಹುಣ್ಣಿಮೆಯ ದಿನ ಹೋದರೆ ಚಂದ್ರ ದೊಡ್ಡದಾಗಿರುತ್ತಾನೆ’ ಎಂಬ ಸಲಹೆ ನೀಡುತ್ತಾರಂತೆ.

ಇದಲ್ಲದೇ ಮತ್ತೊಂದು ಪೋಸ್ಟ್ ಹೀಗೆ ಹೇಳುತ್ತದೆ.

‘ಮೋದಿಯವರು ವಿಮಾನಗಳಿಗೆ ರಿವರ್ಸ್ ಗೇರ್‍ನಲ್ಲಿ ಹೋಗಲು ಸೂಚಿಸಿದ್ದರಂತೆ. ಅದರಿಂದ ಪಾಕಿಸ್ತಾನಕ್ಕೆ ವಿಮಾನಗಳು ಬರುತ್ತಿವೆಯಾ, ಹೋಗುತ್ತಿವೆಯಾ ಎಂದು ಗೊತ್ತಾಗಲಿಲ್ಲ’

ಇನ್ನು ಮೋಡವೆಂದರೆ, ರಾಡಾರ್ ಎಂದರೆ ಮೋದಿಯವರು ಏನು ತಿಳಿದುಕೊಂಡಿರಬಹುದು ಎಂಬ ಕುರಿತೂ ಹಲವು ಕಾರ್ಟೂನ್‍ಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...