Homeನಿಜವೋ ಸುಳ್ಳೋಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ ಮೋದಿ ಹೇಳಿಕೆಗೆ ಸೃಜನಾತ್ಮಕ ಪ್ರತಿಕ್ರಿಯೆಗಳು

- Advertisement -
- Advertisement -

ನಿಮಗೆ ಗೊತ್ತಿರಬೇಕಾದ ಎಲ್ಲಾ ಮಾಹಿತಿಗಳು

ನ್ಯೂಸ್ ನೇಷನ್ ಎಂಬ ಟಿವಿ ಚಾನೆಲ್‍ಗೆ ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ನೀಡಿದ ಸಂದರ್ಶನವನ್ನು ಇನ್ನಾವುದಾದರೂ ಸಂದರ್ಶನದ ಜೊತೆ ಹೋಲಿಸಬೇಕೆಂದರೆ, ಅದನ್ನು 2018ರ ಜನವರಿ 22ರಂದು ಜೀ ಟಿವಿಗೆ ನೀಡಿದ ಸಂದರ್ಶನಕ್ಕೆ ಮಾತ್ರ ಹೋಲಿಸಬಹುದು. ಏಕೆಂದರೆ, ಅದರಲ್ಲಿ ಅವರ ಪ್ರಸಿದ್ಧ ‘ಪಕೋಡಾ ಹೇಳಿಕೆ’ ಹೊರಬಂದಿತ್ತು. ಇದೀಗ ನ್ಯೂಸ್ ನೇಷನ್‍ನಲ್ಲಿ ಅವರು ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ಯ ಕುರಿತು ಮಾತನಾಡಿದ್ದಾರೆ. ಈ ಸುದ್ದಿ ಪ್ರಸಾರವಾದ ನಂತರ ಇಲ್ಲಿಯವರೆಗೂ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಎಣೆಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳ ಹಲವು ಜನರ ಸೃಜನಶೀಲತೆಯ ಅಭಿವ್ಯಕ್ತಿಯಾಗಿಯೂ ಅದನ್ನು ನೋಡಬಹುದಾಗಿದೆ. ಅದರ ಸಂಪೂರ್ಣ ವಿವರವನ್ನು ಇಲ್ಲಿ ಕೊಡಲಾಗಿದೆ.

ಮೊದಲಿಗೆ, ಮೋದಿಯವರು ಹೇಳಿದ್ದೇನು ನೋಡೋಣ.

ಇದೇ ಸಂದರ್ಭದಲ್ಲಿ ಮೋದಿಯವರ ಬಯೋಗ್ಯಾಸ್‍ಗೆ ಸಂಬಂಧಿಸಿದ ಇನ್ನೊಂದು ಹೇಳಿಕೆಯನ್ನೂ ಹಲವರು ನೆನಪಿಸಿಕೊಂಡಿದ್ದಾರೆ.

ಉದಾಹರಣೆಗೆ ವಿಜಯ ಕರ್ನಾಟಕದ ಅಂಕಣಕಾರರಾಗಿದ್ದ ಚಿಂತಕ ಕೆ.ಪಿ.ಸುರೇಶ್‍ರವರು ಹಳೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

https://m.facebook.com/story.php?story_fbid=1474653089338603&id=100003817783883

ಇದಕ್ಕೆ ಸಂಬಂಧಿಸಿದ ಹಳೆಯ ಕಾರ್ಟೂನ್ ಸಹಾ ಇಲ್ಲಿದೆ ನೋಡಿ

ಉದ್ಯಮಿ ರಾಜಾರಾಂ ತಲ್ಲೂರು ಅವರು ಮೋದಿಯವರ ಎಂಟೈಲ್ ಪೊಲಿಟಿಕಲ್ ಸೈನ್ಸ್ ಡಿಗ್ರಿಯನ್ನು ತಾವು ಪಡೆದುಕೊಂಡಿರದೇ ಇರುವುದಕ್ಕೆ ‘ಬೇಸರ ವ್ಯಕ್ತಪಡಿಸಿ’ ಈ ಪೋಸ್ಟ್ ಹಾಕಿದ್ದಾರೆ.

ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್‍ನ ಮುಖಂಡ ಓಮರ್ ಅಬ್ದುಲ್ಲಾರು ಟ್ವೀಟಿಸಿದ್ದು ಹೀಗೆ.

ವಾಯುಪಡೆಯಲ್ಲಿದ್ದ ಅಧಿಕಾರಿ (ಈಗ ಮೋದಿಯವರ ಟೀಕಾಕಾರ) ರಾಜೀವ್ ತ್ಯಾಗಿಯವರಿಗೆ ತುಂಬಾ ಸಿಟ್ಟು ಬಂದಿದ್ದರೂ, ವೈಜ್ಞಾನಿಕವಾಗಿ ಮೋಡಗಳಿಗೂ ವಾಯುದಾಳಿಗೂ ಇರುವ ಸಂಬಂಧದ ಬಗ್ಗೆ ವಿವರಿಸಿದ್ದಾರೆ. ಅವರ ಪ್ರಕಾರ ಬೇರೆ ಬೇರೆ ಬಗೆಯ ಮೋಡಗಳಿರುತ್ತವೆ ಮತ್ತು ಆ ಮೋಡಗಳಿದ್ದಾಗ ಒಂದೋ ಅವು ಏನೂ ಸಮಸ್ಯೆ ಮಾಡುವುದಿಲ್ಲ, ಇಲ್ಲವೇ ಶತ್ರುಪಡೆಯ ರಾಡಾರ್‍ನ ಅಗತ್ಯವೇ ಇಲ್ಲದೇ ಅವೇ ಧ್ವಂಸಗೊಳ್ಳುತ್ತವೆ. ಇವೆಲ್ಲಾ ವಾಯುಪಡೆಗಳಿಗೆ ಗೊತ್ತಿರುವ ಸಂಗತಿ. ಆದರೆ, ಇದಕ್ಕೆ ವಿರುದ್ಧವಾದ ಸಂಗತಿಯನ್ನು ಒಬ್ಬ ಅನಕ್ಷರಸ್ಥನಿಂದ ಕೇಳಬೇಕಾದ ದುರ್ಗತಿ ವಾಯುಪಡೆಗೆ ಬಂದಿತಲ್ಲಾ ಎಂದು ಕಿಡಿಕಾರಿದ್ದಾರೆ.

https://m.facebook.com/story.php?story_fbid=10161734759650176&id=817450175

ವೈದ್ಯರಾದ ಡಾ.ಅಶೋಕ್ ಕೆ.ಆರ್ ಅವರು ಮೊದಲು ಇದು ಯಾರೋ ಸುಳ್ಳೇ ಸೃಷ್ಟಿ ಮಾಡಿರುವುದು ಎಂದುಕೊಂಡರಂತೆ. ನಂತರ ನಿಜ ಎಂದು ಗೊತ್ತಾಯಿತು ಎಂದಿದ್ದಾರೆ. ಅವರಿಗೆ ಪ್ರತಿಕ್ರಿಯಿಸಿರುವ ಡಾ.ಸುಶಿ ಕಾಡನಕುಪ್ಪೆ ಸಹಾ ಅದೇ ಅಭಿಪ್ರಾಯವನ್ನು ಕಮೆಂಟಿಸಿದ್ದಾರೆ.

ಹಾಗೆಯೇ ಇನ್ನೊಬ್ಬ ನೆಟ್ಟಿಗರು ಹೀಗೆ ಹೇಳುತ್ತಾರೆ.

‘ಇದರಲ್ಲಿ ತಮಾಶೆ ಏನೂ ಇಲ್ಲ. ನಮ್ಮ ಮೋದಿಜಿಗೆ ಮತ್ತೆ ಅಧಿಕಾರ ಸಿಕ್ಕರೆ ಸೂರ್ಯನಿಗೂ ಮನುಷ್ಯರನ್ನು ಕಳಿಸುತ್ತಾರೆ. ಮೊದಲ ಬಾರಿ ಸೂರ್ಯಯಾನಕ್ಕೆ ತನ್ನ ಶಿಷ್ಯಂದಿರಾದ ಸಂಬಿತ್ ಪಾತ್ರ ಮತ್ತು ತೇಜಸ್ವಿ ಸೂರ್ಯಗಳನ್ನು ಕಳಿಸಬಹುದು. ಪಬ್ಲಿಸಿಟಿ ಜಾಸ್ತಿ ಸಿಗೋದರಿಂದ ತಾನೇ ಹೋದರೂ ಹೋಗಬಹುದು.’

ಎಲ್ಲಕ್ಕಿಂತ ಸತೀಶ್ ಆಚಾರ್ಯ ಅವರ ಕಾರ್ಟೂನು ಮೋದಿಯವರನ್ನು ವ್ಯಂಗ್ಯ ಮಾಡುವುದರಲ್ಲಿ ಸಾಕಷ್ಟು ಮುಂದೆ ಹೋಗಿದೆ. ಇಸ್ರೋದ ವಿಜ್ಞಾನಿಗಳಿಗೆ ಸೂರ್ಯಯಾನಕ್ಕೆ ತಯಾರಿ ಮಾಡಲು ಸೂಚಿಸುವ ಮೋದಿ, ನಾವು ಸೂರ್ಯನಲ್ಲಿಗೆ ರಾತ್ರಿ ಹೋದರಾಯಿತು ಎನ್ನುತ್ತಿದ್ದಾರೆ.

ಇನ್ನು ಚಂದ್ರಯಾನವನ್ನೂ ನೆಟ್ಟಿಗರು ಬಿಟ್ಟಿಲ್ಲ. ಚಂದ್ರನ ಮೇಲೆ ಲ್ಯಾಂಡ್ ಆಗಲು ಕಡಿಮೆ ಜಾಗವಿದೆ ಎಂದು ಹೇಳುವ ವಿಜ್ಞಾನಿಗಳಿಗೆ, ‘ಹುಣ್ಣಿಮೆಯ ದಿನ ಹೋದರೆ ಚಂದ್ರ ದೊಡ್ಡದಾಗಿರುತ್ತಾನೆ’ ಎಂಬ ಸಲಹೆ ನೀಡುತ್ತಾರಂತೆ.

ಇದಲ್ಲದೇ ಮತ್ತೊಂದು ಪೋಸ್ಟ್ ಹೀಗೆ ಹೇಳುತ್ತದೆ.

‘ಮೋದಿಯವರು ವಿಮಾನಗಳಿಗೆ ರಿವರ್ಸ್ ಗೇರ್‍ನಲ್ಲಿ ಹೋಗಲು ಸೂಚಿಸಿದ್ದರಂತೆ. ಅದರಿಂದ ಪಾಕಿಸ್ತಾನಕ್ಕೆ ವಿಮಾನಗಳು ಬರುತ್ತಿವೆಯಾ, ಹೋಗುತ್ತಿವೆಯಾ ಎಂದು ಗೊತ್ತಾಗಲಿಲ್ಲ’

ಇನ್ನು ಮೋಡವೆಂದರೆ, ರಾಡಾರ್ ಎಂದರೆ ಮೋದಿಯವರು ಏನು ತಿಳಿದುಕೊಂಡಿರಬಹುದು ಎಂಬ ಕುರಿತೂ ಹಲವು ಕಾರ್ಟೂನ್‍ಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...