Homeನಿಜವೋ ಸುಳ್ಳೋಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಮೋದಿಯವರು ಮೋಡದ ಮೇಲೆ ಪಾಕಿಸ್ತಾನಕ್ಕೆ ಹೋಗಿ ಬಂದ ಅಪೂರ್ವ ಕಥಾನಕ

ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ ಮೋದಿ ಹೇಳಿಕೆಗೆ ಸೃಜನಾತ್ಮಕ ಪ್ರತಿಕ್ರಿಯೆಗಳು

- Advertisement -
- Advertisement -

ನಿಮಗೆ ಗೊತ್ತಿರಬೇಕಾದ ಎಲ್ಲಾ ಮಾಹಿತಿಗಳು

ನ್ಯೂಸ್ ನೇಷನ್ ಎಂಬ ಟಿವಿ ಚಾನೆಲ್‍ಗೆ ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ನೀಡಿದ ಸಂದರ್ಶನವನ್ನು ಇನ್ನಾವುದಾದರೂ ಸಂದರ್ಶನದ ಜೊತೆ ಹೋಲಿಸಬೇಕೆಂದರೆ, ಅದನ್ನು 2018ರ ಜನವರಿ 22ರಂದು ಜೀ ಟಿವಿಗೆ ನೀಡಿದ ಸಂದರ್ಶನಕ್ಕೆ ಮಾತ್ರ ಹೋಲಿಸಬಹುದು. ಏಕೆಂದರೆ, ಅದರಲ್ಲಿ ಅವರ ಪ್ರಸಿದ್ಧ ‘ಪಕೋಡಾ ಹೇಳಿಕೆ’ ಹೊರಬಂದಿತ್ತು. ಇದೀಗ ನ್ಯೂಸ್ ನೇಷನ್‍ನಲ್ಲಿ ಅವರು ಪಾಕಿಸ್ತಾನದ ಮೇಲೆ ನಡೆಸಿದ ‘ವಾಯುದಾಳಿ’ಯ ಕುರಿತು ಮಾತನಾಡಿದ್ದಾರೆ. ಈ ಸುದ್ದಿ ಪ್ರಸಾರವಾದ ನಂತರ ಇಲ್ಲಿಯವರೆಗೂ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಎಣೆಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳ ಹಲವು ಜನರ ಸೃಜನಶೀಲತೆಯ ಅಭಿವ್ಯಕ್ತಿಯಾಗಿಯೂ ಅದನ್ನು ನೋಡಬಹುದಾಗಿದೆ. ಅದರ ಸಂಪೂರ್ಣ ವಿವರವನ್ನು ಇಲ್ಲಿ ಕೊಡಲಾಗಿದೆ.

ಮೊದಲಿಗೆ, ಮೋದಿಯವರು ಹೇಳಿದ್ದೇನು ನೋಡೋಣ.

ಇದೇ ಸಂದರ್ಭದಲ್ಲಿ ಮೋದಿಯವರ ಬಯೋಗ್ಯಾಸ್‍ಗೆ ಸಂಬಂಧಿಸಿದ ಇನ್ನೊಂದು ಹೇಳಿಕೆಯನ್ನೂ ಹಲವರು ನೆನಪಿಸಿಕೊಂಡಿದ್ದಾರೆ.

ಉದಾಹರಣೆಗೆ ವಿಜಯ ಕರ್ನಾಟಕದ ಅಂಕಣಕಾರರಾಗಿದ್ದ ಚಿಂತಕ ಕೆ.ಪಿ.ಸುರೇಶ್‍ರವರು ಹಳೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

https://m.facebook.com/story.php?story_fbid=1474653089338603&id=100003817783883

ಇದಕ್ಕೆ ಸಂಬಂಧಿಸಿದ ಹಳೆಯ ಕಾರ್ಟೂನ್ ಸಹಾ ಇಲ್ಲಿದೆ ನೋಡಿ

ಉದ್ಯಮಿ ರಾಜಾರಾಂ ತಲ್ಲೂರು ಅವರು ಮೋದಿಯವರ ಎಂಟೈಲ್ ಪೊಲಿಟಿಕಲ್ ಸೈನ್ಸ್ ಡಿಗ್ರಿಯನ್ನು ತಾವು ಪಡೆದುಕೊಂಡಿರದೇ ಇರುವುದಕ್ಕೆ ‘ಬೇಸರ ವ್ಯಕ್ತಪಡಿಸಿ’ ಈ ಪೋಸ್ಟ್ ಹಾಕಿದ್ದಾರೆ.

ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್‍ನ ಮುಖಂಡ ಓಮರ್ ಅಬ್ದುಲ್ಲಾರು ಟ್ವೀಟಿಸಿದ್ದು ಹೀಗೆ.

ವಾಯುಪಡೆಯಲ್ಲಿದ್ದ ಅಧಿಕಾರಿ (ಈಗ ಮೋದಿಯವರ ಟೀಕಾಕಾರ) ರಾಜೀವ್ ತ್ಯಾಗಿಯವರಿಗೆ ತುಂಬಾ ಸಿಟ್ಟು ಬಂದಿದ್ದರೂ, ವೈಜ್ಞಾನಿಕವಾಗಿ ಮೋಡಗಳಿಗೂ ವಾಯುದಾಳಿಗೂ ಇರುವ ಸಂಬಂಧದ ಬಗ್ಗೆ ವಿವರಿಸಿದ್ದಾರೆ. ಅವರ ಪ್ರಕಾರ ಬೇರೆ ಬೇರೆ ಬಗೆಯ ಮೋಡಗಳಿರುತ್ತವೆ ಮತ್ತು ಆ ಮೋಡಗಳಿದ್ದಾಗ ಒಂದೋ ಅವು ಏನೂ ಸಮಸ್ಯೆ ಮಾಡುವುದಿಲ್ಲ, ಇಲ್ಲವೇ ಶತ್ರುಪಡೆಯ ರಾಡಾರ್‍ನ ಅಗತ್ಯವೇ ಇಲ್ಲದೇ ಅವೇ ಧ್ವಂಸಗೊಳ್ಳುತ್ತವೆ. ಇವೆಲ್ಲಾ ವಾಯುಪಡೆಗಳಿಗೆ ಗೊತ್ತಿರುವ ಸಂಗತಿ. ಆದರೆ, ಇದಕ್ಕೆ ವಿರುದ್ಧವಾದ ಸಂಗತಿಯನ್ನು ಒಬ್ಬ ಅನಕ್ಷರಸ್ಥನಿಂದ ಕೇಳಬೇಕಾದ ದುರ್ಗತಿ ವಾಯುಪಡೆಗೆ ಬಂದಿತಲ್ಲಾ ಎಂದು ಕಿಡಿಕಾರಿದ್ದಾರೆ.

https://m.facebook.com/story.php?story_fbid=10161734759650176&id=817450175

ವೈದ್ಯರಾದ ಡಾ.ಅಶೋಕ್ ಕೆ.ಆರ್ ಅವರು ಮೊದಲು ಇದು ಯಾರೋ ಸುಳ್ಳೇ ಸೃಷ್ಟಿ ಮಾಡಿರುವುದು ಎಂದುಕೊಂಡರಂತೆ. ನಂತರ ನಿಜ ಎಂದು ಗೊತ್ತಾಯಿತು ಎಂದಿದ್ದಾರೆ. ಅವರಿಗೆ ಪ್ರತಿಕ್ರಿಯಿಸಿರುವ ಡಾ.ಸುಶಿ ಕಾಡನಕುಪ್ಪೆ ಸಹಾ ಅದೇ ಅಭಿಪ್ರಾಯವನ್ನು ಕಮೆಂಟಿಸಿದ್ದಾರೆ.

ಹಾಗೆಯೇ ಇನ್ನೊಬ್ಬ ನೆಟ್ಟಿಗರು ಹೀಗೆ ಹೇಳುತ್ತಾರೆ.

‘ಇದರಲ್ಲಿ ತಮಾಶೆ ಏನೂ ಇಲ್ಲ. ನಮ್ಮ ಮೋದಿಜಿಗೆ ಮತ್ತೆ ಅಧಿಕಾರ ಸಿಕ್ಕರೆ ಸೂರ್ಯನಿಗೂ ಮನುಷ್ಯರನ್ನು ಕಳಿಸುತ್ತಾರೆ. ಮೊದಲ ಬಾರಿ ಸೂರ್ಯಯಾನಕ್ಕೆ ತನ್ನ ಶಿಷ್ಯಂದಿರಾದ ಸಂಬಿತ್ ಪಾತ್ರ ಮತ್ತು ತೇಜಸ್ವಿ ಸೂರ್ಯಗಳನ್ನು ಕಳಿಸಬಹುದು. ಪಬ್ಲಿಸಿಟಿ ಜಾಸ್ತಿ ಸಿಗೋದರಿಂದ ತಾನೇ ಹೋದರೂ ಹೋಗಬಹುದು.’

ಎಲ್ಲಕ್ಕಿಂತ ಸತೀಶ್ ಆಚಾರ್ಯ ಅವರ ಕಾರ್ಟೂನು ಮೋದಿಯವರನ್ನು ವ್ಯಂಗ್ಯ ಮಾಡುವುದರಲ್ಲಿ ಸಾಕಷ್ಟು ಮುಂದೆ ಹೋಗಿದೆ. ಇಸ್ರೋದ ವಿಜ್ಞಾನಿಗಳಿಗೆ ಸೂರ್ಯಯಾನಕ್ಕೆ ತಯಾರಿ ಮಾಡಲು ಸೂಚಿಸುವ ಮೋದಿ, ನಾವು ಸೂರ್ಯನಲ್ಲಿಗೆ ರಾತ್ರಿ ಹೋದರಾಯಿತು ಎನ್ನುತ್ತಿದ್ದಾರೆ.

ಇನ್ನು ಚಂದ್ರಯಾನವನ್ನೂ ನೆಟ್ಟಿಗರು ಬಿಟ್ಟಿಲ್ಲ. ಚಂದ್ರನ ಮೇಲೆ ಲ್ಯಾಂಡ್ ಆಗಲು ಕಡಿಮೆ ಜಾಗವಿದೆ ಎಂದು ಹೇಳುವ ವಿಜ್ಞಾನಿಗಳಿಗೆ, ‘ಹುಣ್ಣಿಮೆಯ ದಿನ ಹೋದರೆ ಚಂದ್ರ ದೊಡ್ಡದಾಗಿರುತ್ತಾನೆ’ ಎಂಬ ಸಲಹೆ ನೀಡುತ್ತಾರಂತೆ.

ಇದಲ್ಲದೇ ಮತ್ತೊಂದು ಪೋಸ್ಟ್ ಹೀಗೆ ಹೇಳುತ್ತದೆ.

‘ಮೋದಿಯವರು ವಿಮಾನಗಳಿಗೆ ರಿವರ್ಸ್ ಗೇರ್‍ನಲ್ಲಿ ಹೋಗಲು ಸೂಚಿಸಿದ್ದರಂತೆ. ಅದರಿಂದ ಪಾಕಿಸ್ತಾನಕ್ಕೆ ವಿಮಾನಗಳು ಬರುತ್ತಿವೆಯಾ, ಹೋಗುತ್ತಿವೆಯಾ ಎಂದು ಗೊತ್ತಾಗಲಿಲ್ಲ’

ಇನ್ನು ಮೋಡವೆಂದರೆ, ರಾಡಾರ್ ಎಂದರೆ ಮೋದಿಯವರು ಏನು ತಿಳಿದುಕೊಂಡಿರಬಹುದು ಎಂಬ ಕುರಿತೂ ಹಲವು ಕಾರ್ಟೂನ್‍ಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...